Latest Updates
-
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ!
ನಿರ್ಜಲ ಏಕಾದಶಿ 2021: ಶುಭ ಫಲ ದೊರೆಯಲು ಈ ದಿನ ಏನು ಮಾಡಬೇಕು, ಏನು ಮಾಡಬಾರದು?
ಹಿಂದೂ ಧರ್ಮದಲ್ಲಿ ನಿರ್ಜಲ ಏಕಾದಶಿಗೆ ತುಂಬಾನೇ ಮಹತ್ವವಿದೆ. ಉಳಿದ 23 ಏಕಾದಶಿಗಳ ಫಲ ಈ ಒಂದು ಏಕಾದಶಿ ಆಚರಣೆ ಮಾಡಿದರೆ ಸಿಗುವುದು ಎಂಬ ನಂಬಿಕೆ ಇದೆ.
ನಿರ್ಜಲ ಏಕಾದಶಿಯನ್ನು ಜ್ಯೇಷ್ಠ ಮಾಸದ ಶುಕ್ಲ ಪಕ್ಷದ 11ನೇ ದಿನದಂದು ಅಂದ್ರೆ ಜೂನ್ 21ರಂದು ಆಚರಿಸಲಾಗುವುದು. ಈ ಏಕಾದಶಿಯನ್ನು ಯಾರು ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸುತ್ತಾರೋ ಅವರು ಮಾಡಿರುವ ಪಾಪಗಳಿಂದ ಮುಕ್ತಿ ಪಡೆಯುತ್ತಾರೆ ಅಲ್ಲದೆ ಅವರ ಬದುಕಿನಲ್ಲಿ ಸಂತೋಷ, ಸಂಪತ್ತು ತುಂಬಿರುತ್ತದೆ ಎಂದು ಹೇಳಲಾಗುತ್ತದೆ.
ನಿರ್ಜಲ ಏಕಾದಶಿ ಆಚರಿಸಲು ಕೆಲವೊಂದು ನಿಯಮಗಳಿವೆ, ಅವುಗಳನ್ನು ಪಾಲಿಸಿದರಷ್ಟೇ ಇದರ ಫಲ ಸಿಗುವುದು. ಈ ದಿನ ಉತ್ತಮ ಫಲಕ್ಕಾಗಿ ಏನು ಮಾಡಬಾರದು, ಏನು ಮಾಡಬೇಕು ಎಂದು ನೋಡೋಣ ಬನ್ನಿ:

ಶ್ರೀ ವಿಷ್ಣುವಿನ ಆರಾಧನೆಯಲ್ಲಿ ತುಳಸಿ ಇರಲಿ
ಏಕಾದಶಿ ಎಂಬುವುದು ವಿಷ್ಣುವಿಗೆ ಸಮರ್ಪಿತವಾದ ದಿನ. ವಿಷ್ಣುವಿಗೆ ಪ್ರಿಯವಾದವಳು ತುಳಸಿ. ಆದ್ದರಿಂದ ವಿಷ್ಣುವಿನ ಆರಾಧನೆಯಲ್ಲಿ ತುಳಸಿಗೆ ತುಂಬಾನೇ ಪ್ರಾಶಸ್ತ್ಯ ನೀಡಲಾಗಿದೆ. ಈ ದಿನ ವಿಷ್ಣು ಹಾಗೂ ಲಕ್ಷ್ಮೀಯನ್ನು ಆರಾಧಿಸುವಾಗ ತುಳಸಿ ಬಳಸಲು ಮರೆಯದಿರಿ.

ಉಪವಾಸ ಇರಬೇಕು
ಯಾರಿಗೆ ಇತರ ಏಕಾದಶಿ ಮಾಡಲು ಸಾಧ್ಯವಿಲ್ಲವೋ ಅವರು ನಿರ್ಜಲ ಏಕಾದಶಿ ಮಾಡಿದರೆ ಸಾಕು, ಅವುಗಳ ಪುಣ್ಯ ಎಲ್ಲಾ ಈ ಒಂದು ಏಕಾದಶಿ ಆಚರನೆಯಿಂದ ಸಿಗುವುದು. ಆದರೆ ಹೆಸರೇ ಸೂಚಿಸುವಂತೆ ಏಕಾದಶಿ ದಿನ ನೀರು ಕೂಡ ಮುಟ್ಟುವಂತಿಲ್ಲ. ಬೆಳಗ್ಗೆ ಎದ್ದು ಸ್ನಾನ ಮಾಡಿ ಮಡಿಯುಟ್ಟು ಉಪವಾಸದ ಸಂಕಲ್ಪ ಕೈಗೊಳ್ಳಬೇಕು. ನಂತರ ಶ್ರೀವಿಷ್ಣುವಿನ ಪೂಜೆ ಮಾಡಬೇಕು.

ಭಗವಂತ ವಿಷ್ಣುವಿಗೆ ನೈವೇದ್ಯ ಅರ್ಪಿಸಿ
ಈ ದಿನ ಭಗವಾನ್ ವಿಷ್ಣುವಿಗೆ ನೈವೇದ್ಯ ಅರ್ಪಿಸಿ, ನೈವೇದ್ಯಕ್ಕೆ ಸಾತ್ವಿಕ ಆಹಾರವನ್ನು ಬಳಸಿ. ಸಿಹಿ, ಹಣ್ಣುಗಳನ್ನು ಅರ್ಪಿಸಿ. ಧಾರ್ಮಿಕ ನಂಬಿಕೆಗಳ ಪ್ರಕಾರ ಶ್ರೀ ವಿಷ್ಣುವಿಗೆ ನೈವೇದ್ಯ ಅರ್ಪಿಸುವಾಗ ತುಳಸಿಯನ್ನು ಇಟ್ಟು ಅರ್ಪಿಸಬೇಕು, ಇಲ್ಲದಿದ್ದರೆ ವಿಷ್ಣು ಆ ಆಹಾರಗಳನ್ನು ಸ್ವೀಕರಿಸುವುದಿಲ್ಲ.

ಅನ್ನ ತಿನ್ನಬೇಡಿ
ಉಪವಾಸ ಮಾಡುವವರು ಏನೂ ತಿನ್ನುವಂತಿಲ್ಲ, ಎಲ್ಲರಿಗೆ ಉಪವಾಸ ಮಾಡಲು ಸಾಧ್ಯವಾಗುವುದಿಲ್ಲ ಅಂಥವರು ಏಕಾದಶಿಯಂದು ಅಕ್ಕಿಯ ಯಾವುದೇ ಆಹಾರ ಸೇವಿಸಬಾರದು.

ಮಾಂಸ ಮತ್ತು ಮದ್ಯವನ್ನು ಸೇವಿಸಬೇಡಿ
ಏಕಾದಶಿ ದಿನವನ್ನು ವಿಷ್ಣುವಿನ ಆರಾಧನೆಗೆ ಸಮರ್ಪಿಸಲಾಗಿದೆ. ಈ ದಿನ ಮಾಂಸ ಮತ್ತು ಮದ್ಯ ಸೇವಿಸಬಾರದು. ನಿರ್ಜಲ ಏಕಾದಶಿ ದಿನದಂದು ಸಾತ್ವಿಕ ಆಹಾರವನ್ನು ಮಾತ್ರ ಸೇವಿಸಿ.

ಸ್ತ್ರೀ-ಪುರುಷ ಸೇರಬಾರದು
ಏಕಾದಶಿ ದಿನದಂದು ಮಿಲನ ಕ್ರಿಯೆ ನಡೆಸಬಾರದು. ಧಾರ್ಮಿಕ ನಂಬಿಕೆಗಳ ಪ್ರಕಾರ ಈ ದಿನ ದೇವರ ಕೋರ್ತನೆ ಹಾಡಬೇಕು, ಶ್ರೀ ವಿಷ್ಣುವಿನ ಮಂತ್ರ ಪಠಿಸುತ್ತಾ ದಿನ ಕಳೆಯಬೇಕು. ಮನಸ್ಸಿನಲ್ಲಿ ಯಾವುದೇ ಕೆಡಕು ಬಯಸಬಾರದು.



Click it and Unblock the Notifications