Just In
- 24 min ago ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- 1 hr ago ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- 2 hrs ago ಮಂಗಳ ಗೋಚಾರ ಫಲ 2024: ಇನ್ನು 38 ದಿನಗಳ ಕಾಲ ನಿಮ್ಮ ರಾಶಿಯಲ್ಲಿ ಮಂಗಳದ ಪ್ರಭಾವ ಹೇಗಿರಲಿದೆ?
- 3 hrs ago ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
Don't Miss
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Movies ನಿರಂತರ ಪ್ಲಾಫ್ ಸಿನಿಮಾಳನ್ನ ನೀಡಿದ ಈ ವಿಶ್ವಸುಂದರಿ ಯಾರು ಗೊತ್ತಾ...?
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೇ 22ಕ್ಕೆ ಕಾಲಾಷ್ಟಮಿ: ರಾಹು, ಶನಿ ದೋಷ ನಿವಾರಣೆಗೆ ಕಾಲ ಭೈರವನನ್ನು ಹೇಗೆ ಪೂಜಿಸಬೇಕು?
ಮೇ 22ಕ್ಕೆ ಕಾಲಾಷ್ಟಮಿ, ಕಾಲ ಭೈರವನ ಪೂಜೆಗಂದೇ ಮೀಸಲಾಗಿರುವ ದಿನ. ವರ್ಷದಲ್ಲಿ 12 ಕಾಲಾಷ್ಟಮಿ ಆಚರಿಸಲಾಗುವುದು. ಪ್ರತೀ ತಿಂಗಳ ಕೃಷ್ಣ ಪಕ್ಷದ ಅಷ್ಟಮಿ ತಿಥಿಯಂದು ಕಾಲಾಷ್ಟಮಿ ಆಚರಿಸಲಾಗುವುದು.
ಕಾಲಭೈರವನ ಪೂಜೆಗೆ ಕಾಲಾಷ್ಟಮಿ ತುಂಬಾ ವಿಶೇಷವಾದ ದಿನ ಏಕೆ, ಮೇ 22ರಂದು ಕಾಲ ಭೈರವನ ಪೂಜೆಗೆ ಶುಭ ಮುಹೂರ್ತ ಯಾವಾಗ? ಈ ದಿನದ ಪೂಜಾ ವಿಧಿಗಳೇನು ಎಂದು ನೋಡೋಣ ಬನ್ನಿ?
ಮೇ ತಿಂಗಳಿನಲ್ಲಿ ಕಾಲಾಷ್ಟಮಿ ದಿನಾಂಕ ಹಾಗೂ ಶುಭ ಮುಹೂರ್ತ
ಮೇ 22, ಭಾನುವಾರ 2022
ಅಷ್ಟಮಿ ತಿಥಿ ಪ್ರಾರಂಭ ಮೇ 22 ಮಧ್ಯಾಹ್ನ 1 ಗಂಟೆಗೆ
ಅಷ್ಟಮಿ ತಿಥಿ ಮುಕ್ತಾಯ ಮೇ 23 ಬೆಳಗ್ಗೆ 11:34ಕ್ಕೆ
ಕಾಲಾಷ್ಟಮಿ ಮಹತ್ವ
ಕಾಲಾಷ್ಟಮಿಯಂದು ಶಿವನ ಕಾಲ ಭೈರವ ರೂಪ ಅಂದರೆ ರೌದ್ರಾವತಾರದ ರೂಪವನ್ನುಆರಾಧಿಸಲಾಗುವುದು. ಈ ದಿನ ಕಾಲ ಭೈರವನ ಭಕ್ತರು ಶಿವನ ಜೊತೆಗೆ ಪಾರ್ವತಿಗೂ ಪೂಜೆಯನ್ನು ಸಲ್ಲಿಸುತ್ತಾರೆ. ಪೂಜೆಯ ಬಳಿಕ ಕಾಲ ಭೈರವ ಕತೆ ಹೇಳಲಾಗುವುದು.
ಈ ದಿನದಂದು ಬೆಳಗ್ಗೆ ವಿಶೇಷ ಪೂಜೆಯನ್ನು ಮಾಡಲಾಗುವುಉದ, ಈ ದಿನದಂದು ಪೂರ್ವಜರಿಗೂ ಪೂಜೆ ಸಲ್ಲಿಸಲಾಗುವುದು.
ಈ ದಿನ ರಾತ್ರಿ ಎಚ್ಚರವಾಗಿದ್ದು ಕಾಲ ಭೈರವನ ಕತೆ ಓದುವುದು, ಕೇಳುವುದು ಮಾಡಲಾಗುವುದು. ಮಧ್ಯರಾತ್ರಿಯಲ್ಲಿ ಕಾಲ ಭೈರವನಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುವುದು, ಸಾಂಪ್ರದಾಯಿಕವಾದ ಡ್ರಮ್ ಬಾರಿಸಲಾಗುವುದು ಗಂಟೆ ಬಾರಿಸಿ ಶಂಖ ಓದಿಸಲಾಗುವುದು.
ಈ ದಿನ ಉಪವಾಸವಿದ್ದು ಪೂಜೆಯನ್ನು ಸಲ್ಲಿಸಲಾಗುವುದು. ಈ ದಿನ ನಾಯಿಗಳಿಗೆ ಆಹಾರ ನೀಡುವುದು. ಈ ದಿನ ಕಾಲ ಭೈರವ ನಾಯಿಯ ಮೇಲೆ ಕುಳಿತು ಸವಾರಿ ಮಾಡುತ್ತಾನೆ ಆದ್ದರಿಂದ ಈ ದಿನ ನಾಯಿಗಳಿಗೆ ಆಹಾರ ನೀಡಿದರೆ ತೃಪ್ತನಾಗುತ್ತಾನೆ ಎಂದು ನಂಬಲಾಗುವುದು.
ಕಾಲ ಭೈರವನ ಪೂಜೆ ಮಾಡಿದರೆ ದೊರೆಯುವ ಪ್ರಯೋಜನಗಳೇನು?
* ಈ ದಿನ ಭೈರವನ ಪೂಜೆ ಮಾಡುವುದರಿಂದ ಶಿವ ನಮ್ಮ ಪಾಪಗಳಿಂದ ವಿಮೋಚನೆ ಮಾಡುತ್ತಾನೆ ಎಂದು ನಂಬಲಾಗಿದೆ.
* ಶಿವನನ್ನು ಪೂಜಿಸುವುದರಿಂದ ಇಷ್ಟಾರ್ಥಗಳು ನೆರವೇರುವುದು.
* ಶಿವ ಒಳ್ಳೆಯ ಆರೋಗ್ಯ, ಸಂಪತ್ತು ನೀಡಿ ಆಶೀರ್ವದಿಸುತ್ತಾನೆ.
* ರಾಹು ಹಾಗೂ ಶನಿ ದೋಷವಿರುವವರು ಕಾಲ ಭೈರವನ ಪೂಜಿಸಿದರೆ ಗ್ರಹ ದೋಷದ ಕೆಟ್ಟ ಪರಿಣಾಮ ಕಡಿಮೆಯಾಗುವುದು.