Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ವರ್ಷದ ಕೊನೆಯ ಏಕಾದಶಿ ಯಾವಾಗ? ಅದರ ಮಹತ್ವವೇನು?
ಹಿಂದೂ ಧರ್ಮದಲ್ಲಿ ಏಕಾದಶಿಗೆ ವಿಶೇಷ ಪ್ರಾಮುಖ್ಯತೆಯಿದ್ದು, ಈ ದಿನದಂದು ಉಪವಾಸ ಮತ್ತು ಪೂಜೆಗೆ ಬಹಳ ಪ್ರಾಶಸ್ತ್ಯವಿದೆ. ಅದೇ ರೀತಿ, 2021 ರ ಕೊನೆಯ ಏಕಾದಶಿಯು ಡಿಸೆಂಬರ್ 30ರಂದು ಬಂದಿದೆ. ಈ ಪುಷ್ಯ ಮಾಸದ ಕೃಷ್ಣ ಪಕ್ಷದ ಏಕಾದಶಿಯನ್ನು ಸಫಲ ಏಕಾದಶಿ ಎಂದು ಕರೆಯಲಾಗುತ್ತದೆ. ಈ ದಿನದಂದು, ಶ್ರದ್ಧೆಯಿಂದ ಮಾಡುವ ಉಪವಾಸವು ಎಲ್ಲಾ ಕಾರ್ಯಗಳಲ್ಲಿ ಯಶಸ್ಸಿಗೆ ಕಾರಣವಾಗುತ್ತದೆ. ಈ ಉಪವಾಸದ ಮಹಿಮೆಯನ್ನು ಮಹಾಭಾರತದಲ್ಲಿ ಶ್ರೀ ಕೃಷ್ಣನೇ ವಿವರಿಸಿದ್ದಾನೆ. ಸಫಲ ಏಕಾದಶಿಯ ತಿಥಿ, ಮುಹೂರ್ತ ಮತ್ತು ಪೂಜಾ ವಿಧಾನದ ಬಗ್ಗೆ ತಿಳಿಯೋಣ.
ಸಫಲ ಏಕಾದಶಿಯ ದಿನಾಂಕ, ಸಮಯ ಹಾಗೂ ಮಹತ್ವದ ಬಗ್ಗೆ ಈ ಕೆಳಗೆ ನೀಡಲಾಗಿದೆ:

ಸಫಲ ಏಕಾದಶಿ ದಿನಾಂಕ ಮತ್ತು ಸಮಯ:
ಮಾರ್ಗಶಿರ ಮಾಸದ ಕೃಷ್ಣ ಏಕಾದಶಿಯನ್ನು ಸಫಲ ಏಕಾದಶಿ ಎಂದು ಕರೆಯಲಾಗುತ್ತದೆ. ಈ ಮಾಸದ ಏಕಾದಶಿಯ ದಿನಾಂಕವು ಡಿಸೆಂಬರ್ 29 ರಂದು ಸಂಜೆ 04.00 ರಿಂದ ಪ್ರಾರಂಭವಾಗುತ್ತದೆ. ಇದು ಡಿಸೆಂಬರ್ 30 ರಂದು ಮಧ್ಯಾಹ್ನ 1.30 ಕ್ಕೆ ಕೊನೆಗೊಳ್ಳುತ್ತದೆ. ಡಿಸೆಂಬರ್ 30 ರಂದು ಏಕಾದಶಿಯಂದು ಸೂರ್ಯೋದಯವಾಗುವುದರಿಂದ, ಸಫಲ ಏಕಾದಶಿಯ ಉಪವಾಸವನ್ನು ಈ ದಿನ ಮಾತ್ರ ಆಚರಿಸಲಾಗುತ್ತದೆ. ಮರುದಿನ ಡಿಸೆಂಬರ್ 31ರ ದ್ವಾದಶಿಯಂದು ಉಪವಾಸ ಅಂತ್ಯಗೊಳ್ಳಲಿದೆ.
ಏಕಾದಶಿ ತಿಥಿ ಆರಂಭ: ಡಿಸೆಂಬರ್ 29 ರಂದು ಸಂಜೆ 04.00
ಏಕಾದಶಿ ತಿಥಿ ಮುಕ್ತಾಯ: ಡಿಸೆಂಬರ್ 30 ರಂದು ಮಧ್ಯಾಹ್ನ 1.30 ಕ್ಕೆ
ಪಾರಣ ಸಮಯ: ಡಿಸೆಂಬರ್ 31ರಂದು ಬೆಳಗ್ಗೆ 06:41ರಿಂದ 08:58ರವರೆಗೆ

ಸಫಲ ಏಕಾದಶಿಯ ಮಹತ್ವ:
ಮಾರ್ಗಶಿರ-ಪುಷ್ಯ ಮಾಸದ ಕೃಷ್ಣ ಪಕ್ಷದ ಏಕಾದಶಿಯನ್ನು ಸಫಲಾ ಏಕಾದಶಿ ಎಂದು ಹೇಳಲಾಗುತ್ತದೆ. ಈ ಏಕಾದಶಿಯನ್ನು ಹಿಂದೂ ಪಂಚಾಂಗದಲ್ಲಿ ಸರ್ವೈಕಾದಶೀ ಎಂದು ಕರೆಯಲಾಗುತ್ತದೆ. ಇನ್ನು ಉತ್ತರ ಭಾರತದಾದ್ಯಂತ ಈ ಏಕಾದಶಿಯನ್ನು ಪುಷ್ಯ ಏಕಾದಶಿಯೆಂದೂ ಕರೆಯುತ್ತಾರೆ. ಈ ದಿನ ವಿಷ್ಣು ಮತ್ತು ಅವನ ಎಲ್ಲಾ ಅವತಾರಗಳನ್ನು ಪೂಜಿಸುವುದರಿಂದ ವಿಶೇಷ ಫಲ ಸಿಗುತ್ತದೆ ಎನ್ನುವ ನಂಬಿಕೆಯಿದೆ. ಏಕಾದಶಿಯ ಎಲ್ಲಾ ಉಪವಾಸಗಳಲ್ಲಿ, ಸಫಲ ಏಕಾದಶಿಯ ಉಪವಾಸವನ್ನು ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ. ನಿಜವಾದ ಶ್ರದ್ಧೆ ಮತ್ತು ನಂಬಿಕೆಯೊಂದಿಗೆ ಈ ಉಪವಾಸವನ್ನು ಆಚರಿಸುವ ಮೂಲಕ, ನಿಮಗೆ ಅದೃಷ್ಟ ಮತ್ತು ಯಶಸ್ಸು ಸಿಗುತ್ತದೆ.

ಸಫಲ ಏಕಾದಶಿಯ ಪೂಜಾ ವಿಧಾನ:
ಸಫಲ ಏಕಾದಶಿ ದಿನದಂದು ಬೆಳಗ್ಗೆ ಎದ್ದ ಸ್ನಾನ ಮಾಡಿ ನಂತರ ಉಪವಾಸ ವ್ರತವನ್ನು ಮಾಡುವುದಾಗಿ ಪ್ರತಿಜ್ಞೆ ಮಾಡಿಕೊಳ್ಳಬೇಕು.
ನಂತರ ನಿಮ್ಮ ಪೂಜಾ ಸ್ಥಳದಲ್ಲಿ ಗಂಗಾಜಲವನ್ನು ಸಿಂಪಡಿಸಿ ವಿಷ್ಣುವನ್ನು ವಿಧಿ - ವಿಧಾನಗಳ ಮೂಲಕ ಪೂಜಿಸಿ.
ತುಳಸಿ ಎಲೆಗಳು, ಧೂಪದ್ರವ್ಯ, ಅಗರಬತ್ತಿ, ವೀಳ್ಯದೆಲೆ, ಅಡಿಕೆ, ಹಳದಿ ಬಣ್ಣದ ಹಣ್ಣುಗಳು ಮತ್ತು ತೆಂಗಿನಕಾಯಿಗಳು ಭಗವಾನ್ ವಿಷ್ಣುವಿನ ಅಚ್ಚುಮೆಚ್ಚಿನ ವಸ್ತುಗಳು. ಪೂಜಿಸಿದ ನಂತರ ಇದನ್ನು ಅವರಿಗೆ ಅರ್ಪಿಸಿ.
ಈ ಶುಭ ಸಂದರ್ಭದಲ್ಲಿ ವಿಷ್ಣುವಿನೊಂದಿಗೆ ಕೃಷ್ಣನನ್ನೂ ಪೂಜಿಸಲಾಗುತ್ತದೆ.
ಈ ಸಂದರ್ಭದಲ್ಲಿ ಕೆಲವರು ತಮ್ಮ ಮನೆಯಲ್ಲಿ ಭಗವಾನ್ ಸತ್ಯನಾರಾಯಣನ ಕಥೆಯನ್ನು ಹೇಳುತ್ತಾರೆ ಹಾಗೂ ಓದುತ್ತಾರೆ.
ಉಪವಾಸದ ಕಥೆಯನ್ನು ಓದಿ ನಂತರ ಭೋಗವನ್ನು ಅರ್ಪಿಸಿ.



Click it and Unblock the Notifications