Latest Updates
-
ಮಳೆಗಾಲದ WFH: ದಂಪತಿಗಳ ನಡುವಿನ ಕಿರಿಕಿರಿ ತಪ್ಪಿಸಿ, ಮನೆಯಲ್ಲಿ ನೆಮ್ಮದಿ ಕಾಪಾಡಿಕೊಳ್ಳಲು ಈ ಸರಳ ಸೂತ್ರಗಳು! -
ದೆಹಲಿ ಐಕಿಯಾ ಸ್ಟೋರ್: ಸಾಕೇತ್ನಲ್ಲಿ ಹೊಸ ಶಾಖೆ ಆರಂಭ, ಸಣ್ಣ ಮನೆಗಳಿಗೆ ಬೆಸ್ಟ್ ಐಡಿಯಾಸ್! -
IMD ರೆಡ್ ಅಲರ್ಟ್: ಮಳೆಗಾಲದಲ್ಲಿ ಹೊಟ್ಟೆಯ ಆರೋಗ್ಯ ಹಾಳಾಗದಂತೆ ತಡೆಯುವುದು ಹೇಗೆ? -
ನೈನಿತಾಲ್ನಲ್ಲಿ ಭಾರಿ ಮಳೆ: ಶಾಲೆಗಳಿಗೆ ರಜೆ ಘೋಷಣೆ, ಪ್ರವಾಸಿಗರಿಗೆ ಹೈ ಅಲರ್ಟ್! -
ರಾಷ್ಟ್ರಧ್ವಜ ಅಂಗೀಕಾರ ದಿನ: ಧ್ವಜಾರೋಹಣದ ವೇಳೆ ಲವಲವಿಕೆಯಿಂದ ಇರಲು ಈ 'ತ್ರಿವರ್ಣ' ವ್ಯಾಯಾಮಗಳನ್ನು ಮಾಡಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ಕೊನೆ ಕ್ಷಣದ ಗಡಿಬಿಡಿ ತಪ್ಪಿಸಲು ಈ ಸ್ಮಾರ್ಟ್ ಟಿಪ್ಸ್ ಪಾಲಿಸಿ -
ಮಳೆಗಾಲದ ತೇವಾಂಶದಿಂದ ಬಟ್ಟೆ ಹಾಳಾಗುತ್ತಿದೆಯೇ? ನಿಮ್ಮ ಕಬೋರ್ಡ್ ಮತ್ತು ಬಟ್ಟೆಗಳನ್ನು ರಕ್ಷಿಸಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಇನ್ಮುಂದೆ ಸ್ನ್ಯಾಕ್ಸ್ ಪ್ಯಾಕೆಟ್ ಮೇಲೆ ಎಚ್ಚರಿಕೆ! FSSAI ತರುತ್ತಿದೆ ಹೊಸ ನಿಯಮ, ಗ್ರಾಹಕರಿಗೆ ಲಾಭವೇನು? -
ಮುಂಬೈನಲ್ಲಿ ವರುಣನ ಅಬ್ಬರ: IMDಯಿಂದ ಆರೆಂಜ್ ಅಲರ್ಟ್ ಘೋಷಣೆ, ಕನ್ನಡಿಗರು ಎಚ್ಚರ! -
ವಿಶ್ವ ಮೆದುಳು ದಿನ: ದಿನವಿಡೀ ಚುರುಕಾಗಿರಲು ಬೆಳಿಗ್ಗೆ ಈ 10 ನಿಮಿಷದ 'ನ್ಯೂರೋ-ವಾರ್ಮಪ್' ಮಾಡಿ!
ಮೇ 22ಕ್ಕೆ ಕಾಲಾಷ್ಟಮಿ: ರಾಹು, ಶನಿ ದೋಷ ನಿವಾರಣೆಗೆ ಕಾಲ ಭೈರವನನ್ನು ಹೇಗೆ ಪೂಜಿಸಬೇಕು?
ಮೇ 22ಕ್ಕೆ ಕಾಲಾಷ್ಟಮಿ, ಕಾಲ ಭೈರವನ ಪೂಜೆಗಂದೇ ಮೀಸಲಾಗಿರುವ ದಿನ. ವರ್ಷದಲ್ಲಿ 12 ಕಾಲಾಷ್ಟಮಿ ಆಚರಿಸಲಾಗುವುದು. ಪ್ರತೀ ತಿಂಗಳ ಕೃಷ್ಣ ಪಕ್ಷದ ಅಷ್ಟಮಿ ತಿಥಿಯಂದು ಕಾಲಾಷ್ಟಮಿ ಆಚರಿಸಲಾಗುವುದು.

ಕಾಲಭೈರವನ ಪೂಜೆಗೆ ಕಾಲಾಷ್ಟಮಿ ತುಂಬಾ ವಿಶೇಷವಾದ ದಿನ ಏಕೆ, ಮೇ 22ರಂದು ಕಾಲ ಭೈರವನ ಪೂಜೆಗೆ ಶುಭ ಮುಹೂರ್ತ ಯಾವಾಗ? ಈ ದಿನದ ಪೂಜಾ ವಿಧಿಗಳೇನು ಎಂದು ನೋಡೋಣ ಬನ್ನಿ?

ಮೇ ತಿಂಗಳಿನಲ್ಲಿ ಕಾಲಾಷ್ಟಮಿ ದಿನಾಂಕ ಹಾಗೂ ಶುಭ ಮುಹೂರ್ತ
ಮೇ 22, ಭಾನುವಾರ 2022
ಅಷ್ಟಮಿ ತಿಥಿ ಪ್ರಾರಂಭ ಮೇ 22 ಮಧ್ಯಾಹ್ನ 1 ಗಂಟೆಗೆ
ಅಷ್ಟಮಿ ತಿಥಿ ಮುಕ್ತಾಯ ಮೇ 23 ಬೆಳಗ್ಗೆ 11:34ಕ್ಕೆ

ಕಾಲಾಷ್ಟಮಿ ಮಹತ್ವ
ಕಾಲಾಷ್ಟಮಿಯಂದು ಶಿವನ ಕಾಲ ಭೈರವ ರೂಪ ಅಂದರೆ ರೌದ್ರಾವತಾರದ ರೂಪವನ್ನುಆರಾಧಿಸಲಾಗುವುದು. ಈ ದಿನ ಕಾಲ ಭೈರವನ ಭಕ್ತರು ಶಿವನ ಜೊತೆಗೆ ಪಾರ್ವತಿಗೂ ಪೂಜೆಯನ್ನು ಸಲ್ಲಿಸುತ್ತಾರೆ. ಪೂಜೆಯ ಬಳಿಕ ಕಾಲ ಭೈರವ ಕತೆ ಹೇಳಲಾಗುವುದು.
ಈ ದಿನದಂದು ಬೆಳಗ್ಗೆ ವಿಶೇಷ ಪೂಜೆಯನ್ನು ಮಾಡಲಾಗುವುಉದ, ಈ ದಿನದಂದು ಪೂರ್ವಜರಿಗೂ ಪೂಜೆ ಸಲ್ಲಿಸಲಾಗುವುದು.
ಈ ದಿನ ರಾತ್ರಿ ಎಚ್ಚರವಾಗಿದ್ದು ಕಾಲ ಭೈರವನ ಕತೆ ಓದುವುದು, ಕೇಳುವುದು ಮಾಡಲಾಗುವುದು. ಮಧ್ಯರಾತ್ರಿಯಲ್ಲಿ ಕಾಲ ಭೈರವನಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುವುದು, ಸಾಂಪ್ರದಾಯಿಕವಾದ ಡ್ರಮ್ ಬಾರಿಸಲಾಗುವುದು ಗಂಟೆ ಬಾರಿಸಿ ಶಂಖ ಓದಿಸಲಾಗುವುದು.
ಈ ದಿನ ಉಪವಾಸವಿದ್ದು ಪೂಜೆಯನ್ನು ಸಲ್ಲಿಸಲಾಗುವುದು. ಈ ದಿನ ನಾಯಿಗಳಿಗೆ ಆಹಾರ ನೀಡುವುದು. ಈ ದಿನ ಕಾಲ ಭೈರವ ನಾಯಿಯ ಮೇಲೆ ಕುಳಿತು ಸವಾರಿ ಮಾಡುತ್ತಾನೆ ಆದ್ದರಿಂದ ಈ ದಿನ ನಾಯಿಗಳಿಗೆ ಆಹಾರ ನೀಡಿದರೆ ತೃಪ್ತನಾಗುತ್ತಾನೆ ಎಂದು ನಂಬಲಾಗುವುದು.

ಕಾಲ ಭೈರವನ ಪೂಜೆ ಮಾಡಿದರೆ ದೊರೆಯುವ ಪ್ರಯೋಜನಗಳೇನು?
* ಈ ದಿನ ಭೈರವನ ಪೂಜೆ ಮಾಡುವುದರಿಂದ ಶಿವ ನಮ್ಮ ಪಾಪಗಳಿಂದ ವಿಮೋಚನೆ ಮಾಡುತ್ತಾನೆ ಎಂದು ನಂಬಲಾಗಿದೆ.
* ಶಿವನನ್ನು ಪೂಜಿಸುವುದರಿಂದ ಇಷ್ಟಾರ್ಥಗಳು ನೆರವೇರುವುದು.
* ಶಿವ ಒಳ್ಳೆಯ ಆರೋಗ್ಯ, ಸಂಪತ್ತು ನೀಡಿ ಆಶೀರ್ವದಿಸುತ್ತಾನೆ.
* ರಾಹು ಹಾಗೂ ಶನಿ ದೋಷವಿರುವವರು ಕಾಲ ಭೈರವನ ಪೂಜಿಸಿದರೆ ಗ್ರಹ ದೋಷದ ಕೆಟ್ಟ ಪರಿಣಾಮ ಕಡಿಮೆಯಾಗುವುದು.



Click it and Unblock the Notifications