Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
ಮೇ 22ಕ್ಕೆ ಕಾಲಾಷ್ಟಮಿ: ರಾಹು, ಶನಿ ದೋಷ ನಿವಾರಣೆಗೆ ಕಾಲ ಭೈರವನನ್ನು ಹೇಗೆ ಪೂಜಿಸಬೇಕು?
ಮೇ 22ಕ್ಕೆ ಕಾಲಾಷ್ಟಮಿ, ಕಾಲ ಭೈರವನ ಪೂಜೆಗಂದೇ ಮೀಸಲಾಗಿರುವ ದಿನ. ವರ್ಷದಲ್ಲಿ 12 ಕಾಲಾಷ್ಟಮಿ ಆಚರಿಸಲಾಗುವುದು. ಪ್ರತೀ ತಿಂಗಳ ಕೃಷ್ಣ ಪಕ್ಷದ ಅಷ್ಟಮಿ ತಿಥಿಯಂದು ಕಾಲಾಷ್ಟಮಿ ಆಚರಿಸಲಾಗುವುದು.

ಕಾಲಭೈರವನ ಪೂಜೆಗೆ ಕಾಲಾಷ್ಟಮಿ ತುಂಬಾ ವಿಶೇಷವಾದ ದಿನ ಏಕೆ, ಮೇ 22ರಂದು ಕಾಲ ಭೈರವನ ಪೂಜೆಗೆ ಶುಭ ಮುಹೂರ್ತ ಯಾವಾಗ? ಈ ದಿನದ ಪೂಜಾ ವಿಧಿಗಳೇನು ಎಂದು ನೋಡೋಣ ಬನ್ನಿ?

ಮೇ ತಿಂಗಳಿನಲ್ಲಿ ಕಾಲಾಷ್ಟಮಿ ದಿನಾಂಕ ಹಾಗೂ ಶುಭ ಮುಹೂರ್ತ
ಮೇ 22, ಭಾನುವಾರ 2022
ಅಷ್ಟಮಿ ತಿಥಿ ಪ್ರಾರಂಭ ಮೇ 22 ಮಧ್ಯಾಹ್ನ 1 ಗಂಟೆಗೆ
ಅಷ್ಟಮಿ ತಿಥಿ ಮುಕ್ತಾಯ ಮೇ 23 ಬೆಳಗ್ಗೆ 11:34ಕ್ಕೆ

ಕಾಲಾಷ್ಟಮಿ ಮಹತ್ವ
ಕಾಲಾಷ್ಟಮಿಯಂದು ಶಿವನ ಕಾಲ ಭೈರವ ರೂಪ ಅಂದರೆ ರೌದ್ರಾವತಾರದ ರೂಪವನ್ನುಆರಾಧಿಸಲಾಗುವುದು. ಈ ದಿನ ಕಾಲ ಭೈರವನ ಭಕ್ತರು ಶಿವನ ಜೊತೆಗೆ ಪಾರ್ವತಿಗೂ ಪೂಜೆಯನ್ನು ಸಲ್ಲಿಸುತ್ತಾರೆ. ಪೂಜೆಯ ಬಳಿಕ ಕಾಲ ಭೈರವ ಕತೆ ಹೇಳಲಾಗುವುದು.
ಈ ದಿನದಂದು ಬೆಳಗ್ಗೆ ವಿಶೇಷ ಪೂಜೆಯನ್ನು ಮಾಡಲಾಗುವುಉದ, ಈ ದಿನದಂದು ಪೂರ್ವಜರಿಗೂ ಪೂಜೆ ಸಲ್ಲಿಸಲಾಗುವುದು.
ಈ ದಿನ ರಾತ್ರಿ ಎಚ್ಚರವಾಗಿದ್ದು ಕಾಲ ಭೈರವನ ಕತೆ ಓದುವುದು, ಕೇಳುವುದು ಮಾಡಲಾಗುವುದು. ಮಧ್ಯರಾತ್ರಿಯಲ್ಲಿ ಕಾಲ ಭೈರವನಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುವುದು, ಸಾಂಪ್ರದಾಯಿಕವಾದ ಡ್ರಮ್ ಬಾರಿಸಲಾಗುವುದು ಗಂಟೆ ಬಾರಿಸಿ ಶಂಖ ಓದಿಸಲಾಗುವುದು.
ಈ ದಿನ ಉಪವಾಸವಿದ್ದು ಪೂಜೆಯನ್ನು ಸಲ್ಲಿಸಲಾಗುವುದು. ಈ ದಿನ ನಾಯಿಗಳಿಗೆ ಆಹಾರ ನೀಡುವುದು. ಈ ದಿನ ಕಾಲ ಭೈರವ ನಾಯಿಯ ಮೇಲೆ ಕುಳಿತು ಸವಾರಿ ಮಾಡುತ್ತಾನೆ ಆದ್ದರಿಂದ ಈ ದಿನ ನಾಯಿಗಳಿಗೆ ಆಹಾರ ನೀಡಿದರೆ ತೃಪ್ತನಾಗುತ್ತಾನೆ ಎಂದು ನಂಬಲಾಗುವುದು.

ಕಾಲ ಭೈರವನ ಪೂಜೆ ಮಾಡಿದರೆ ದೊರೆಯುವ ಪ್ರಯೋಜನಗಳೇನು?
* ಈ ದಿನ ಭೈರವನ ಪೂಜೆ ಮಾಡುವುದರಿಂದ ಶಿವ ನಮ್ಮ ಪಾಪಗಳಿಂದ ವಿಮೋಚನೆ ಮಾಡುತ್ತಾನೆ ಎಂದು ನಂಬಲಾಗಿದೆ.
* ಶಿವನನ್ನು ಪೂಜಿಸುವುದರಿಂದ ಇಷ್ಟಾರ್ಥಗಳು ನೆರವೇರುವುದು.
* ಶಿವ ಒಳ್ಳೆಯ ಆರೋಗ್ಯ, ಸಂಪತ್ತು ನೀಡಿ ಆಶೀರ್ವದಿಸುತ್ತಾನೆ.
* ರಾಹು ಹಾಗೂ ಶನಿ ದೋಷವಿರುವವರು ಕಾಲ ಭೈರವನ ಪೂಜಿಸಿದರೆ ಗ್ರಹ ದೋಷದ ಕೆಟ್ಟ ಪರಿಣಾಮ ಕಡಿಮೆಯಾಗುವುದು.



Click it and Unblock the Notifications