Latest Updates
-
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ! -
ಡೆಂಗ್ಯೂ ಭೀತಿ: ಕೇವಲ 10 ನಿಮಿಷದಲ್ಲಿ ನಿಮ್ಮ ಮನೆಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಿರಿ -
ಹಬ್ಬದ ಸೀಸನ್: ಕಲಬೆರಕೆ ಆಹಾರದಿಂದ ಎಚ್ಚರ! ಮಹಾರಾಷ್ಟ್ರ FDA ಕಠಿಣ ತಪಾಸಣೆ ಆರಂಭ -
ಶಿಕ್ಷಕರ ದಿನಾಚರಣೆ 2026: ನಿಮ್ಮ ಪೋಸ್ಟ್ ಟ್ರೆಂಡ್ ಆಗಲು ಬೆಸ್ಟ್ ಕ್ಯಾಪ್ಷನ್ಸ್ ಮತ್ತು ಗಿಫ್ಟ್ ಐಡಿಯಾಗಳು! -
ಮಳೆಗಾಲದ ಎಚ್ಚರಿಕೆ: ಹೊರಗೆ ವಾಕಿಂಗ್ ಹೋಗುವ ಮುನ್ನ ಈ ವಿಷಯ ಗಮನಿಸಿ, ಮನೆಯಲ್ಲೇ ಫಿಟ್ ಆಗಿರಿ
ಜೂನ್2ರ ನಿರ್ಜಲ ಏಕಾದಶಿ ತುಂಬಾ ಮಹತ್ವವಾದ ದಿನ
ಹಿಂದೂ ಪಂಚಾಂಗದ 12 ಮಾಸಗಳ ಶುಕ್ಲ ಪಕ್ಷದ ಮತ್ತು ಕೃಷ್ಣ ಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿಯೆಂದು ಆಚರಿಸಲಾಗುವುದು. ಈ ದಿನ ಉಪವಾಸ ಮಾಡುವ ಸಂಪ್ರದಾಯವಿದೆ. ಈ ಬಾರಿ ನಿರ್ಜಲ ಏಕಾದಶಿ ಬಂದಿದೆ.

ಚಾಂದ್ರಮಾನದ ಜೇಷ್ಠ ಮಾಸದ ಶುಕ್ಲಪಕ್ಷದ ಮೊದಲ ದಿನ ಬರುವುದೇ ನಿರ್ಜಲ ಏಕಾದಶಿ. ಮಹಾವಿಷ್ಣುವಿನ ಕೃಪೆಗಾಗಿ ಪ್ರಾರ್ಥಿಸಿ ಈ ಏಕಾದಶಿಯನ್ನು ಮಾಡಲಾಗುವುದು. ನಿರ್ಜಲ ಏಕಾದಶಿಯನ್ನುಜ್ಯೇಷ್ಠ ಶುಕ್ಲ ಏಕಾದಶಿ ಎಂದೂ ಕೂಡ ಕರೆಯುತ್ತಾರೆ.
ಗಂಗಾದಸರಾದ ಬಳಿಕ ಈ ನಿರ್ಜಲ ಏಕಾದಶಿ ಬರುತ್ತದೆ, ಕೆಲವೊಂದು ವರ್ಷಗಳಲ್ಲಿ ಒಂದೇ ದಿನವೂ ಬರಬಹುದು. ಈ ವರ್ಷ ಗಂಗಾ ದಸರಾ ಬಳಿಕ ನಿರ್ಜಲ ಏಕಾದಶಿ ಬಂದಿದೆ. ಜೂನ್ 2ರಂದು ನಿರ್ಜಲ ಏಕಾದಶಿಯನ್ನು ಆಚರಿಸಲಾಗುವುದು.
ನಿರ್ಜಲ ಏಕಾದಶಿಯಂದು ನೀರು ಸಹ ಮುಟ್ಟದೆ ಉಪವಾಸವಿರುವ ಸಂಪ್ರದಾಯವಿದೆ. ಈ ರೀತಿ ಮಾಡುವುದರಿಂದ ಮನುಷ್ಯ ಮಾಡಿದ ಪಾಪವೆಲ್ಲಾ ಕಳೆದು ಹೋಗಿ ಭಗವಂತನ ಸಾಕ್ಷಾತ್ಕಾರಕ್ಕೆ ಮಾರ್ಗ ತೋರುತ್ತದೆ ಎಂಬ ನಂಬಿಕೆ ಹಿಂದೂಗಳಲ್ಲಿ ಇದೆ.

ಸಮಯ ಮತ್ತು ದಿನಾಂಕ
ನಿರ್ಜಲ ಏಕಾದಶಿ ತಿಥಿ ಜೂನ್ 1 ಮಧ್ಯಾಹ್ನ 2.57ಕ್ಕೆ ಪ್ರಾರಂಭವಾಗಿ ಜೂನ್ 2, 12.04ಕ್ಕೆ ಮುಕ್ತಾಯವಾಗುತ್ತದೆ.

ಪಾಲನೆ ವಿಧಾನ
ನಿರ್ಜಲ ಏಕಾದಶಿಯಂದು ಭಕ್ತರು ಮಹಾವಿಷ್ಣುವನ್ನು ಆರಾಧಿಸುತ್ತಾರೆ. ಮಹಾವಿಷ್ಣುವಿಗೆ ತುಳಸಿ ಅರ್ಪಿಸಿ ಪೂಜೆ ಸಲ್ಲಿಸುತ್ತಾರೆ. ನಂತರ ಮಹಾವಿಷ್ಣುವಿನ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ. ಈ ಏಕಾದಶಿ ಪಾಲಿಸುವವರು ರಾತ್ರಿವಿಡೀ ಎಚ್ಚರವಿದ್ದು ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳುತ್ತಾರೆ. ಈ ಪೂಜೆ ಸಮಯದಲ್ಲಿ ವೇದ, ಮಂತ್ರಗಳು, ವಿಷ್ಣು ಸಹಸ್ರನಾಮ ಹೇಳಲಾಗುವುದು. ಈ ದಿನ ಯಾವುದೇ ಕಾರಣಕ್ಕೆ ಅನ್ನ ಹಾಗೂ ಅಕ್ಕಿಯಿಂದ ಮಾಡಿದ ಆಹಾರ ಸೇವಿಸುವುದಿಲ್ಲ. ಕೆಲವರು ನೀರನ್ನೂ ಕೂಡ ಮುಟ್ಟದೆ ಏಕಾದಶಿ ಆಚರಿಸುತ್ತಾರೆ. ಅನಾರೋಗ್ಯ ಕಾರಣಗಳಿಂದ ಅದು ಸಾಧ್ಯವಾಗದೇ ಇರುವವರು ಬರೀ ಹಣ್ಣುಗಳನ್ನಷ್ಟೇ ತಿನ್ನುತ್ತಾರೆ.

ನಿರ್ಜಲ ಏಕಾದಶಿಯ ಮಹತ್ವ
ಇದನ್ನು ಅತ್ಯಂತ ಫಲ ನೀಡುವ ಏಕಾದಶಿ ಎಂದು ಹೇಳಲಾಗುವುದು. ಈ ಏಕಾದಶಿ ಮಾಡಿದರೆ ಇತರ ಏಕಾದಶಿಗಳ ಫಲ ಕೂಡ ಲಭಿಸುವುದು ಎಂದು ಹೇಳಲಾಗುವುದು. ಇದರಿಂದ ಅಭಿವೃದ್ಧಿ ಉಂಟಾಗುತ್ತದೆ, ಆರೋಗ್ಯ ಉತ್ತಮವಾಗುವುದು, ಆಯುಸ್ಸು ಹೆಚ್ಚುವುದು, 23 ಏಕಾದಶಿಗಳನ್ನು ಆಚರಿಸಲು ಕಷ್ಟವಾಗುವವರು ಇದೊಂದು ಏಕಾದಶಿ ಆಚರಿಸಿದರೆ ಎಲ್ಲಾಏಕಾದಶಿಗಳ ಫಲ ಇದರಿಂದ ದೊರೆಯುವುದು ಎಂದು ಹೇಳುತ್ತಾರೆ.

ಇದರ ಹಿಂದೆ ಒಂದು ಪೌರಾಣಿಕ ಕತೆಯೂ ಇದೆ
ನಿರ್ಜಲ ಏಕಾದಶಿಯನ್ನು ಭೀಮಾಸೇನಾ ಏಕಾದಶಿಯೆಂದು ಕೂಡ ಆಚರಿಸುತ್ತಾರೆ. ಭೀಮನಿಗೆ ಆಹಾರವೆಂದರೆ ತುಂಬಾ ಪ್ರಿಯ, ಸದಾ ತಿನ್ನುತ್ತಲೇ ಇರುತ್ತಿದ್ದ. ಅವನಿಗೆ ತನ್ನ ಹಸಿವು ತಡೆದು ಉಪವಾಸ ಇರಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಮಹಾವಿಷ್ಣುವಿಗೆ ಅವಮಾನ ಮಾಡಿದಂತೆ ಎಂದು ತಿಳಿದ ಭೀಮ ವ್ಯಾಸ ಮಹರ್ಷಿ ಭೇಟಿಯಾಗಿ ಏನು ಮಾಡಬೇಕೆಂದು ಕೇಳುತ್ತಾನೆ. ಆಗ ಅವರು ನಿರ್ಜಲ ಏಕಾದಶಿಯಂದು ಉಪವಾಸವಿದ್ದರೆ ಎಲ್ಲಾ ಏಕಾದಶಿಯ ಫಲ ಸಿಗುವುದು ಎಂದು ಹೇಳುತ್ತಾರೆ. ಅದರಂತೆ ಭೀಮು ಉಪವಾಸವಿದ್ದು ಏಕಾದಶಿ ಫಲವನ್ನು ಪಡೆಯುತ್ತಾನೆ.

ದಾನ-ಧರ್ಮ
ನಿರ್ಜಲ ಏಕಾದಶಿಯಂದು ದಾನಧರ್ಮ ಮಾಡುವುದರಿಂದ ಕೂಡ ಪುಣ್ಯ ದೊರೆಯುವುದು. ಈ ದಿನ ಬಟ್ಟೆ, ಆಹಾರ, ನೀರು ಮತ್ತಿತರ ಅಗತ್ಯ ವಸ್ತುಗಳನ್ನು ಬಡವರಿಗೆ ಹಾಗೂ ಅಪೇಕ್ಷಿತರಿಗೆ ದಾನ ಮಾಡುವುದರಿಂದ ಸತ್ಫಲ ದೊರೆಯುತ್ತದೆ.



Click it and Unblock the Notifications