Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ನಾಗರ ಪಂಚಮಿ 2021: ಈ ದಿನ ಹುತ್ತಕ್ಕೆ ಹಾಲೆರೆಯುವುದು ಏಕೆ?
ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿ. ಆಟಿ ಅಮವಾಸ್ಯೆಯಾಗಿ ಐದನೇ ದಿನಕ್ಕೆ ಈ ಹಬ್ಬ ಆಚರಿಸಲಾಗುವುದು. ನಾಡಿನ ದೊಡ್ಡ ಹಬ್ಬವೆಂದೇ ಕರೆಯಲ್ಪಡುವ ನಾಗರ ಪಂಚಮಿ ಈ ವರ್ಷದಲ್ಲಿ ಬರುವ ಉಳಿದೆಲ್ಲಾ ಹಬ್ಬಗಳಿಗೆ ಮುನ್ನುಡಿಯಾಗಿ ಬರುವ ಹಬ್ಬವಾಗಿದೆ. ಈ ಹಬ್ಬದಂದು ಹುತ್ತಕ್ಕೆ ಹಾಲೆರೆಯುವ ಸಂಪ್ರದಾಯವಿದೆ.
ಜನರು ಹುತ್ತಕ್ಕೆ ಹಾಲೆರೆಯುವುದರ ಹಿಂದಿರುವ ಧಾರ್ಮಿಕ ಮಹತ್ವವೇನು, ಪೌರಾಣಿಕ ಕತೆಗಳು ಏನು ಹೇಳುತ್ತವೆ ಎಂದು ನೋಡೋಣ ಬನ್ನಿ:

ಶ್ರಾವಣ ಮಾಸದ ಮೊದಲ ಹಬ್ಬ
ಶ್ರಾವಣ ಮಾಸವೆಂದರೆ ಅದು ಸಂಪೂರ್ಣವಾಗಿ ಶಿವನಿಗೆ ಮೀಸಲಾಗಿರುವ ಮಾಸ. ಶಿವನ ಕೊರಳಿನಲ್ಲಿ ನಾಗ ಇರುತ್ತಾನೆ. ನಾಗರ ಪಂಚಮಿಯಂದು ನಾಗನಿಗೆ ಪೂಜೆಯನ್ನು ಸಲ್ಲಿಸಿ ಆಶೀರ್ವದಿಸುವಂತೆ ಪ್ರಾರ್ಥಿಸಲಾಗುವುದು. ಇನ್ನು ನಾವು ಆಚರಿಸುವ ಎಲ್ಲಾ ಹಬ್ಬಗಳು ರೈತನ ಜೀವನದೊಂದಿಗೆ ಸಂಬಂಧ ಹೊಂದಿದೆ. ಹಾವುಗಳು ರೈತನ ಸ್ನೇಹಿಯಾಗಿವೆ. ಹೊಲದಲ್ಲಿರುವ ಹುಳ-ಹುಪ್ಪಟೆಗಳನ್ನು ಹಾವುಗಳು ತಿನ್ನುತ್ತವೆ, ಇದರಿಂದ ಬೆಳೆ ನಾಶವಾಗುವುದನ್ನು ತಡೆಗಟ್ಟುತ್ತೆ. ನಾಗರ ಪಂಚಮಿಯಲ್ಲಿ ಅವುಗಳನ್ನು ಅವುಗಳನ್ನು ಪೂಜಿಸಿ ಕೃತಜ್ಞತೆ ಸಲ್ಲಿಸುವ ಒಂದು ವಿಧಾನ ಕೂಡ ಆಗಿದೆ.

ಪೌರಾಣಿಕ ಕತೆ
ನಾಗರ ಪಂಚಮಿಯಲ್ಲಿ ಇರುವ ಒಂದು ಪ್ರಮುಖವಾದ ಸಂಪ್ರದಾಯವೆಂದರೆ ಹುತ್ತಕ್ಕೆ ಹಾಲೆರೆಯುವುದು. ಹುತ್ತಕ್ಕೆ ಹಾಲೆರೆಯುವುದರ ಹಿಂದೆ ಪೌರಾಣಿಕ ಕತೆಗಳಿವೆ.
ಒಂದು ಕತೆಯಲ್ಲಿ ಶ್ರೀಕೃಷ್ಣನು ನಾಗ ಕಾಳಿಂಗನನ್ನು ಸೋಲಿಸಿದ ಬಳಿಕ ನಿನಗೆ ನಾಗರ ಪಂಚಮಿಗೆ ಜನರು ಹಾಲೆರೆದು ಪೂಜಿಸುವಂತಾಗಲಿ ಎಂದು ಆಶೀರ್ವದಿಸುತ್ತಾನೆ. ಈ ದಿನ ಯಾರು ಹಾವಿಗೆ ಹಾಲೆರೆಯುತ್ತಾರೋ ಅವರಿಗೆ ಪಾಪಗಳಿಂದ ಮೋಕ್ಷ ಸಿಗುವುದು ಎಂದು ಹೇಳಲಾಗಿದೆ.

ಮತ್ತೊಂದು ಪೌರಾಣಿಕ ಕತೆಯ ಪ್ರಕಾರ
ಮತ್ತೊಂದು ಕತೆಯ ಪ್ರಕಾರ ದೇವತೆಗಳು-ದಾನವರು ಸಮುದ್ರ ಮಂಥನ ಮಾಡುತ್ತಿರುವಾಗ ಕ್ಷೀರ ಸಾಗರದಲ್ಲಿ ಹಾಲಾಹಲ ವಿಷ ಉತ್ಪತ್ತಿಯಾಗಿತ್ತದೆ, ಆ ವಿಷ ಜಗತ್ತನ್ನೇ ಸುಡಲಾರಂಭಿಸಿದಾಗ ಎಲ್ಲರೂ ಶಿವನ ಮೊರೆ ಹೋಗುತ್ತಾರೆ, ಆಗ ಶಿವ ಆ ವಿಷವನ್ನು ಗಟ-ಗಟನೆ ಕುಡಿಯುತ್ತಾನೆ, ಅದರಲ್ಲಿ ಸ್ವಲ್ಪ ಹನಿ ಭೂ ಲೋಕಕ್ಕೆ ಬೀಳುತ್ತೆ, ಅದನ್ನು ಹಾವುಗಳು ಕುಡಿಯುತ್ತವೆ. ಹಾಲಾಹಲ ಕುಡಿದ ಶಿವನ ದೇಹದ ಉರಿ ಕಡಿಮೆ ಮಾಡಲು ಇಂದ್ರನು ಮಳೆ ಸರಿಸುತ್ತಾನೆ, ದೇವತೆಗಳು ಅವನಿಗೆ ರುದ್ರಾಭಿಷೇಕ ಮಾಡುತ್ತಾರೆ. ಭೂಮಿಯಲ್ಲಿರುವ ಹಾವುಗಳಿಗೆ ಹಾಲೆರೆಯಲಾಗುವುದು, ಆ ಶುಭ ದಿನವೇ ನಾಗರ ಪಂಚಮಿ ಎಂದು ಹೇಳಲಾಗುವುದು.

ಜನರು ಹುತ್ತಕ್ಕೆ ಹಾಲೆರೆಯುವುದರ ಹಿಂದಿರುವ ಧಾರ್ಮಿಕ ಮಹತ್ವ
* ನಾಗರ ಪಂಚಮಿಗೆ ಹುತ್ತಕ್ಕೆ ಹಾಲೆರೆದರೆ ನಾಗ ದೇವತೆಯು ಕುಟುಂಬವನ್ನು ದುಷ್ಟ ಶಕ್ತಿಗಳಿಂದ ರಕ್ಷಿಸುತ್ತದೆ ಎಂಬ ನಂಬಿಕೆಯಿದೆ.
* ರಾಹು ಹಾಗೂ ಕೇತುವಿನ ಸ್ಥಾನದಿಂದ ಉಂಟಾದ ಕಾಳಸರ್ಪ ದೋಷ ನಿವಾರಣೆಗಾಗಿ ನಾಗರ ಪಂಚಮಿಯೆಂದು ಹುತ್ತಕ್ಕೆ ಹಾಲೆರೆಯುತ್ತಾರೆ.
* ಶಿವ ಹಾವನ್ನು ಕೊರಳಿಗೆ ಸುತ್ತಿದರೆ, ವಿಷ್ಣು ಹಾವಿನ ಮೇಲೆಯೇ ಮಲಗುತ್ತಾನೆ, ಇನ್ನು ಶ್ರೀ ಕೃಷ್ಣ ಮಗುವಾಗಿದ್ದಾಗ ಹಾವು ಎಡೆ ಬಿಡಿಸಿ ಮಗುವಿಗೆ ಮಳೆಯಿಂದ ರಕ್ಷಣೆ ನೀಡಿದ ಕತೆಯಿದೆ.. ಹೀಗೆ ನಮ್ಮ ಎಲ್ಲಾ ಪೌರಾಣಿಕ ಕತೆಯಲ್ಲಿ ಹಾವು ದೇವತೆಗಳ ಸಹಾಯಕನಾಗಿದೆ.
ನಾಗನಿಗೆ ಹಾಲೆರೆಯುವುದರಿಂದ ನಾಗ ದೇವತೆಯ ಆಶೀರ್ವಾದ ನಮ್ಮ ಮೇಲಿರುತ್ತದೆ, ಇದರಿಂದ ಬದುಕಿನಲ್ಲಿ ಸಂತೋಷ, ಸಡಗರ ತುಂಬಿರುತ್ತದೆ ಎಂಬ ನಂಬಿಕೆಯಿಂದ ಜನರು ನಾಗರ ಪಂಚಮಿ ಹಬ್ಬದಂದು ಹುತ್ತಕ್ಕೆ ಹಾಲೆರೆಯುತ್ತಾರೆ.



Click it and Unblock the Notifications