Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಕಾರ್ತಿಕ ಪೂರ್ಣಿಮಾ 2022: ರಾಶಿಚಕ್ರದ ಪ್ರಕಾರ ಈ ವಸ್ತು ದಾನ ಮಾಡಿದರೆ ಸಂಕಷ್ಟ ನಿವಾರಣೆಯಾಗುತ್ತದೆ
ದೇವ-ದೀಪಾವಳಿ ಅಥವಾ ದೇವರ ಬೆಳಕಿನ ಹಬ್ಬ ಎಂದು ಕರೆಯಲಾಗುವ ಕಾರ್ತಿಕ ಹುಣ್ಣಿಮೆ 2022ನೇ ಸಾಲಿನಲ್ಲಿ ನವೆಂಬರ್ 8ರಂದು ಆಚರಿಸಲಾಗುತ್ತಿದೆ. ಈ ದಿನದಂದು ಗಂಗಾ ಸ್ನಾನ ಅಥವಾ ಪವಿತ್ರ ನದಿಯಲ್ಲಿ ಸ್ನಾನ ಮಡಿದರೆ ಶ್ರೇಷ್ಟ ಎಂದು ಹೇಳಲಾಗುತ್ತದೆ. ವಿಷ್ಣು ಹಾಗೂ ಶಿವನನ್ನು ಪೂಜಿಸುವ ಈದಿನ ಯಾವುದೇ ರೀತಿಯ ದೌರ್ಜನ್ಯ ಹಾಗೂ ಹಿಂಸೆಯನ್ನು ನಿಷೇಧಿಸಲಾಗಿದೆ. ಕಾರ್ತಿಕ ಹುಣ್ಣಿಮೆಯು ವಿಷ್ಣುವು ನಿದ್ರಿಸುವನೆಂದು ನಂಬಲಾದ ನಾಲ್ಕು ತಿಂಗಳ ಅವಧಿಯಾದ ಚಾತುರ್ಮಾಸದ ಮುಕ್ತಾಯವನ್ನು ಸೂಚಿಸುವ ಪ್ರಬೋಧಿನಿ ಏಕಾದಶಿಯೊಂದಿಗೆ ನಿಕಟವಾಗಿ ಸಂಬಂಧಿಸಿದೆ.

ಇಂಥಾ ವಿಶೇಷ ದಿನದಂದು ನೀವು ದಾನ ಮಾಡಿದರೆ ನಿಮ್ಮ ಕಷ್ಟ ಪರಿಹಾರವಾಗುತ್ತದೆ, ಸಂತೋಷ, ನೆಮ್ಮದಿ ನಿಮ್ಮದಾಗುತ್ತದೆ. ಶುಭಫಲಗಳು ಸಿಗಲಿದೆ ಎಂಬ ನಂಬಿಕೆ ಇದೆ. ಜ್ಯೋತಿಶಾಸ್ತ್ರದ ಪ್ರಕಾರ ರಾಶಿಚಕ್ರದ ಚಿಹ್ನೆಯ ಅನುಗುಣವಾಗಿ ನೀವು ದಾನ ಮಾಡಬೇಕು, ಯಾವ ರಾಶಿಯವರು ಏನನ್ನು ದಾನ ಮಾಡಬೇಕು, ಯಾವುದನ್ನು ದಾನ ಮಾಡಿದರೆ ಒಳ್ಳೆಯದಾಗುತ್ತದೆ ನಿಮಗೆ ತಿಳಿಸಿಕೊಡಲಿದ್ದೇವೆ:

ಮೇಷ ರಾಶಿ
ಮೇಷ ರಾಶಿಯವರು ಕಾರ್ತಿಕ ಪೂರ್ಣಿಮೆಯ ಈ ವಿಶೇಷ ದಿನ ಬೆಲ್ಲವನ್ನು ದಾನ ಮಾಡಬೇಕು. ಬೆಲ್ಲವನ್ನು ದಾನ ಮಾಡುವುದರಿಂದ ನೀವು ಆರ್ಥಿಕವಾಗಿ ಸಮೃದ್ಧಿಯನ್ನು ಪಡೆಯುತ್ತೀರಿ.

ವೃಷಭ ರಾಶಿ
ವೃಷಭ ರಾಶಿಯ ಜನರು ಸಕ್ಕರೆ ಅಥವಾ ಸಿಹಿ ಪದಾರ್ಥಗಳನ್ನು ದಾನ ಮಾಡಬೇಕು, ಹೀಗೆ ಮಾಡುವುದರಿಂದ ನಿಮ್ಮ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ನಿಮ್ಮದಾಗುತ್ತದೆ.

ಮಿಥುನ ರಾಶಿ
ಮಿಥುನ ರಾಶಿಯವರು ಕಾರ್ತಿಕ ಪೂರ್ಣಿಮೆಯ ವಿಶೇಷ ದಿನ ಹೆಸರುಬೇಳೆಯನ್ನು ದಾನ ಮಾಡಿ. ಬೇಳೆಯನ್ನು ದಾನ ಮಾಡುವುದರಿಂದ ನಿಮ್ಮ ವೈವಾಹಿಕ ಜೀವನ ಮಂಗಳಕರವಾಗಿರುತ್ತದೆ.

ಕರ್ಕ ರಾಶಿ
ಕರ್ಕ ರಾಶಿಯವರು ಈ ಸುದಿನ ಅನ್ನವನ್ನು ದಾನ ಮಾಡಬೇಕು. ಹೀಗೆ ಮಾಡುವುದರಿಂದ ಮಾನಸಿಕ ಶಾಂತಿ ನಿಮ್ಮದಾಗುತ್ತದೆ.

ಸಿಂಹ ರಾಶಿ
ಸಿಂಹ ರಾಶಿಯವರು ಕಾರ್ತಿಕ ಪೂರ್ಣಿಮೆಯ ದಿನ ಗೋಧಿಯನ್ನು ದಾನ ಮಾಡಬೇಕು, ಏಕೆಂದರೆ ಹೀಗೆ ಮಾಡುವುದರಿಂದ ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ.

ಕನ್ಯಾ ರಾಶಿ
ಕನ್ಯಾ ರಾಶಿಯವರು ಇಂದು ಪ್ರಾಣಿಗಳಿಗೆ ಹಸಿರು ಮೇವನ್ನು ತಿನ್ನಿಸಿದರೆ ಶುಭವಾಗುತ್ತದೆ. ಈ ರೀತಿ ಮಾಡುವುದರಿಂದ ನಿಮ್ಮ ಜೀವನದ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ.

ತುಲಾ ರಾಶಿ
ತುಲಾ ರಾಶಿಯವರು ಇಂದು ಖೀರ್/ಪಾಯಸವನ್ನು ದಾನ ಮಾಡಬೇಕು, ಹೀಗೆ ಮಾಡುವುದರಿಂದ ನೀವು ಕೀರ್ತಿಯನ್ನು ಸಂಪಾದಿಸುತ್ತೀರಿ.

ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರು ಈ ದಿನದಂದು ಬೆಲ್ಲ ಮತ್ತು ಕಾಳುಗಳನ್ನು ದಾನ ಮಾಡಬೇಕು. ನೀವು ಹೀಗೆ ಮಾಡುವುದರಿಂದ ನಿಮ್ಮ ಶತ್ರುಗಳನ್ನು ನಾಶಪಡಿಸಲು ಇದು ಸಹಾಯ ಮಾಡುತ್ತದೆ.

ಧನು ರಾಶಿ
ಧನು ರಾಶಿಚಕ್ರದವರು ದೇವಸ್ಥಾನದಲ್ಲಿ ಬೇಳೆಯನ್ನು ದಾನ ಮಾಡಬೇಕು, ಹೀಗೆ ಮಾಡುವುದರಿಂದ ನೀವು ಜೀವನದ ಎಲ್ಲಾ ಸಂತೋಷಗಳನ್ನು ಪಡೆಯುತ್ತೀರಿ, ನೆಮ್ಮದಿಯ ಬದುಕು ನಿಮ್ಮದಾಗುತ್ತದೆ.

ಮಕರ ರಾಶಿ
ಮಕರ ರಾಶಿಯ ಜನರು ಈ ದಿನ ಕಂಬಳಿಯನ್ನು ದಾನ ಮಾಡಿದರೆ ಶುಭವಾಗುತ್ತದೆ. ಹೀಗೆ ಮಾಡುವುದರಿಂದ ನಿಮ್ಮ ಕೆಲಸದಲ್ಲಿ ಬರುವ ಎಲ್ಲಾ ರೀತಿಯ ತೊಂದರೆಗಳು ದೂರವಾಗುತ್ತವೆ.

ಕುಂಭ ರಾಶಿ
ಕುಂಭ ರಾಶಿಯವರು ಜನರು ಕಪ್ಪು ಉದ್ದಿನ ಬೇಳೆಯನ್ನು ದಾನ ಮಾಡಿ, ಇದನ್ನು ಮಾಡುವುದರಿಂದ ಜೀವನದಲ್ಲಿ ಎಲ್ಲಾ ರೀತಿಯ ಸಮಸ್ಯೆಗಳು ದೂರವಾಗುತ್ತವೆ.

ಮೀನ ರಾಶಿ
ಮೀನ ರಾಶಿಯವರು ಅರಿಶಿನ ಮತ್ತು ಕಡಲೆ ಹಿಟ್ಟಿನ ಸಿಹಿತಿಂಡಿಗಳನ್ನು ದಾನ ಮಾಡಿ, ಈ ಶುಭ ದಿನ ಹೀಗೆ ಮಾಡುವುದರಿಂದ ನಿಮ್ಮ ಜೀವನದಲ್ಲಿ ಹಣದ ಕೊರತೆ ಇರುವುದಿಲ್ಲ.ಡಿ



Click it and Unblock the Notifications