Latest Updates
-
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ! -
ಸಣ್ಣ ಬಾಲ್ಕನಿಯಲ್ಲಿ ಓಣಂ ಸಂಭ್ರಮ: ಬಜೆಟ್ನಲ್ಲಿ ಸುಂದರ ಪೂಕಳಂ ಬಿಡಿಸುವ ಸರಳ ಟಿಪ್ಸ್ -
ಲಾಲ್ಬಾಗ್ ಫಲಪುಷ್ಪ ಪ್ರದರ್ಶನ: ಕೊನೆಯ ದಿನದ ಸಂಭ್ರಮ ಮತ್ತು ಮನೆಯನ್ನು ಸಿಂಗರಿಸುವ ಸುಲಭ ಟಿಪ್ಸ್ -
ಜಂಕ್ ಫುಡ್ ತಿನ್ನುವ ಮುನ್ನ ಎಚ್ಚರ! ಪ್ಯಾಕೆಟ್ ಮೇಲೆ ಬರಲಿದೆ ಸುಪ್ರೀಂ ಕೋರ್ಟ್ ಸೂಚಿಸಿದ ವಾರ್ನಿಂಗ್ ಲೇಬಲ್ -
ರೈಲ್ವೆ ನೀರಿನಲ್ಲಿ ಅಪಾಯಕಾರಿ ಇ-ಕೋಲೈ ಪತ್ತೆ: ಪ್ರಯಾಣಿಕರೇ, ಈ ತಪ್ಪುಗಳನ್ನು ಮಾಡಬೇಡಿ! -
ನಾಗರ ಪಂಚಮಿ ಸಂಭ್ರಮ: ಹಬ್ಬದ ಲುಕ್ ಹೆಚ್ಚಿಸಲು ಈ ಫ್ಯಾಷನ್ ಟಿಪ್ಸ್ ಮಿಸ್ ಮಾಡ್ಬೇಡಿ!
ವರ್ಷದ ಕೊನೆಯ ಏಕಾದಶಿ ಯಾವಾಗ? ಅದರ ಮಹತ್ವವೇನು?
ಹಿಂದೂ ಧರ್ಮದಲ್ಲಿ ಏಕಾದಶಿಗೆ ವಿಶೇಷ ಪ್ರಾಮುಖ್ಯತೆಯಿದ್ದು, ಈ ದಿನದಂದು ಉಪವಾಸ ಮತ್ತು ಪೂಜೆಗೆ ಬಹಳ ಪ್ರಾಶಸ್ತ್ಯವಿದೆ. ಅದೇ ರೀತಿ, 2021 ರ ಕೊನೆಯ ಏಕಾದಶಿಯು ಡಿಸೆಂಬರ್ 30ರಂದು ಬಂದಿದೆ. ಈ ಪುಷ್ಯ ಮಾಸದ ಕೃಷ್ಣ ಪಕ್ಷದ ಏಕಾದಶಿಯನ್ನು ಸಫಲ ಏಕಾದಶಿ ಎಂದು ಕರೆಯಲಾಗುತ್ತದೆ. ಈ ದಿನದಂದು, ಶ್ರದ್ಧೆಯಿಂದ ಮಾಡುವ ಉಪವಾಸವು ಎಲ್ಲಾ ಕಾರ್ಯಗಳಲ್ಲಿ ಯಶಸ್ಸಿಗೆ ಕಾರಣವಾಗುತ್ತದೆ. ಈ ಉಪವಾಸದ ಮಹಿಮೆಯನ್ನು ಮಹಾಭಾರತದಲ್ಲಿ ಶ್ರೀ ಕೃಷ್ಣನೇ ವಿವರಿಸಿದ್ದಾನೆ. ಸಫಲ ಏಕಾದಶಿಯ ತಿಥಿ, ಮುಹೂರ್ತ ಮತ್ತು ಪೂಜಾ ವಿಧಾನದ ಬಗ್ಗೆ ತಿಳಿಯೋಣ.
ಸಫಲ ಏಕಾದಶಿಯ ದಿನಾಂಕ, ಸಮಯ ಹಾಗೂ ಮಹತ್ವದ ಬಗ್ಗೆ ಈ ಕೆಳಗೆ ನೀಡಲಾಗಿದೆ:

ಸಫಲ ಏಕಾದಶಿ ದಿನಾಂಕ ಮತ್ತು ಸಮಯ:
ಮಾರ್ಗಶಿರ ಮಾಸದ ಕೃಷ್ಣ ಏಕಾದಶಿಯನ್ನು ಸಫಲ ಏಕಾದಶಿ ಎಂದು ಕರೆಯಲಾಗುತ್ತದೆ. ಈ ಮಾಸದ ಏಕಾದಶಿಯ ದಿನಾಂಕವು ಡಿಸೆಂಬರ್ 29 ರಂದು ಸಂಜೆ 04.00 ರಿಂದ ಪ್ರಾರಂಭವಾಗುತ್ತದೆ. ಇದು ಡಿಸೆಂಬರ್ 30 ರಂದು ಮಧ್ಯಾಹ್ನ 1.30 ಕ್ಕೆ ಕೊನೆಗೊಳ್ಳುತ್ತದೆ. ಡಿಸೆಂಬರ್ 30 ರಂದು ಏಕಾದಶಿಯಂದು ಸೂರ್ಯೋದಯವಾಗುವುದರಿಂದ, ಸಫಲ ಏಕಾದಶಿಯ ಉಪವಾಸವನ್ನು ಈ ದಿನ ಮಾತ್ರ ಆಚರಿಸಲಾಗುತ್ತದೆ. ಮರುದಿನ ಡಿಸೆಂಬರ್ 31ರ ದ್ವಾದಶಿಯಂದು ಉಪವಾಸ ಅಂತ್ಯಗೊಳ್ಳಲಿದೆ.
ಏಕಾದಶಿ ತಿಥಿ ಆರಂಭ: ಡಿಸೆಂಬರ್ 29 ರಂದು ಸಂಜೆ 04.00
ಏಕಾದಶಿ ತಿಥಿ ಮುಕ್ತಾಯ: ಡಿಸೆಂಬರ್ 30 ರಂದು ಮಧ್ಯಾಹ್ನ 1.30 ಕ್ಕೆ
ಪಾರಣ ಸಮಯ: ಡಿಸೆಂಬರ್ 31ರಂದು ಬೆಳಗ್ಗೆ 06:41ರಿಂದ 08:58ರವರೆಗೆ

ಸಫಲ ಏಕಾದಶಿಯ ಮಹತ್ವ:
ಮಾರ್ಗಶಿರ-ಪುಷ್ಯ ಮಾಸದ ಕೃಷ್ಣ ಪಕ್ಷದ ಏಕಾದಶಿಯನ್ನು ಸಫಲಾ ಏಕಾದಶಿ ಎಂದು ಹೇಳಲಾಗುತ್ತದೆ. ಈ ಏಕಾದಶಿಯನ್ನು ಹಿಂದೂ ಪಂಚಾಂಗದಲ್ಲಿ ಸರ್ವೈಕಾದಶೀ ಎಂದು ಕರೆಯಲಾಗುತ್ತದೆ. ಇನ್ನು ಉತ್ತರ ಭಾರತದಾದ್ಯಂತ ಈ ಏಕಾದಶಿಯನ್ನು ಪುಷ್ಯ ಏಕಾದಶಿಯೆಂದೂ ಕರೆಯುತ್ತಾರೆ. ಈ ದಿನ ವಿಷ್ಣು ಮತ್ತು ಅವನ ಎಲ್ಲಾ ಅವತಾರಗಳನ್ನು ಪೂಜಿಸುವುದರಿಂದ ವಿಶೇಷ ಫಲ ಸಿಗುತ್ತದೆ ಎನ್ನುವ ನಂಬಿಕೆಯಿದೆ. ಏಕಾದಶಿಯ ಎಲ್ಲಾ ಉಪವಾಸಗಳಲ್ಲಿ, ಸಫಲ ಏಕಾದಶಿಯ ಉಪವಾಸವನ್ನು ಅತ್ಯುತ್ತಮವೆಂದು ಪರಿಗಣಿಸಲಾಗುತ್ತದೆ. ನಿಜವಾದ ಶ್ರದ್ಧೆ ಮತ್ತು ನಂಬಿಕೆಯೊಂದಿಗೆ ಈ ಉಪವಾಸವನ್ನು ಆಚರಿಸುವ ಮೂಲಕ, ನಿಮಗೆ ಅದೃಷ್ಟ ಮತ್ತು ಯಶಸ್ಸು ಸಿಗುತ್ತದೆ.

ಸಫಲ ಏಕಾದಶಿಯ ಪೂಜಾ ವಿಧಾನ:
ಸಫಲ ಏಕಾದಶಿ ದಿನದಂದು ಬೆಳಗ್ಗೆ ಎದ್ದ ಸ್ನಾನ ಮಾಡಿ ನಂತರ ಉಪವಾಸ ವ್ರತವನ್ನು ಮಾಡುವುದಾಗಿ ಪ್ರತಿಜ್ಞೆ ಮಾಡಿಕೊಳ್ಳಬೇಕು.
ನಂತರ ನಿಮ್ಮ ಪೂಜಾ ಸ್ಥಳದಲ್ಲಿ ಗಂಗಾಜಲವನ್ನು ಸಿಂಪಡಿಸಿ ವಿಷ್ಣುವನ್ನು ವಿಧಿ - ವಿಧಾನಗಳ ಮೂಲಕ ಪೂಜಿಸಿ.
ತುಳಸಿ ಎಲೆಗಳು, ಧೂಪದ್ರವ್ಯ, ಅಗರಬತ್ತಿ, ವೀಳ್ಯದೆಲೆ, ಅಡಿಕೆ, ಹಳದಿ ಬಣ್ಣದ ಹಣ್ಣುಗಳು ಮತ್ತು ತೆಂಗಿನಕಾಯಿಗಳು ಭಗವಾನ್ ವಿಷ್ಣುವಿನ ಅಚ್ಚುಮೆಚ್ಚಿನ ವಸ್ತುಗಳು. ಪೂಜಿಸಿದ ನಂತರ ಇದನ್ನು ಅವರಿಗೆ ಅರ್ಪಿಸಿ.
ಈ ಶುಭ ಸಂದರ್ಭದಲ್ಲಿ ವಿಷ್ಣುವಿನೊಂದಿಗೆ ಕೃಷ್ಣನನ್ನೂ ಪೂಜಿಸಲಾಗುತ್ತದೆ.
ಈ ಸಂದರ್ಭದಲ್ಲಿ ಕೆಲವರು ತಮ್ಮ ಮನೆಯಲ್ಲಿ ಭಗವಾನ್ ಸತ್ಯನಾರಾಯಣನ ಕಥೆಯನ್ನು ಹೇಳುತ್ತಾರೆ ಹಾಗೂ ಓದುತ್ತಾರೆ.
ಉಪವಾಸದ ಕಥೆಯನ್ನು ಓದಿ ನಂತರ ಭೋಗವನ್ನು ಅರ್ಪಿಸಿ.



Click it and Unblock the Notifications