Just In
Don't Miss
- Automobiles
ಅನಾವರಣವಾಯ್ತು 2021ರ ಹ್ಯುಂಡೈ ಟ್ಯುಸಾನ್ ಎನ್ ಲೈನ್ ಎಸ್ಯುವಿ
- News
ಭಾರತದಲ್ಲಿ 23 ಲಕ್ಷಕ್ಕೂ ಅಧಿಕ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 27ರ ದರ
- Movies
ಚಿತ್ರಮಂದಿರ: 100% ಸೀಟು ಭರ್ತಿಗೆ ಕೇಂದ್ರ ಸರ್ಕಾರ ಅಸ್ತು
- Education
IBPS PO/MT Mains Admit Card 2021: ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Sports
ಐಎಸ್ಎಲ್: ಕೇರಳ ಬ್ಲಾಸ್ಟರ್ಸ್ಗೆ ಜೆಮ್ಷೆಡ್ಪುರ ಎಫ್ಸಿ ಸವಾಲು: Live ಸ್ಕೋರ್
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಕರ ಸಂಕ್ರಾಂತಿ 2021: ಈ ಶುಭ ದಿನ ಏನು ಮಾಡಬಾರದು, ಏನು ಮಾಡಬೇಕು?
ಹಿಂದೂಗಳಿವೆ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ. ಶಾಸ್ತ್ರ-ಸಂಪ್ರದಾಯದ ಪ್ರಕಾರ ಸೂರ್ಯ ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವುದನ್ನು ಮಕರ ಸಂಕ್ರಾಂತಿ ಎಂದು ಆಚರಿಸಲಾಗುವುದು.
ಮಕರ ಸಂಕ್ರಾಂತಿಯು ಸೂರ್ಯನು ತನ್ನ ಪಥವನ್ನು ಬದಲಾಯಿಸುವುದರ ಜೊತೆಗೆ ಉತ್ತರಾಯಣ ಪುಣ್ಯಕಾಲ ಪ್ರಾರಂಭವಾಗುವುದು. ಈ ದಿನ ಶುಭ ಕಾರ್ಯಕ್ಕೆ ತುಂಬಾ ಶ್ರೇಷ್ಠ ಎಂದು ಹೇಳಲಾಗುವುದು.
ಅದಲ್ಲದೆ ರೈತರಿಗೆ ಇದು ಸುಗ್ಗಿಯ ಹಬ್ಬವಾಗಿದೆ. ಮಕರ ಸಂಕ್ರಾಂತಿಯು ಭಾರತದೆಲ್ಲೆಡೆಗಳಲ್ಲಿ ವಿವಿಧ ಹೆಸರುಗಳಿಂದ ಆಚರಿಸಲ್ಪಡುತ್ತದೆ. ಪಂಜಾಬ್ನಲ್ಲಿ ಈ ಹಬ್ಬವನ್ನು ಲೋಹರಿ ಎಂದು ಕರೆದರೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬೋಗಲಿ ಬಿಹು, ಗುಜರಾತ್ ಮತ್ತು ರಾಜಸ್ತಾನದಲ್ಲಿ ಉತ್ತರಾಯಣ್ (ಗಾಳಿಪಟ ಹಾರಿಸುವ ಹಬ್ಬ), ಕರ್ನಾಟಕ, ಬಿಹಾರ, ಆಂಧ್ರ ಪ್ರದೇಶ ಮೊದಲಾದೆಡೆ ಮಕರ ಸಂಕ್ರಾಂತಿಯೆಂದು ಕರೆಯಲಾಗುವುದು.
ಇನ್ನು ತಮಿಳುನಾಡಿನಲ್ಲಿ ತುಂಬಾ ಅದ್ಧೂರಿಯ ಹಬ್ಬ ಇದಾಗಿದ್ದು ಇದನ್ನು "ಪೊಂಗಲ್" ಎಂದು ಸಂಭ್ರಮಿಸಲಾಗುವುದು. ಇನ್ನು ಕೇರಳದ ಶಬರಿಮಲೆಯಲ್ಲಿ ನೆಲೆಸಿರುವ ಅಯ್ಯಪ್ಪ ಸ್ವಾಮಿ ಭಕ್ತಿರಿಗೆ ತುಂಬಾ ವಿಶೇಷವಾದ ದಿನ, ಈ ದಿನವನ್ನು 'ಮಗರವಳಕ್' ಎಂದು ಆಚರಿಸುತ್ತಾರೆ. ಉಳಿದ ರಾಜ್ಯಗಳಲ್ಲಿ ಸಂಕ್ರಾಂತಿ ಎಂದೂ ಆಚರಿಸಲ್ಪಡುತ್ತದೆ.
ಈ ಶುಭ ದಿನದಲ್ಲಿ ಕೆಲವೊಂದು ಕಾರ್ಯ ಮಾಡಿದರೆ ಒಳಿತಾಗುತ್ತದೆ, ಕೆಲವೊಂದು ಕಾರ್ಯವನ್ನು ಮಾಡಬಾರದು ಎಂದು ಹೇಳಲಾಗುತ್ತಿದೆ, ಬನ್ನಿ ಅವುಗಳು ಏನು ಎಂದು ತಿಳಿಯೋಣ:
ಮೊದಲಿಗೆ ಏನು ಮಾಡಬಾರದು ಎಂದು ನೋಡೋಣ

ಕೆಟ್ಟ ಆಲೋಚನೆ ಮಾಡುವುದು, ದ್ವೇಷ ಇರಬಾರದು
ಈ ದಿನ ಕೆಟ್ಟ ಆಲೋಚನೆ ಮಾಡಬಾರದು, ಯಾರ ಬಗ್ಗೆ ದ್ವೇಷ, ಅಸೂಯೆ ಪಡಬಾರದು, ಅಲ್ಲದೆ ಮದ್ಯ, ತಂಬಾಕು ಅಂತಹ ವಸ್ತುಗಳನ್ನು ಮುಟ್ಟಬಾರದು, ಅಲ್ಲದೆ ಈ ದಿನ ತುಂಬಾ ಖಾರವಾದ ಪದಾರ್ಥಗಳನ್ನು ಕೂಡ ಸೇವಿಸಬಾರದು.
ಈ ದಿನ ಎಳ್ಳು-ಬೆಲ್ಲ ಸವಿಯಿರಿ,ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು.

ಮರ ಕತ್ತರಿಸಬಾರದು, ಮಾಂಸಾಹಾರ ಸೇವಿಸಬಾರದು
ಮಕರ ಸಂಕ್ರಾಂತಿ ದಿನ ಮರ ಕತ್ತರಿಸಬಾರದು. ಎಮ್ಮೆಯ ಹಾಲು ಕೊಡಿಯಬಾರದು. ಈ ದಿನ ಮಾಂಸಾಹಾರ ಸೇವಿಸಬಾರದು. ಎಲ್ಲರಿಗೂ ಎಳ್ಳು-ಬೆಲ್ಲ ನೀಡಿ ಬಾಯಿ ಸಿಹಿ ಮಾಡಿ.

ಸ್ನಾನ ಮಾಡದೆ ಆಹಾರ ಸೇವಿಸಬೇಡಿ
ನಿಮಗೆ ಬೆಳಗ್ಗೆ ಎದ್ದು ಹಲ್ಲು ಮಾತ್ರ ಉಜ್ಜಿ ಆಹಾರ ಸೇವಿಸುವ ಅಭ್ಯಾಸ ಇದ್ದರೆ ಈ ದಿನ ಬದಲಾಯಿಸಿ. ಈ ದಿನ ಬೆಳಗ್ಗೆ ಎದ್ದು ಸ್ನಾನ ಮಾಡಿ, ದೇವರ ಆರಾಧನೆ ಮಾಡಿದ ಬಳಿಕವಷ್ಟೇ ತಿನ್ನಬೇಕು.

ನಿರ್ಗತಿಕರನ್ನು ಬರಿಗೈಯಲ್ಲಿ ಕಳುಹಿಸಬಾರದು
ಈ ದಿನ ನಿರ್ಗತರಿಗೆ ದಾನ ಮಾಡುವುದರಿಂದ ಪುಣ್ಯ ಸಿಗುವುದು. ಯಾವುದೇ ಕಾರಣಕ್ಕೆ ಅವರನ್ನು ಬರಿಗೈಯಲ್ಲಿ ಕಳುಹಿಸಬಾರದು.

ಏನು ಮಾಡಬೇಕು?
ಈ ದಿನ ಎಳ್ಳು-ಬೆಲ್ಲ ದಾನ ಮಾಡಿ. ಈ ದಿನ ಎಳ್ಳುದಾನ ಮಾಡಿದರೆ ನೂರು ಪಟ್ಟು ಪ್ರತಿಫಲ ಸಿಗುತ್ತದೆ, ಇದರಿಂದ ಗ್ರಹದೋಷ ನಿವಾರಣೆಯಾಗುತ್ತದೆ.
ವೈಜ್ಞಾನಿಕ ದೃಷ್ಟಿಕೋನದಿಂದಲೂ ಈ ಸಮಯದಲ್ಲಿ ಎಳ್ಳು ಸೇವನೆ ಒಳ್ಳೆಯದು. ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಸಹಕಾರಿ.