Latest Updates
-
ಇಂದು ರಾತ್ರಿ ದೆಹಲಿ-ಎನ್ಸಿಆರ್ನಲ್ಲಿ ಭೀಕರ ಮಳೆ: ಹೊರಗೆ ಹೋಗುವ ಪ್ಲಾನ್ ಇದೆಯಾ? ಎಚ್ಚರ! -
ಮಳೆಗಾಲದಲ್ಲಿ ಮನೆ ಹಾಳಾಗದಂತೆ ತಡೆಯುವುದು ಹೇಗೆ? ತೇವಾಂಶ ಮತ್ತು ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
'ಹೆಲ್ದಿ' ಆಹಾರದ ಹೆಸರಿನಲ್ಲಿ ಮೋಸ ಹೋಗ್ತಿದ್ದೀರಾ? FSSAI ಹೊಸ ನಿಯಮದ ಅಸಲಿಯತ್ತು ಇಲ್ಲಿದೆ! -
UGC NET 2026 ಅಡ್ಮಿಟ್ ಕಾರ್ಡ್ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ಹೋಗುವ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ! -
ಬೆಂಗಳೂರು, ಕರಾವಳಿಯಲ್ಲಿ ಭಾರಿ ಮಳೆ: ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ರಾಜ ಪರ್ಬ 2026: ಮಹಿಳೆಯರಿಗೆ ವಿಶ್ರಾಂತಿ ನೀಡುವ ಈ ಹಬ್ಬದ ಆಚರಣೆ ಮತ್ತು ವಿಶೇಷತೆಗಳೇನು? -
ದೆಹಲಿ ಮಾಲಿನ್ಯದ ಆತಂಕ: ನಿಮ್ಮ ಮನೆಯನ್ನು ವಿಷಕಾರಿ ಗಾಳಿಯಿಂದ ರಕ್ಷಿಸಲು ಈ ಸರಳ ಕ್ರಮಗಳನ್ನು ಪಾಲಿಸಿ -
ಖರ್ಜೂರದಲ್ಲಿ ಹುಳುಗಳ ಆತಂಕ: ಆನ್ಲೈನ್ನಲ್ಲಿ ಆರ್ಡರ್ ಮಾಡುವ ಮುನ್ನ ಈ ತಪ್ಪು ಮಾಡಬೇಡಿ! -
ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ 2026: ಬಾರ್ಸಿಲೋನಾದಲ್ಲಿ ಇಂದು ಹೈ-ವೋಲ್ಟೇಜ್ ರೇಸ್, ಮಿಸ್ ಮಾಡ್ಬೇಡಿ! -
ರಕ್ತದಾನದ ನಂತರ ಜಿಮ್ಗೆ ಹೋಗುವ ಮುನ್ನ ಎಚ್ಚರ! ಈ ತಪ್ಪುಗಳನ್ನು ಮಾಡಬೇಡಿ
ಶಿವ ಪೂಜೆಯಲ್ಲಿ ಇಂತಹ ತಪ್ಪುಗಳಾಗದಂತೆ ಎಚ್ಚರವಹಿಸಿ
ಭಕ್ತಿ ಎಂಬುದು ಮನದಾಳದಿಂದ ಬರಬೇಕೇ ವಿನಃ ಬಲವಂತದಿಂದಲ್ಲ. ಪ್ರತಿಯೊಬ್ಬರ ಪ್ರಾರ್ಥನೆ ಅವರವರ ಧರ್ಮಕ್ಕೆ ಅನುಗುಣವಾಗಿ ಬೇರೆಬೇರೆಯಾಗಿರುತ್ತದೆ. ಕೆಲವರು ಭಕ್ತಿಯ ಪರಾಕಾಷ್ಠೆಯಲ್ಲಿ ಕೆಲವೊಂದು ಚಿಕ್ಕ ಪುಟ್ಟ ತಪ್ಪುಗಳನ್ನು ಮಾಡುವುದು ಸಹಾ ಕಂಡುಬರುತ್ತದೆ.
ಪ್ರತಿ ಸೋಮವಾರದಂದು ಹಮ್ಮಿಕೊಳ್ಳಲಾಗುವ ಶಿವಪೂಜೆಯಲ್ಲಿಯೂ ಇಂತಹ ಚಿಕ್ಕಪುಟ್ಟ ತಪ್ಪುಗಳಾಗುವುದನ್ನು ಕಾಣಬಹುದು. ತನ್ನ ಭಕ್ತರ ಭಕ್ತಿಗೆ ಮೆಚ್ಚುವ ಶಿವ ಅವರ ಚಿಕ್ಕಪುಟ್ಟ ತಪ್ಪುಗಳನ್ನು ಖಂಡಿತಾ ಮನ್ನಿಸುತ್ತಾನೆ ಹಾಗೂ ಭಕ್ತರ ಆಸೆ ಆಕಾಂಕ್ಷೆಗಳನ್ನು ಈಡೇರಿಸುತ್ತಾನೆ ಎಂದು ಭಕ್ತರು ನಂಬುತ್ತಾರೆ. ಆದರೂ ಸೋಮವಾರದ ಪೂಜೆ ಅತ್ಯಂತ ಮುಖ್ಯವಾದುದರಿಂದ ಅದರಲ್ಲಿ ಲೋಪಗಳಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಭಕ್ತನ ಕರ್ತವ್ಯವಾಗಿದೆ.
ಶಿವಪೂಜೆ ಮಾಡುವಾಗ ನಮಗೆ ಗೊತ್ತಿಲ್ಲದೆ ಮಾಡುವ ತಪ್ಪುಗಳಿಂದಾಗಿ ಆ ಪೂಜೆಯ ಫಲ ಸಿಗುವುದಿಲ್ಲ. ಶಿವಪೂಜೆಯಲ್ಲಿ ಭಕ್ತರು ಮಾಡುವ ಸಾಮಾನ್ಯ ತಪ್ಪುಗಳನ್ನು ಕೆಳಗಿನ ಸ್ಲೈಡ್ ಶೋ ಮೂಲಕ ವಿವರಿಸಲಾಗಿದೆ. ಈ ತಪ್ಪುಗಳನ್ನು ಎಸಗದಂತೆ ಎಚ್ಚರಿಕೆ ವಹಿಸುವ ಮೂಲಕ ಆ ಶಿವನ ಅನುಗ್ರಹಕ್ಕೆ ಪಾತ್ರರಾಗಲು ನೆರವಾಗುತ್ತದೆ.

ಬಿಲ್ವಪತ್ರೆಯನ್ನು ತರಲು ಮರೆಯುವುದು
ಶಿವಪೂಜೆಯಲ್ಲಿ ಬಿಲ್ವಪತ್ರೆಯ ಪಾತ್ರ ಅತಿ ಮಹತ್ತರವಾಗಿದೆ. ಇದನ್ನು ಅರ್ಪಿಸುವ ಮೂಲಕ ಭಕ್ತರ ಪಾಪವನ್ನು ತೊಳೆದು ಜೀವನದಲ್ಲಿ ಸುಖ ಸಂತೋಷ ಸಮೃದ್ಧಿ ನೆಲೆಸಲು ನೆರವಾಗುತ್ತದೆ. ಆದ್ದರಿಂದ ಸೋಮವಾರದ ಶಿವಪೂಜೆಯಲ್ಲಿ ಯಾವುದೇ ಕಾರಣಕ್ಕೂ ಬಿಲ್ವಪತ್ರೆಯನ್ನು ತರಲು ಮರೆಯಬಾರದು.. ಮುಂದಿನ ಸ್ಲೈಡ್ ಕ್ಲಿಕ್ ಮಾಡಿ

ಶಾಸ್ತ್ರಗಳ ಪ್ರಕಾರ
ಶಾಸ್ತ್ರಗಳ ಪ್ರಕಾರ ಶಿವಪೂಜೆಗೂ ಬಿಲ್ವಪತ್ರೆಗೂ ನಿಕಟವಾದ ನಂಟಿದೆ. ಅಲ್ಲದೇ ಹಿಂದೂ ಪಂಚಾಂಗದ ಪ್ರಕಾರ ಶಿವಪೂಜೆ ಮತ್ತು ಗಣಪತಿಪೂಜೆಗೆ ವಿಶೇಷ ದಿನಗಳಿವೆ. ಈ ದಿನಗಳಲ್ಲಿ ಬಿಲ್ವಪತ್ರೆಯನ್ನು ಮರೆಯುವುದು ಅಥವಾ ಇದ್ದ ಎಲೆಗಳನ್ನು ಮುರಿಯುವುದು ಶಿವ ಮತ್ತು ಶಿವನ ಪುತ್ರನಾದ ಗಣಪತಿಯ ಪೂಜೆಗೆ ಭಂಗತರುತ್ತದೆ. ಇದು ಶಿವಪೂಜೆಯ ದೋಷಕ್ಕೂ ಕಾರಣವಾಗಬಲ್ಲುದು.

ಶಾಸ್ತ್ರಗಳ ಪ್ರಕಾರ
ಶಾಸ್ತ್ರಗಳ ಪ್ರಕಾರ ಈ ಕೆಳಗಿನ ದಿನಗಳು ಪವಿತ್ರವಾಗಿದ್ದು ಈ ದಿನಗಳಲ್ಲಿ ಬಿಲ್ವಪತ್ರೆಯನ್ನು ಮುರಿಯಲೇಬಾರದು:
*ಚತುರ್ಥಿ
*ಅಷ್ಟಮಿ
*ನವಮಿ
*ಚತುರ್ಧಶಿ
*ಅಮಾವಾಸ್ಯೆ
*ಸಂಕ್ರಾಂತಿ
*ಸೋಮವಾರ

ಸಾಮಾನ್ಯವಾಗಿ ಮರೆಯುವ ಶಿವಪೂಜೆಗೆ ಅಗತ್ಯವಾದ ಪರಿಕರಗಳು
ಹಾಲು - ಇದನ್ನು ಅರ್ಪಿಸುವುದರಿಂದ ಪಾವಿತ್ರ್ಯತೆ ಮತ್ತು ಧರ್ಮಶ್ರದ್ಧೆ ಮೂಡುತ್ತದೆ
ಮೊಸರು - ಇದನ್ನು ಅರ್ಪಿಸುವುದರಿಂದ ಉತ್ತಮ ಸಂತಾನ ಮತ್ತು ಸಮೃದ್ಧಿ ದೊರಕುತ್ತದೆ.
ಜೇನು - ಇದನ್ನು ಅರ್ಪಿಸುವುದರಿಂದ ನಿಮ್ಮ ಸ್ವರ ಅತ್ಯಂತ ಮಧುರವಾಗುತ್ತದೆ
ಸಕ್ಕರೆ - ಇದನ್ನು ಅರ್ಪಿಸುವುದರಿಂದ ಸಂತೋಷ ಲಭಿಸುತ್ತದೆ ಹಾಗೂ ಕಷ್ಟ ಕಾರ್ಪಣ್ಯ ನಾಶವಾಗುತ್ತದೆ.

ಸಾಮಾನ್ಯವಾಗಿ ಮರೆಯುವ ಶಿವಪೂಜೆಗೆ ಅಗತ್ಯವಾದ ಪರಿಕರಗಳು
ನೀರು -ಇದನ್ನು ಅರ್ಪಿಸುವುದರಿಂದ ಮನಃಶಾಂತಿ ದೊರಕುತ್ತದೆ.
ಶ್ರೀಗಂಧ - ಇದರ ಲೇಪನವನ್ನು ಅರ್ಪಿಸುವುದರಿಂದ ಮಹಾಲಕ್ಷ್ಮಿಯ ಅನುಗ್ರಹ ಪಡೆಯಬಹುದು.
ವಿಭೂತಿ - ಇದನ್ನು ಅರ್ಪಿಸುವುದರಿಂದ ಶಿವನ ಅನುಗ್ರಹ ಪಡೆಯಬಹುದು.



Click it and Unblock the Notifications