Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಮುಂದೊಂದು ದಿನ ನೀನೂ ಮುದುಕ ಆಗ್ತೀಯ!

"ಇವರು ಇನ್ನು ಮುಂದೆ ಯಾವುದೇ ಕೆಲಸಕ್ಕೂ ಉಪಯೋಗಕ್ಕೆ ಬರುವುದಿಲ್ಲ" ಎಂದು ಮಗನು ಭಾವಿಸಿದನು. "ಇನ್ನು ಮುಂದೆ ಇವರಿಂದ ಏನೂ ಮಾಡಲು ಸಾಧ್ಯವಿಲ್ಲ" ಎಂದು ತಿಳಿಯಿತು. ಇದರಿಂದ ಮಗನಿಗೆ ತುಂಬಾ ನಿರಾಸೆಯಾಯಿತು.
ಒಂದು ದಿನ ಮಗನು ಒಂದು ದೊಡ್ಡದಾದ ಮರದ ಶವದ ಪೆಟ್ಟಿಗೆಯನ್ನು ತಯಾರು ಮಾಡಿಸಿದನು. ಮತ್ತು ಅದನ್ನು ವರಾಂಡದಲ್ಲಿ ಎಳೆದು ತಂದು ಅವರ ತಂದೆಗೆ ಒಳಗೆ ಮಲಗಿಕೊಳ್ಳಲು ಹೇಳಿದನು. ಏನೂ ಮಾತನಾಡದೇ ಅವರ ತಂದೆ ಅದರ ಮೇಲೆ ಏರಿ ಒಳಗೆ ಮಲಗಿದರು. ನಂತರ ಮಗನು ಆ ಶವದ ಪೆಟ್ಟಿಗೆಯ ಮುಚ್ಚಳವನ್ನು ಮುಚ್ಚಿ, ಅದನ್ನು ಹೊಲದ ಕೊನೆಯಲ್ಲಿ ಇರುವ ದೊಡ್ಡದಾದ ಪ್ರಪಾತಕ್ಕೆ ಎಳೆದು ತರುತ್ತಿದ್ದನು.
ಆ ಪ್ರಪಾತ ಸಮೀಪಿಸುತ್ತಿದ್ದಂತೆ ಶವದ ಪೆಟ್ಟಿಗೆಯ ಒಳಗಿನಿಂದ ನಿಧಾನವಾಗಿ ಮುಚ್ಚಳ ಸರಿದಾಡಲಾರಂಭಿಸಿತು. ಮಗನು ಆ ಮುಚ್ಚಳವನ್ನು ತೆರೆದು ನೋಡಿದನು. ಅದರ ಒಳಗೆ ಅವರ ತಂದೆ ಪ್ರಶಾಂತವಾಗಿ ಮಲಗಿದ್ದರು. ಅವರ ತಂದೆ ಮಗನ ಕಡೆ ನೋಡಿ "ಮಗನೇ ನೀನು ನನ್ನನ್ನು ಪ್ರಪಾತದಿಂದ ಕೆಳಗೆ ತಳ್ಳಲು ಕರೆದೊಯ್ಯುತ್ತಿದ್ದೀಯ ಅಂತ ನನಗೆ ಗೊತ್ತಿದೆ. ಆದರೆ ನೀನು ಹಾಗೆ ಮಾಡುವುದಕ್ಕಿಂತ ಮೊದಲು ನಾನು ನಿನಗೆ ಒಂದು ಸಲಹೆಯನ್ನು ನೀಡಲೇ? ಎಂದು ಕೇಳಿದನು.
"ಏನದು..?" ಎಂದು ಮಗನು ಕೇಳಿದನು. "ನೀನು ನನ್ನನ್ನು ಪ್ರಪಾತದಿಂದ ಎಸೆಯಬೇಕು ಎಂದು ಬಯಸಿದರೆ ನನ್ನನ್ನು ಎಸೆದು ಬಿಡು. ಆದರೆ ಈ ಅತ್ಯುತ್ತಮವಾದ ಮರದ ಶವದ ಪೆಟ್ಟಿಗೆಯನ್ನು ಉಳಿಸಿ ಜೋಪಾನವಾಗಿ ಕಾಪಾಡು. ಮುಂದೆ ನಿನ್ನ ಮಕ್ಕಳು ಇದನ್ನು ಬಳಸಲು ಉಪಯುಕ್ತವಾಗುತ್ತದೆ!" ಎಂದು ಹೇಳಿದನು ಆ ವೃದ್ಧ ತಂದೆ. ಆಗ ಮಗನಿಗೆ ತನ್ನ ತಪ್ಪಿನ ಅರಿವಾಯಿತು. ತಂದೆಯ ಕ್ಷಮೆ ಕೇಳಿ, ಗೌರವದಿಂದ ತಂದೆಯನ್ನು ಮನೆಗೆ ವಾಪಸ್ ಕರೆದುಕೊಂಡು ಹೋದನು.



Click it and Unblock the Notifications
