Latest Updates
-
ಟೆಲಿಗ್ರಾಂ ಬಳಕೆದಾರರೇ ಗಮನಿಸಿ: ಸೇವೆ ಆರಂಭವಾದರೂ ಈ ಬದಲಾವಣೆ ಮರೆಯದಿರಿ! -
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ
ಕಾರ್ತಿಕ ಪೂರ್ಣಿಮಾ 2022: ರಾಶಿಚಕ್ರದ ಪ್ರಕಾರ ಈ ವಸ್ತು ದಾನ ಮಾಡಿದರೆ ಸಂಕಷ್ಟ ನಿವಾರಣೆಯಾಗುತ್ತದೆ
ದೇವ-ದೀಪಾವಳಿ ಅಥವಾ ದೇವರ ಬೆಳಕಿನ ಹಬ್ಬ ಎಂದು ಕರೆಯಲಾಗುವ ಕಾರ್ತಿಕ ಹುಣ್ಣಿಮೆ 2022ನೇ ಸಾಲಿನಲ್ಲಿ ನವೆಂಬರ್ 8ರಂದು ಆಚರಿಸಲಾಗುತ್ತಿದೆ. ಈ ದಿನದಂದು ಗಂಗಾ ಸ್ನಾನ ಅಥವಾ ಪವಿತ್ರ ನದಿಯಲ್ಲಿ ಸ್ನಾನ ಮಡಿದರೆ ಶ್ರೇಷ್ಟ ಎಂದು ಹೇಳಲಾಗುತ್ತದೆ. ವಿಷ್ಣು ಹಾಗೂ ಶಿವನನ್ನು ಪೂಜಿಸುವ ಈದಿನ ಯಾವುದೇ ರೀತಿಯ ದೌರ್ಜನ್ಯ ಹಾಗೂ ಹಿಂಸೆಯನ್ನು ನಿಷೇಧಿಸಲಾಗಿದೆ. ಕಾರ್ತಿಕ ಹುಣ್ಣಿಮೆಯು ವಿಷ್ಣುವು ನಿದ್ರಿಸುವನೆಂದು ನಂಬಲಾದ ನಾಲ್ಕು ತಿಂಗಳ ಅವಧಿಯಾದ ಚಾತುರ್ಮಾಸದ ಮುಕ್ತಾಯವನ್ನು ಸೂಚಿಸುವ ಪ್ರಬೋಧಿನಿ ಏಕಾದಶಿಯೊಂದಿಗೆ ನಿಕಟವಾಗಿ ಸಂಬಂಧಿಸಿದೆ.

ಇಂಥಾ ವಿಶೇಷ ದಿನದಂದು ನೀವು ದಾನ ಮಾಡಿದರೆ ನಿಮ್ಮ ಕಷ್ಟ ಪರಿಹಾರವಾಗುತ್ತದೆ, ಸಂತೋಷ, ನೆಮ್ಮದಿ ನಿಮ್ಮದಾಗುತ್ತದೆ. ಶುಭಫಲಗಳು ಸಿಗಲಿದೆ ಎಂಬ ನಂಬಿಕೆ ಇದೆ. ಜ್ಯೋತಿಶಾಸ್ತ್ರದ ಪ್ರಕಾರ ರಾಶಿಚಕ್ರದ ಚಿಹ್ನೆಯ ಅನುಗುಣವಾಗಿ ನೀವು ದಾನ ಮಾಡಬೇಕು, ಯಾವ ರಾಶಿಯವರು ಏನನ್ನು ದಾನ ಮಾಡಬೇಕು, ಯಾವುದನ್ನು ದಾನ ಮಾಡಿದರೆ ಒಳ್ಳೆಯದಾಗುತ್ತದೆ ನಿಮಗೆ ತಿಳಿಸಿಕೊಡಲಿದ್ದೇವೆ:

ಮೇಷ ರಾಶಿ
ಮೇಷ ರಾಶಿಯವರು ಕಾರ್ತಿಕ ಪೂರ್ಣಿಮೆಯ ಈ ವಿಶೇಷ ದಿನ ಬೆಲ್ಲವನ್ನು ದಾನ ಮಾಡಬೇಕು. ಬೆಲ್ಲವನ್ನು ದಾನ ಮಾಡುವುದರಿಂದ ನೀವು ಆರ್ಥಿಕವಾಗಿ ಸಮೃದ್ಧಿಯನ್ನು ಪಡೆಯುತ್ತೀರಿ.

ವೃಷಭ ರಾಶಿ
ವೃಷಭ ರಾಶಿಯ ಜನರು ಸಕ್ಕರೆ ಅಥವಾ ಸಿಹಿ ಪದಾರ್ಥಗಳನ್ನು ದಾನ ಮಾಡಬೇಕು, ಹೀಗೆ ಮಾಡುವುದರಿಂದ ನಿಮ್ಮ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ನಿಮ್ಮದಾಗುತ್ತದೆ.

ಮಿಥುನ ರಾಶಿ
ಮಿಥುನ ರಾಶಿಯವರು ಕಾರ್ತಿಕ ಪೂರ್ಣಿಮೆಯ ವಿಶೇಷ ದಿನ ಹೆಸರುಬೇಳೆಯನ್ನು ದಾನ ಮಾಡಿ. ಬೇಳೆಯನ್ನು ದಾನ ಮಾಡುವುದರಿಂದ ನಿಮ್ಮ ವೈವಾಹಿಕ ಜೀವನ ಮಂಗಳಕರವಾಗಿರುತ್ತದೆ.

ಕರ್ಕ ರಾಶಿ
ಕರ್ಕ ರಾಶಿಯವರು ಈ ಸುದಿನ ಅನ್ನವನ್ನು ದಾನ ಮಾಡಬೇಕು. ಹೀಗೆ ಮಾಡುವುದರಿಂದ ಮಾನಸಿಕ ಶಾಂತಿ ನಿಮ್ಮದಾಗುತ್ತದೆ.

ಸಿಂಹ ರಾಶಿ
ಸಿಂಹ ರಾಶಿಯವರು ಕಾರ್ತಿಕ ಪೂರ್ಣಿಮೆಯ ದಿನ ಗೋಧಿಯನ್ನು ದಾನ ಮಾಡಬೇಕು, ಏಕೆಂದರೆ ಹೀಗೆ ಮಾಡುವುದರಿಂದ ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ.

ಕನ್ಯಾ ರಾಶಿ
ಕನ್ಯಾ ರಾಶಿಯವರು ಇಂದು ಪ್ರಾಣಿಗಳಿಗೆ ಹಸಿರು ಮೇವನ್ನು ತಿನ್ನಿಸಿದರೆ ಶುಭವಾಗುತ್ತದೆ. ಈ ರೀತಿ ಮಾಡುವುದರಿಂದ ನಿಮ್ಮ ಜೀವನದ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ.

ತುಲಾ ರಾಶಿ
ತುಲಾ ರಾಶಿಯವರು ಇಂದು ಖೀರ್/ಪಾಯಸವನ್ನು ದಾನ ಮಾಡಬೇಕು, ಹೀಗೆ ಮಾಡುವುದರಿಂದ ನೀವು ಕೀರ್ತಿಯನ್ನು ಸಂಪಾದಿಸುತ್ತೀರಿ.

ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರು ಈ ದಿನದಂದು ಬೆಲ್ಲ ಮತ್ತು ಕಾಳುಗಳನ್ನು ದಾನ ಮಾಡಬೇಕು. ನೀವು ಹೀಗೆ ಮಾಡುವುದರಿಂದ ನಿಮ್ಮ ಶತ್ರುಗಳನ್ನು ನಾಶಪಡಿಸಲು ಇದು ಸಹಾಯ ಮಾಡುತ್ತದೆ.

ಧನು ರಾಶಿ
ಧನು ರಾಶಿಚಕ್ರದವರು ದೇವಸ್ಥಾನದಲ್ಲಿ ಬೇಳೆಯನ್ನು ದಾನ ಮಾಡಬೇಕು, ಹೀಗೆ ಮಾಡುವುದರಿಂದ ನೀವು ಜೀವನದ ಎಲ್ಲಾ ಸಂತೋಷಗಳನ್ನು ಪಡೆಯುತ್ತೀರಿ, ನೆಮ್ಮದಿಯ ಬದುಕು ನಿಮ್ಮದಾಗುತ್ತದೆ.

ಮಕರ ರಾಶಿ
ಮಕರ ರಾಶಿಯ ಜನರು ಈ ದಿನ ಕಂಬಳಿಯನ್ನು ದಾನ ಮಾಡಿದರೆ ಶುಭವಾಗುತ್ತದೆ. ಹೀಗೆ ಮಾಡುವುದರಿಂದ ನಿಮ್ಮ ಕೆಲಸದಲ್ಲಿ ಬರುವ ಎಲ್ಲಾ ರೀತಿಯ ತೊಂದರೆಗಳು ದೂರವಾಗುತ್ತವೆ.

ಕುಂಭ ರಾಶಿ
ಕುಂಭ ರಾಶಿಯವರು ಜನರು ಕಪ್ಪು ಉದ್ದಿನ ಬೇಳೆಯನ್ನು ದಾನ ಮಾಡಿ, ಇದನ್ನು ಮಾಡುವುದರಿಂದ ಜೀವನದಲ್ಲಿ ಎಲ್ಲಾ ರೀತಿಯ ಸಮಸ್ಯೆಗಳು ದೂರವಾಗುತ್ತವೆ.

ಮೀನ ರಾಶಿ
ಮೀನ ರಾಶಿಯವರು ಅರಿಶಿನ ಮತ್ತು ಕಡಲೆ ಹಿಟ್ಟಿನ ಸಿಹಿತಿಂಡಿಗಳನ್ನು ದಾನ ಮಾಡಿ, ಈ ಶುಭ ದಿನ ಹೀಗೆ ಮಾಡುವುದರಿಂದ ನಿಮ್ಮ ಜೀವನದಲ್ಲಿ ಹಣದ ಕೊರತೆ ಇರುವುದಿಲ್ಲ.ಡಿ



Click it and Unblock the Notifications