Latest Updates
-
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ!
ನರಕ ಚರ್ತುದಶಿ 2020: ಅಭ್ಯಂಗ ಸ್ನಾನಕ್ಕೆ ಮುಹೂರ್ತ ಹಾಗೂ ಮಹತ್ವ
ದೀಪಾವಳಿ ಹಬ್ಬ ಎಂದರೆ 5 ದಿನ ಸಂಭ್ರಮವೋ ಸಂಭ್ರಮ, ದೀಪಾವಳಿಯ ಸಂಭ್ರಮ ಇಂದಿನಿಂದ ಶುರುವಾಗುತ್ತದೆ. ಇಂದು ದಂತೆರೇಸ್. ಈ ದಿನ ಚಿನ್ನ, ಬೆಳ್ಳಿ ಮುಂತಾದ ವಸ್ತುವನ್ನು ಕೊಳ್ಳುವುದು ಶುಭವೆಂದು ಹೇಳಲಾಗುತ್ತದೆ, ಇದಾದ ಬಳಿಕ ನಾಳೆ ನರಕ ಚರ್ತುದಶಿ.
ಕರ್ನಾಟಕದಲ್ಲಿ ನರಕ ಚರ್ತುದಶಿ ಹಾಗೂ ಲಕ್ಷ್ಮಿ ಪೂಜೆಯನ್ನು ಪ್ರಮುಖವಾಗಿ ಆಚರಿಸಲಾಗುತ್ತದೆ. ದೀಪಾವಳಿಯಲ್ಲಿ ಎಣ್ಣೆ ಸ್ನಾನ ತುಂಬನೇ ಪ್ರಾಮುಖ್ಯತೆಯನ್ನು ಪಡೆದಿದೆ. ಇದನ್ನು ಚರ್ತುದಶಿಯಂದು ಮಾಡಲಾಗುವುದು.

ಎಣ್ಣೆ ಸ್ನಾನದ ಹಿಂದಿರುವ ಸಾಂಪ್ರದಾಯಿಕ ಹಿನ್ನೆಲೆ
ಇದರ ಪೌರಾಣಿಕ ಹಿನ್ನೆಲೆ ಬಗ್ಗೆ ಹೇಳುವುದಾದರೆ ಕೃಷ್ಣ ಹಾಗೂ ಸತ್ಯಭಾಮೆ ನರಕಾಸುರನನ್ನು ಸಂಹಾರ ಮಾಡಿ ಯುದ್ಧಭೂಮಿಯಿ೦ದ ಮರಳಿ ಬ೦ದಾಗ, ಅವರ ಶರೀರಗಳೆಲ್ಲವೂ ರಕ್ತ ಹಾಗೂ ಧೂಳಿನಿ೦ದ ಹೊಲಸಾಗಿದ್ದು, ಅವುಗಳನ್ನು ಶ್ರೀಗ೦ಧದ ಮಾರ್ಜಕ ಹಾಗೂ ಪರಿಮಳಯುಕ್ತವಾದ ಎಣ್ಣೆಯನ್ನು ಬಳಸಿಕೊ೦ಡು ಸ್ವಚ್ಛಗೊಳಿಸಿಕೊಳ್ಳುವುದು ಅವಶ್ಯವಾಗಿತ್ತು.
ಮನಸ್ಸು ಮತ್ತು ದೇಹವನ್ನು ಉಲ್ಲಾಸಗೊಳಿಸಲು ಚರ್ತುದಶಿಯಂದು ಎಣ್ಣೆ ಸ್ನಾನ ಮಾಡಲಾಗುವುದು.

ಎಣ್ಣೆ ಸ್ನಾನದ ಹಿಂದಿರುವ ವೈಜ್ಞಾನಿಕ ಕಾರಣ
ದೀಪಾವಳಿ ನಂತರ ಕೊರೆಯುವ ಚಳಿ ಶುರುವಾಗುವುದು. ಈ ಚಳಿ ಎದುರಿಸಲು ದೇಹ ಹಾಗೂ ಚರ್ಮವನ್ನು ಚಳಿಯಿಂದ ಕಾಪಾಡಲು ಈ ಎಣ್ಣೆ ಸ್ನಾನ ಸಹಾಯ ಮಾಡುತ್ತೆ. ಅಲ್ಲದೆ ಈ ಸಮಯದಲ್ಲಿ ಭತ್ತದ ಕೊಯ್ಲು ಮುಗಿದಿರುತ್ತದೆ. ಇದರ ದಣಿವಾರಲು ಹಾಹೂ ದೇಹಕ್ಕೆ ಚೈತನ್ಯ ತುಂಬಲು ಇದು ಅನುಕೂಲಕರವಾಗಿದೆ.

ಅಭ್ಯಂಗ ಸ್ನಾನಕ್ಕೆ ಸಮಯ
ಅಭ್ಯಂಗ ಸ್ನಾನವನ್ನು ಮುಂಜಾನೆ ಮಾಡಬೇಕು.
ನರಕ ಚರ್ತುದಶಿ ಶನಿವಾರ ನವೆಂಬರ್ 14
ಅಭ್ಯಂಗ ಸ್ನಾನಕ್ಕೆ ಸಮಯ:ಬೆಳಗ್ಗೆ 05:22:59 ಪ್ರಾರಂಭವಾಗಿ 06:43:18
ಕಾಲಾವಧಿ: 1 ಗಂಟೆ 20 ನಿಮಿಷ

ಅಭ್ಯಂಗ ಸ್ನಾನಕ್ಕೆ ಪಾಲಿಸುವ ಕ್ರಮಗಳು
ತ್ರಯೋದಶಿ ಅಂದರೆ ಇಂದು ಬಚ್ಚಲು ಮನೆಯ ನೀರಿನ ಹಂಡೆಗೆ ರಂಗೋಲಿ ಬಿಡಿಸಿ ಹೂವಿನ ಹಾರ ಹಾಕಿ, ನೀರು ತುಂಬಿ ಜಾಗಟೆ ಬಡಿದು ಪೂಜೆ ಮಾಡಬೇಕು. ಚಿಕ್ಕ ಮಕ್ಕಳನ್ನು ಸಂಜೆಯೇ ಮಾಡಿಸುತ್ತಾರೆ. ಬೆಳಗ್ಗೆ ಮೈಗೆ ಎಣ್ಣೆ ಹಚ್ಚಿ ಬಿಸಿ- ಬಿಸಿ ನೀರು ಹಾಕಿ ಹೊಸ ಬಟ್ಟೆ ತೊಡುವ ಸಂಪ್ರದಾಯವಿದೆ.



Click it and Unblock the Notifications