Latest Updates
-
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ?
ಶಿವರಾತ್ರಿಯಂದು ಈ ಕಾರ್ಯಗಳನ್ನು ತಪ್ಪಿಯೂ ಮಾಡದಿರಿ
ಫೆಬ್ರವರಿ 18 ರಂದು ಶನಿವಾರ ಮಹಾಶಿವರಾತ್ರಿ ಆಚರಿಸಲಾಗುವುದು. ಫಲ್ಗುಣ ಮಾಸದ ಕೃಷ್ಣಪಕ್ಷದ ಚತುರ್ದಶಿಯಂದು ಮಹಾಶಿವ ರಾತ್ರಿ ಆಚರಿಸಲಾಗುವುದು.

ಶಿವರಾತ್ರಿಯಂದು ಉಪವಾಸ ವ್ರತ ಮಾಡಿ, ಜಾಗರಣೆ ಇದ್ದು ಶಿವನ ಜಪ ಮಾಡುತ್ತಾ ಈ ದಿನವನ್ನು ಕಳೆಯಬೇಕು. ಶಿವರಾತ್ರಿಯನ್ನು ಹೇಗೆ ಆಚರಿಸಬೇಕೆಂಬ ನಿಯಮಗಳಿವೆ. ಅದೇ ರೀತಿ ಈ ಶುಭ ದಿನ ಕೆಲವೊಂದು ಕಾರ್ಯಗಳನ್ನು ಮಾಡಬಾರದು, ಈ ಲೇಖನದಲ್ಲಿ ಶಿವರಾತ್ರಿಯಂದು ಏನು ಮಾಡಬಾರದು ಎಂದು ಹೇಳಲಾಗಿದೆ ನೋಡಿ:

ಶಿವರಾತ್ರಿಯಂದು ಕಪ್ಪು ಬಟ್ಟೆ ಧರಿಸಬೇಡಿ
ಕಪ್ಪು ಬಣ್ಣವನ್ನು ಶಿವರಾತ್ರಿಯಂದು ಧರಿಸಬೇಡಿ. ಶನಿ ದೇವಾಲಯಕ್ಕೆ ಹೋಗುವಾಗ ಅಥವಾ ಅಯ್ಯಪ್ಪ ದೇವಾಲಯಕ್ಕೆ ಹೋಗುವಾಗ ಕಪ್ಪು ಬಟ್ಟೆ ಧರಿಸುತ್ತಾರೆ. ಆದರೆ ಶಿವನ ದೇವಾಲಯಕ್ಕೆ ಹೀಗುವಾಗ ಕೆಂಪು, ಹಳದಿ, ಪಿಂಕ್ ಈ ಬಣ್ಣದ ಉಡುಪು ಧರಿಸಿ.

ಈ ಆಹಾರ ಸೇವಿಸಬೇಡಿ
ಈ ದಿನ ಅಕ್ಕಿ, ಗೋಧಿ, ಧಾನ್ಯಗಳು ಈ ರೀತಿಯ ಆಹಾರ ಸೇವಿಸಬಾರದು. ಈ ದಿನ ಒಂದೋ ಕಟ್ಟು ನಿಟ್ಟಿನ ಉಪವಾಸ ವ್ರತ ಮಾಡಬೇಕು, ಇಲ್ಲದಿದ್ದರೆ ನೀರು, ಹಣ್ಣು ಇವಷ್ಟೇ ಸೇವಿಸಬೇಕು.

ಹಿರಿಯರಿಗೆ ಅಗೌರವ ತೋರಬಾರದು
ಶಿವರಾತ್ರಿಯಂದು ಮನೆಯಲ್ಲಿ ಹಿರಿಯರಿಗೆ ಅಗೌರವ ತೋರಬೇಡಿ ಹಾಗೂ ಮನೆಯಲ್ಲಿ ಕೋಪದಿಂದ ಕಿರಾಚಾಡುವುದು ಏನೂ ಮಾಡಬಾರದು. ಈ ದಿನ ಶಿವನ ಧ್ಯಾನದಲ್ಲಿ ಕಳೆಯುವುದರಿಂದ ಮನ-ಮನೆ ಆಹ್ಲಾದಕರವಾಗಿರುತ್ತೆ.

ಶಿವಲಿಂಗಕ್ಕೆ ಅರ್ಪಿಸಿದ ಪ್ರಸಾದ ಸೇವಿಸಬಾರದು
ದೇವಾಲಯಕ್ಕೆ ಹೋದಾಗ ದೇವರಿಗೆ ಅರ್ಪಿಸಿದ ಪ್ರಸಾದ ಸೇವಿಸುತ್ತೇವೆ. ಆದರೆ ಶಿವರಾತ್ರಿಯಂದು ಶಿವಲಿಂಗಕ್ಕೆ ಅರ್ಪಿಸಿದ ಪ್ರಸಾದ ಸೇವಿಸಬಾರದು ಎಂಬ ನಿಯಮವಿದೆ.

ಶಿವನಿಗೆ ತುಳಸಿ ಅರ್ಪಿಸಬಾರದು
ಹಿಂದೂ ಪೌರಾಣಿಕ ಕತೆಯ ಪ್ರಕಾರ ತುಳಸಿ ವಿಷ್ಣುವಿಗೆ ಅರ್ಪಿತಳು. ಆದ್ದರಿಂದ ಯಾವುದೇ ಕಾರಣಕ್ಕೆ ತುಳಸಿಯನ್ನು ಶಿವನಿಗೆ ಅರ್ಪಿಸಬಾರದು. ಯಾವುದೇ ಶಿವ ಪೂಜೆಯಲ್ಲಿ ತುಳಸಿ ಬಳಸುವುದಿಲ್ಲ.

ಅರಿಶಿಣವನ್ನು ಶಿವಲಿಂಗಕ್ಕೆ ಹಚ್ಚಬಾರದು
ಅರಿಶಿಣ ಪುರುಷ ತತ್ವವನ್ನು ಕುಗ್ಗಿಸುತ್ತೆ,ಅರಿಶಿಣವನ್ನು ಸ್ತ್ರೀಯರಿಗೆ ಎಂದು ಪರಿಗಣಿಸಲಾಗಿದೆ. ಆದ್ದರಿಂದ ಮಹಾದೇವನನ್ನು ಪ್ರಾರ್ಥಿಸುವಾಗ ಅರಿಶಿಣ ಬಳಸಬಾರದು.

ಚಂಪಾ, ಕೇದಗೆ ಹೂ ಬಳಸಬಾರದು
ಶಿವ ಈ ಎರಡೂ ಹೂಗಳಿಗೆ ಶಾಪ ನೀಡಿದ್ದಾನೆ ಎಂದು ಹೇಳಲಾಗುತ್ತದೆ. ಆದ್ದರಿಂದ ಈ ಎರಡು ಹೂಗಳನ್ನು ಬಳಸುವಂತಿಲ್ಲ.



Click it and Unblock the Notifications