Latest Updates
-
ಈ 3 ರಾಶಿಗಳಿಗೆ ಜೀವನದಲ್ಲಿ ಏರಿಳಿತಗಳು! ಹಳೆಯ ನೆನಪುಗಳು ಕಾಡುತ್ತೆ -
March 09 Horoscope: ಶುಭ ಕಾರ್ಯದಲ್ಲಿ ಭಾಗಿಯಾಗುವ ಸಾಧ್ಯತೆ ಹೆಚ್ಚು! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಹೊಸ ರೀತಿಯ ಟೊಮೆಟೊ ಚಕ್ಕುಲಿ ಸುಲಭವಾಗಿ ಮಾಡಿ: ಇಲ್ಲಿದೆ ಮಾಡುವ ವಿಧಾನ -
ಶನಿ ಸಂಚಾರ 2026: ಮಾರ್ಚ್ನಿಂದ ಈ 5 ರಾಶಿ ಜನರು ಎಚ್ಚರವಹಿಸಿ, ವೈಯಕ್ತಿಕ ಹಾನಿ ಸಂಭವ! -
ಮಸಾಲೆ ಲೆಸ್ ವೈಟ್ ಪಲಾವ್; ವಿಭಿನ್ನ ರುಚಿ ವಿಶೇಷ ಖಾದ್ಯ ಸಿದ್ದಮಾಡಿ ನೋಡಿ! -
ಅಂತಾರಾಷ್ಟ್ರೀಯ ಮಹಿಳಾ ದಿನ: ದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗುತ್ತಿದೆ ರಕ್ತಹೀನತೆ, ಮಹಿಳೆಯರೇ ಬಲಿಪಶು ಏಕೆ? -
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ
ಮುಂದೊಂದು ದಿನ ನೀನೂ ಮುದುಕ ಆಗ್ತೀಯ!

"ಇವರು ಇನ್ನು ಮುಂದೆ ಯಾವುದೇ ಕೆಲಸಕ್ಕೂ ಉಪಯೋಗಕ್ಕೆ ಬರುವುದಿಲ್ಲ" ಎಂದು ಮಗನು ಭಾವಿಸಿದನು. "ಇನ್ನು ಮುಂದೆ ಇವರಿಂದ ಏನೂ ಮಾಡಲು ಸಾಧ್ಯವಿಲ್ಲ" ಎಂದು ತಿಳಿಯಿತು. ಇದರಿಂದ ಮಗನಿಗೆ ತುಂಬಾ ನಿರಾಸೆಯಾಯಿತು.
ಒಂದು ದಿನ ಮಗನು ಒಂದು ದೊಡ್ಡದಾದ ಮರದ ಶವದ ಪೆಟ್ಟಿಗೆಯನ್ನು ತಯಾರು ಮಾಡಿಸಿದನು. ಮತ್ತು ಅದನ್ನು ವರಾಂಡದಲ್ಲಿ ಎಳೆದು ತಂದು ಅವರ ತಂದೆಗೆ ಒಳಗೆ ಮಲಗಿಕೊಳ್ಳಲು ಹೇಳಿದನು. ಏನೂ ಮಾತನಾಡದೇ ಅವರ ತಂದೆ ಅದರ ಮೇಲೆ ಏರಿ ಒಳಗೆ ಮಲಗಿದರು. ನಂತರ ಮಗನು ಆ ಶವದ ಪೆಟ್ಟಿಗೆಯ ಮುಚ್ಚಳವನ್ನು ಮುಚ್ಚಿ, ಅದನ್ನು ಹೊಲದ ಕೊನೆಯಲ್ಲಿ ಇರುವ ದೊಡ್ಡದಾದ ಪ್ರಪಾತಕ್ಕೆ ಎಳೆದು ತರುತ್ತಿದ್ದನು.
ಆ ಪ್ರಪಾತ ಸಮೀಪಿಸುತ್ತಿದ್ದಂತೆ ಶವದ ಪೆಟ್ಟಿಗೆಯ ಒಳಗಿನಿಂದ ನಿಧಾನವಾಗಿ ಮುಚ್ಚಳ ಸರಿದಾಡಲಾರಂಭಿಸಿತು. ಮಗನು ಆ ಮುಚ್ಚಳವನ್ನು ತೆರೆದು ನೋಡಿದನು. ಅದರ ಒಳಗೆ ಅವರ ತಂದೆ ಪ್ರಶಾಂತವಾಗಿ ಮಲಗಿದ್ದರು. ಅವರ ತಂದೆ ಮಗನ ಕಡೆ ನೋಡಿ "ಮಗನೇ ನೀನು ನನ್ನನ್ನು ಪ್ರಪಾತದಿಂದ ಕೆಳಗೆ ತಳ್ಳಲು ಕರೆದೊಯ್ಯುತ್ತಿದ್ದೀಯ ಅಂತ ನನಗೆ ಗೊತ್ತಿದೆ. ಆದರೆ ನೀನು ಹಾಗೆ ಮಾಡುವುದಕ್ಕಿಂತ ಮೊದಲು ನಾನು ನಿನಗೆ ಒಂದು ಸಲಹೆಯನ್ನು ನೀಡಲೇ? ಎಂದು ಕೇಳಿದನು.
"ಏನದು..?" ಎಂದು ಮಗನು ಕೇಳಿದನು. "ನೀನು ನನ್ನನ್ನು ಪ್ರಪಾತದಿಂದ ಎಸೆಯಬೇಕು ಎಂದು ಬಯಸಿದರೆ ನನ್ನನ್ನು ಎಸೆದು ಬಿಡು. ಆದರೆ ಈ ಅತ್ಯುತ್ತಮವಾದ ಮರದ ಶವದ ಪೆಟ್ಟಿಗೆಯನ್ನು ಉಳಿಸಿ ಜೋಪಾನವಾಗಿ ಕಾಪಾಡು. ಮುಂದೆ ನಿನ್ನ ಮಕ್ಕಳು ಇದನ್ನು ಬಳಸಲು ಉಪಯುಕ್ತವಾಗುತ್ತದೆ!" ಎಂದು ಹೇಳಿದನು ಆ ವೃದ್ಧ ತಂದೆ. ಆಗ ಮಗನಿಗೆ ತನ್ನ ತಪ್ಪಿನ ಅರಿವಾಯಿತು. ತಂದೆಯ ಕ್ಷಮೆ ಕೇಳಿ, ಗೌರವದಿಂದ ತಂದೆಯನ್ನು ಮನೆಗೆ ವಾಪಸ್ ಕರೆದುಕೊಂಡು ಹೋದನು.



Click it and Unblock the Notifications











