Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಕರ ಸಂಕ್ರಾಂತಿ 2021: ಈ ಶುಭ ದಿನ ಏನು ಮಾಡಬಾರದು, ಏನು ಮಾಡಬೇಕು?
ಹಿಂದೂಗಳಿವೆ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ. ಶಾಸ್ತ್ರ-ಸಂಪ್ರದಾಯದ ಪ್ರಕಾರ ಸೂರ್ಯ ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವುದನ್ನು ಮಕರ ಸಂಕ್ರಾಂತಿ ಎಂದು ಆಚರಿಸಲಾಗುವುದು.
ಮಕರ ಸಂಕ್ರಾಂತಿಯು ಸೂರ್ಯನು ತನ್ನ ಪಥವನ್ನು ಬದಲಾಯಿಸುವುದರ ಜೊತೆಗೆ ಉತ್ತರಾಯಣ ಪುಣ್ಯಕಾಲ ಪ್ರಾರಂಭವಾಗುವುದು. ಈ ದಿನ ಶುಭ ಕಾರ್ಯಕ್ಕೆ ತುಂಬಾ ಶ್ರೇಷ್ಠ ಎಂದು ಹೇಳಲಾಗುವುದು.
ಅದಲ್ಲದೆ ರೈತರಿಗೆ ಇದು ಸುಗ್ಗಿಯ ಹಬ್ಬವಾಗಿದೆ. ಮಕರ ಸಂಕ್ರಾಂತಿಯು ಭಾರತದೆಲ್ಲೆಡೆಗಳಲ್ಲಿ ವಿವಿಧ ಹೆಸರುಗಳಿಂದ ಆಚರಿಸಲ್ಪಡುತ್ತದೆ. ಪಂಜಾಬ್ನಲ್ಲಿ ಈ ಹಬ್ಬವನ್ನು ಲೋಹರಿ ಎಂದು ಕರೆದರೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬೋಗಲಿ ಬಿಹು, ಗುಜರಾತ್ ಮತ್ತು ರಾಜಸ್ತಾನದಲ್ಲಿ ಉತ್ತರಾಯಣ್ (ಗಾಳಿಪಟ ಹಾರಿಸುವ ಹಬ್ಬ), ಕರ್ನಾಟಕ, ಬಿಹಾರ, ಆಂಧ್ರ ಪ್ರದೇಶ ಮೊದಲಾದೆಡೆ ಮಕರ ಸಂಕ್ರಾಂತಿಯೆಂದು ಕರೆಯಲಾಗುವುದು.
ಇನ್ನು ತಮಿಳುನಾಡಿನಲ್ಲಿ ತುಂಬಾ ಅದ್ಧೂರಿಯ ಹಬ್ಬ ಇದಾಗಿದ್ದು ಇದನ್ನು "ಪೊಂಗಲ್" ಎಂದು ಸಂಭ್ರಮಿಸಲಾಗುವುದು. ಇನ್ನು ಕೇರಳದ ಶಬರಿಮಲೆಯಲ್ಲಿ ನೆಲೆಸಿರುವ ಅಯ್ಯಪ್ಪ ಸ್ವಾಮಿ ಭಕ್ತಿರಿಗೆ ತುಂಬಾ ವಿಶೇಷವಾದ ದಿನ, ಈ ದಿನವನ್ನು 'ಮಗರವಳಕ್' ಎಂದು ಆಚರಿಸುತ್ತಾರೆ. ಉಳಿದ ರಾಜ್ಯಗಳಲ್ಲಿ ಸಂಕ್ರಾಂತಿ ಎಂದೂ ಆಚರಿಸಲ್ಪಡುತ್ತದೆ.
ಈ ಶುಭ ದಿನದಲ್ಲಿ ಕೆಲವೊಂದು ಕಾರ್ಯ ಮಾಡಿದರೆ ಒಳಿತಾಗುತ್ತದೆ, ಕೆಲವೊಂದು ಕಾರ್ಯವನ್ನು ಮಾಡಬಾರದು ಎಂದು ಹೇಳಲಾಗುತ್ತಿದೆ, ಬನ್ನಿ ಅವುಗಳು ಏನು ಎಂದು ತಿಳಿಯೋಣ:
ಮೊದಲಿಗೆ ಏನು ಮಾಡಬಾರದು ಎಂದು ನೋಡೋಣ

ಕೆಟ್ಟ ಆಲೋಚನೆ ಮಾಡುವುದು, ದ್ವೇಷ ಇರಬಾರದು
ಈ ದಿನ ಕೆಟ್ಟ ಆಲೋಚನೆ ಮಾಡಬಾರದು, ಯಾರ ಬಗ್ಗೆ ದ್ವೇಷ, ಅಸೂಯೆ ಪಡಬಾರದು, ಅಲ್ಲದೆ ಮದ್ಯ, ತಂಬಾಕು ಅಂತಹ ವಸ್ತುಗಳನ್ನು ಮುಟ್ಟಬಾರದು, ಅಲ್ಲದೆ ಈ ದಿನ ತುಂಬಾ ಖಾರವಾದ ಪದಾರ್ಥಗಳನ್ನು ಕೂಡ ಸೇವಿಸಬಾರದು.
ಈ ದಿನ ಎಳ್ಳು-ಬೆಲ್ಲ ಸವಿಯಿರಿ,ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು.

ಮರ ಕತ್ತರಿಸಬಾರದು, ಮಾಂಸಾಹಾರ ಸೇವಿಸಬಾರದು
ಮಕರ ಸಂಕ್ರಾಂತಿ ದಿನ ಮರ ಕತ್ತರಿಸಬಾರದು. ಎಮ್ಮೆಯ ಹಾಲು ಕೊಡಿಯಬಾರದು. ಈ ದಿನ ಮಾಂಸಾಹಾರ ಸೇವಿಸಬಾರದು. ಎಲ್ಲರಿಗೂ ಎಳ್ಳು-ಬೆಲ್ಲ ನೀಡಿ ಬಾಯಿ ಸಿಹಿ ಮಾಡಿ.

ಸ್ನಾನ ಮಾಡದೆ ಆಹಾರ ಸೇವಿಸಬೇಡಿ
ನಿಮಗೆ ಬೆಳಗ್ಗೆ ಎದ್ದು ಹಲ್ಲು ಮಾತ್ರ ಉಜ್ಜಿ ಆಹಾರ ಸೇವಿಸುವ ಅಭ್ಯಾಸ ಇದ್ದರೆ ಈ ದಿನ ಬದಲಾಯಿಸಿ. ಈ ದಿನ ಬೆಳಗ್ಗೆ ಎದ್ದು ಸ್ನಾನ ಮಾಡಿ, ದೇವರ ಆರಾಧನೆ ಮಾಡಿದ ಬಳಿಕವಷ್ಟೇ ತಿನ್ನಬೇಕು.

ನಿರ್ಗತಿಕರನ್ನು ಬರಿಗೈಯಲ್ಲಿ ಕಳುಹಿಸಬಾರದು
ಈ ದಿನ ನಿರ್ಗತರಿಗೆ ದಾನ ಮಾಡುವುದರಿಂದ ಪುಣ್ಯ ಸಿಗುವುದು. ಯಾವುದೇ ಕಾರಣಕ್ಕೆ ಅವರನ್ನು ಬರಿಗೈಯಲ್ಲಿ ಕಳುಹಿಸಬಾರದು.

ಏನು ಮಾಡಬೇಕು?
ಈ ದಿನ ಎಳ್ಳು-ಬೆಲ್ಲ ದಾನ ಮಾಡಿ. ಈ ದಿನ ಎಳ್ಳುದಾನ ಮಾಡಿದರೆ ನೂರು ಪಟ್ಟು ಪ್ರತಿಫಲ ಸಿಗುತ್ತದೆ, ಇದರಿಂದ ಗ್ರಹದೋಷ ನಿವಾರಣೆಯಾಗುತ್ತದೆ.
ವೈಜ್ಞಾನಿಕ ದೃಷ್ಟಿಕೋನದಿಂದಲೂ ಈ ಸಮಯದಲ್ಲಿ ಎಳ್ಳು ಸೇವನೆ ಒಳ್ಳೆಯದು. ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡಲು ಸಹಕಾರಿ.



Click it and Unblock the Notifications