Just In
- 3 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 4 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 5 hrs ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- 5 hrs ago ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
Don't Miss
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾರ್ತಿಕ ಪೂರ್ಣಿಮಾ 2022: ರಾಶಿಚಕ್ರದ ಪ್ರಕಾರ ಈ ವಸ್ತು ದಾನ ಮಾಡಿದರೆ ಸಂಕಷ್ಟ ನಿವಾರಣೆಯಾಗುತ್ತದೆ
ದೇವ-ದೀಪಾವಳಿ ಅಥವಾ ದೇವರ ಬೆಳಕಿನ ಹಬ್ಬ ಎಂದು ಕರೆಯಲಾಗುವ ಕಾರ್ತಿಕ ಹುಣ್ಣಿಮೆ 2022ನೇ ಸಾಲಿನಲ್ಲಿ ನವೆಂಬರ್ 8ರಂದು ಆಚರಿಸಲಾಗುತ್ತಿದೆ. ಈ ದಿನದಂದು ಗಂಗಾ ಸ್ನಾನ ಅಥವಾ ಪವಿತ್ರ ನದಿಯಲ್ಲಿ ಸ್ನಾನ ಮಡಿದರೆ ಶ್ರೇಷ್ಟ ಎಂದು ಹೇಳಲಾಗುತ್ತದೆ. ವಿಷ್ಣು ಹಾಗೂ ಶಿವನನ್ನು ಪೂಜಿಸುವ ಈದಿನ ಯಾವುದೇ ರೀತಿಯ ದೌರ್ಜನ್ಯ ಹಾಗೂ ಹಿಂಸೆಯನ್ನು ನಿಷೇಧಿಸಲಾಗಿದೆ. ಕಾರ್ತಿಕ ಹುಣ್ಣಿಮೆಯು ವಿಷ್ಣುವು ನಿದ್ರಿಸುವನೆಂದು ನಂಬಲಾದ ನಾಲ್ಕು ತಿಂಗಳ ಅವಧಿಯಾದ ಚಾತುರ್ಮಾಸದ ಮುಕ್ತಾಯವನ್ನು ಸೂಚಿಸುವ ಪ್ರಬೋಧಿನಿ ಏಕಾದಶಿಯೊಂದಿಗೆ ನಿಕಟವಾಗಿ ಸಂಬಂಧಿಸಿದೆ.
ಇಂಥಾ ವಿಶೇಷ ದಿನದಂದು ನೀವು ದಾನ ಮಾಡಿದರೆ ನಿಮ್ಮ ಕಷ್ಟ ಪರಿಹಾರವಾಗುತ್ತದೆ, ಸಂತೋಷ, ನೆಮ್ಮದಿ ನಿಮ್ಮದಾಗುತ್ತದೆ. ಶುಭಫಲಗಳು ಸಿಗಲಿದೆ ಎಂಬ ನಂಬಿಕೆ ಇದೆ. ಜ್ಯೋತಿಶಾಸ್ತ್ರದ ಪ್ರಕಾರ ರಾಶಿಚಕ್ರದ ಚಿಹ್ನೆಯ ಅನುಗುಣವಾಗಿ ನೀವು ದಾನ ಮಾಡಬೇಕು, ಯಾವ ರಾಶಿಯವರು ಏನನ್ನು ದಾನ ಮಾಡಬೇಕು, ಯಾವುದನ್ನು ದಾನ ಮಾಡಿದರೆ ಒಳ್ಳೆಯದಾಗುತ್ತದೆ ನಿಮಗೆ ತಿಳಿಸಿಕೊಡಲಿದ್ದೇವೆ:
ಮೇಷ ರಾಶಿ
ಮೇಷ ರಾಶಿಯವರು ಕಾರ್ತಿಕ ಪೂರ್ಣಿಮೆಯ ಈ ವಿಶೇಷ ದಿನ ಬೆಲ್ಲವನ್ನು ದಾನ ಮಾಡಬೇಕು. ಬೆಲ್ಲವನ್ನು ದಾನ ಮಾಡುವುದರಿಂದ ನೀವು ಆರ್ಥಿಕವಾಗಿ ಸಮೃದ್ಧಿಯನ್ನು ಪಡೆಯುತ್ತೀರಿ.
ವೃಷಭ ರಾಶಿ
ವೃಷಭ ರಾಶಿಯ ಜನರು ಸಕ್ಕರೆ ಅಥವಾ ಸಿಹಿ ಪದಾರ್ಥಗಳನ್ನು ದಾನ ಮಾಡಬೇಕು, ಹೀಗೆ ಮಾಡುವುದರಿಂದ ನಿಮ್ಮ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ನಿಮ್ಮದಾಗುತ್ತದೆ.
ಮಿಥುನ ರಾಶಿ
ಮಿಥುನ ರಾಶಿಯವರು ಕಾರ್ತಿಕ ಪೂರ್ಣಿಮೆಯ ವಿಶೇಷ ದಿನ ಹೆಸರುಬೇಳೆಯನ್ನು ದಾನ ಮಾಡಿ. ಬೇಳೆಯನ್ನು ದಾನ ಮಾಡುವುದರಿಂದ ನಿಮ್ಮ ವೈವಾಹಿಕ ಜೀವನ ಮಂಗಳಕರವಾಗಿರುತ್ತದೆ.
ಕರ್ಕ ರಾಶಿ
ಕರ್ಕ ರಾಶಿಯವರು ಈ ಸುದಿನ ಅನ್ನವನ್ನು ದಾನ ಮಾಡಬೇಕು. ಹೀಗೆ ಮಾಡುವುದರಿಂದ ಮಾನಸಿಕ ಶಾಂತಿ ನಿಮ್ಮದಾಗುತ್ತದೆ.
ಸಿಂಹ ರಾಶಿ
ಸಿಂಹ ರಾಶಿಯವರು ಕಾರ್ತಿಕ ಪೂರ್ಣಿಮೆಯ ದಿನ ಗೋಧಿಯನ್ನು ದಾನ ಮಾಡಬೇಕು, ಏಕೆಂದರೆ ಹೀಗೆ ಮಾಡುವುದರಿಂದ ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ.
ಕನ್ಯಾ ರಾಶಿ
ಕನ್ಯಾ ರಾಶಿಯವರು ಇಂದು ಪ್ರಾಣಿಗಳಿಗೆ ಹಸಿರು ಮೇವನ್ನು ತಿನ್ನಿಸಿದರೆ ಶುಭವಾಗುತ್ತದೆ. ಈ ರೀತಿ ಮಾಡುವುದರಿಂದ ನಿಮ್ಮ ಜೀವನದ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ.
ತುಲಾ ರಾಶಿ
ತುಲಾ ರಾಶಿಯವರು ಇಂದು ಖೀರ್/ಪಾಯಸವನ್ನು ದಾನ ಮಾಡಬೇಕು, ಹೀಗೆ ಮಾಡುವುದರಿಂದ ನೀವು ಕೀರ್ತಿಯನ್ನು ಸಂಪಾದಿಸುತ್ತೀರಿ.
ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರು ಈ ದಿನದಂದು ಬೆಲ್ಲ ಮತ್ತು ಕಾಳುಗಳನ್ನು ದಾನ ಮಾಡಬೇಕು. ನೀವು ಹೀಗೆ ಮಾಡುವುದರಿಂದ ನಿಮ್ಮ ಶತ್ರುಗಳನ್ನು ನಾಶಪಡಿಸಲು ಇದು ಸಹಾಯ ಮಾಡುತ್ತದೆ.
ಧನು ರಾಶಿ
ಧನು ರಾಶಿಚಕ್ರದವರು ದೇವಸ್ಥಾನದಲ್ಲಿ ಬೇಳೆಯನ್ನು ದಾನ ಮಾಡಬೇಕು, ಹೀಗೆ ಮಾಡುವುದರಿಂದ ನೀವು ಜೀವನದ ಎಲ್ಲಾ ಸಂತೋಷಗಳನ್ನು ಪಡೆಯುತ್ತೀರಿ, ನೆಮ್ಮದಿಯ ಬದುಕು ನಿಮ್ಮದಾಗುತ್ತದೆ.
ಮಕರ ರಾಶಿ
ಮಕರ ರಾಶಿಯ ಜನರು ಈ ದಿನ ಕಂಬಳಿಯನ್ನು ದಾನ ಮಾಡಿದರೆ ಶುಭವಾಗುತ್ತದೆ. ಹೀಗೆ ಮಾಡುವುದರಿಂದ ನಿಮ್ಮ ಕೆಲಸದಲ್ಲಿ ಬರುವ ಎಲ್ಲಾ ರೀತಿಯ ತೊಂದರೆಗಳು ದೂರವಾಗುತ್ತವೆ.
ಕುಂಭ ರಾಶಿ
ಕುಂಭ ರಾಶಿಯವರು ಜನರು ಕಪ್ಪು ಉದ್ದಿನ ಬೇಳೆಯನ್ನು ದಾನ ಮಾಡಿ, ಇದನ್ನು ಮಾಡುವುದರಿಂದ ಜೀವನದಲ್ಲಿ ಎಲ್ಲಾ ರೀತಿಯ ಸಮಸ್ಯೆಗಳು ದೂರವಾಗುತ್ತವೆ.
ಮೀನ ರಾಶಿ
ಮೀನ ರಾಶಿಯವರು ಅರಿಶಿನ ಮತ್ತು ಕಡಲೆ ಹಿಟ್ಟಿನ ಸಿಹಿತಿಂಡಿಗಳನ್ನು ದಾನ ಮಾಡಿ, ಈ ಶುಭ ದಿನ ಹೀಗೆ ಮಾಡುವುದರಿಂದ ನಿಮ್ಮ ಜೀವನದಲ್ಲಿ ಹಣದ ಕೊರತೆ ಇರುವುದಿಲ್ಲ.ಡಿ