Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಕಾರ್ತಿಕ ಸೋಮವಾರದಲ್ಲಿ ಏಕದಶ ರುದ್ರಾಭಿಷೇಕಂ ಹಾಗೂ ದೀಪ ದಾನದ ಮಹತ್ವವೇನು, ಗೊತ್ತೇ?
ಸೋಮವಾರ ಶಿವನಿಗೆ ಮೀಸಲಾದ ದಿನ, ಅದರಲ್ಲೂ ಕಾರ್ತಿಕ ಸೋಮವಾರವೆಂದರೆ ಇನ್ನೂ ವಿಶೇಷ. ಈ ದಿನ ಶಿವನಿಗೆ ಆರಾಧನೆ ಮಾಡಿದರೆ ವಿಶೇಷ ಫಲ ಸಿಗಲಿದೆ ಎಂಬುವುದು ಶಿವನ ಭಕ್ತರ ಬಲವಾದ ನಂಬಿಕೆ, ಈ ದಿನದಂದು ರುದ್ರ ನಮಕಂ ಹಾಗೂ ರುದ್ರ ಚಮಕಂ ಹೇಳುತ್ತಾ ರುದ್ರಾಭಿಷೇಕ ಮಾಡಿದರೆ ತುಂಬಾನೇ ಒಳ್ಳೆಯದು.
ಹಿಂದೂ ಕ್ಯಾಲೆಂಡರ್ನ ಎಂಟನೇ ತಿಂಗಳಾದ ಕಾರ್ತಿಕ ಮಾಸ ವಿಷ್ಣು ಹಾಗೂ ಶಿವ ಇಬ್ಬರಿಗೂ ಅತ್ಯಂತ ಪ್ರಿಯವಾದ ತಿಂಗಳಾಗಿದೆ. ಈ ತಿಂಗಳಿನಲ್ಲಿ ಶಿವ ಹಾಗೂ ವಿಷ್ಣುವಿಗೆ ಪೂಜೆಯನ್ನು ಸಲ್ಲಿಸಲಾಗುವುದು. ಅದರಲ್ಲೂ ಸೋಮವಾರದಂದು ಶಿವನಿಗೆ ವಿಶೇಷವಾದ ಪೂಜೆಯನ್ನು ಮಾಡಲಾಗುವುದು.
ಪದ್ಮ ಪುರಾಣ ಹಾಗೂ ಸ್ಕಂದ ಪುರಾಣದ ಪ್ರಕಾರ ಕಾರ್ತಿಕ ಮಾಸದಲ್ಲಿ ಪೂಜೆ ಮಾಡುವುದರಿಂದ ಧಾರ್ಮಿಕ, ಆರ್ಥಿಕ, ನೆಮ್ಮದಿಯ ಸಂಸಾರ, ಜ್ಞಾನ ನೀಡುತ್ತಾನೆ.

ಹಾಗಾಗಿ ಕಾರ್ತಿಕ ಸೋಮವಾರದಂದು ಭಕ್ತರು ಈ ರೀತಿ ಮಾಡುತ್ತಾರೆ:

ವ್ರತ ಪಾಲಿಸುವುದು
* ಮುಂಜಾನೆ ಎದ್ದು ಸ್ನಾನ ಮಾಡಿ ಶಿವನ ಧ್ಯಾನ ಮಾಡಬೇಕು.
* ರುದ್ರಾಭಿಷೇಕ ಮಾಡಿ, ಬಿಲ್ವೆ ಪತ್ರಗಳನ್ನು ಶಿವನಿಗೆ ಅರ್ಪಿಸಬೇಕು.
* ನಂತರ ಹಿರಿಯರ ಆಶೀರ್ವಾದ ಪಡೆಯಬೇಕು
* ಬಳಿಕ ಸಂಜೆ ಶಿವನ ದೇವಾಲಯಕ್ಕೆ ಹೋಗಿ ದೀಪ ಹಚ್ಚಬೇಕು.
* ಈ ದಿನ ಬ್ರಾಹ್ಮಣರಿಗೆ ದೀಪಗಳನ್ನು ದಾನ ಮಾಡುವುದು ಒಳ್ಳೆಯದು

ಈ ದಿನ ಏಕದಶ ರುದ್ರ ಅಭಿಷೇಕಂ ಮಾಡಿಸಬೇಕು
ಕಾರ್ತಿಕ ಸೋಮವಾರದಂದು ಶಿವನ ದೇವಾಲಯಕ್ಕೆ ಹೋಗಿ ಏಕದಶ ರುದ್ರ ಅಭಿಷೇಕಂ ಮಾಡಿಸಿದರೆ ತುಂಬಾನೇ ಒಳ್ಳೆಯದು. ಇದರಿಂದ ಜೀವನದಲ್ಲಿರುವ ಕಷ್ಟಗಳ ನೀಗುವುದು.

ಕಾರ್ತಿಕ ಸೋಮವಾರ ದೀಪ ದಾನ
ಕಾರ್ತಿಕ ಸೋಮವರದಂದು ದೀಪಗಳನ್ನು ಹಚ್ಚಿದರೆ ಅದರಿಂದ ಶಿವನ ಕೃಪೆಗೆ ಪಾತ್ರರಾಗುವಿರಿ. ಈ ದಿನ ದೇವಾಲಯಕ್ಕೆ ಹೋಗಿ ದೀಪ ಹಚ್ಚುವುದರಿಂದ ಮಾಡಿರುವ ಪಾಪಗಳೆಲ್ಲಾ ದೂರಾಗಿ ಮೋಕ್ಷ ಸಿಗುತ್ತದೆ. ಶಿವನಿಗೆ ದೀಪ ಹಚ್ಚುವುದಕ್ಕೆ ಸಮನಾದ ಉಡುಗೊರೆ ಮತ್ತೊಂದಿಲ್ಲ. ಯಾರು ಕಾರ್ತಿಕ ಮಾಸದಲ್ಲಿ ಎಳ್ಳೆಣ್ಣೆಯಲ್ಲಿ ಶ್ರೀಹರಿಗೆ ದೀಪ ಹಚ್ಚುತ್ತಾರೋ ಅವರಿಗೆ ಶಿವ ಆರೋಗ್ಯ, ಐಶ್ವರ್ಯ ಕೊಟ್ಟು ಹರಿಸುತ್ತಾನೆ.

2022ರಲ್ಲಿ ಬರುವ ಕಾರ್ತಿಕ ಸೋಮವಾರಗಳು
ಅಕ್ಟೋಬರ್ 31
ನವೆಂಬರ್ 7
ನವೆಂಬರ್ 14
ನವೆಂಬರ್ 21



Click it and Unblock the Notifications
