Latest Updates
-
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ? -
ಬೇಕರಿ ಸ್ಟೈಲ್ ಕಚೋರಿ ರೆಸಿಪಿ.. ಮನೆಯಲ್ಲೇ ಈ 4 ಟೇಸ್ಟಿ ಕಚೋರಿ ಮಾಡಿ! ಹೊಸಬರಿಗೆ ಕೂಡ ಸುಲಭ -
ಆರ್ಥಿಕ ದೃಷ್ಟಿಯಿಂದ ಈ ದಿನ ಅನುಕೂಲಕರ! ಪ್ರಣಯ ಜೀವನವು ಸುಖಮಯ -
March 11 Horoscope: ಪ್ರಯಾಣಗಳಲ್ಲಿ ನಿಮಗೆ ಶುಭವಿಲ್ಲ! ಅಪಾಯದ ಮುನ್ಸೂಚನೆ! -
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ!
ನರಕ ಚರ್ತುದಶಿ 2020: ಅಭ್ಯಂಗ ಸ್ನಾನಕ್ಕೆ ಮುಹೂರ್ತ ಹಾಗೂ ಮಹತ್ವ
ದೀಪಾವಳಿ ಹಬ್ಬ ಎಂದರೆ 5 ದಿನ ಸಂಭ್ರಮವೋ ಸಂಭ್ರಮ, ದೀಪಾವಳಿಯ ಸಂಭ್ರಮ ಇಂದಿನಿಂದ ಶುರುವಾಗುತ್ತದೆ. ಇಂದು ದಂತೆರೇಸ್. ಈ ದಿನ ಚಿನ್ನ, ಬೆಳ್ಳಿ ಮುಂತಾದ ವಸ್ತುವನ್ನು ಕೊಳ್ಳುವುದು ಶುಭವೆಂದು ಹೇಳಲಾಗುತ್ತದೆ, ಇದಾದ ಬಳಿಕ ನಾಳೆ ನರಕ ಚರ್ತುದಶಿ.
ಕರ್ನಾಟಕದಲ್ಲಿ ನರಕ ಚರ್ತುದಶಿ ಹಾಗೂ ಲಕ್ಷ್ಮಿ ಪೂಜೆಯನ್ನು ಪ್ರಮುಖವಾಗಿ ಆಚರಿಸಲಾಗುತ್ತದೆ. ದೀಪಾವಳಿಯಲ್ಲಿ ಎಣ್ಣೆ ಸ್ನಾನ ತುಂಬನೇ ಪ್ರಾಮುಖ್ಯತೆಯನ್ನು ಪಡೆದಿದೆ. ಇದನ್ನು ಚರ್ತುದಶಿಯಂದು ಮಾಡಲಾಗುವುದು.

ಎಣ್ಣೆ ಸ್ನಾನದ ಹಿಂದಿರುವ ಸಾಂಪ್ರದಾಯಿಕ ಹಿನ್ನೆಲೆ
ಇದರ ಪೌರಾಣಿಕ ಹಿನ್ನೆಲೆ ಬಗ್ಗೆ ಹೇಳುವುದಾದರೆ ಕೃಷ್ಣ ಹಾಗೂ ಸತ್ಯಭಾಮೆ ನರಕಾಸುರನನ್ನು ಸಂಹಾರ ಮಾಡಿ ಯುದ್ಧಭೂಮಿಯಿ೦ದ ಮರಳಿ ಬ೦ದಾಗ, ಅವರ ಶರೀರಗಳೆಲ್ಲವೂ ರಕ್ತ ಹಾಗೂ ಧೂಳಿನಿ೦ದ ಹೊಲಸಾಗಿದ್ದು, ಅವುಗಳನ್ನು ಶ್ರೀಗ೦ಧದ ಮಾರ್ಜಕ ಹಾಗೂ ಪರಿಮಳಯುಕ್ತವಾದ ಎಣ್ಣೆಯನ್ನು ಬಳಸಿಕೊ೦ಡು ಸ್ವಚ್ಛಗೊಳಿಸಿಕೊಳ್ಳುವುದು ಅವಶ್ಯವಾಗಿತ್ತು.
ಮನಸ್ಸು ಮತ್ತು ದೇಹವನ್ನು ಉಲ್ಲಾಸಗೊಳಿಸಲು ಚರ್ತುದಶಿಯಂದು ಎಣ್ಣೆ ಸ್ನಾನ ಮಾಡಲಾಗುವುದು.

ಎಣ್ಣೆ ಸ್ನಾನದ ಹಿಂದಿರುವ ವೈಜ್ಞಾನಿಕ ಕಾರಣ
ದೀಪಾವಳಿ ನಂತರ ಕೊರೆಯುವ ಚಳಿ ಶುರುವಾಗುವುದು. ಈ ಚಳಿ ಎದುರಿಸಲು ದೇಹ ಹಾಗೂ ಚರ್ಮವನ್ನು ಚಳಿಯಿಂದ ಕಾಪಾಡಲು ಈ ಎಣ್ಣೆ ಸ್ನಾನ ಸಹಾಯ ಮಾಡುತ್ತೆ. ಅಲ್ಲದೆ ಈ ಸಮಯದಲ್ಲಿ ಭತ್ತದ ಕೊಯ್ಲು ಮುಗಿದಿರುತ್ತದೆ. ಇದರ ದಣಿವಾರಲು ಹಾಹೂ ದೇಹಕ್ಕೆ ಚೈತನ್ಯ ತುಂಬಲು ಇದು ಅನುಕೂಲಕರವಾಗಿದೆ.

ಅಭ್ಯಂಗ ಸ್ನಾನಕ್ಕೆ ಸಮಯ
ಅಭ್ಯಂಗ ಸ್ನಾನವನ್ನು ಮುಂಜಾನೆ ಮಾಡಬೇಕು.
ನರಕ ಚರ್ತುದಶಿ ಶನಿವಾರ ನವೆಂಬರ್ 14
ಅಭ್ಯಂಗ ಸ್ನಾನಕ್ಕೆ ಸಮಯ:ಬೆಳಗ್ಗೆ 05:22:59 ಪ್ರಾರಂಭವಾಗಿ 06:43:18
ಕಾಲಾವಧಿ: 1 ಗಂಟೆ 20 ನಿಮಿಷ

ಅಭ್ಯಂಗ ಸ್ನಾನಕ್ಕೆ ಪಾಲಿಸುವ ಕ್ರಮಗಳು
ತ್ರಯೋದಶಿ ಅಂದರೆ ಇಂದು ಬಚ್ಚಲು ಮನೆಯ ನೀರಿನ ಹಂಡೆಗೆ ರಂಗೋಲಿ ಬಿಡಿಸಿ ಹೂವಿನ ಹಾರ ಹಾಕಿ, ನೀರು ತುಂಬಿ ಜಾಗಟೆ ಬಡಿದು ಪೂಜೆ ಮಾಡಬೇಕು. ಚಿಕ್ಕ ಮಕ್ಕಳನ್ನು ಸಂಜೆಯೇ ಮಾಡಿಸುತ್ತಾರೆ. ಬೆಳಗ್ಗೆ ಮೈಗೆ ಎಣ್ಣೆ ಹಚ್ಚಿ ಬಿಸಿ- ಬಿಸಿ ನೀರು ಹಾಕಿ ಹೊಸ ಬಟ್ಟೆ ತೊಡುವ ಸಂಪ್ರದಾಯವಿದೆ.



Click it and Unblock the Notifications











