Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಮಕರ ಸಂಕ್ರಾಂತಿ 2021: ಈ ಶುಭ ದಿನ ಏನು ಮಾಡಬಾರದು, ಏನು ಮಾಡಬೇಕು?
ಹಿಂದೂಗಳಿವೆ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ. ಶಾಸ್ತ್ರ-ಸಂಪ್ರದಾಯದ ಪ್ರಕಾರ ಸೂರ್ಯ ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವುದನ್ನು ಮಕರ ಸಂಕ್ರಾಂತಿ ಎಂದು ಆಚರಿಸಲಾಗುವುದು.
ಮಕರ ಸಂಕ್ರಾಂತಿಯು ಸೂರ್ಯನು ತನ್ನ ಪಥವನ್ನು ಬದಲಾಯಿಸುವುದರ ಜೊತೆಗೆ ಉತ್ತರಾಯಣ ಪುಣ್ಯಕಾಲ ಪ್ರಾರಂಭವಾಗುವುದು. ಈ ದಿನ ಶುಭ ಕಾರ್ಯಕ್ಕೆ ತುಂಬಾ ಶ್ರೇಷ್ಠ ಎಂದು ಹೇಳಲಾಗುವುದು.
ಅದಲ್ಲದೆ ರೈತರಿಗೆ ಇದು ಸುಗ್ಗಿಯ ಹಬ್ಬವಾಗಿದೆ. ಮಕರ ಸಂಕ್ರಾಂತಿಯು ಭಾರತದೆಲ್ಲೆಡೆಗಳಲ್ಲಿ ವಿವಿಧ ಹೆಸರುಗಳಿಂದ ಆಚರಿಸಲ್ಪಡುತ್ತದೆ. ಪಂಜಾಬ್ನಲ್ಲಿ ಈ ಹಬ್ಬವನ್ನು ಲೋಹರಿ ಎಂದು ಕರೆದರೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬೋಗಲಿ ಬಿಹು, ಗುಜರಾತ್ ಮತ್ತು ರಾಜಸ್ತಾನದಲ್ಲಿ ಉತ್ತರಾಯಣ್ (ಗಾಳಿಪಟ ಹಾರಿಸುವ ಹಬ್ಬ), ಕರ್ನಾಟಕ, ಬಿಹಾರ, ಆಂಧ್ರ ಪ್ರದೇಶ ಮೊದಲಾದೆಡೆ ಮಕರ ಸಂಕ್ರಾಂತಿಯೆಂದು ಕರೆಯಲಾಗುವುದು.
ಇನ್ನು ತಮಿಳುನಾಡಿನಲ್ಲಿ ತುಂಬಾ ಅದ್ಧೂರಿಯ ಹಬ್ಬ ಇದಾಗಿದ್ದು ಇದನ್ನು "ಪೊಂಗಲ್" ಎಂದು ಸಂಭ್ರಮಿಸಲಾಗುವುದು. ಇನ್ನು ಕೇರಳದ ಶಬರಿಮಲೆಯಲ್ಲಿ ನೆಲೆಸಿರುವ ಅಯ್ಯಪ್ಪ ಸ್ವಾಮಿ ಭಕ್ತಿರಿಗೆ ತುಂಬಾ ವಿಶೇಷವಾದ ದಿನ, ಈ ದಿನವನ್ನು 'ಮಗರವಳಕ್' ಎಂದು ಆಚರಿಸುತ್ತಾರೆ. ಉಳಿದ ರಾಜ್ಯಗಳಲ್ಲಿ ಸಂಕ್ರಾಂತಿ ಎಂದೂ ಆಚರಿಸಲ್ಪಡುತ್ತದೆ.
ಈ ಶುಭ ದಿನದಲ್ಲಿ ಕೆಲವೊಂದು ಕಾರ್ಯ ಮಾಡಿದರೆ ಒಳಿತಾಗುತ್ತದೆ, ಕೆಲವೊಂದು ಕಾರ್ಯವನ್ನು ಮಾಡಬಾರದು ಎಂದು ಹೇಳಲಾಗುತ್ತಿದೆ, ಬನ್ನಿ ಅವುಗಳು ಏನು ಎಂದು ತಿಳಿಯೋಣ:
ಮೊದಲಿಗೆ ಏನು ಮಾಡಬಾರದು ಎಂದು ನೋಡೋಣ

ಕೆಟ್ಟ ಆಲೋಚನೆ ಮಾಡುವುದು, ದ್ವೇಷ ಇರಬಾರದು
ಈ ದಿನ ಕೆಟ್ಟ ಆಲೋಚನೆ ಮಾಡಬಾರದು, ಯಾರ ಬಗ್ಗೆ ದ್ವೇಷ, ಅಸೂಯೆ ಪಡಬಾರದು, ಅಲ್ಲದೆ ಮದ್ಯ, ತಂಬಾಕು ಅಂತಹ ವಸ್ತುಗಳನ್ನು ಮುಟ್ಟಬಾರದು, ಅಲ್ಲದೆ ಈ ದಿನ ತುಂಬಾ ಖಾರವಾದ ಪದಾರ್ಥಗಳನ್ನು ಕೂಡ ಸೇವಿಸಬಾರದು.
ಈ ದಿನ ಎಳ್ಳು-ಬೆಲ್ಲ ಸವಿಯಿರಿ,ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು.

ಮರ ಕತ್ತರಿಸಬಾರದು, ಮಾಂಸಾಹಾರ ಸೇವಿಸಬಾರದು
ಮಕರ ಸಂಕ್ರಾಂತಿ ದಿನ ಮರ ಕತ್ತರಿಸಬಾರದು. ಎಮ್ಮೆಯ ಹಾಲು ಕೊಡಿಯಬಾರದು. ಈ ದಿನ ಮಾಂಸಾಹಾರ ಸೇವಿಸಬಾರದು. ಎಲ್ಲರಿಗೂ ಎಳ್ಳು-ಬೆಲ್ಲ ನೀಡಿ ಬಾಯಿ ಸಿಹಿ ಮಾಡಿ.

ಸ್ನಾನ ಮಾಡದೆ ಆಹಾರ ಸೇವಿಸಬೇಡಿ
ನಿಮಗೆ ಬೆಳಗ್ಗೆ ಎದ್ದು ಹಲ್ಲು ಮಾತ್ರ ಉಜ್ಜಿ ಆಹಾರ ಸೇವಿಸುವ ಅಭ್ಯಾಸ ಇದ್ದರೆ ಈ ದಿನ ಬದಲಾಯಿಸಿ. ಈ ದಿನ ಬೆಳಗ್ಗೆ ಎದ್ದು ಸ್ನಾನ ಮಾಡಿ, ದೇವರ ಆರಾಧನೆ ಮಾಡಿದ ಬಳಿಕವಷ್ಟೇ ತಿನ್ನಬೇಕು.

ನಿರ್ಗತಿಕರನ್ನು ಬರಿಗೈಯಲ್ಲಿ ಕಳುಹಿಸಬಾರದು
ಈ ದಿನ ನಿರ್ಗತರಿಗೆ ದಾನ ಮಾಡುವುದರಿಂದ ಪುಣ್ಯ ಸಿಗುವುದು. ಯಾವುದೇ ಕಾರಣಕ್ಕೆ ಅವರನ್ನು ಬರಿಗೈಯಲ್ಲಿ ಕಳುಹಿಸಬಾರದು.

ಏನು ಮಾಡಬೇಕು?
ಈ ದಿನ ಎಳ್ಳು-ಬೆಲ್ಲ ದಾನ ಮಾಡಿ. ಈ ದಿನ ಎಳ್ಳುದಾನ ಮಾಡಿದರೆ ನೂರು ಪಟ್ಟು ಪ್ರತಿಫಲ ಸಿಗುತ್ತದೆ, ಇದರಿಂದ ಗ್ರಹದೋಷ ನಿವಾರಣೆಯಾಗುತ್ತದೆ.
ವೈಜ್ಞಾನಿಕ ದೃಷ್ಟಿಕೋನದಿಂದಲೂ ಈ ಸಮಯದಲ್ಲಿ ಎಳ್ಳು ಸೇವನೆ ಒಳ್ಳೆಯದು. ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಸಹಕಾರಿ.



Click it and Unblock the Notifications
