Latest Updates
-
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ -
ಬಿಸಿಲ ಬೇಗೆಯಿಂದ ಪಾರಾಗಲು ಮನೆಯನ್ನು ತಂಪಾಗಿರಿಸುವ ಅದ್ಭುತ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಪಾನೀಯಗಳೇ ಮದ್ದು! -
ಬಿಸಿಲ ಬೇಗೆಯಿಂದ ಪಾರಾಗಲು ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ
ಜೂ.24ಕ್ಕೆ ಕಾರ ಹುಣ್ಣಿಮೆ: ಸಾಂಸ್ಕೃತಿಕ ವೈಶಿಷ್ಟ್ಯ ಇರುವ ಈ ದಿನದ ವಿಶೇಷವೇನು?
ಉತ್ತರ ಕರ್ನಾಟಕದವರಿಗೆ ಕಾರ ಹುಣ್ಣಿಮೆ ಎಂದರೆ ತುಂಬಾನೇ ವಿಶೇಷ. ಈ ಹಬ್ಬದಂದು ಎತ್ತುಗಳಿಗೆ ಶೃಂಗರಿಸಿ ಅವುಗಳಿಗೆ ಕೃತಜ್ಞತೆ ಸಲ್ಲಿಸಲಾಗುವುದು. ರೈತರ ಸಡಗರ, ಸಂಭ್ರಮದ ಹಬ್ಬವಾದ ಕಾರ ಹುಣ್ಣಿಮೆ ಕಳೆದ ಎರಡು ವರ್ಷದಿಂದ ಕೊರೊನಾ ಕಾರಣದಿಂದಾಗಿ ಅಷ್ಟೇನು ಸಡಗರದಿಂದ ಆಚರಿಸಲು ಸಾಧ್ಯವಾಗುತ್ತಿಲ್ಲ.
ಕಾರ ಹುಣ್ಣಿಮೆ ಬಳಿಕವಷ್ಟೇ ಮುಂಗಾರು ಆರಂಭವಾಗುವುದು ಎಂದು ಹೇಳಲಾಗುವುದು. ಈ ವರ್ಷ ಜೂನ್ 24ರಂದು ಆಚರಿಸಲಾಗುತ್ತಿದೆ. ಇದಕ್ಕೆ ನಮ್ಮ ದ ರಾ ಬಂದ್ರೆಯವರು
" ಕಾರಹುಣ್ಣಿಮೆಯ ಮಾರನೆಯ ದಿನವೇ
ಮೋಡ ಕೋಡನಪ್ಪಿ ಕಂಡಿತೊಡ್ಡಿ ನೋಡ
ಢಿಕ್ಕಿ ಯಾಡುವಾ ಆನೆ ಬೇಡಗನೊಪ್ಪಿ " ಎಂದು ಹೇಳಿರುವುದು.

ಕಾರ ಹುಣ್ಣಿಮೆ ಮಹತ್ವ
ಬೇಸಿಗೆ ತಾಪ ಹೋಗಿ ಮುಂಗಾರು ಮಳೆಯಿಂದ ಭೂಮಿ ತಂಪಾಗುವುದು. ಭೂಮಿ ತಂಪಾದಾಗ ಉತ್ತು- ಬಿತ್ತಲು ಎತ್ತುಗಳು ನೆರವಾಗುವುದು. ಆದ್ದರಿಂದ ಈ ದಿನದಂದು ಅವುಗಳನ್ನು ಅಲಂಕರಿಸಿ ಧನ್ಯವಾದ ಅರ್ಪಿಸಲಾಗುವುದು.

ಊರಿನವರ ಸಂಭ್ರಮ ಹೆಚ್ಚಿಸುವ ಹಬ್ಬ
ಈ ಹಬ್ಬ ಸಾಂಸ್ಕೃತಿಕವಾಗಿ ವೈಶಿಷ್ಟ್ಯ ಹೊಂದಿರುವ ಹಬ್ಬವಾಗಿದೆ. ಈ ದಿನ ಎತ್ತುಗಳಿಗೆ ಅಲಂಕಾರ ಮಾಡಲಾಗುವುದು. ಅವುಗಳ ಹಣೆಗಳಿಗೆ ಬಾಸಿಂಗ, ಹಣೆಪಟ್ಟಿ, ಕೊರಳಲ್ಲಿ ಘಂಟೆ, ಕೊರಳಿಗೆ ಚೆಂದದ ಫರಾರಿಯನ್ನು ಕಟ್ಟಿ ಅದಕ್ಕೆ ಪೂಜೆಯನ್ನು ಸಲ್ಲಿಸಲಾಗುವುದು. ನಂತರ ಅವುಗಳನ್ನು ಬೀದಿಗಳಲ್ಲಿ ಮೆರವಣಿಗೆ ಮಾಡಲಾಗುವುದು. ಇಡೀ ಊರಿಗೇ ಊರೇ ಈ ಸಂಭ್ರಮದಲ್ಲಿ ಪಾಲ್ಗೊಳ್ಳುವುದು.

ಮಕ್ಕಳಿಗೆ ಸಡಗರವೋ ಸಡಗರ
ಈ ದಿನ ಮಕ್ಕಳಿಗಂತೂ ತುಂಬಾನೇ ಸಡಗರ. ಮನೆಯ ಎತ್ತುಗಳಿಗೆ ಅಲಂಕಾರ ಮಾಡಲಾಗುವುದು. ಮಕ್ಕಳು ಹೊಸ ಬಟ್ಟೆ ಧರಿಸಿ ಹಬ್ಬದ ಅಡುಗೆಯಾದ ಹೋಳಿಗೆ, ತುಪ್ಪ ಸವಿಯಲಾಗುವುದು.
ಎಣ್ಣೆ ತೆಗೆಯುವ ಗಾಣಕ್ಕೂ ಅಲಂಕಾರ ಮಾಡಲಾಗುವುದು
ಈ ದಿನ ಎಣ್ಣೆ ತೆಗೆಯುವ ಗಾಣಕ್ಕೂ ಅಲಂಕಾರ ಮಾಡಿ ಪೂಜೆ ಮಾಡಲಾಗುವುದು.



Click it and Unblock the Notifications











