Just In
- 9 min ago ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- 1 hr ago ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- 3 hrs ago ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- 3 hrs ago ಶನಿಯ ನಕ್ಷತ್ರ ಬದಲಾವಣೆ: ಅಕ್ಟೋಬವರೆಗೆ ಈ 3 ರಾಶಿಯವರು ಇದರ ಉತ್ತಮ ಫಲ ಪಡೆಯುವಿರಿ
Don't Miss
- Movies ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
- News India Unemployment: ದೇಶದಲ್ಲಿ ಯುವ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ: ಬೆಚ್ಚಿಬೀಳಿಸುವ ವರದಿ ಬಹಿರಂಗ!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈದ್ ಮಿಲಾದ್ ಆಚರಣೆ: ದಿನಾಂಕ, ಐತಿಹಾಸಿಕ ಹಿನ್ನೆಲೆ, ಮಹತ್ವ
ಈದ್ ಮಿಲಾದ್ ದಿನದಂದು ಮಸೀದಿಗಳಲ್ಲಿ ವಿಶೇಷ ಪ್ರವಚನಗಳನ್ನು ಏರ್ಪಡಿಸಿ ಪ್ರವಾದಿಯವರ ಬಗ್ಗೆ ಮಾಹಿತಿಯನ್ನೂ, ಅವನ್ನು ಆಚರಿಸುವ ಬಗೆಯನ್ನೂ, ಧರ್ಮಪಾಲನೆಯ ಮಹತ್ವ ಮತ್ತು ಅದನ್ನು ಪಾಲಿಸುವ ಬಗೆಯನ್ನೂ ವಿವರಿಸಲಾಗುತ್ತದೆ....
ಇಸ್ಲಾಮಿಕ್ ತಿಂಗಳಾದ ರವಿ ಉಲ್ ಅವ್ವಲ್ನಲ್ಲಿ ಬರುವ ಈದ್ ಮಿಲಾದ್ ಹಬ್ಬವನ್ನು ಪ್ರಾಫೆಟ್ ಮೊಹಮ್ಮದನ (ಪ್ರವಾದಿಯವರ) ಜನುಮ ದಿನವಾಗಿ ಆಚರಿಸಲಾಗುತ್ತದೆ. ಈದ್ ಉಲ್ ಫಿತ್ರ್ ಮತ್ತು ಈದ್ ಉಲ್ ಅಧಾ ಮುಸ್ಲಿಮರಿಗೆ ಪವಿತ್ರವಾದ ಪ್ರಮುಖ ಎರಡು ಹಬ್ಬಗಳಾಗಿದ್ದು ಇದರ ನಂತರ ಪ್ರಮುಖ ದಿನವನ್ನಾಗಿ ಮಿಲಾದುನ್ನಬೀ ಅಥವಾ ಈದ್ ಮಿಲಾದ್ ಆಗಿದೆ.
ಶಿಯಾ ಮತ್ತು ಸುನ್ನಿ ಮುಸ್ಲಿಮರು ಈ ಹಬ್ಬವನ್ನು ತಮ್ಮದೇ ರೀತಿಯಲ್ಲಿ ಬೇರೆ ಬೇರೆ ದಿನಗಳಲ್ಲಿ ಆಚರಿಸುತ್ತಾರೆ. ಈ ವರ್ಷ ಅಕ್ಟೋಬರ್ 18, 19ರಂದು ಈ ಹಬ್ಬವನ್ನು ಆಚರಿಸಲಾಗುತ್ತಿದೆ.
ಇದಕ್ಕೆ ಬದಲಾಗಿ ಅವರ ಪ್ರವಚನಗಳನ್ನು ಒರೆಹಚ್ಚುವ, ಅವರ ಜೀವನ ಸಂದೇಶಗಳ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ನೀಡುವ ಕಾರ್ಯಾಗಾರಗಳನ್ನು ಈ ದಿನ ಹಮ್ಮಿಕೊಳ್ಳಲಾಗುತ್ತದೆ. ಧಾರ್ಮಿಕ ಶಿಕ್ಷಣ ಪಡೆಯುತ್ತಿರುವ ಮಕ್ಕಳ ಪರೀಕ್ಷೆಯ ಫಲಿತಾಂಶ ಪ್ರಕಟಣೆ, ಉತ್ತಮ ಸಾಧನೆ ತೋರಿದ ಮಕ್ಕಳಿಗೆ ಪ್ರೋತ್ಸಾಹ ಮೊದಲಾದ ಕಾರ್ಯಕ್ರಮಗಳು ನಡೆಯುತ್ತವೆ.
ಈ ದಿನದಂದು ಮಸೀದಿಗಳಲ್ಲಿ ವಿಶೇಷ ಪ್ರವಚನಗಳನ್ನು ಏರ್ಪಡಿಸಿ ಪ್ರವಾದಿಯವರ ಬಗ್ಗೆ ಮಾಹಿತಿಯನ್ನೂ, ಅವನ್ನು ಆಚರಿಸುವ ಬಗೆಯನ್ನೂ, ಧರ್ಮಪಾಲನೆಯ ಮಹತ್ವ ಮತ್ತು ಅದನ್ನು ಪಾಲಿಸುವ ಬಗೆಯನ್ನೂ ವಿಷದಪಡಿಸಲಾಗುತ್ತದೆ. ಧರ್ಮಪಾಲನೆಯಲ್ಲಿ ಎಲ್ಲೆಲ್ಲಿ ನಾವು ತಪ್ಪು ಮಾಡುತ್ತಿದ್ದೇವೆ, ಇದನ್ನು ಸರಿಪಡಿಸಿಕೊಳ್ಳುವ ಬಗೆ ಹೇಗೆ? ಸಮಾಜದಲ್ಲಿ ಸಹಬಾಳ್ವೆ, ಸೌಹಾರ್ದತೆಗೆ ಪ್ರವಾದಿಯಯವರು ನೀಡಿದ ಸಂದೇಶ ಏನು ಮೊದಲಾದ ವಿಷಯಗಳ ಮೇಲೆ ಚರ್ಚೆ ನಡೆಯುತ್ತದೆ.
ಇದು ಹಾದಿ ತಪ್ಪುತ್ತಿರುವ ಸಮಾಜದ ಯೋಚನೆಗಳಿಗೆ ಕಡಿವಾಣ ಹಾಕಿ ಸಮಾಜದಲ್ಲಿ ಶಾಂತಿ ನೆಮ್ಮದಿ ಮತ್ತು ಸೌಹಾರ್ದತೆ ಮೂಡಲು ನೆರವಾಗುತ್ತದೆ. ಊರಿನ ಜನರಿಗೆ ಊಟದ ವ್ಯವಸ್ಥೆಯೂ ಇದ್ದು ಉತ್ತಮ ಊಟವಿಲ್ಲದ ಬಡವರಿಗೆ ಸರಿಸಮಾನವಾದ ಆಹಾರ ದೊರೆಯುತ್ತದೆ. ಆಹಾರವಸ್ತು ಮತ್ತು ಇತರ ಬಳಕೆಯ ನಿತ್ಯವಸ್ತುಗಳನ್ನು ಅರ್ಹರಿಗೆ ಬಡಬಗ್ಗರಿಗೆ ದಾನ ಮಾಡಲಾಗುತ್ತದೆ.
ಆದ್ದರಿಂದ ಈದ್ ಮಿಲಾದ್ ಎಂಬುದು ಪ್ರವಾದಿಯವರ ಜನ್ಮದಿನ ಎಂಬ ಕೇವಲ ಸಾಂಕೇತಿಕ ರೂಪವೇ ಹೊರತು ನಿಜವಾಗಿ ಅವರ ಸಂದೇಶಗಳ ಪುನಸ್ಮರಣೆ ಮತ್ತು ಆಚರಣೆಯ ದ್ಯೋತಕವೇ ಆಗಿದೆ. ತಮ್ಮ ವಿಚಾರಗಳಿಂದ ಲಕ್ಷಾಂತರ ಜನರ ಹೃದಯದಲ್ಲಿರುವ ಪ್ರವಾದಿ ಮೊಹಮ್ಮದರ ವಿಚಾರಗಳನ್ನು ತಿರುವಿ ಹಾಕಲು ಈದ್ ಮಿಲಾದ್ ಒಂದು ಸುದಿನವಾಗಿ ಬಳಕೆಯಾಗುತ್ತದೆ.