Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಎಲ್ಲಾ ಏಕಾದಶಿಗಳ ಫಲ ನೀಡುವ ನಿರ್ಜಲ ಏಕಾದಶಿ ಯಾವಾಗ? ಇದರ ಪೂಜಾ ವಿಧಿ ಹಾಗೂ ಮಹತ್ವವೇನು?
ಹಿಂದೂ ಪಂಚಾಂಗದ 12 ಮಾಸಗಳ ಶುಕ್ಲ ಪಕ್ಷದ ಮತ್ತು ಕೃಷ್ಣ ಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿಯೆಂದು ಆಚರಿಸಲಾಗುವುದು. ಈ ದಿನ ಉಪವಾಸ ಮಾಡುವ ಸಂಪ್ರದಾಯವಿದೆ. ಈ ಬಾರಿ ನಿರ್ಜಲ ಏಕಾದಶಿ ಜೂನ್ 21ರಂದು ಬಂದಿದೆ.
ಧರ್ಮ ಗ್ರಂಥಗಳ ಪ್ರಕಾರ ಜ್ಯೇಷ್ಠ ಮಾಸವು ಅನೇಕ ಧಾರ್ಮಿಕ ಮಹತ್ವವನ್ನು ಹೊಂದಿರುವ ತಿಂಗಳಾಗಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ ಜ್ಯೇಷ್ಠ ಮಾಸವನ್ನು ಮೂರನೇ ತಿಂಗಳಾಗಿದೆ. ಈ ತಿಂಗಳಿನಲ್ಲಿಹಗಲು ಹೆಚ್ಚಿರುತ್ತದೆ, ಇರುಳು ಕಡಿಮೆ ಇರುತ್ತದೆ . ಜ್ಯೇಷ್ಠ ಮಾಸದ ಶುಕ್ಲ ಪಕ್ಷದ 11ನೇ ದಿನದಂದು ಆಚರಿಸುವ ಏಕಾದಶಿಯನ್ನು ನಿರ್ಜಲ ಏಕಾದಶಿ ಎಂದು ಕರೆಯಲಾಗುತ್ತದೆ. ಮಹಾವಿಷ್ಣುವಿನ ಕೃಪೆಗಾಗಿ ಪ್ರಾರ್ಥಿಸಿ ಈ ಏಕಾದಶಿಯನ್ನು ಮಾಡಲಾಗುವುದು. ನಿರ್ಜಲ ಏಕಾದಶಿಯನ್ನುಜ್ಯೇಷ್ಠ ಶುಕ್ಲ ಏಕಾದಶಿ ಎಂದೂ ಕೂಡ ಕರೆಯುತ್ತಾರೆ.
ಸಾಮಾನ್ಯವಾಗಿ ಗಂಗಾದಸರಾದ ಬಳಿಕ ಈ ನಿರ್ಜಲ ಏಕಾದಶಿ ಬರುತ್ತದೆ, ಕೆಲವೊಂದು ವರ್ಷಗಳಲ್ಲಿ ಒಂದೇ ದಿನವೂ ಬರಬಹುದು. ಈ ವರ್ಷ ಗಂಗಾ ದಸರಾ ಬಳಿಕ ನಿರ್ಜಲ ಏಕಾದಶಿ ಬಂದಿದೆ. ಜೂನ್ 20ಕ್ಕೆ ಗಂಗಾ ದಸರಾ 21ರಂದು ನಿರ್ಜಲ ಏಕಾದಶಿಯನ್ನು ಆಚರಿಸಲಾಗುವುದು. ನಿರ್ಜಲ ಏಕಾದಶಿಯಂದು ನೀರು ಸಹ ಮುಟ್ಟದೆ ಉಪವಾಸವಿರುವ ಸಂಪ್ರದಾಯವಿದೆ. ಈ ಏಕಾದಶಿ ಆಚರನೆ ಮಾಡುವುದರಿಂದ ಮಾಡಿದ ಪಾಪವೆಲ್ಲಾ ಕಳೆದು ಹೋಗಿ ಭಗವಂತನ ಸಾಕ್ಷಾತ್ಕಾರ ದೊರೆಯುವುದು ಎಂಬ ನಂಬಿಕೆ ಇದೆ.

23 ಏಕಾದಶಿಗಳ ಆಚರಣೆ ಫಲ ನಿರ್ಜಲ ಏಕಾದಶಿ ಆಚರಣೆಯಿಂದ ಸಿಗುವುದು
ಪ್ರತಿಯೊಂದು ಏಕಾದಶಿ ಮಹತ್ವವನ್ನು ಹೊಂದಿದೆ. ಅವುಗಳಲ್ಲಿ ಅತ್ಯಂತ ಫಲ ನೀಡುವ ಏಕಾದಶಿ ಅಂದ್ರೆ ಅದು ನಿರ್ಜಲ ಏಕಾದಶಿ ಎಂದು ಹೇಳಲಾಗುವುದು. ಈ ಏಕಾದಶಿ ಮಾಡಿದರೆ ಇತರ 23 ಏಕಾದಶಿಗಳ ಫಲ ಕೂಡ ಲಭಿಸುವುದು ಎಂದು ಹೇಳಲಾಗುವುದು. ಇದರಿಂದ ಅಭಿವೃದ್ಧಿ ಉಂಟಾಗುತ್ತದೆ, ಆರೋಗ್ಯ ಉತ್ತಮವಾಗುವುದು, ಆಯುಸ್ಸು ವೃದ್ಧಿಸುವುದು. ಯಾರು ಈ ಏಕಾದಶಿಯನ್ನು ಕಟ್ಟು ನಿಟ್ಟಾಗಿ ಪಾಲಿಸುತ್ತಾರೋ ಅವರ ಬದುಕಿನಲ್ಲಿ ಯಾವಾಗಲೂ ಸಂತೋಷ, ಶಾಂತಿ ಮತ್ತು ಸಮೃದ್ಧಿ ತುಂಬಿರಲಿದೆ.

ನಿರ್ಜಲ ಏಕಾದಶಿ ಉಪವಾಸಕ್ಕೆ ಶುಭ ಸಮಯ
ನಿರ್ಜಲ ಏಕಾದಶಿ ತಿಥಿ ಪ್ರಾರಂಭ: ಜೂನ್ 20, ಭಾನುವಾರ ಸಂಜೆ 4:21 ರಿಂದ ಪ್ರಾರಂಭವಾಗುತ್ತದೆ
ಏಕಾದಶಿ ತಿಥಿ ಮುಕ್ತಾಯ: ಜೂನ್ 21, ಸೋಮವಾರ ಮಧ್ಯಾಹ್ನ 1.31 ರವರೆಗೆ
ಏಕಾದಶಿ ಪಾರಣ ಸಮಯ: ಜೂನ್ 22, ಸೋಮವಾರ ಬೆಳಗ್ಗೆ 5:13 ರಿಂದ ಬೆಳಿಗ್ಗೆ 8.01 ರವರೆಗೆ

ನಿರ್ಜಲ ಏಕಾದಶಿಯ ಆರಾಧನಾ ವಿಧಾನ
ಏಕಾದಶಿ ಉಪವಾಸದಲ್ಲಿ ವಿಶೇಷ ನಿಯಮಗಳನ್ನು ಪಾಲಿಸಬೇಕು. ನಿರ್ಜಲ ಏಕಾದಶಿ ದಿನದಂದು, ಸ್ನಾನ ಮಾಡಿದ ನಂತರ, ಪೂಜಾ ಸ್ಥಳದಲ್ಲಿ ಕುಳಿತು, ಉಪವಾಸದ ಸಂಕಲ್ಪ ತೆಗೆದುಕೊಂಡು, ಪೂಜೆಯನ್ನು ಪ್ರಾರಂಭಿಸಬೇಕು. ಈ ದಿನ ವಿಷ್ಣುವಿಗೆ ಹಳದಿ ಬಟ್ಟೆಗಳನ್ನು ಧರಿಸಿ. ಪೂಜೆಯಲ್ಲಿ ಹಳದಿ ಹೂಗಳನ್ನು ಬಳಸಿ. ಈ ದಿನ ಹಳದಿ ವಸ್ತುಗಳನ್ನು ಬಳಸಲಾಗುತ್ತದೆ. ವಿಷ್ಣುವಿಗೆ ಹಳದಿ ಬಣ್ಣ ಹೆಚ್ಚು ಪ್ರಿಯವಾಗಿದೆ.
ಈ ದಿನ ಈ ಮಂತ್ರವನ್ನು ಜಪಿಸಬೇಕು-
"ಓಂ ನಮೋ ಭಾಗವತ ವಾಸುದೇವ"

ಇದರ ಬಗ್ಗೆ ಇರುವ ಪೌರಾಣಿಕ ಕತೆ
ನಿರ್ಜಲ ಏಕಾದಶಿಯನ್ನು ಭೀಮಾಸೇನಾ ಏಕಾದಶಿಯೆಂದು ಕೂಡ ಆಚರಿಸುತ್ತಾರೆ. ಭೀಮನಿಗೆ ಆಹಾರವೆಂದರೆ ತುಂಬಾ ಪ್ರಿಯ, ಸದಾ ತಿನ್ನುತ್ತಲೇ ಇರುತ್ತಿದ್ದ. ಅವನಿಗೆ ತನ್ನ ಹಸಿವು ತಡೆದು ಏಕಾದಶಿ ಉಪವಾ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಮಹಾವಿಷ್ಣುವಿಗೆ ಅವಮಾನ ಮಾಡಿದಂತೆ ಎಂದು ತಿಳಿದ ಭೀಮ ವ್ಯಾಸ ಮಹರ್ಷಿ ಭೇಟಿಯಾಗಿ ಏನು ಮಾಡಬೇಕೆಂದು ಕೇಳುತ್ತಾನೆ. ಆಗ ಅವರು ನಿರ್ಜಲ ಏಕಾದಶಿಯಂದು ಉಪವಾಸವಿದ್ದರೆ ಎಲ್ಲಾ ಏಕಾದಶಿಯ ಫಲ ಸಿಗುವುದು ಎಂದು ಹೇಳುತ್ತಾರೆ. ಅದರಂತೆ ಭೀಮ ನಿರ್ಜಲ ಏಕಾದಶಿ ಆಚರಿಸುತ್ತಿದ್ದ ಎಂಬ ಕತೆಯಿದೆ.



Click it and Unblock the Notifications











