Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕನ್ನಡ ರಾಜ್ಯೋತ್ಸವ 2023 : ಮೈಸೂರು ರಾಜ್ಯ ಕರ್ನಾಟಕ ಆದ ಇತಿಹಾಸ, ಕನ್ನಡ ಬಾವುಟದ ಮಹತ್ವ
ಎಲ್ಲಾದರು ಇರು ಎಂತಾದರು ಇರು ||೨||
ಎಂದೆಂದಿಗೂ ನೀ ಕನ್ನಡವಾಗಿರು
ಕನ್ನಡವೇ ಸತ್ಯ, ಕನ್ನಡವೇ ನಿತ್ಯ
ಕವಿ ಕುವೆಂಪುರವರ ಈ ಸಾಲುಗಳನ್ನು ಪ್ರತಿಯೊಬ್ಬ ಕನ್ನಡಿಗ ಜಗತ್ತಿನ ಯಾವುದೇ ಮೂಲೆಯಲ್ಲಿ ಇರಲಿ ಖಂಡಿತ ಮರೆಯಲ್ಲ, ನಮ್ಮ ಕನ್ನಡ ನಾಡು, ಇಲ್ಲಿಯ ಭಾಷೆ, ಇಲ್ಲಿಯ ಸಂಸ್ಕೃತಿ, ಪರಂಪರೆ, ಅಚಾರ-ವಿಚಾರ, ವನ್ಯ ಸಂಪತ್ತು ಇವುಗಳಿಂದ ಶ್ರೀಮಂತವಾಗಿರುವ ನಾಡಾಗಿದೆ. ಈ ನಮ್ಮ ಕನ್ನಡ ನಾಡು, ಈ ಭಾಷೆಯನ್ನು ಕೊಂಡಾಡುತ್ತಾ ಸಂಭ್ರಮದಿಂದ ಆಚರಿಸುವ ದಿನವೇ ನವೆಂಬರ್ 1. ವಿವಿಧ ಭಾಗಗಳಾಗಿ ಹರಡಿ ಹೋಗಿದ್ದ ಕನ್ನಡಿಗರನ್ನು ಒಂದಾಗಿಸಿದ ದಿನವನ್ನು ನಾವೆಲ್ಲಾ ಕನ್ನಡ ರಾಜ್ಯೋತ್ಸವವೆಂದು ಆಚರಿಸುತ್ತೇವೆ.
ಕನ್ನಡವನ್ನು ಪ್ರತಿನಿಮಿಷ, ಪ್ರತಿದಿನ ಉಸಿರಾಡುತ್ತೇವೆ, ನವೆಂಬರ್ 1ರಂದು ಹಬ್ಬವಾಗಿ ಸಂಭ್ರಮಿಸುತ್ತೇವೆ. ಕನ್ನಡ ರಾಜ್ಯೋತ್ಸವದ ಇತಿಹಾಸ ಈ ದಿನದ ಮಹತ್ವದ ಬಗ್ಗೆ ಮತ್ತಷ್ಟು ವಿವರವಾಗಿ ನೋಡೋಣ ಬನ್ನಿ:

ಕನ್ನಡ ರಾಜ್ಯೋತ್ಸವ ಇತಿಹಾಸ
ಭಾರತಕ್ಕೆ ಸ್ವಾತಂತ್ರ್ಯ ಬಂದು ಹಲವು ವರ್ಷಗಳಾದರೂ ಕರ್ನಾಟಕದ ಏಕೀಕರಣವಾಗಿರಲಿಲ್ಲ. 1956ರ ರಾಜ್ಯ ಪುನರ್ವಿಗಂಡನಾ ಕಾಯ್ದೆ ಜಾರಿಯಾದ ಬಳಿಕ ಕೂರ್ಗ್(ಕೊಡಗು), ಮದರಾಸು. ಹೈದರಾಬಾದ್, ಬಾಂಬೆ ಸಂಸ್ತಾನವನ್ನು ಮೈಸೂರಿಗೆ ಸೇರಿಸಲಾಯಿತು. 1956 ನವೆಂಬರ್ 1ರಂದು ಮೈಸೂರು ರಾಜ್ಯವನ್ನು ಭಾಷೆಗಳ ಅಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಲಾಯಿತು, ಆದರೆ ಉತ್ತರ ಕರ್ನಾಟಕದ ಜನರಿಗೆ ಮೈಸೂರು ಹೆಸರನ್ನು ಉಳಿಸಿಕೊಳ್ಳಲು ಯಾವುದೇ ಒಲವು ಇರಲಿಲ್ಲ, ಹೀಗಾಗಿ 1873 ನವೆಂಬರ್ 1ರಂದು ಮೈಸಊರು ರಾಜ್ಯ ಅಂತ ಇದ್ದಿದ್ದನ್ನು ಕರ್ನಾಟಕವೆಂದು ಮರುನಾಮಕರಣ ಮಾಡಲಾಯಿತು. ಅಗ ದೇವರಾಜ್ ಅರಸು ಮುಖ್ಯಮಂತ್ರಿಯಾಗಿದ್ದರು.

ಈ ನಾಡಿಗೆ ಕರ್ನಾಟಕ ಎಂದು ಹೆಸರು ಬಂದಿದ್ದೇಗೆ?
ಕರು+ನಾಡು=ಕರ್ನಾಟಕವಾಗಿದೆ. ಕರುನಾಡು ಅಂದರೆ ಕಪ್ಪು ಮಣ್ಣಿನ ನಾಡು, ಹಾಗಾಗಿ ಇದಕ್ಕೆ ಕರ್ನಾಟಕ ಎಂದು ಕರೆಯಲಾಗಿದೆ. ಭಾರತದಲ್ಲಿ ಕರ್ನಾಟಕ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ 6ನೇ ದೊಡ್ಡ ರಾಜ್ಯವಾಗಿದೆ.

ಕನ್ನಡದ ಬಾವುಟ
ಕರ್ನಾಟಕಕ್ಕೆ ಹಳದಿ ಹಾಗೂ ಕೆಂಪು ಬಣ್ಣದ ಬಾವುಟವಿದೆ. ಕನ್ನಡ ಹೋರಾಟಗಾರರಾದ ರಾಮಮೂರ್ತಿಯವರು ಕನ್ನಡ ಬಾವುಟ ಸಿದ್ಧಪಡಿಸಿದರು. ಹಳದಿ ಬಣ್ಣ ಸೌಹಾರ್ದತೆಯ ಸಂಕೇತ ಕೆಂಪು ಕ್ರಾಂತಿಯ ಸಂಕೇತ. ನಾವು ಕನ್ನಡಿಗರು ಕ್ರಾಂತಿಗೂ ಸೈ, ಶಾಂತಿಗೂ ಸೈ ಎಂಬ ಸಂದೇಶ ಸೂಚಿಸುತ್ತದೆ.
ಬಾರಿಸು ಕನ್ನಡ ಡಿಂಡಿಮವ
ಕರ್ನಾಟಕ ಹೃದಯ ಶಿವ



Click it and Unblock the Notifications