Latest Updates
-
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು?
ಕಾರ್ತಿಕ ಸೋಮವಾರದಲ್ಲಿ ಏಕದಶ ರುದ್ರಾಭಿಷೇಕಂ ಹಾಗೂ ದೀಪ ದಾನದ ಮಹತ್ವವೇನು, ಗೊತ್ತೇ?
ಸೋಮವಾರ ಶಿವನಿಗೆ ಮೀಸಲಾದ ದಿನ, ಅದರಲ್ಲೂ ಕಾರ್ತಿಕ ಸೋಮವಾರವೆಂದರೆ ಇನ್ನೂ ವಿಶೇಷ. ಈ ದಿನ ಶಿವನಿಗೆ ಆರಾಧನೆ ಮಾಡಿದರೆ ವಿಶೇಷ ಫಲ ಸಿಗಲಿದೆ ಎಂಬುವುದು ಶಿವನ ಭಕ್ತರ ಬಲವಾದ ನಂಬಿಕೆ, ಈ ದಿನದಂದು ರುದ್ರ ನಮಕಂ ಹಾಗೂ ರುದ್ರ ಚಮಕಂ ಹೇಳುತ್ತಾ ರುದ್ರಾಭಿಷೇಕ ಮಾಡಿದರೆ ತುಂಬಾನೇ ಒಳ್ಳೆಯದು.
ಹಿಂದೂ ಕ್ಯಾಲೆಂಡರ್ನ ಎಂಟನೇ ತಿಂಗಳಾದ ಕಾರ್ತಿಕ ಮಾಸ ವಿಷ್ಣು ಹಾಗೂ ಶಿವ ಇಬ್ಬರಿಗೂ ಅತ್ಯಂತ ಪ್ರಿಯವಾದ ತಿಂಗಳಾಗಿದೆ. ಈ ತಿಂಗಳಿನಲ್ಲಿ ಶಿವ ಹಾಗೂ ವಿಷ್ಣುವಿಗೆ ಪೂಜೆಯನ್ನು ಸಲ್ಲಿಸಲಾಗುವುದು. ಅದರಲ್ಲೂ ಸೋಮವಾರದಂದು ಶಿವನಿಗೆ ವಿಶೇಷವಾದ ಪೂಜೆಯನ್ನು ಮಾಡಲಾಗುವುದು.
ಪದ್ಮ ಪುರಾಣ ಹಾಗೂ ಸ್ಕಂದ ಪುರಾಣದ ಪ್ರಕಾರ ಕಾರ್ತಿಕ ಮಾಸದಲ್ಲಿ ಪೂಜೆ ಮಾಡುವುದರಿಂದ ಧಾರ್ಮಿಕ, ಆರ್ಥಿಕ, ನೆಮ್ಮದಿಯ ಸಂಸಾರ, ಜ್ಞಾನ ನೀಡುತ್ತಾನೆ.

ಹಾಗಾಗಿ ಕಾರ್ತಿಕ ಸೋಮವಾರದಂದು ಭಕ್ತರು ಈ ರೀತಿ ಮಾಡುತ್ತಾರೆ:

ವ್ರತ ಪಾಲಿಸುವುದು
* ಮುಂಜಾನೆ ಎದ್ದು ಸ್ನಾನ ಮಾಡಿ ಶಿವನ ಧ್ಯಾನ ಮಾಡಬೇಕು.
* ರುದ್ರಾಭಿಷೇಕ ಮಾಡಿ, ಬಿಲ್ವೆ ಪತ್ರಗಳನ್ನು ಶಿವನಿಗೆ ಅರ್ಪಿಸಬೇಕು.
* ನಂತರ ಹಿರಿಯರ ಆಶೀರ್ವಾದ ಪಡೆಯಬೇಕು
* ಬಳಿಕ ಸಂಜೆ ಶಿವನ ದೇವಾಲಯಕ್ಕೆ ಹೋಗಿ ದೀಪ ಹಚ್ಚಬೇಕು.
* ಈ ದಿನ ಬ್ರಾಹ್ಮಣರಿಗೆ ದೀಪಗಳನ್ನು ದಾನ ಮಾಡುವುದು ಒಳ್ಳೆಯದು

ಈ ದಿನ ಏಕದಶ ರುದ್ರ ಅಭಿಷೇಕಂ ಮಾಡಿಸಬೇಕು
ಕಾರ್ತಿಕ ಸೋಮವಾರದಂದು ಶಿವನ ದೇವಾಲಯಕ್ಕೆ ಹೋಗಿ ಏಕದಶ ರುದ್ರ ಅಭಿಷೇಕಂ ಮಾಡಿಸಿದರೆ ತುಂಬಾನೇ ಒಳ್ಳೆಯದು. ಇದರಿಂದ ಜೀವನದಲ್ಲಿರುವ ಕಷ್ಟಗಳ ನೀಗುವುದು.

ಕಾರ್ತಿಕ ಸೋಮವಾರ ದೀಪ ದಾನ
ಕಾರ್ತಿಕ ಸೋಮವರದಂದು ದೀಪಗಳನ್ನು ಹಚ್ಚಿದರೆ ಅದರಿಂದ ಶಿವನ ಕೃಪೆಗೆ ಪಾತ್ರರಾಗುವಿರಿ. ಈ ದಿನ ದೇವಾಲಯಕ್ಕೆ ಹೋಗಿ ದೀಪ ಹಚ್ಚುವುದರಿಂದ ಮಾಡಿರುವ ಪಾಪಗಳೆಲ್ಲಾ ದೂರಾಗಿ ಮೋಕ್ಷ ಸಿಗುತ್ತದೆ. ಶಿವನಿಗೆ ದೀಪ ಹಚ್ಚುವುದಕ್ಕೆ ಸಮನಾದ ಉಡುಗೊರೆ ಮತ್ತೊಂದಿಲ್ಲ. ಯಾರು ಕಾರ್ತಿಕ ಮಾಸದಲ್ಲಿ ಎಳ್ಳೆಣ್ಣೆಯಲ್ಲಿ ಶ್ರೀಹರಿಗೆ ದೀಪ ಹಚ್ಚುತ್ತಾರೋ ಅವರಿಗೆ ಶಿವ ಆರೋಗ್ಯ, ಐಶ್ವರ್ಯ ಕೊಟ್ಟು ಹರಿಸುತ್ತಾನೆ.

2022ರಲ್ಲಿ ಬರುವ ಕಾರ್ತಿಕ ಸೋಮವಾರಗಳು
ಅಕ್ಟೋಬರ್ 31
ನವೆಂಬರ್ 7
ನವೆಂಬರ್ 14
ನವೆಂಬರ್ 21



Click it and Unblock the Notifications