Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ನಾಗರ ಪಂಚಮಿ 2021: ಈ ದಿನ ಹುತ್ತಕ್ಕೆ ಹಾಲೆರೆಯುವುದು ಏಕೆ?
ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿ. ಆಟಿ ಅಮವಾಸ್ಯೆಯಾಗಿ ಐದನೇ ದಿನಕ್ಕೆ ಈ ಹಬ್ಬ ಆಚರಿಸಲಾಗುವುದು. ನಾಡಿನ ದೊಡ್ಡ ಹಬ್ಬವೆಂದೇ ಕರೆಯಲ್ಪಡುವ ನಾಗರ ಪಂಚಮಿ ಈ ವರ್ಷದಲ್ಲಿ ಬರುವ ಉಳಿದೆಲ್ಲಾ ಹಬ್ಬಗಳಿಗೆ ಮುನ್ನುಡಿಯಾಗಿ ಬರುವ ಹಬ್ಬವಾಗಿದೆ. ಈ ಹಬ್ಬದಂದು ಹುತ್ತಕ್ಕೆ ಹಾಲೆರೆಯುವ ಸಂಪ್ರದಾಯವಿದೆ.
ಜನರು ಹುತ್ತಕ್ಕೆ ಹಾಲೆರೆಯುವುದರ ಹಿಂದಿರುವ ಧಾರ್ಮಿಕ ಮಹತ್ವವೇನು, ಪೌರಾಣಿಕ ಕತೆಗಳು ಏನು ಹೇಳುತ್ತವೆ ಎಂದು ನೋಡೋಣ ಬನ್ನಿ:

ಶ್ರಾವಣ ಮಾಸದ ಮೊದಲ ಹಬ್ಬ
ಶ್ರಾವಣ ಮಾಸವೆಂದರೆ ಅದು ಸಂಪೂರ್ಣವಾಗಿ ಶಿವನಿಗೆ ಮೀಸಲಾಗಿರುವ ಮಾಸ. ಶಿವನ ಕೊರಳಿನಲ್ಲಿ ನಾಗ ಇರುತ್ತಾನೆ. ನಾಗರ ಪಂಚಮಿಯಂದು ನಾಗನಿಗೆ ಪೂಜೆಯನ್ನು ಸಲ್ಲಿಸಿ ಆಶೀರ್ವದಿಸುವಂತೆ ಪ್ರಾರ್ಥಿಸಲಾಗುವುದು. ಇನ್ನು ನಾವು ಆಚರಿಸುವ ಎಲ್ಲಾ ಹಬ್ಬಗಳು ರೈತನ ಜೀವನದೊಂದಿಗೆ ಸಂಬಂಧ ಹೊಂದಿದೆ. ಹಾವುಗಳು ರೈತನ ಸ್ನೇಹಿಯಾಗಿವೆ. ಹೊಲದಲ್ಲಿರುವ ಹುಳ-ಹುಪ್ಪಟೆಗಳನ್ನು ಹಾವುಗಳು ತಿನ್ನುತ್ತವೆ, ಇದರಿಂದ ಬೆಳೆ ನಾಶವಾಗುವುದನ್ನು ತಡೆಗಟ್ಟುತ್ತೆ. ನಾಗರ ಪಂಚಮಿಯಲ್ಲಿ ಅವುಗಳನ್ನು ಅವುಗಳನ್ನು ಪೂಜಿಸಿ ಕೃತಜ್ಞತೆ ಸಲ್ಲಿಸುವ ಒಂದು ವಿಧಾನ ಕೂಡ ಆಗಿದೆ.

ಪೌರಾಣಿಕ ಕತೆ
ನಾಗರ ಪಂಚಮಿಯಲ್ಲಿ ಇರುವ ಒಂದು ಪ್ರಮುಖವಾದ ಸಂಪ್ರದಾಯವೆಂದರೆ ಹುತ್ತಕ್ಕೆ ಹಾಲೆರೆಯುವುದು. ಹುತ್ತಕ್ಕೆ ಹಾಲೆರೆಯುವುದರ ಹಿಂದೆ ಪೌರಾಣಿಕ ಕತೆಗಳಿವೆ.
ಒಂದು ಕತೆಯಲ್ಲಿ ಶ್ರೀಕೃಷ್ಣನು ನಾಗ ಕಾಳಿಂಗನನ್ನು ಸೋಲಿಸಿದ ಬಳಿಕ ನಿನಗೆ ನಾಗರ ಪಂಚಮಿಗೆ ಜನರು ಹಾಲೆರೆದು ಪೂಜಿಸುವಂತಾಗಲಿ ಎಂದು ಆಶೀರ್ವದಿಸುತ್ತಾನೆ. ಈ ದಿನ ಯಾರು ಹಾವಿಗೆ ಹಾಲೆರೆಯುತ್ತಾರೋ ಅವರಿಗೆ ಪಾಪಗಳಿಂದ ಮೋಕ್ಷ ಸಿಗುವುದು ಎಂದು ಹೇಳಲಾಗಿದೆ.

ಮತ್ತೊಂದು ಪೌರಾಣಿಕ ಕತೆಯ ಪ್ರಕಾರ
ಮತ್ತೊಂದು ಕತೆಯ ಪ್ರಕಾರ ದೇವತೆಗಳು-ದಾನವರು ಸಮುದ್ರ ಮಂಥನ ಮಾಡುತ್ತಿರುವಾಗ ಕ್ಷೀರ ಸಾಗರದಲ್ಲಿ ಹಾಲಾಹಲ ವಿಷ ಉತ್ಪತ್ತಿಯಾಗಿತ್ತದೆ, ಆ ವಿಷ ಜಗತ್ತನ್ನೇ ಸುಡಲಾರಂಭಿಸಿದಾಗ ಎಲ್ಲರೂ ಶಿವನ ಮೊರೆ ಹೋಗುತ್ತಾರೆ, ಆಗ ಶಿವ ಆ ವಿಷವನ್ನು ಗಟ-ಗಟನೆ ಕುಡಿಯುತ್ತಾನೆ, ಅದರಲ್ಲಿ ಸ್ವಲ್ಪ ಹನಿ ಭೂ ಲೋಕಕ್ಕೆ ಬೀಳುತ್ತೆ, ಅದನ್ನು ಹಾವುಗಳು ಕುಡಿಯುತ್ತವೆ. ಹಾಲಾಹಲ ಕುಡಿದ ಶಿವನ ದೇಹದ ಉರಿ ಕಡಿಮೆ ಮಾಡಲು ಇಂದ್ರನು ಮಳೆ ಸರಿಸುತ್ತಾನೆ, ದೇವತೆಗಳು ಅವನಿಗೆ ರುದ್ರಾಭಿಷೇಕ ಮಾಡುತ್ತಾರೆ. ಭೂಮಿಯಲ್ಲಿರುವ ಹಾವುಗಳಿಗೆ ಹಾಲೆರೆಯಲಾಗುವುದು, ಆ ಶುಭ ದಿನವೇ ನಾಗರ ಪಂಚಮಿ ಎಂದು ಹೇಳಲಾಗುವುದು.

ಜನರು ಹುತ್ತಕ್ಕೆ ಹಾಲೆರೆಯುವುದರ ಹಿಂದಿರುವ ಧಾರ್ಮಿಕ ಮಹತ್ವ
* ನಾಗರ ಪಂಚಮಿಗೆ ಹುತ್ತಕ್ಕೆ ಹಾಲೆರೆದರೆ ನಾಗ ದೇವತೆಯು ಕುಟುಂಬವನ್ನು ದುಷ್ಟ ಶಕ್ತಿಗಳಿಂದ ರಕ್ಷಿಸುತ್ತದೆ ಎಂಬ ನಂಬಿಕೆಯಿದೆ.
* ರಾಹು ಹಾಗೂ ಕೇತುವಿನ ಸ್ಥಾನದಿಂದ ಉಂಟಾದ ಕಾಳಸರ್ಪ ದೋಷ ನಿವಾರಣೆಗಾಗಿ ನಾಗರ ಪಂಚಮಿಯೆಂದು ಹುತ್ತಕ್ಕೆ ಹಾಲೆರೆಯುತ್ತಾರೆ.
* ಶಿವ ಹಾವನ್ನು ಕೊರಳಿಗೆ ಸುತ್ತಿದರೆ, ವಿಷ್ಣು ಹಾವಿನ ಮೇಲೆಯೇ ಮಲಗುತ್ತಾನೆ, ಇನ್ನು ಶ್ರೀ ಕೃಷ್ಣ ಮಗುವಾಗಿದ್ದಾಗ ಹಾವು ಎಡೆ ಬಿಡಿಸಿ ಮಗುವಿಗೆ ಮಳೆಯಿಂದ ರಕ್ಷಣೆ ನೀಡಿದ ಕತೆಯಿದೆ.. ಹೀಗೆ ನಮ್ಮ ಎಲ್ಲಾ ಪೌರಾಣಿಕ ಕತೆಯಲ್ಲಿ ಹಾವು ದೇವತೆಗಳ ಸಹಾಯಕನಾಗಿದೆ.
ನಾಗನಿಗೆ ಹಾಲೆರೆಯುವುದರಿಂದ ನಾಗ ದೇವತೆಯ ಆಶೀರ್ವಾದ ನಮ್ಮ ಮೇಲಿರುತ್ತದೆ, ಇದರಿಂದ ಬದುಕಿನಲ್ಲಿ ಸಂತೋಷ, ಸಡಗರ ತುಂಬಿರುತ್ತದೆ ಎಂಬ ನಂಬಿಕೆಯಿಂದ ಜನರು ನಾಗರ ಪಂಚಮಿ ಹಬ್ಬದಂದು ಹುತ್ತಕ್ಕೆ ಹಾಲೆರೆಯುತ್ತಾರೆ.



Click it and Unblock the Notifications