Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ನವರಾತ್ರಿ 9ನೇ ದಿನ: ತನ್ನ ಉಪಾಸನೆ ಮಾಡುವವರಿಗೆ ಸಕಲ ಸಿದ್ಧಿ ನೀಡುವ ಸಿದ್ಧಿದಾತ್ರಿ
ನವರಾತ್ರಿ ಒಂಭತ್ತನೇ ದಿನ ಅಂದರೆ ನವಮಿಯೆಂದು ದುರ್ಗಾದೇವಿಯ ಸಿದ್ಧಿದಾತ್ರಿ ರೂಪವನ್ನು ಆರಾಧಿಸಲಾಗುವುದು. ಸಿದ್ಧಿ ದೇವತೆ ಭಕ್ತರಿಗೆ ಎಲ್ಲಾ ಪ್ರಕಾರದ ಸಿದ್ಧಿಗಳನ್ನು ನೀಡುತ್ತಾಳೆ ಎಂಬ ನಂಬಿಕೆ ಇದೆ. ಮಾರ್ಕಡೇಯ ಪುರಾಣದ ಪ್ರಕಾರ ಅಣಿಮಾ, ಮಾಹಿಮಾ, ಗರಿಮಾ, ಲಘಮಾ, ಪ್ರಾಪ್ತಿ, ಪ್ರಾಕಮ್ಯ, ಈಶಿತ್ವ ಮತ್ತು ವಶಿತ್ವ ಹೀಗೆ ಎಂಟು ಸಿದ್ಧಿಗಳು ಇವೆ. ಸಿದ್ಧಿದಾತ್ರಿಯನ್ನು ಪೂಜಿಸುವುದರಿಂದ ಎಲ್ಲಾ ಸಿದ್ಧಿಯು ದೊರೆಯುವುದು.
ಆಶ್ವಯುಜ ಮಾಸದ ಮಹಾನವಮಿಯ ಈ ದಿನದಂದು ಆಯುಧಗಳು, ಯಂತ್ರಗಳು, ವಾಹನಗಳು, ಕೃಷಿ ಉಪಕರಣಗಳಿಗೆ ಪೂಜೆ ಮಾಡಬೇಕೆಂಬ ಸಂಪ್ರದಾಯವಿದೆ. ದೇವಿಯು ಮಹಿಷಾಸುರನ್ನು ಸಂಹರಿಸಿದ ಆಯುಧಗಳನ್ನು ಭೂಮಿಯಲ್ಲಿಯೇ ಎಸೆದು ಹೋಗುತ್ತಾಳೆ, ಈ ಆಯುಧಗಳನ್ನು ತಂದು ಪೂಜಿಸಲಾಗಿತ್ತು, ಹೀಗೆ ಆಯುಧ ಪೂಜೆ ಸಂಪ್ರದಾಯ ಪಾಲಿಸಿಕೊಂಡು ಬರಲಾಗಿದೆ ಎಂಬ ಪೌರಾಣಿಕ ಕತೆಯ ಹಿನ್ನೆಲೆಯಿದೆ. ಅಕ್ಟೋಬರ್ 23ರಂದು ಆಯುಧ ಪೂಜೆಯನ್ನು ಆಚರಿಸಲಾಗುವುದು.

ಸಿದ್ಧಿದಾತ್ರಿ ಉಪಾಸನೆ
ನವಮಿಯೆಂದು ಸಿದ್ಧಿದಾತ್ರಿಯ ಉಪಾಸನೆ ಮಾಡಲಾಗುತ್ತದೆ. ಎಂಟು ದೇವಿಯ ಪೂಜೆಯನ್ನು ಮಾಡಿ, ಒಂಭತ್ತನೇ ದಿನ ಇವಳ ಪೂಜೆಯನ್ನು ಮಾಡಲಾಗುವುದು. ಈ ದಿನ ಯಾರು ಶ್ರಾಸ್ತ್ರೀಯ ವಿಧಿ-ವಿಧಾನಗಳನ್ನು ಪಾಲಿಸಿ, ಪೂರ್ಣ ಭಕ್ತಿಯಿಂದ ಪೂಜೆಯನ್ನು ಸಲ್ಲಿಸಿದರೆ ಸಿದ್ಧಿ ಲಭಿಸುವುದು. ಮಾಡುವ ಕಾರ್ಯದಲ್ಲಿ ವಿಜಯ ಸಿಗುವುದು. ವಿಶ್ವವನ್ನೇ ಗೆಲ್ಲುವ ಸಾಮಾರ್ಥ್ಯ ಲಭಿಸುವುದು. ಈಕೆಯ ಕೃಪೆಯಿದ್ದರೆ ಸಂಸಾರದಲ್ಲಿ ಸುಖ, ಶಾಂತಿ, ನೆಮ್ಮದಿ ನೆಲೆಸುವುದು.

ಸಿದ್ಧಿದಾತ್ರಿ ಕೃಪೆಯಿಂದ ಸಿದ್ಧಿ ಪಡೆದ ಶಿವ
ಪೌರಾಣಿಕ ಕತೆಯ ಪ್ರಕಾರ ಭಗವಾನ್ ಶಿವನು ಇವಳ ಕೃಪೆಯಿಂದ ಇವೆಲ್ಲ ಸಿದ್ಧಿಗಳನ್ನು ಪಡೆದುಕೊಂಡಿದ್ದನು. ಇವಳ ಅನುಕಂಪದಿಂದಲೇ ಭಗವಾನ್ ಶಿವನ ಅರ್ಧ ಶರೀರವು ದೇವಿಯಾಗಿದೆ. ಇದೇ ಕಾರಣದಿಂದಲೇ ಶಿವನು ‘ಅರ್ಧನಾರೀಶ್ವರ' ಹೆಸರಿನಿಂದ ಪ್ರಸಿದ್ಧನಾದನು.

ಸಿದ್ಧಿದಾತ್ರಿ ರೂಪ
ಸಿದ್ಧಿದಾತ್ರಿ ದೇವಿ ನಾಲ್ಕು ಭುಜಗಳನ್ನು ಹೊಂದಿದ್ದಾಳೆ, ಇವಳ ಚಿತ್ರವನ್ನು ನೋಡಿದಾಗ ಫಲಪುಷ್ಪದ ಮೇಲೆ ವಿರಾಜಮಾನವಾಗಿ ಕುಳಿತುಕೊಂಡಿರುವುದನ್ನು ನೋಡಬಹುದುದು. ಇವಳ ವಾಹನ ಸಿಂಹವಾಗಿದೆ. ಇಇವಳ ಕೆಳಗಿನ ಬಲಕೈಯಲ್ಲಿ ಚಕ್ರ, ಮೇಲಿನ ಕೈಯಲ್ಲಿ ಗದೆ ಇದೆ. ಎಡಗಡೆ ಕೆಳಗಿನ ಕೈಯಲ್ಲಿ ಶಂಖ ಮತ್ತು ಮೇಲಿನ ಕೈಯಲ್ಲಿ ಕಮಲವಿದೆ.

ಕರ್ನಾಟಕದಲ್ಲಿ ಆಯುಧ ಪೂಜೆಯ ವಿಜೃಂಭಣೆಯ ಆಚರಣೆ
ಅಕ್ಟೋಬರ್ 25ರಂದು ಭಾನುವಾರ ಸಿದ್ಧಿಧಾತ್ರಿಯನ್ನು ಪೂಜಿಸಲಾಗುತ್ತದೆ. ಆಯುಧ ಪೂಜಾ ಕೂಡ ಈ ದಿನವೇ ಇರುವುದರಿಂದ ಕರ್ನಾಟಕದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತದೆ.
ಪಾಂಡವರು ತಮ್ಮ ವನವಾಸದ ಸಂದರ್ಭ ತಮ್ಮ ಶಸ್ತ್ರಾಸ್ತ್ರಗಳನ್ನು ಬನ್ನಿ ಮರದಲ್ಲಿ ಬಚ್ಚಿಟ್ಟ ನಂತರ ಆಶ್ವಯುಜ ನವಮಿಯಂದು ಶಸ್ತ್ರಾಸ್ತ್ರಗಳನ್ನು ತೆಗೆದು ಪೂಜಿಸಿ, ವಿಜಯ ದಶಮಿಯಂದು ವಿರಾಟರಾಜನ ಶತ್ರುಗಳಾದ ಕೌರವರ ಮೇಲೆ ವಿಜಯವನ್ನು ಸಾಧಿಸಿದರು ಎಂದು ಮಹಾಭಾರತ ಕತೆ ಹೇಳುತ್ತದೆ.
ನಮ್ಮೆಲ್ಲಾ ಓದುಗರಿಗೆ ಆಯುಧ ಪೂಜೆಯ ಶುಭಾಶಯಗಳು



Click it and Unblock the Notifications