Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ನಿರ್ಜಲ ಏಕಾದಶಿ 2021: ಶುಭ ಫಲ ದೊರೆಯಲು ಈ ದಿನ ಏನು ಮಾಡಬೇಕು, ಏನು ಮಾಡಬಾರದು?
ಹಿಂದೂ ಧರ್ಮದಲ್ಲಿ ನಿರ್ಜಲ ಏಕಾದಶಿಗೆ ತುಂಬಾನೇ ಮಹತ್ವವಿದೆ. ಉಳಿದ 23 ಏಕಾದಶಿಗಳ ಫಲ ಈ ಒಂದು ಏಕಾದಶಿ ಆಚರಣೆ ಮಾಡಿದರೆ ಸಿಗುವುದು ಎಂಬ ನಂಬಿಕೆ ಇದೆ.
ನಿರ್ಜಲ ಏಕಾದಶಿಯನ್ನು ಜ್ಯೇಷ್ಠ ಮಾಸದ ಶುಕ್ಲ ಪಕ್ಷದ 11ನೇ ದಿನದಂದು ಅಂದ್ರೆ ಜೂನ್ 21ರಂದು ಆಚರಿಸಲಾಗುವುದು. ಈ ಏಕಾದಶಿಯನ್ನು ಯಾರು ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸುತ್ತಾರೋ ಅವರು ಮಾಡಿರುವ ಪಾಪಗಳಿಂದ ಮುಕ್ತಿ ಪಡೆಯುತ್ತಾರೆ ಅಲ್ಲದೆ ಅವರ ಬದುಕಿನಲ್ಲಿ ಸಂತೋಷ, ಸಂಪತ್ತು ತುಂಬಿರುತ್ತದೆ ಎಂದು ಹೇಳಲಾಗುತ್ತದೆ.
ನಿರ್ಜಲ ಏಕಾದಶಿ ಆಚರಿಸಲು ಕೆಲವೊಂದು ನಿಯಮಗಳಿವೆ, ಅವುಗಳನ್ನು ಪಾಲಿಸಿದರಷ್ಟೇ ಇದರ ಫಲ ಸಿಗುವುದು. ಈ ದಿನ ಉತ್ತಮ ಫಲಕ್ಕಾಗಿ ಏನು ಮಾಡಬಾರದು, ಏನು ಮಾಡಬೇಕು ಎಂದು ನೋಡೋಣ ಬನ್ನಿ:

ಶ್ರೀ ವಿಷ್ಣುವಿನ ಆರಾಧನೆಯಲ್ಲಿ ತುಳಸಿ ಇರಲಿ
ಏಕಾದಶಿ ಎಂಬುವುದು ವಿಷ್ಣುವಿಗೆ ಸಮರ್ಪಿತವಾದ ದಿನ. ವಿಷ್ಣುವಿಗೆ ಪ್ರಿಯವಾದವಳು ತುಳಸಿ. ಆದ್ದರಿಂದ ವಿಷ್ಣುವಿನ ಆರಾಧನೆಯಲ್ಲಿ ತುಳಸಿಗೆ ತುಂಬಾನೇ ಪ್ರಾಶಸ್ತ್ಯ ನೀಡಲಾಗಿದೆ. ಈ ದಿನ ವಿಷ್ಣು ಹಾಗೂ ಲಕ್ಷ್ಮೀಯನ್ನು ಆರಾಧಿಸುವಾಗ ತುಳಸಿ ಬಳಸಲು ಮರೆಯದಿರಿ.

ಉಪವಾಸ ಇರಬೇಕು
ಯಾರಿಗೆ ಇತರ ಏಕಾದಶಿ ಮಾಡಲು ಸಾಧ್ಯವಿಲ್ಲವೋ ಅವರು ನಿರ್ಜಲ ಏಕಾದಶಿ ಮಾಡಿದರೆ ಸಾಕು, ಅವುಗಳ ಪುಣ್ಯ ಎಲ್ಲಾ ಈ ಒಂದು ಏಕಾದಶಿ ಆಚರನೆಯಿಂದ ಸಿಗುವುದು. ಆದರೆ ಹೆಸರೇ ಸೂಚಿಸುವಂತೆ ಏಕಾದಶಿ ದಿನ ನೀರು ಕೂಡ ಮುಟ್ಟುವಂತಿಲ್ಲ. ಬೆಳಗ್ಗೆ ಎದ್ದು ಸ್ನಾನ ಮಾಡಿ ಮಡಿಯುಟ್ಟು ಉಪವಾಸದ ಸಂಕಲ್ಪ ಕೈಗೊಳ್ಳಬೇಕು. ನಂತರ ಶ್ರೀವಿಷ್ಣುವಿನ ಪೂಜೆ ಮಾಡಬೇಕು.

ಭಗವಂತ ವಿಷ್ಣುವಿಗೆ ನೈವೇದ್ಯ ಅರ್ಪಿಸಿ
ಈ ದಿನ ಭಗವಾನ್ ವಿಷ್ಣುವಿಗೆ ನೈವೇದ್ಯ ಅರ್ಪಿಸಿ, ನೈವೇದ್ಯಕ್ಕೆ ಸಾತ್ವಿಕ ಆಹಾರವನ್ನು ಬಳಸಿ. ಸಿಹಿ, ಹಣ್ಣುಗಳನ್ನು ಅರ್ಪಿಸಿ. ಧಾರ್ಮಿಕ ನಂಬಿಕೆಗಳ ಪ್ರಕಾರ ಶ್ರೀ ವಿಷ್ಣುವಿಗೆ ನೈವೇದ್ಯ ಅರ್ಪಿಸುವಾಗ ತುಳಸಿಯನ್ನು ಇಟ್ಟು ಅರ್ಪಿಸಬೇಕು, ಇಲ್ಲದಿದ್ದರೆ ವಿಷ್ಣು ಆ ಆಹಾರಗಳನ್ನು ಸ್ವೀಕರಿಸುವುದಿಲ್ಲ.

ಅನ್ನ ತಿನ್ನಬೇಡಿ
ಉಪವಾಸ ಮಾಡುವವರು ಏನೂ ತಿನ್ನುವಂತಿಲ್ಲ, ಎಲ್ಲರಿಗೆ ಉಪವಾಸ ಮಾಡಲು ಸಾಧ್ಯವಾಗುವುದಿಲ್ಲ ಅಂಥವರು ಏಕಾದಶಿಯಂದು ಅಕ್ಕಿಯ ಯಾವುದೇ ಆಹಾರ ಸೇವಿಸಬಾರದು.

ಮಾಂಸ ಮತ್ತು ಮದ್ಯವನ್ನು ಸೇವಿಸಬೇಡಿ
ಏಕಾದಶಿ ದಿನವನ್ನು ವಿಷ್ಣುವಿನ ಆರಾಧನೆಗೆ ಸಮರ್ಪಿಸಲಾಗಿದೆ. ಈ ದಿನ ಮಾಂಸ ಮತ್ತು ಮದ್ಯ ಸೇವಿಸಬಾರದು. ನಿರ್ಜಲ ಏಕಾದಶಿ ದಿನದಂದು ಸಾತ್ವಿಕ ಆಹಾರವನ್ನು ಮಾತ್ರ ಸೇವಿಸಿ.

ಸ್ತ್ರೀ-ಪುರುಷ ಸೇರಬಾರದು
ಏಕಾದಶಿ ದಿನದಂದು ಮಿಲನ ಕ್ರಿಯೆ ನಡೆಸಬಾರದು. ಧಾರ್ಮಿಕ ನಂಬಿಕೆಗಳ ಪ್ರಕಾರ ಈ ದಿನ ದೇವರ ಕೋರ್ತನೆ ಹಾಡಬೇಕು, ಶ್ರೀ ವಿಷ್ಣುವಿನ ಮಂತ್ರ ಪಠಿಸುತ್ತಾ ದಿನ ಕಳೆಯಬೇಕು. ಮನಸ್ಸಿನಲ್ಲಿ ಯಾವುದೇ ಕೆಡಕು ಬಯಸಬಾರದು.



Click it and Unblock the Notifications
