Latest Updates
-
ಬೆಂಗಳೂರಿನಲ್ಲಿ ಇಂದೇ ವಿದ್ಯುತ್ ಕಡಿತ: ನಿಮ್ಮ ಎಲೆಕ್ಟ್ರಾನಿಕ್ ಉಪಕರಣಗಳನ್ನು ಸುರಕ್ಷಿತವಾಗಿಡುವುದು ಹೇಗೆ? -
ಕರ್ಕ ಸಂಕ್ರಾಂತಿ ವಿಶೇಷ: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಜಗನ್ನಾಥ ರಥಯಾತ್ರೆ 2026: ಸಂಚಾರ ಮಾರ್ಗ ಬದಲಾವಣೆ, ಭಕ್ತರಿಗಾಗಿ ಇಲ್ಲಿದೆ ಮಹತ್ವದ ಮಾಹಿತಿ! -
ನೀಟ್ ಪರೀಕ್ಷೆಯ ಆತಂಕವೇ? ಈ 6 ನಿಮಿಷದ ವ್ಯಾಯಾಮ ನಿಮ್ಮ ಒತ್ತಡವನ್ನು ಮರೆಸುತ್ತದೆ! -
ಮಧ್ಯಪ್ರದೇಶ UCC: ಲಿವ್-ಇನ್ ಜೋಡಿಗಳಿಗೆ ಕಡ್ಡಾಯ ನೋಂದಣಿ, ನಿಯಮ ಮೀರಿದರೆ ಕಾದಿದೆ ಸಂಕಷ್ಟ! -
ಹಾಲಿನಲ್ಲಿ ವಿಷಕಾರಿ ಕಲಬೆರಕೆ ಪತ್ತೆ: ನಿಮ್ಮ ಮನೆಯ ಹಾಲಿನ ಸುರಕ್ಷತೆ ಪರೀಕ್ಷಿಸುವುದು ಹೇಗೆ? -
ಬೆಂಗಳೂರಿನಲ್ಲಿ 12 ಗಂಟೆಗಳ ಕಾಲ ನೀರಿನ ಕಡಿತ: ನಾಳೆ ನೀರು ಉಳಿಸಲು ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ
ಜನ್ಮಾಷ್ಟಮಿ 2020: ಪೂಜೆಗೆ ಶುಭ ಮುಹೂರ್ತ, ಪೂಜಾ ವಿಧಾನ
ಶ್ರೀ ವಿಷ್ಣುವಿನ ಎಂಟನೇ ಅವತಾರ ಭಗವಾನ್ ಕೃಷ್ಣ. ಶ್ರಾವಣ ಮಾಸದಲ್ಲಿ ಬರುವ ಕೃಷ್ಣ ಪಕ್ಷದ ಅಷ್ಟಮಿಯಂದು ಕೃಷ್ಣನು ಹುಟ್ಟಿದನು. ಅಷ್ಟಮಿಯ ಮಧ್ಯರಾತ್ರಿ ಮಥುರೆಯ ಕಾರಗೃಹದಲ್ಲಿ ಕೃಷ್ಣನ ಜನನವಾಯಿತು. ಕೃಷ್ಣನನ್ನು ಸೋದರ ಮಾವ ಕಂಸ ಕೊಲ್ಲುತ್ತಾನೆ ಎಂಬ ಭಯದಿಂದ ತಂದೆ ವಸುದೇವ ಗೋಕುಲಕ್ಕೆ ತಂದು ಬಿಡುತ್ತಾನೆ. ಹೀಗಾಗಿ ದೇವಕ್ಕಿ ಕೃಷ್ಣನನ್ನು ಹೆತ್ತ ತಾಯಿಯಾದರೆ ಯಶೋದೆ ಅವನನ್ನು ಸಾಕಿ ಬೆಳೆಸಿದ ತಾಯಿ. ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಎಂದು ಆಚರಿಸಲಾಗುವುದು.

2020ರಲ್ಲಿ ಕೃಷ್ಣ ಜನ್ಮಾಷ್ಟಮಿ ಎಂದು ಆಚರಿಸಲಾಗುವುದು?
ಈ ವರ್ಷ ಕೃಷ್ಣ ಜನ್ಮಾಷ್ಟಮಿ ಆಗಸ್ಟ್ 11, 12ಕ್ಕೆ ಬಂದಿದೆ. ಕೆಲವು ಕಡೆ 11ಕ್ಕೆ, ಕೆಲವು ಕಡೆ 12ಕ್ಕೆ ಆಚರಿಸಲಾಗುವುದು.
ಅಷ್ಟಮಿ ತಿಥಿ ಪ್ರಾರಂಭ: ಆಗಸ್ಟ್ 11 ಬೆಳಗ್ಗೆ 9.6ಕ್ಕೆ
ಅಷ್ಟಮಿ ತಿಥಿ ಅಂತ್ಯ: ಆಗಸ್ಟ್ 12 ಬೆಳಗ್ಗೆ 11.16ಕ್ಕೆ

ಪೂಜಾ ಸಮಯ
ನಿಶಿತಾ ಕಾಲದ ಪೂಜಾ ಸಮಯ ( ಶ್ರೀ ಕೃಷ್ಣ ಮಧ್ಯರಾತ್ರಿ ಹುಟ್ಟಿದ ಕಾರಣ ಪೂಜೆಯನ್ನು ನಿಶಿತಾ ಕಾಲದಲ್ಲಿ ಮಾಡಲಾಗುವುದು)
ಆಗಸ್ಟ್ 12, 2020: ಬೆಳಗ್ಗೆ 11: 51ರಿಂದ ಮಧ್ಯರಾತ್ರಿ 12: 37ರವರೆಗೆ ಇರಲಿದೆ.

ಜನ್ಮಾಷ್ಟಮಿ 2020, ಪಾರಣ ಸಮಯ
ಅಷ್ಟಮಿಯಂದು ಕೃಷ್ಣ ಭಕ್ತರು ನೀರೂ, ಆಹಾರ ಸೇವಿಸದೆ ಉಪವಾಸ ಇರುತ್ತಾರೆ. ರಾತ್ರಿ ಕೃಷ್ಣನಿಗೆ ಅಘ್ರ್ಯ ಕೊಟ್ಟ ನಂತರ ಫಲಾಹಾರ ಸೇವಿಸಲಾಗುವುದು. ಇದನ್ನು ನಿರ್ಜಲ ಉಪವಾಸ ಎಂದು ಕರೆಯಲಾಗುವುದು. ಭಜನೆ, ಕೃಷ್ಣನ ಕೀರ್ತನೆಗಳ ಮೂಲಕ ಮನೆ, ಮನಗಳಲ್ಲಿ ಸಕಾರಾತ್ಮಕ ಶಕ್ತಿ ತುಂಬುವಂತೆ ಪ್ರಾರ್ಥನೆ ಮಾಡಲಾಗುವುದು. ನಂತರ ಕೃಷ್ಣನಿಗೆ ಪ್ರಿಯವಾದ ತಿನಿಸುಗಳನ್ನು ಮಾಡಿ ನೈವೇದ್ಯ ಇಡಲಾಗುವುದು. ಮಧ್ಯರಾತ್ರಿ ಕೃಷ್ಣನಿಗೆ ಅರ್ಘ್ಯ ಕೊಟ್ಟ ಬಳಿಕವಷ್ಟೇ ಉಪವಾಸ ಮುರಿಯುತ್ತಾರೆ. ಇದನ್ನು ಪಾರಣೆ ಎನ್ನುತ್ತಾರೆ.
ಇಸ್ಕಾನ್ ಪ್ರಕಾರ ಪಾರಣ ಸಮಯ ಆಗಸ್ಟ್ 13, ಬೆಳಗ್ಗೆ 5:56ರ ನಂತರ ಆಹಾರ ಸೇವಿಸಬಹುದು.

ಈ ಬಾರಿ ಅಷ್ಟಮಿ ತಿಥಿ ಹಾಗೂ ರೋಹಿಣಿ ನಕ್ಷತ್ರ ಒಟ್ಟಿಗೆ ಸೇರುವುದಿಲ್ಲ
ಶ್ರೀಕೃಷ್ಣನು ಅಷ್ಟಮಿ ತಿಥಿಯಂದು ರೋಹಿಣಿ ನಕ್ಷತ್ರದಲ್ಲಿ ಜನಿಸಿದನು. ಈ ಬಾರಿ ಅಷ್ಟಮಿ ತಿಥಿ, ರೋಹಿಣಿ ನಕ್ಷತ್ರ ಒಟ್ಟಿಗೆ ಬಂದಿಲ್ಲ. ಈ ವರ್ಷ ಅಷ್ಟಮಿ ತಿಥಿ ಆಗಸ್ಟ್ 11 ಬೆಳಗ್ಗೆ 9.6ರಿಂದ ಪ್ರಾರಂಭವಾಗಿ, ಆಗಸ್ಟ್ 12ರಂದು 11:16ಕ್ಕೆ ಅಂತ್ಯವಾಗಲಿದೆ.
ರೋಹಿಣಿ ನಕ್ಷತ್ರವು ಆಗಸ್ಟ್ 13ರಂದು ಬೆಳಗ್ಗೆ 3.27ಕ್ಕೆ ಪ್ರಾರಂಭವಾಗಿ, ಆಗಸ್ಟ್ 14, ಬೆಳಗ್ಗೆ 5: 22ಕ್ಕೆ ಅಂತ್ಯವಾಗಲಿದೆ.

ಕೃಷ್ಣನಿಗೆ ಪೂಜೆ ಮಾಡುವ ವಿಧಾನ
ಜನ್ಮಾಷ್ಟಮಿಯ ದಿನ ಪೂಜಾ ಸ್ಥಳವನ್ನು ಸ್ವಚ್ಛಗೊಳಿಸಿ, ಬಾಲಕೃಷ್ಣನ ಪುಟ್ಟ ಮೂರ್ತಿಯನ್ನು ತಂದು ತೊಟ್ಟಿಲಿನಲ್ಲಿಟ್ಟು ಪೂಜಿಸಲಾಗುವುದು. ಮೂರ್ತಿ ಇಲ್ಲದಿದ್ದರೆ ಬಾಲ ಕೃಷ್ಣನ ಫೋಟೋ ಇಡಲಾಗುವುದು. ನಂತರ ಕೃಷ್ಣನಿಗೆ ಬಟ್ಟೆ, ಆಸನ, ಪಂಚಾಮೃತ, ತುಪ್ಪದ ದೀಪ, ಚಂದನ, ತುಳಸಿ, ಪಾರಿಜಾತ ಹೂ ಇವುಗಳನ್ನು ಅರ್ಪಿಸಲಾಗುವುದು.
ಕೃಷ್ಣ ವಿಗ್ರಹವನ್ನು ಹೊಸದಾದ ಬಟ್ಟೆಯ ಮೇಲೆ ಇಟ್ಟು, ದೀಪ ಬೆಳಗಿ, ನಂತರ ಕೃಷ್ಣನ ಕೀರ್ತನೆಗಳನ್ನು ಹೇಳಲಾಗುವುದು. ಪೂಜೆಗೆ ಕೃಷ್ಣನಿಗೆ ಪ್ರಿಯವಾದ ಬೆಣ್ಣೆ, ಮೊಸರು, ಹಾಲನ್ನು ಅರ್ಪಿಸಿ.



Click it and Unblock the Notifications