Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕಾರ್ತಿಕ ಸೋಮವಾರದಲ್ಲಿ ಏಕದಶ ರುದ್ರಾಭಿಷೇಕಂ ಹಾಗೂ ದೀಪ ದಾನದ ಮಹತ್ವವೇನು, ಗೊತ್ತೇ?
ಸೋಮವಾರ ಶಿವನಿಗೆ ಮೀಸಲಾದ ದಿನ, ಅದರಲ್ಲೂ ಕಾರ್ತಿಕ ಸೋಮವಾರವೆಂದರೆ ಇನ್ನೂ ವಿಶೇಷ. ಈ ದಿನ ಶಿವನಿಗೆ ಆರಾಧನೆ ಮಾಡಿದರೆ ವಿಶೇಷ ಫಲ ಸಿಗಲಿದೆ ಎಂಬುವುದು ಶಿವನ ಭಕ್ತರ ಬಲವಾದ ನಂಬಿಕೆ, ಈ ದಿನದಂದು ರುದ್ರ ನಮಕಂ ಹಾಗೂ ರುದ್ರ ಚಮಕಂ ಹೇಳುತ್ತಾ ರುದ್ರಾಭಿಷೇಕ ಮಾಡಿದರೆ ತುಂಬಾನೇ ಒಳ್ಳೆಯದು.
ಹಿಂದೂ ಕ್ಯಾಲೆಂಡರ್ನ ಎಂಟನೇ ತಿಂಗಳಾದ ಕಾರ್ತಿಕ ಮಾಸ ವಿಷ್ಣು ಹಾಗೂ ಶಿವ ಇಬ್ಬರಿಗೂ ಅತ್ಯಂತ ಪ್ರಿಯವಾದ ತಿಂಗಳಾಗಿದೆ. ಈ ತಿಂಗಳಿನಲ್ಲಿ ಶಿವ ಹಾಗೂ ವಿಷ್ಣುವಿಗೆ ಪೂಜೆಯನ್ನು ಸಲ್ಲಿಸಲಾಗುವುದು. ಅದರಲ್ಲೂ ಸೋಮವಾರದಂದು ಶಿವನಿಗೆ ವಿಶೇಷವಾದ ಪೂಜೆಯನ್ನು ಮಾಡಲಾಗುವುದು.
ಪದ್ಮ ಪುರಾಣ ಹಾಗೂ ಸ್ಕಂದ ಪುರಾಣದ ಪ್ರಕಾರ ಕಾರ್ತಿಕ ಮಾಸದಲ್ಲಿ ಪೂಜೆ ಮಾಡುವುದರಿಂದ ಧಾರ್ಮಿಕ, ಆರ್ಥಿಕ, ನೆಮ್ಮದಿಯ ಸಂಸಾರ, ಜ್ಞಾನ ನೀಡುತ್ತಾನೆ.

ಹಾಗಾಗಿ ಕಾರ್ತಿಕ ಸೋಮವಾರದಂದು ಭಕ್ತರು ಈ ರೀತಿ ಮಾಡುತ್ತಾರೆ:

ವ್ರತ ಪಾಲಿಸುವುದು
* ಮುಂಜಾನೆ ಎದ್ದು ಸ್ನಾನ ಮಾಡಿ ಶಿವನ ಧ್ಯಾನ ಮಾಡಬೇಕು.
* ರುದ್ರಾಭಿಷೇಕ ಮಾಡಿ, ಬಿಲ್ವೆ ಪತ್ರಗಳನ್ನು ಶಿವನಿಗೆ ಅರ್ಪಿಸಬೇಕು.
* ನಂತರ ಹಿರಿಯರ ಆಶೀರ್ವಾದ ಪಡೆಯಬೇಕು
* ಬಳಿಕ ಸಂಜೆ ಶಿವನ ದೇವಾಲಯಕ್ಕೆ ಹೋಗಿ ದೀಪ ಹಚ್ಚಬೇಕು.
* ಈ ದಿನ ಬ್ರಾಹ್ಮಣರಿಗೆ ದೀಪಗಳನ್ನು ದಾನ ಮಾಡುವುದು ಒಳ್ಳೆಯದು

ಈ ದಿನ ಏಕದಶ ರುದ್ರ ಅಭಿಷೇಕಂ ಮಾಡಿಸಬೇಕು
ಕಾರ್ತಿಕ ಸೋಮವಾರದಂದು ಶಿವನ ದೇವಾಲಯಕ್ಕೆ ಹೋಗಿ ಏಕದಶ ರುದ್ರ ಅಭಿಷೇಕಂ ಮಾಡಿಸಿದರೆ ತುಂಬಾನೇ ಒಳ್ಳೆಯದು. ಇದರಿಂದ ಜೀವನದಲ್ಲಿರುವ ಕಷ್ಟಗಳ ನೀಗುವುದು.

ಕಾರ್ತಿಕ ಸೋಮವಾರ ದೀಪ ದಾನ
ಕಾರ್ತಿಕ ಸೋಮವರದಂದು ದೀಪಗಳನ್ನು ಹಚ್ಚಿದರೆ ಅದರಿಂದ ಶಿವನ ಕೃಪೆಗೆ ಪಾತ್ರರಾಗುವಿರಿ. ಈ ದಿನ ದೇವಾಲಯಕ್ಕೆ ಹೋಗಿ ದೀಪ ಹಚ್ಚುವುದರಿಂದ ಮಾಡಿರುವ ಪಾಪಗಳೆಲ್ಲಾ ದೂರಾಗಿ ಮೋಕ್ಷ ಸಿಗುತ್ತದೆ. ಶಿವನಿಗೆ ದೀಪ ಹಚ್ಚುವುದಕ್ಕೆ ಸಮನಾದ ಉಡುಗೊರೆ ಮತ್ತೊಂದಿಲ್ಲ. ಯಾರು ಕಾರ್ತಿಕ ಮಾಸದಲ್ಲಿ ಎಳ್ಳೆಣ್ಣೆಯಲ್ಲಿ ಶ್ರೀಹರಿಗೆ ದೀಪ ಹಚ್ಚುತ್ತಾರೋ ಅವರಿಗೆ ಶಿವ ಆರೋಗ್ಯ, ಐಶ್ವರ್ಯ ಕೊಟ್ಟು ಹರಿಸುತ್ತಾನೆ.

2022ರಲ್ಲಿ ಬರುವ ಕಾರ್ತಿಕ ಸೋಮವಾರಗಳು
ಅಕ್ಟೋಬರ್ 31
ನವೆಂಬರ್ 7
ನವೆಂಬರ್ 14
ನವೆಂಬರ್ 21



Click it and Unblock the Notifications