Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಶಿವರಾತ್ರಿಯಂದು ಈ ಕಾರ್ಯಗಳನ್ನು ತಪ್ಪಿಯೂ ಮಾಡದಿರಿ
ಫೆಬ್ರವರಿ 18 ರಂದು ಶನಿವಾರ ಮಹಾಶಿವರಾತ್ರಿ ಆಚರಿಸಲಾಗುವುದು. ಫಲ್ಗುಣ ಮಾಸದ ಕೃಷ್ಣಪಕ್ಷದ ಚತುರ್ದಶಿಯಂದು ಮಹಾಶಿವ ರಾತ್ರಿ ಆಚರಿಸಲಾಗುವುದು.

ಶಿವರಾತ್ರಿಯಂದು ಉಪವಾಸ ವ್ರತ ಮಾಡಿ, ಜಾಗರಣೆ ಇದ್ದು ಶಿವನ ಜಪ ಮಾಡುತ್ತಾ ಈ ದಿನವನ್ನು ಕಳೆಯಬೇಕು. ಶಿವರಾತ್ರಿಯನ್ನು ಹೇಗೆ ಆಚರಿಸಬೇಕೆಂಬ ನಿಯಮಗಳಿವೆ. ಅದೇ ರೀತಿ ಈ ಶುಭ ದಿನ ಕೆಲವೊಂದು ಕಾರ್ಯಗಳನ್ನು ಮಾಡಬಾರದು, ಈ ಲೇಖನದಲ್ಲಿ ಶಿವರಾತ್ರಿಯಂದು ಏನು ಮಾಡಬಾರದು ಎಂದು ಹೇಳಲಾಗಿದೆ ನೋಡಿ:

ಶಿವರಾತ್ರಿಯಂದು ಕಪ್ಪು ಬಟ್ಟೆ ಧರಿಸಬೇಡಿ
ಕಪ್ಪು ಬಣ್ಣವನ್ನು ಶಿವರಾತ್ರಿಯಂದು ಧರಿಸಬೇಡಿ. ಶನಿ ದೇವಾಲಯಕ್ಕೆ ಹೋಗುವಾಗ ಅಥವಾ ಅಯ್ಯಪ್ಪ ದೇವಾಲಯಕ್ಕೆ ಹೋಗುವಾಗ ಕಪ್ಪು ಬಟ್ಟೆ ಧರಿಸುತ್ತಾರೆ. ಆದರೆ ಶಿವನ ದೇವಾಲಯಕ್ಕೆ ಹೀಗುವಾಗ ಕೆಂಪು, ಹಳದಿ, ಪಿಂಕ್ ಈ ಬಣ್ಣದ ಉಡುಪು ಧರಿಸಿ.

ಈ ಆಹಾರ ಸೇವಿಸಬೇಡಿ
ಈ ದಿನ ಅಕ್ಕಿ, ಗೋಧಿ, ಧಾನ್ಯಗಳು ಈ ರೀತಿಯ ಆಹಾರ ಸೇವಿಸಬಾರದು. ಈ ದಿನ ಒಂದೋ ಕಟ್ಟು ನಿಟ್ಟಿನ ಉಪವಾಸ ವ್ರತ ಮಾಡಬೇಕು, ಇಲ್ಲದಿದ್ದರೆ ನೀರು, ಹಣ್ಣು ಇವಷ್ಟೇ ಸೇವಿಸಬೇಕು.

ಹಿರಿಯರಿಗೆ ಅಗೌರವ ತೋರಬಾರದು
ಶಿವರಾತ್ರಿಯಂದು ಮನೆಯಲ್ಲಿ ಹಿರಿಯರಿಗೆ ಅಗೌರವ ತೋರಬೇಡಿ ಹಾಗೂ ಮನೆಯಲ್ಲಿ ಕೋಪದಿಂದ ಕಿರಾಚಾಡುವುದು ಏನೂ ಮಾಡಬಾರದು. ಈ ದಿನ ಶಿವನ ಧ್ಯಾನದಲ್ಲಿ ಕಳೆಯುವುದರಿಂದ ಮನ-ಮನೆ ಆಹ್ಲಾದಕರವಾಗಿರುತ್ತೆ.

ಶಿವಲಿಂಗಕ್ಕೆ ಅರ್ಪಿಸಿದ ಪ್ರಸಾದ ಸೇವಿಸಬಾರದು
ದೇವಾಲಯಕ್ಕೆ ಹೋದಾಗ ದೇವರಿಗೆ ಅರ್ಪಿಸಿದ ಪ್ರಸಾದ ಸೇವಿಸುತ್ತೇವೆ. ಆದರೆ ಶಿವರಾತ್ರಿಯಂದು ಶಿವಲಿಂಗಕ್ಕೆ ಅರ್ಪಿಸಿದ ಪ್ರಸಾದ ಸೇವಿಸಬಾರದು ಎಂಬ ನಿಯಮವಿದೆ.

ಶಿವನಿಗೆ ತುಳಸಿ ಅರ್ಪಿಸಬಾರದು
ಹಿಂದೂ ಪೌರಾಣಿಕ ಕತೆಯ ಪ್ರಕಾರ ತುಳಸಿ ವಿಷ್ಣುವಿಗೆ ಅರ್ಪಿತಳು. ಆದ್ದರಿಂದ ಯಾವುದೇ ಕಾರಣಕ್ಕೆ ತುಳಸಿಯನ್ನು ಶಿವನಿಗೆ ಅರ್ಪಿಸಬಾರದು. ಯಾವುದೇ ಶಿವ ಪೂಜೆಯಲ್ಲಿ ತುಳಸಿ ಬಳಸುವುದಿಲ್ಲ.

ಅರಿಶಿಣವನ್ನು ಶಿವಲಿಂಗಕ್ಕೆ ಹಚ್ಚಬಾರದು
ಅರಿಶಿಣ ಪುರುಷ ತತ್ವವನ್ನು ಕುಗ್ಗಿಸುತ್ತೆ,ಅರಿಶಿಣವನ್ನು ಸ್ತ್ರೀಯರಿಗೆ ಎಂದು ಪರಿಗಣಿಸಲಾಗಿದೆ. ಆದ್ದರಿಂದ ಮಹಾದೇವನನ್ನು ಪ್ರಾರ್ಥಿಸುವಾಗ ಅರಿಶಿಣ ಬಳಸಬಾರದು.

ಚಂಪಾ, ಕೇದಗೆ ಹೂ ಬಳಸಬಾರದು
ಶಿವ ಈ ಎರಡೂ ಹೂಗಳಿಗೆ ಶಾಪ ನೀಡಿದ್ದಾನೆ ಎಂದು ಹೇಳಲಾಗುತ್ತದೆ. ಆದ್ದರಿಂದ ಈ ಎರಡು ಹೂಗಳನ್ನು ಬಳಸುವಂತಿಲ್ಲ.



Click it and Unblock the Notifications