Latest Updates
-
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ! -
ಸಣ್ಣ ಬಾಲ್ಕನಿಯಲ್ಲಿ ಓಣಂ ಸಂಭ್ರಮ: ಬಜೆಟ್ನಲ್ಲಿ ಸುಂದರ ಪೂಕಳಂ ಬಿಡಿಸುವ ಸರಳ ಟಿಪ್ಸ್ -
ಲಾಲ್ಬಾಗ್ ಫಲಪುಷ್ಪ ಪ್ರದರ್ಶನ: ಕೊನೆಯ ದಿನದ ಸಂಭ್ರಮ ಮತ್ತು ಮನೆಯನ್ನು ಸಿಂಗರಿಸುವ ಸುಲಭ ಟಿಪ್ಸ್ -
ಜಂಕ್ ಫುಡ್ ತಿನ್ನುವ ಮುನ್ನ ಎಚ್ಚರ! ಪ್ಯಾಕೆಟ್ ಮೇಲೆ ಬರಲಿದೆ ಸುಪ್ರೀಂ ಕೋರ್ಟ್ ಸೂಚಿಸಿದ ವಾರ್ನಿಂಗ್ ಲೇಬಲ್ -
ರೈಲ್ವೆ ನೀರಿನಲ್ಲಿ ಅಪಾಯಕಾರಿ ಇ-ಕೋಲೈ ಪತ್ತೆ: ಪ್ರಯಾಣಿಕರೇ, ಈ ತಪ್ಪುಗಳನ್ನು ಮಾಡಬೇಡಿ! -
ನಾಗರ ಪಂಚಮಿ ಸಂಭ್ರಮ: ಹಬ್ಬದ ಲುಕ್ ಹೆಚ್ಚಿಸಲು ಈ ಫ್ಯಾಷನ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಬೆಂಗಳೂರಿನಲ್ಲಿ ಓಣಂ ಸಂಭ್ರಮ: ಓಣಸದ್ಯ ಮತ್ತು ಪೂಕಳಂ ಕಿಟ್ಗಳಿಗೆ ಭಾರಿ ಬೇಡಿಕೆ, ಈಗಲೇ ಬುಕ್ ಮಾಡಿ! -
ಮಳೆಗಾಲದಲ್ಲಿ ಡೆಂಗ್ಯೂ ಕಾಟ: ಮನೆಯಲ್ಲೇ 7 ನಿಮಿಷದ ಈ ಚೆಕ್ ಲಿಸ್ಟ್ ಪಾಲಿಸಿ, ಸುರಕ್ಷಿತವಾಗಿರಿ! -
ನಾಗರ ಪಂಚಮಿ: ದೇವಸ್ಥಾನದ ಕ್ಯೂನಲ್ಲಿ ನಿಲ್ಲುವಾಗ ಬೆನ್ನು, ಕಾಲು ನೋವು ತಪ್ಪಿಸಲು ಈ ಟಿಪ್ಸ್ ಫಾಲೋ ಮಾಡಿ!
ಮೇ 22ಕ್ಕೆ ಕಾಲಾಷ್ಟಮಿ: ರಾಹು, ಶನಿ ದೋಷ ನಿವಾರಣೆಗೆ ಕಾಲ ಭೈರವನನ್ನು ಹೇಗೆ ಪೂಜಿಸಬೇಕು?
ಮೇ 22ಕ್ಕೆ ಕಾಲಾಷ್ಟಮಿ, ಕಾಲ ಭೈರವನ ಪೂಜೆಗಂದೇ ಮೀಸಲಾಗಿರುವ ದಿನ. ವರ್ಷದಲ್ಲಿ 12 ಕಾಲಾಷ್ಟಮಿ ಆಚರಿಸಲಾಗುವುದು. ಪ್ರತೀ ತಿಂಗಳ ಕೃಷ್ಣ ಪಕ್ಷದ ಅಷ್ಟಮಿ ತಿಥಿಯಂದು ಕಾಲಾಷ್ಟಮಿ ಆಚರಿಸಲಾಗುವುದು.

ಕಾಲಭೈರವನ ಪೂಜೆಗೆ ಕಾಲಾಷ್ಟಮಿ ತುಂಬಾ ವಿಶೇಷವಾದ ದಿನ ಏಕೆ, ಮೇ 22ರಂದು ಕಾಲ ಭೈರವನ ಪೂಜೆಗೆ ಶುಭ ಮುಹೂರ್ತ ಯಾವಾಗ? ಈ ದಿನದ ಪೂಜಾ ವಿಧಿಗಳೇನು ಎಂದು ನೋಡೋಣ ಬನ್ನಿ?

ಮೇ ತಿಂಗಳಿನಲ್ಲಿ ಕಾಲಾಷ್ಟಮಿ ದಿನಾಂಕ ಹಾಗೂ ಶುಭ ಮುಹೂರ್ತ
ಮೇ 22, ಭಾನುವಾರ 2022
ಅಷ್ಟಮಿ ತಿಥಿ ಪ್ರಾರಂಭ ಮೇ 22 ಮಧ್ಯಾಹ್ನ 1 ಗಂಟೆಗೆ
ಅಷ್ಟಮಿ ತಿಥಿ ಮುಕ್ತಾಯ ಮೇ 23 ಬೆಳಗ್ಗೆ 11:34ಕ್ಕೆ

ಕಾಲಾಷ್ಟಮಿ ಮಹತ್ವ
ಕಾಲಾಷ್ಟಮಿಯಂದು ಶಿವನ ಕಾಲ ಭೈರವ ರೂಪ ಅಂದರೆ ರೌದ್ರಾವತಾರದ ರೂಪವನ್ನುಆರಾಧಿಸಲಾಗುವುದು. ಈ ದಿನ ಕಾಲ ಭೈರವನ ಭಕ್ತರು ಶಿವನ ಜೊತೆಗೆ ಪಾರ್ವತಿಗೂ ಪೂಜೆಯನ್ನು ಸಲ್ಲಿಸುತ್ತಾರೆ. ಪೂಜೆಯ ಬಳಿಕ ಕಾಲ ಭೈರವ ಕತೆ ಹೇಳಲಾಗುವುದು.
ಈ ದಿನದಂದು ಬೆಳಗ್ಗೆ ವಿಶೇಷ ಪೂಜೆಯನ್ನು ಮಾಡಲಾಗುವುಉದ, ಈ ದಿನದಂದು ಪೂರ್ವಜರಿಗೂ ಪೂಜೆ ಸಲ್ಲಿಸಲಾಗುವುದು.
ಈ ದಿನ ರಾತ್ರಿ ಎಚ್ಚರವಾಗಿದ್ದು ಕಾಲ ಭೈರವನ ಕತೆ ಓದುವುದು, ಕೇಳುವುದು ಮಾಡಲಾಗುವುದು. ಮಧ್ಯರಾತ್ರಿಯಲ್ಲಿ ಕಾಲ ಭೈರವನಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುವುದು, ಸಾಂಪ್ರದಾಯಿಕವಾದ ಡ್ರಮ್ ಬಾರಿಸಲಾಗುವುದು ಗಂಟೆ ಬಾರಿಸಿ ಶಂಖ ಓದಿಸಲಾಗುವುದು.
ಈ ದಿನ ಉಪವಾಸವಿದ್ದು ಪೂಜೆಯನ್ನು ಸಲ್ಲಿಸಲಾಗುವುದು. ಈ ದಿನ ನಾಯಿಗಳಿಗೆ ಆಹಾರ ನೀಡುವುದು. ಈ ದಿನ ಕಾಲ ಭೈರವ ನಾಯಿಯ ಮೇಲೆ ಕುಳಿತು ಸವಾರಿ ಮಾಡುತ್ತಾನೆ ಆದ್ದರಿಂದ ಈ ದಿನ ನಾಯಿಗಳಿಗೆ ಆಹಾರ ನೀಡಿದರೆ ತೃಪ್ತನಾಗುತ್ತಾನೆ ಎಂದು ನಂಬಲಾಗುವುದು.

ಕಾಲ ಭೈರವನ ಪೂಜೆ ಮಾಡಿದರೆ ದೊರೆಯುವ ಪ್ರಯೋಜನಗಳೇನು?
* ಈ ದಿನ ಭೈರವನ ಪೂಜೆ ಮಾಡುವುದರಿಂದ ಶಿವ ನಮ್ಮ ಪಾಪಗಳಿಂದ ವಿಮೋಚನೆ ಮಾಡುತ್ತಾನೆ ಎಂದು ನಂಬಲಾಗಿದೆ.
* ಶಿವನನ್ನು ಪೂಜಿಸುವುದರಿಂದ ಇಷ್ಟಾರ್ಥಗಳು ನೆರವೇರುವುದು.
* ಶಿವ ಒಳ್ಳೆಯ ಆರೋಗ್ಯ, ಸಂಪತ್ತು ನೀಡಿ ಆಶೀರ್ವದಿಸುತ್ತಾನೆ.
* ರಾಹು ಹಾಗೂ ಶನಿ ದೋಷವಿರುವವರು ಕಾಲ ಭೈರವನ ಪೂಜಿಸಿದರೆ ಗ್ರಹ ದೋಷದ ಕೆಟ್ಟ ಪರಿಣಾಮ ಕಡಿಮೆಯಾಗುವುದು.



Click it and Unblock the Notifications