Latest Updates
-
ಮಳೆಗಾಲದಲ್ಲಿ ಮದುವೆ ನಿಶ್ಚಯವಾಗಿದೆಯೇ? ನಿಮ್ಮ ಮದುವೆ ಸಂಭ್ರಮ ಹಾಳಾಗದಂತೆ ತಡೆಯಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ!
ನರಕ ಚರ್ತುದಶಿ 2020: ಅಭ್ಯಂಗ ಸ್ನಾನಕ್ಕೆ ಮುಹೂರ್ತ ಹಾಗೂ ಮಹತ್ವ
ದೀಪಾವಳಿ ಹಬ್ಬ ಎಂದರೆ 5 ದಿನ ಸಂಭ್ರಮವೋ ಸಂಭ್ರಮ, ದೀಪಾವಳಿಯ ಸಂಭ್ರಮ ಇಂದಿನಿಂದ ಶುರುವಾಗುತ್ತದೆ. ಇಂದು ದಂತೆರೇಸ್. ಈ ದಿನ ಚಿನ್ನ, ಬೆಳ್ಳಿ ಮುಂತಾದ ವಸ್ತುವನ್ನು ಕೊಳ್ಳುವುದು ಶುಭವೆಂದು ಹೇಳಲಾಗುತ್ತದೆ, ಇದಾದ ಬಳಿಕ ನಾಳೆ ನರಕ ಚರ್ತುದಶಿ.
ಕರ್ನಾಟಕದಲ್ಲಿ ನರಕ ಚರ್ತುದಶಿ ಹಾಗೂ ಲಕ್ಷ್ಮಿ ಪೂಜೆಯನ್ನು ಪ್ರಮುಖವಾಗಿ ಆಚರಿಸಲಾಗುತ್ತದೆ. ದೀಪಾವಳಿಯಲ್ಲಿ ಎಣ್ಣೆ ಸ್ನಾನ ತುಂಬನೇ ಪ್ರಾಮುಖ್ಯತೆಯನ್ನು ಪಡೆದಿದೆ. ಇದನ್ನು ಚರ್ತುದಶಿಯಂದು ಮಾಡಲಾಗುವುದು.

ಎಣ್ಣೆ ಸ್ನಾನದ ಹಿಂದಿರುವ ಸಾಂಪ್ರದಾಯಿಕ ಹಿನ್ನೆಲೆ
ಇದರ ಪೌರಾಣಿಕ ಹಿನ್ನೆಲೆ ಬಗ್ಗೆ ಹೇಳುವುದಾದರೆ ಕೃಷ್ಣ ಹಾಗೂ ಸತ್ಯಭಾಮೆ ನರಕಾಸುರನನ್ನು ಸಂಹಾರ ಮಾಡಿ ಯುದ್ಧಭೂಮಿಯಿ೦ದ ಮರಳಿ ಬ೦ದಾಗ, ಅವರ ಶರೀರಗಳೆಲ್ಲವೂ ರಕ್ತ ಹಾಗೂ ಧೂಳಿನಿ೦ದ ಹೊಲಸಾಗಿದ್ದು, ಅವುಗಳನ್ನು ಶ್ರೀಗ೦ಧದ ಮಾರ್ಜಕ ಹಾಗೂ ಪರಿಮಳಯುಕ್ತವಾದ ಎಣ್ಣೆಯನ್ನು ಬಳಸಿಕೊ೦ಡು ಸ್ವಚ್ಛಗೊಳಿಸಿಕೊಳ್ಳುವುದು ಅವಶ್ಯವಾಗಿತ್ತು.
ಮನಸ್ಸು ಮತ್ತು ದೇಹವನ್ನು ಉಲ್ಲಾಸಗೊಳಿಸಲು ಚರ್ತುದಶಿಯಂದು ಎಣ್ಣೆ ಸ್ನಾನ ಮಾಡಲಾಗುವುದು.

ಎಣ್ಣೆ ಸ್ನಾನದ ಹಿಂದಿರುವ ವೈಜ್ಞಾನಿಕ ಕಾರಣ
ದೀಪಾವಳಿ ನಂತರ ಕೊರೆಯುವ ಚಳಿ ಶುರುವಾಗುವುದು. ಈ ಚಳಿ ಎದುರಿಸಲು ದೇಹ ಹಾಗೂ ಚರ್ಮವನ್ನು ಚಳಿಯಿಂದ ಕಾಪಾಡಲು ಈ ಎಣ್ಣೆ ಸ್ನಾನ ಸಹಾಯ ಮಾಡುತ್ತೆ. ಅಲ್ಲದೆ ಈ ಸಮಯದಲ್ಲಿ ಭತ್ತದ ಕೊಯ್ಲು ಮುಗಿದಿರುತ್ತದೆ. ಇದರ ದಣಿವಾರಲು ಹಾಹೂ ದೇಹಕ್ಕೆ ಚೈತನ್ಯ ತುಂಬಲು ಇದು ಅನುಕೂಲಕರವಾಗಿದೆ.

ಅಭ್ಯಂಗ ಸ್ನಾನಕ್ಕೆ ಸಮಯ
ಅಭ್ಯಂಗ ಸ್ನಾನವನ್ನು ಮುಂಜಾನೆ ಮಾಡಬೇಕು.
ನರಕ ಚರ್ತುದಶಿ ಶನಿವಾರ ನವೆಂಬರ್ 14
ಅಭ್ಯಂಗ ಸ್ನಾನಕ್ಕೆ ಸಮಯ:ಬೆಳಗ್ಗೆ 05:22:59 ಪ್ರಾರಂಭವಾಗಿ 06:43:18
ಕಾಲಾವಧಿ: 1 ಗಂಟೆ 20 ನಿಮಿಷ

ಅಭ್ಯಂಗ ಸ್ನಾನಕ್ಕೆ ಪಾಲಿಸುವ ಕ್ರಮಗಳು
ತ್ರಯೋದಶಿ ಅಂದರೆ ಇಂದು ಬಚ್ಚಲು ಮನೆಯ ನೀರಿನ ಹಂಡೆಗೆ ರಂಗೋಲಿ ಬಿಡಿಸಿ ಹೂವಿನ ಹಾರ ಹಾಕಿ, ನೀರು ತುಂಬಿ ಜಾಗಟೆ ಬಡಿದು ಪೂಜೆ ಮಾಡಬೇಕು. ಚಿಕ್ಕ ಮಕ್ಕಳನ್ನು ಸಂಜೆಯೇ ಮಾಡಿಸುತ್ತಾರೆ. ಬೆಳಗ್ಗೆ ಮೈಗೆ ಎಣ್ಣೆ ಹಚ್ಚಿ ಬಿಸಿ- ಬಿಸಿ ನೀರು ಹಾಕಿ ಹೊಸ ಬಟ್ಟೆ ತೊಡುವ ಸಂಪ್ರದಾಯವಿದೆ.



Click it and Unblock the Notifications