Latest Updates
-
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು!
ಮೂರು ಕಡೆ ನೀರಿನಿಂದ ಸುತ್ತುವರೆದ ಮುರುಡೇಶ್ವರ: ನೋಡುಗರ ಮನಸೂರೆಗೊಳ್ಳುತ್ತೆ ಈ ತಾಣ
ಭಾರತದಲ್ಲಿ ನೋಡಲೇಬೇಕಾದ ಸ್ಥಳಗಳಲ್ಲಿಒಂದು ಕರ್ನಾಟಕದ ಮುರುಡೇಶ್ವರ. ಮುರುಡೇಶ್ವರ ನೋಡಲೆಂದೇ ಲಕ್ಷಾಂತರ ಜನರು ಭೇಟಿ ನೀಡುತ್ತಿದ್ದಾರೆ. ಸಮುದ್ರ ಅಲೆಗಳ ನರ್ತನ, ಅತ್ಯಂತ ಎತ್ತರವಾದ ರಾಜಗೋಪುರ, ವಿಶಾಲವಾದ ಶಿವನ ಪ್ರತಿಮೆ ಇವೆಲ್ಲಾ ನೋಡುಗರನ್ನು ಮೋಡಿ ಮಾಡುವಂತಿದೆ. ಇಂಥ ಸುಂದರ ತಾಣ ಈಗ ಮಳೆಯಿಂದಾಗಿ ಸಕತ್ ಟ್ರೆಂಡ್ನಲ್ಲಿದೆ. ಮೂರು ಕಡೆ ನೀರು ಸುತ್ತುವರೆದಿರುವ ದೃಶ್ಯದಿಂದಾಗಿ ಈ ತಾಣ ಮತ್ತಷ್ಟು ಮನಮೋಹಕವಾಗಿ ಕಾಣತ್ತಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಸುಂದರ ತಾಣ
ಮುರುಡೇಶ್ವರವು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿರುವ ಪ್ರಸಿದ್ಧವಾದ ಧಾರ್ಮಿಕ ಸ್ಥಳವಾಗಿದೆ. ಬೆಂಗಳೂರಿನಿಂದ 515ಕಿ.ಮೀ ದೂರದಲ್ಲಿದೆ. ಇಲ್ಲಿ ರೈಲು ನಿಲ್ದಾಣ ಕೂಡ ಇದ್ದು ಮಂಗಳೂರು-ಮುಂಬೈ ಕೊಂಕಣ ರೈಲು ಮಾರ್ಗದಲ್ಲಿ ನಿಲುಗಡೆ ಹೊಂದಿದೆ.
ಮುರುಡೇಶ್ವರ ನೋಡಲು ಹೋಗುವವರಿಗೆ ಅದರ ಸುತ್ತ ಮುತ್ತಲೇ ಇರುವ ಶಿರಸಿ, ಗೋಕರ್ಣ, ಕೊಲ್ಲೂರಿಗೆ ಭೇಟಿ ನೀಡಬಹುದಾಗಿದೆ.

ಗಮನ ಸೆಳೆಯುವ ಅತಿ ಎತ್ತರದ ಭವ್ಯ ಗೋಪುರ
ಮುರುಡೇಶ್ವರ ಮತ್ತೊಂದು ವಿಶೇಷವೆಂದರೆ ಕುಂದುಕ ಬೆಟ್ಟದ ಮೇಲಿರುವ ಶಿವ ದೇವಾಲಯದ ಅತಿ ಎತ್ತರದ ರಾಜ ಗೋಪುರ. ಈ ಗೋಪುರ 237.5 ಅಡಿ ಎತ್ತರ ಹೊಂದಿದೆ. ನೀವು ಮುರುಡೇಶ್ವರ ಪ್ರವೇಶಿಸುವ ಮುಂಚೆಯೇ ಈ ಗೋಪುರ ಕಣ್ಣಿಗೆ ಬಿದ್ದು ನಮ್ಮಲ್ಲಿ ಕುತೂಹಲ ಕೆರಳಿಸುವುದು.

ಧ್ಯಾನ ಮುದ್ರೆಯಲ್ಲಿರುವ ಶಿವನ ಪ್ರತಿಮೆ
ಮುರುಡೇಶ್ವರದಲ್ಲಿ ಗೋಪುರದ ಮೇಲೆ ತೆರಳಿದರೆ ಅಲ್ಲಿ ಧ್ಯಾನ ಮುದ್ರೆಯಲ್ಲಿರುವ ಶಿವನ ಸುಂದರ ಪ್ರತಿಮೆ ದೇಶದಲ್ಲಿಯೇ ಅತಿ ಎತ್ತರದ ಶಿವನ ಪ್ರತಿಮೆಯಾಗಿದೆ. ಈ ಶಿವ ಪ್ರತಿಮೆ 123 ಅಡಿಗಳಷ್ಟು ಎತ್ತರವನ್ನು ಹೊಂದಿದೆ.

ಮನಸೂರೆಗೊಳ್ಳುವ ಕಡಲ ತೀರ
ಇಲ್ಲಿನ ಧಾರ್ಮಿಕ ಕ್ಷೇತ್ರದ ಜೊತೆಗೆ ಪ್ರವಾಸಿಗರನ್ನು ಸೆಳೆಯುವ ಮತ್ತೊಂದು ಅಂಶವೆಂದರೆ ಅಲ್ಲಿಯ ಸುಂದರ ಕಡಲ ತೀರ. ಅಲೆಗಳು ಬಂದಪ್ಪಳಿಸುವ ಆ ಸುಂದರ ದೃಶ್ಯ ವೀಕ್ಷಕರ ಮನದಲ್ಲಿರುವ ಚಿಂತೆಯೆಂಬ ಅಲೆಗಳನ್ನು ಮರೆಸಿ, ಮನಸ್ಸಿನ ನವಚೇತನ ತುಂಬುವುದು, ಈ ಪ್ರದೇಶಕ್ಕೆ ಬೇಟಿ ನೀಡಿ ಮರಳುವಾಗ ಒಂದು ಬಗೆಯ ನವೋಲ್ಲಾಸ ನಮ್ಮಲ್ಲಿ ತುಂಬುವುದು, ಅಷ್ಟೊಂದು ಸುಂದರವಾಗಿದೆ ಈ ತಾಣ.
ಇದೀಗ ಮಳೆಯ ಆರ್ಭಟ ಚೋರಾಗಿದ್ದು ಮೂರು ದಿಕ್ಕಿನಿಂದಲೂ ನೀರು ಸುತ್ತುವರೆದಿರುವ ಮುರುಡೇಶ್ವರ ಮತ್ತಷ್ಟು ಮನ ಮೋಹಕವಾಗಿದೆ.

ಮುರುಡೇಶ್ವರ ಶಿವನ ದೇವಾಲಯ ಪೂಜೆಯ ಸಮಯ
ಇಲ್ಲಿಯ ದೇವಾಲಯವು ಮುಂಜಾನೆ 3 ಗಂಟೆಗೆ ಓಪನ್ ಆಗುತ್ತೆ. ಮಧ್ಯಾಹ್ನ 1 ಗಂಟೆಯವರೆಗೆ ಪೂಜೆ ಇರುತ್ತದೆ. ನಂತರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ದೇವಾಲಯದ ಬಾಗಿಲು ತೆರೆದಿರುತ್ತದೆ.



Click it and Unblock the Notifications