Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಕನ್ನಡ ರಾಜ್ಯೋತ್ಸವ 2023 : ಮೈಸೂರು ರಾಜ್ಯ ಕರ್ನಾಟಕ ಆದ ಇತಿಹಾಸ, ಕನ್ನಡ ಬಾವುಟದ ಮಹತ್ವ
ಎಲ್ಲಾದರು ಇರು ಎಂತಾದರು ಇರು ||೨||
ಎಂದೆಂದಿಗೂ ನೀ ಕನ್ನಡವಾಗಿರು
ಕನ್ನಡವೇ ಸತ್ಯ, ಕನ್ನಡವೇ ನಿತ್ಯ
ಕವಿ ಕುವೆಂಪುರವರ ಈ ಸಾಲುಗಳನ್ನು ಪ್ರತಿಯೊಬ್ಬ ಕನ್ನಡಿಗ ಜಗತ್ತಿನ ಯಾವುದೇ ಮೂಲೆಯಲ್ಲಿ ಇರಲಿ ಖಂಡಿತ ಮರೆಯಲ್ಲ, ನಮ್ಮ ಕನ್ನಡ ನಾಡು, ಇಲ್ಲಿಯ ಭಾಷೆ, ಇಲ್ಲಿಯ ಸಂಸ್ಕೃತಿ, ಪರಂಪರೆ, ಅಚಾರ-ವಿಚಾರ, ವನ್ಯ ಸಂಪತ್ತು ಇವುಗಳಿಂದ ಶ್ರೀಮಂತವಾಗಿರುವ ನಾಡಾಗಿದೆ. ಈ ನಮ್ಮ ಕನ್ನಡ ನಾಡು, ಈ ಭಾಷೆಯನ್ನು ಕೊಂಡಾಡುತ್ತಾ ಸಂಭ್ರಮದಿಂದ ಆಚರಿಸುವ ದಿನವೇ ನವೆಂಬರ್ 1. ವಿವಿಧ ಭಾಗಗಳಾಗಿ ಹರಡಿ ಹೋಗಿದ್ದ ಕನ್ನಡಿಗರನ್ನು ಒಂದಾಗಿಸಿದ ದಿನವನ್ನು ನಾವೆಲ್ಲಾ ಕನ್ನಡ ರಾಜ್ಯೋತ್ಸವವೆಂದು ಆಚರಿಸುತ್ತೇವೆ.
ಕನ್ನಡವನ್ನು ಪ್ರತಿನಿಮಿಷ, ಪ್ರತಿದಿನ ಉಸಿರಾಡುತ್ತೇವೆ, ನವೆಂಬರ್ 1ರಂದು ಹಬ್ಬವಾಗಿ ಸಂಭ್ರಮಿಸುತ್ತೇವೆ. ಕನ್ನಡ ರಾಜ್ಯೋತ್ಸವದ ಇತಿಹಾಸ ಈ ದಿನದ ಮಹತ್ವದ ಬಗ್ಗೆ ಮತ್ತಷ್ಟು ವಿವರವಾಗಿ ನೋಡೋಣ ಬನ್ನಿ:

ಕನ್ನಡ ರಾಜ್ಯೋತ್ಸವ ಇತಿಹಾಸ
ಭಾರತಕ್ಕೆ ಸ್ವಾತಂತ್ರ್ಯ ಬಂದು ಹಲವು ವರ್ಷಗಳಾದರೂ ಕರ್ನಾಟಕದ ಏಕೀಕರಣವಾಗಿರಲಿಲ್ಲ. 1956ರ ರಾಜ್ಯ ಪುನರ್ವಿಗಂಡನಾ ಕಾಯ್ದೆ ಜಾರಿಯಾದ ಬಳಿಕ ಕೂರ್ಗ್(ಕೊಡಗು), ಮದರಾಸು. ಹೈದರಾಬಾದ್, ಬಾಂಬೆ ಸಂಸ್ತಾನವನ್ನು ಮೈಸೂರಿಗೆ ಸೇರಿಸಲಾಯಿತು. 1956 ನವೆಂಬರ್ 1ರಂದು ಮೈಸೂರು ರಾಜ್ಯವನ್ನು ಭಾಷೆಗಳ ಅಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಲಾಯಿತು, ಆದರೆ ಉತ್ತರ ಕರ್ನಾಟಕದ ಜನರಿಗೆ ಮೈಸೂರು ಹೆಸರನ್ನು ಉಳಿಸಿಕೊಳ್ಳಲು ಯಾವುದೇ ಒಲವು ಇರಲಿಲ್ಲ, ಹೀಗಾಗಿ 1873 ನವೆಂಬರ್ 1ರಂದು ಮೈಸಊರು ರಾಜ್ಯ ಅಂತ ಇದ್ದಿದ್ದನ್ನು ಕರ್ನಾಟಕವೆಂದು ಮರುನಾಮಕರಣ ಮಾಡಲಾಯಿತು. ಅಗ ದೇವರಾಜ್ ಅರಸು ಮುಖ್ಯಮಂತ್ರಿಯಾಗಿದ್ದರು.

ಈ ನಾಡಿಗೆ ಕರ್ನಾಟಕ ಎಂದು ಹೆಸರು ಬಂದಿದ್ದೇಗೆ?
ಕರು+ನಾಡು=ಕರ್ನಾಟಕವಾಗಿದೆ. ಕರುನಾಡು ಅಂದರೆ ಕಪ್ಪು ಮಣ್ಣಿನ ನಾಡು, ಹಾಗಾಗಿ ಇದಕ್ಕೆ ಕರ್ನಾಟಕ ಎಂದು ಕರೆಯಲಾಗಿದೆ. ಭಾರತದಲ್ಲಿ ಕರ್ನಾಟಕ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ 6ನೇ ದೊಡ್ಡ ರಾಜ್ಯವಾಗಿದೆ.

ಕನ್ನಡದ ಬಾವುಟ
ಕರ್ನಾಟಕಕ್ಕೆ ಹಳದಿ ಹಾಗೂ ಕೆಂಪು ಬಣ್ಣದ ಬಾವುಟವಿದೆ. ಕನ್ನಡ ಹೋರಾಟಗಾರರಾದ ರಾಮಮೂರ್ತಿಯವರು ಕನ್ನಡ ಬಾವುಟ ಸಿದ್ಧಪಡಿಸಿದರು. ಹಳದಿ ಬಣ್ಣ ಸೌಹಾರ್ದತೆಯ ಸಂಕೇತ ಕೆಂಪು ಕ್ರಾಂತಿಯ ಸಂಕೇತ. ನಾವು ಕನ್ನಡಿಗರು ಕ್ರಾಂತಿಗೂ ಸೈ, ಶಾಂತಿಗೂ ಸೈ ಎಂಬ ಸಂದೇಶ ಸೂಚಿಸುತ್ತದೆ.
ಬಾರಿಸು ಕನ್ನಡ ಡಿಂಡಿಮವ
ಕರ್ನಾಟಕ ಹೃದಯ ಶಿವ



Click it and Unblock the Notifications
