Latest Updates
-
March 09 Horoscope: ಶುಭ ಕಾರ್ಯದಲ್ಲಿ ಭಾಗಿಯಾಗುವ ಸಾಧ್ಯತೆ ಹೆಚ್ಚು! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 08 ರಿಂದ ಮಾರ್ಚ್ 15ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಹೊಸ ರೀತಿಯ ಟೊಮೆಟೊ ಚಕ್ಕುಲಿ ಸುಲಭವಾಗಿ ಮಾಡಿ: ಇಲ್ಲಿದೆ ಮಾಡುವ ವಿಧಾನ -
ಶನಿ ಸಂಚಾರ 2026: ಮಾರ್ಚ್ನಿಂದ ಈ 5 ರಾಶಿ ಜನರು ಎಚ್ಚರವಹಿಸಿ, ವೈಯಕ್ತಿಕ ಹಾನಿ ಸಂಭವ! -
ಮಸಾಲೆ ಲೆಸ್ ವೈಟ್ ಪಲಾವ್; ವಿಭಿನ್ನ ರುಚಿ ವಿಶೇಷ ಖಾದ್ಯ ಸಿದ್ದಮಾಡಿ ನೋಡಿ! -
ಅಂತಾರಾಷ್ಟ್ರೀಯ ಮಹಿಳಾ ದಿನ: ದಕ್ಷಿಣ ಏಷ್ಯಾದಲ್ಲಿ ಹೆಚ್ಚಾಗುತ್ತಿದೆ ರಕ್ತಹೀನತೆ, ಮಹಿಳೆಯರೇ ಬಲಿಪಶು ಏಕೆ? -
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ -
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು
ಜನವರಿ 24ರ ಮೌನಿ ಅಮವಾಸ್ಯೆಯ ವಿಶೇಷತೆ ಏನು?
ಪ್ರತಿ ತಿಂಗಳು ಅಮವಾಸ್ಯೆ, ಹುಣ್ಣಿಮೆ ಬರುತ್ತದೆ. ಹಿಂದೂ ಪಂಚಾಂಗದ ಪ್ರಕಾರ ಪ್ರತಿಯೊಂದು ಅಮವಾಸ್ಯೆಯನ್ನು ಒಂದೊಂದು ಹೆಸರಿನಿಂದ ಕರೆಯಲಾಗುವುದು ಹಾಗೂ ಅದಕ್ಕೆ ವಿಶೇಷ ಪ್ರಾಮುಖ್ಯತೆಯನ್ನು ನೀಡಲಾಗುವುದು. ಈ ಬಾರಿ ಬರುವ ಅಮವಾಸ್ಯೆಯನ್ನು ಮೌನಿ ಅಮವಾಸ್ಯೆಯಂದು ಕರೆಯುತ್ತಾರೆ. ಈ ಅಮವಾಸ್ಯೆ ಜನವರಿ 24ರಂದು ನಡೆಯಲಿದೆ. ಇದನ್ನು ಮಾಘ ಅಮವಾಸ್ಯೆ ಎಂದು ಕೂಡ ಕರೆಯಲಾಗುವುದು. ಅನೇಕ ಧಾರ್ಮಿಕ ವಿಧಿ ವಿಧಾನಗಳ ಅಮವಾಸ್ಯೆ ತಿಥಿ ಸಮಯದಲ್ಲಿ ನಡೆಯಲಿದೆ.

ಮೌನಿ ಅಮವಾಸ್ಯೆ ತಿಥಿ ಸಮಯ ಬೆಳಗ್ಗೆ 2-.17ಕ್ಕೆ ಪ್ರಾರಂಭವಾಗಿ ಜನವರಿ 25ರ ಮುಂಜಾನೆ 3.11ಕ್ಕೆ ಅಂತ್ಯವಾಗಲಿದೆ. ಈ ಬಾರಿ ಅವಾಸ್ಯೆಯ ವಿಶೇಷತೆ ಎಂದರೆ 29 ವರ್ಷಗಳ ನಂತರ ಶನಿಯು ಮಕರ ರಾಶಿಯನ್ನು ಪ್ರವೇಶಿಸಲಿದ್ದಾನೆ.

ಪವಿತ್ರ ಸ್ನಾನ
ಮೌನಿ ಅಮವಾಸ್ಯೆಯಂದು ಪವಿತ್ರ ಸ್ನಾನ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಅದರಲ್ಲೂ ಸಂಗಮ ಸ್ನಾನಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಇನ್ನು ಕೆಲವರು ಈ ದಿನದಂದು ಮೌನವ್ರತ ಮಾಡುತ್ತಾರೆ. ಮೌನವಾಗಿದ್ದು ದೇವರ ಧ್ಯಾನ ಮಾಡಿದರೆ ಒಳ್ಳೆಯದಾಗುತ್ತದೆ ಎಂಬ ಧಾರ್ಮಿಕ ನಂಬಿಕೆ ಇದೆ.

ಮೌನಿ ಅಮವಾಸ್ಯೆಗೆ ಪೌರಾಣಿಕ ಮಹತ್ವ
ರಾಕ್ಷಸರು, ಗಾಂಧರ್ವರು ಸಮುದ್ರ ಮಂಥನ ಮಾಡುತ್ತಿದ್ದಾಗ ಅಮೃತದ ಒಂದೆರಡು ಹನಿ ಸಂಗಮದಲ್ಲಿನ ನೀರಿಗೆ ಬೀಳುತ್ತದೆ, ಆದ್ದರಿಂದ ಆ ನೀರು ಅನೇಕ ರೋಗಗಳನ್ನು ನಿವಾರಿಸುವ ಶಕ್ತಿ ಪಡೆಯುತ್ತದೆ. ಇದರಿಂದಾಗಿ ಸಂಗಮ ಸ್ನಾನ ಮಾಡಿದರೆ ಒಳ್ಳೆಯದು ಎಂಬ ಕತೆಯಿದೆ. ಉಳಿದ ಸಮಯದಲ್ಲಿ ಮಾಡುವುದಕ್ಕಿಂತ ಅಮವಾಸ್ಯೆಯಂದು ಸಂಗಮ ಸ್ನಾನ ಮಾಡಿದರೆ ಫಲ ಮೂರು ಪಟ್ಟು ಹೆಚ್ಚು ಎಂದು ಹೇಳಲಾಗುತ್ತದೆ. ಈ ದಿನ ಗಂಗೆ ನೀರು ಅಮೃತವಾಗಿರುತ್ತದೆ, ಆ ಪುಣ್ಯ ನದಿಯಲ್ಲಿ ಸ್ನಾನ ಮಾಡುವುದರಿಂದ ಮಾನಸಿಕ ಹಗೂ ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ, ಮೋಕ್ಷ ಸಿಗುತ್ತದೆ ಎಂಬ ನಂಬಿಕೆ ಇದೆ.

ಮೌನ ವ್ರತದ ಫಲ
ಮನುಷ್ಯನ ಮನಸ್ಸು ತುಂಬಾ ಚಂಚಲ. ಆದರೆ ಮೌನವಾಗಿ ಧ್ಯಾನ ಮಾಡುವುದರಿಂದ ಮನಸ್ಸಿನ ಏಕಾಗ್ರತೆ ಹೆಚ್ಚುವುದು, ಮನಸ್ಸನ್ನು ನಿಯಂತ್ರಿಸುವ ಶಕ್ತಿ ದೊರೆಯುತ್ತದೆ. ಈ ದಿನ ಇಷ್ಟ ದೈವವನ್ನು ಮನಸ್ಸಿನಲ್ಲಿ ಧ್ಯಾನಿಸುತ್ತಾ ಕಳೆಯಬೇಕು. ಇದರಿಂದ ಆಲೋಚನೆಗಳು ಶುದ್ಧವಾಗುತ್ತದೆ, ಮನಸ್ಸು ನಿರಾಳವಾಗುತ್ತದೆ. ಮನಸ್ಸು ಶುದ್ಧವಾಗಿದ್ದರೆ ಆರೋಗ್ಯ ಕೂಡ ಹೆಚ್ಚುತ್ತದೆ.
ಮೌನ ವ್ರತದ ಆಚರಣೆ:
ಮುಂಜಾನೆ ಎದ್ದು ಪವಿತ್ರ ಸ್ನಾನ ಮಾಡಿ, ಪೂರ್ವಜರನ್ನು ಮನಸ್ಸಿನಲ್ಲಿ ನೆನೆದು ನಂತರ ದೇವರ ಧ್ಯಾನ ಮಾಡಬೇಕು. ಇದರಿಂದ ನಕಾರಾತ್ಮಕ ಶಕ್ತಿ ಕಡಿಮೆಯಾಗಿ ಧನಾತ್ಮಕ ಶಕ್ತಿ ಹೆಚ್ಚುವುದು.

ಧಾನ-ಧರ್ಮ
ಈ ದಿನ ಅನಾಥರಿಗೆ, ಬಡವರಿಗೆ ದಾನ ಮಾಡಬೇಕು. ಹಿರಿಯರ ಮನಸ್ಸು ನೋಯಿಸಬಾರದು. ಮೌನಿ ಅಮಾವಾಸ್ಯೆಯಂದು ಕಂಬಳಿ, ಹತ್ತಿ ವಸ್ತ್ರಗಳನ್ನು ದಾನ ಮಾಡಿದರೆ ಹೆಚ್ಚು ಫಲ. ಅದರಲ್ಲೂ ಅಶಕ್ತರಿಗೆ, ಅಗತ್ಯ ಇರುವವರಿಗೆ ವಸ್ತ್ರ ದಾನ ಮಾಡಿದರೆ ಶ್ರೇಷ್ಠ. ಈ ಮೌನಿ ಅಮಾವಾಸ್ಯೆಯಂದು ಮಹಾವಿಷ್ಣು- ಶಿವನ ಆರಾಧನೆಗೆ ಪ್ರಾಮುಖ್ಯ ಇದೆ. ಕಳಶ ಸ್ವರೂಪದಲ್ಲಿ ಆರಾಧನೆ ಮಾಡಿದರೂ ಸರಿ, ಬೇರೆ ಯಾವುದೇ ರೂಪದಲ್ಲಾದರೂ ಸರಿ ಇಬ್ಬರ ಆರಾಧನೆ ಮಾಡಬೇಕು.

ಏನು ಮಾಡಬಾರದು?
* ಈ ದಿನ ತಡವಾಗಿ ಏಳಬಾರದು
* ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳಬಾರದು
* ನಿರ್ಗತಿಕರನ್ನು ನೋಯಿಸಬಾರದು
* ಹಿರಿಯರಿಗೆ ಅಗೌರವ ತೋರಬಾರದು
* ದೇವಾಲಯ ಹೊರತು ಪಡಿಸಿ ಉಳಿದ ಕಡೆ ಇರುವ ಆಲದ ಮರ, ಮದರಂಗಿ ಗಿಡ ಮತ್ತು ಅಶ್ವತ್ಥ ಮರದ ಕೆಳಗಡೆ ನಿಲ್ಲಬಾರದು, ಈ ಸಮಯದಲ್ಲಿ ಆ ಮರಗಳ ಬಳಿ ನಕಾರಾತ್ಮಕ ಶಕ್ತಿ ಹೆಚ್ಚಿರುತ್ತದೆ ಎನ್ನಲಾಗುತ್ತದೆ.



Click it and Unblock the Notifications











