Latest Updates
-
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ!
ಮಣ್ಣೆತ್ತಿನ ಅಮವಾಸ್ಯೆ 2021: ಈ ದಿನದ ವಿಶೇಷತೆ ಏನು?
ಭಾರತ ದೇಶ ವೈವಿಧ್ಯತೆಯಿಂದ ಕೂಡಿರುವ ದೇಶ. ನಮ್ಮಲ್ಲಿ ಸಂಪ್ರದಾಯ, ಹಬ್ಬಗಳಿಗೆ ತುಂಬಾನೇ ಮಹತ್ವ ನೀಡಲಾಗುವುದು. ಇನ್ನು ರೈತ ವರ್ಗವು ಆಚರಿಸುವ ಹಲವಾರು ಹಬ್ಬಗಳಿವೆ. ರೈತರ ಉಸಿರೆಂದರೆ ಮಣ್ಣು ಹಾಗೂ ಜಾನುವಾರುಗಳು, ಹಾಗಾಗಿ ಅನೇಕ ರೈತರ ಹಬ್ಬಗಳಲ್ಲಿ ಎತ್ತುಗಳಿಗೆ ತುಂಬಾನೇ ಮಹತ್ವವಿದೆ.
ಕಾರ ಹುಣ್ಣಿಮೆಯಲ್ಲಿ ರೈತರು ಎತ್ತುಗಳಿಗೆ ಸಿಂಗರಿಸಿ ಹಬ್ಬವನ್ನು ಆಚರಿಸಿದರೆ, ಮಣ್ಣೆತ್ತಿನ ಅಮವಾಸ್ಯೆಯಲ್ಲಿ ಮಣ್ಣಿನಿಂದ ಮಾಡಿದ ಎತ್ತುಗಳಿಗೆ ಅಲಂಕರಿಸಿ ಹಬ್ಬವನ್ನು ಆಚರಿಸಲಾಗುವುದು. ಈ ಹಬ್ಬದ ವಿಶೇಷತೆ ಬಗ್ಗೆ ಇಲ್ಲಿ ಹೇಳಲಾಗಿದೆ ನೋಡಿ:

ಕಾರ ಹುಣ್ಣಿಮೆ ಬಳಿಕ ಬರುವ ಮಣ್ಣೆತ್ತಿನ ಅಮವಾಸ್ಯೆ
ರೈತನ ಮಣ್ಣನ್ನು ಹದ ಮಾಡಿ, ಬೆಳೆ ಬಿತ್ತಲು ಸಹಾಯ ಮಾಡುವ ಎತ್ತುಗಳಿಗೆ ಕೃತಜ್ಞತೆ ಸಲ್ಲಿಸಲು ಉತ್ತರ ಕರ್ನಾಟಕದ ಕಡೆ ಖಾರ ಹುಣ್ಣಿಮೆ ಆಚರಿಸಲಾಗುವುದು. ಅದೇ ರೀತಿ ಮಣ್ಣೆತ್ತಿನ ಅಮವಾಸ್ಯೆ ದಿನ ಕೂಡ ಮಣ್ಣಿನ ಎತ್ತಿನ ಪ್ರತಿಮೆಗಳಿಗೆ ಸಿಂಗರಿಸಿ ಪೂಜೆ ಮಾಡಲಾಗುವುದು. ಈ ವರ್ಷ ಜುಲೈ 9 ಶುಕ್ರವಾರದಂದು ಆಚರಿಸಲಾಗುವುದು.

ಮಣ್ಣೆತ್ತಿನ ಅಮವಾಸ್ಯೆಯ ವಿಶೇಷತೆ
ಸಾಮಾನ್ಯವಾಗಿ ಮುಂಗಾರು ಪ್ರಾರಂಭವಾದಾಗ ಕೃಷಿ ಚಟುವಟಿಕೆಗಳು ಶುರುವಾಗುವುದು... ಪುನರ್ವಸು ಮಳೆ ಪ್ರಾರಂಭವಾಗುವ ಹೊತ್ತಿಗೆ ಬಿತ್ತನೆ ಆಗಿ, ನಾಟಿ ಕೂಡ ಮುಗಿದಿರುತ್ತದೆ, ಈ ಸಂಭ್ರಮವನ್ನು ಆಚರಿಸಲು ರೈತರು ಮಣ್ಣೆತ್ತಿನ ಅಮವಾಸ್ಯೆ ಆಚರಿಸುತ್ತಾರೆ. ಗ್ರಾಮೀಣ ಭಾಗದಲ್ಲಿ ಎಲ್ಲರೂ ಒಟ್ಟಾಗಿ ಅನೇಕ ಚಟುವಟಿಗಳನ್ನು ಹಮ್ಮಿಕೊಂಡು ಇಂಥ ಹಬ್ಬಗಳನ್ನು ಆಚರಿಸುವುದರಿಂದ ಸಂತೋಷ ಹೆಚ್ಚಿಸಿ, ಐಕ್ಯತೆಯನ್ನು ಮೂಡಿಸುತ್ತದೆ.

ಮಣ್ಣೆತ್ತಿನ ಅಮವಾಸ್ಯೆ ಆಚರಣೆ ಹೇಗೆ ಮಾಡಲಾಗುವುದು?
ಕಾರ ಹುಣ್ಣಿಮೆಯ ನಂತರ ಬರುವುದೇ ಮಣ್ಣೆತ್ತಿನ ಅಮವಾಸ್ಯೆ. ಈ ದಿನ ರೈತರು ಹೊಲಕ್ಕೆ ಹೋಗಿ, ಹೊಲದ ಮಣ್ಣು ತಂದು ಆ ಮಣ್ಣಿನಿಂದ ಜೋಡಿ ಎತ್ತುಗಳನ್ನು ತಯಾರಿಸುತ್ತಾರೆ. ನಂತರ ಅವುಗಳಿಗೆ ಬಣ್ಣ ಹಚ್ಚಿ ಸಿಂಗಾರ ಮಾಡಿ ಪೂಜಿಸಲಾಗುವುದು. ಕೆಲವರು ಊರು ದೇವಾಲಯಕ್ಕೆ ಈ ಎತ್ತುಗಳನ್ನು ಕೊಂಡೊಯ್ದು ಪೂಜೆ ಮಾಡಿ ಬರುತ್ತಾರೆ. ನಂತರ ಎತ್ತುಗಳಿ ಹೋಳಿಗೆ, ಸಿಹಿ ಕಡಬು ಇಟ್ಟು ಎಡೆ ಇಡಲಾಗುವುದು. ನಂತರ ತಮ್ಮ ಜಮೀನಿನಲ್ಲಿ ಆ ಎತ್ತುಗಳನ್ನು ಇಟ್ಟು ಭೂತಾಯಿ ಹಾಗೂ ಎತ್ತುಗಳು ತಮ್ಮ ಬೆಳೆಯನ್ನು ರಕ್ಷಣೆ ಮಾಡಿ ಎಂದು ಬೇಡಿಕೊಳ್ಳುವುದು ವಾಡಿಕೆ.

ರೈತರ ಕಷ್ಟ-ಸುಖಗಳಲ್ಲಿ ಭಾಗಿಯಾಗುವ ಎತ್ತು
ರೈತರಿಗೆ ಎತ್ತುಗಳೇ ಜೀವಾಳ. ತಮ್ಮ ಕೃಷಿ ಚಟುವಟಿಕೆಗಳಿಗೆ ದೊಡ್ಡ ಸಹಾಯವಾಗಿರುವ ಎತ್ತುಗಳೆಂದರೆ ರೈತರಿಗೆ ತಮ್ಮ ಪ್ರಾಣಗಿಂತಲೂ ಮಿಗಿಲಾದ ಪ್ರೀತಿ. ರೈತರ ಎಲ್ಲಾ ಹಬ್ಬಗಳಲ್ಲಿಯೂ ಎತ್ತುಗಳಿಗೆ ಪ್ರಮುಖ ಸ್ಥಾನ ನೀಡಲಾಗುವುದು ಜೊತೆಗೆ ಮಣ್ಣಿನ ಆರಾಧನೆಯನ್ನು ಕೂಡ ಮಾಡಲಾಗುವುದು. ಮೆಣ್ಣೆತ್ತಿನ ಅಮವಾಸ್ಯೆಗೆ ಮಣ್ಣಿನಿಂದ ಎತ್ತುಗಳನ್ನು ಮಾಡಿದರೆ ನಾಗರ ಪಂಚಮಿಗೆ ಮಣ್ಣಿನ ನಾಗರ ಮೂರ್ತಿಗಳನ್ನು ಮಾಡಲಾಗುವುದು. ಗಣಪನನ್ನು ಮಣ್ಣಿನಿಂದ ತಯಾರಿಸಿ ಗಣೇಶ ಹಬ್ಬ ಆಚರಿಸಲಾಗುವುದು. ಹೀಗೆ ಮಣ್ಣು ಹಾಗೂ ಎತ್ತಗಳಿಗೆ ನಮ್ಮ ಎಲ್ಲಾ ಹಬ್ಬಗಳಲ್ಲಿ ಪ್ರಾಮುಖ್ಯತೆ ನೀಡಲಾಗಿದೆ.



Click it and Unblock the Notifications