Latest Updates
-
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ!
ಜೂ.24ಕ್ಕೆ ಕಾರ ಹುಣ್ಣಿಮೆ: ಸಾಂಸ್ಕೃತಿಕ ವೈಶಿಷ್ಟ್ಯ ಇರುವ ಈ ದಿನದ ವಿಶೇಷವೇನು?
ಉತ್ತರ ಕರ್ನಾಟಕದವರಿಗೆ ಕಾರ ಹುಣ್ಣಿಮೆ ಎಂದರೆ ತುಂಬಾನೇ ವಿಶೇಷ. ಈ ಹಬ್ಬದಂದು ಎತ್ತುಗಳಿಗೆ ಶೃಂಗರಿಸಿ ಅವುಗಳಿಗೆ ಕೃತಜ್ಞತೆ ಸಲ್ಲಿಸಲಾಗುವುದು. ರೈತರ ಸಡಗರ, ಸಂಭ್ರಮದ ಹಬ್ಬವಾದ ಕಾರ ಹುಣ್ಣಿಮೆ ಕಳೆದ ಎರಡು ವರ್ಷದಿಂದ ಕೊರೊನಾ ಕಾರಣದಿಂದಾಗಿ ಅಷ್ಟೇನು ಸಡಗರದಿಂದ ಆಚರಿಸಲು ಸಾಧ್ಯವಾಗುತ್ತಿಲ್ಲ.
ಕಾರ ಹುಣ್ಣಿಮೆ ಬಳಿಕವಷ್ಟೇ ಮುಂಗಾರು ಆರಂಭವಾಗುವುದು ಎಂದು ಹೇಳಲಾಗುವುದು. ಈ ವರ್ಷ ಜೂನ್ 24ರಂದು ಆಚರಿಸಲಾಗುತ್ತಿದೆ. ಇದಕ್ಕೆ ನಮ್ಮ ದ ರಾ ಬಂದ್ರೆಯವರು
" ಕಾರಹುಣ್ಣಿಮೆಯ ಮಾರನೆಯ ದಿನವೇ
ಮೋಡ ಕೋಡನಪ್ಪಿ ಕಂಡಿತೊಡ್ಡಿ ನೋಡ
ಢಿಕ್ಕಿ ಯಾಡುವಾ ಆನೆ ಬೇಡಗನೊಪ್ಪಿ " ಎಂದು ಹೇಳಿರುವುದು.

ಕಾರ ಹುಣ್ಣಿಮೆ ಮಹತ್ವ
ಬೇಸಿಗೆ ತಾಪ ಹೋಗಿ ಮುಂಗಾರು ಮಳೆಯಿಂದ ಭೂಮಿ ತಂಪಾಗುವುದು. ಭೂಮಿ ತಂಪಾದಾಗ ಉತ್ತು- ಬಿತ್ತಲು ಎತ್ತುಗಳು ನೆರವಾಗುವುದು. ಆದ್ದರಿಂದ ಈ ದಿನದಂದು ಅವುಗಳನ್ನು ಅಲಂಕರಿಸಿ ಧನ್ಯವಾದ ಅರ್ಪಿಸಲಾಗುವುದು.

ಊರಿನವರ ಸಂಭ್ರಮ ಹೆಚ್ಚಿಸುವ ಹಬ್ಬ
ಈ ಹಬ್ಬ ಸಾಂಸ್ಕೃತಿಕವಾಗಿ ವೈಶಿಷ್ಟ್ಯ ಹೊಂದಿರುವ ಹಬ್ಬವಾಗಿದೆ. ಈ ದಿನ ಎತ್ತುಗಳಿಗೆ ಅಲಂಕಾರ ಮಾಡಲಾಗುವುದು. ಅವುಗಳ ಹಣೆಗಳಿಗೆ ಬಾಸಿಂಗ, ಹಣೆಪಟ್ಟಿ, ಕೊರಳಲ್ಲಿ ಘಂಟೆ, ಕೊರಳಿಗೆ ಚೆಂದದ ಫರಾರಿಯನ್ನು ಕಟ್ಟಿ ಅದಕ್ಕೆ ಪೂಜೆಯನ್ನು ಸಲ್ಲಿಸಲಾಗುವುದು. ನಂತರ ಅವುಗಳನ್ನು ಬೀದಿಗಳಲ್ಲಿ ಮೆರವಣಿಗೆ ಮಾಡಲಾಗುವುದು. ಇಡೀ ಊರಿಗೇ ಊರೇ ಈ ಸಂಭ್ರಮದಲ್ಲಿ ಪಾಲ್ಗೊಳ್ಳುವುದು.

ಮಕ್ಕಳಿಗೆ ಸಡಗರವೋ ಸಡಗರ
ಈ ದಿನ ಮಕ್ಕಳಿಗಂತೂ ತುಂಬಾನೇ ಸಡಗರ. ಮನೆಯ ಎತ್ತುಗಳಿಗೆ ಅಲಂಕಾರ ಮಾಡಲಾಗುವುದು. ಮಕ್ಕಳು ಹೊಸ ಬಟ್ಟೆ ಧರಿಸಿ ಹಬ್ಬದ ಅಡುಗೆಯಾದ ಹೋಳಿಗೆ, ತುಪ್ಪ ಸವಿಯಲಾಗುವುದು.
ಎಣ್ಣೆ ತೆಗೆಯುವ ಗಾಣಕ್ಕೂ ಅಲಂಕಾರ ಮಾಡಲಾಗುವುದು
ಈ ದಿನ ಎಣ್ಣೆ ತೆಗೆಯುವ ಗಾಣಕ್ಕೂ ಅಲಂಕಾರ ಮಾಡಿ ಪೂಜೆ ಮಾಡಲಾಗುವುದು.



Click it and Unblock the Notifications