Latest Updates
-
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು!
ನಿರ್ಜಲ ಏಕಾದಶಿ 2021: ಶುಭ ಫಲ ದೊರೆಯಲು ಈ ದಿನ ಏನು ಮಾಡಬೇಕು, ಏನು ಮಾಡಬಾರದು?
ಹಿಂದೂ ಧರ್ಮದಲ್ಲಿ ನಿರ್ಜಲ ಏಕಾದಶಿಗೆ ತುಂಬಾನೇ ಮಹತ್ವವಿದೆ. ಉಳಿದ 23 ಏಕಾದಶಿಗಳ ಫಲ ಈ ಒಂದು ಏಕಾದಶಿ ಆಚರಣೆ ಮಾಡಿದರೆ ಸಿಗುವುದು ಎಂಬ ನಂಬಿಕೆ ಇದೆ.
ನಿರ್ಜಲ ಏಕಾದಶಿಯನ್ನು ಜ್ಯೇಷ್ಠ ಮಾಸದ ಶುಕ್ಲ ಪಕ್ಷದ 11ನೇ ದಿನದಂದು ಅಂದ್ರೆ ಜೂನ್ 21ರಂದು ಆಚರಿಸಲಾಗುವುದು. ಈ ಏಕಾದಶಿಯನ್ನು ಯಾರು ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸುತ್ತಾರೋ ಅವರು ಮಾಡಿರುವ ಪಾಪಗಳಿಂದ ಮುಕ್ತಿ ಪಡೆಯುತ್ತಾರೆ ಅಲ್ಲದೆ ಅವರ ಬದುಕಿನಲ್ಲಿ ಸಂತೋಷ, ಸಂಪತ್ತು ತುಂಬಿರುತ್ತದೆ ಎಂದು ಹೇಳಲಾಗುತ್ತದೆ.
ನಿರ್ಜಲ ಏಕಾದಶಿ ಆಚರಿಸಲು ಕೆಲವೊಂದು ನಿಯಮಗಳಿವೆ, ಅವುಗಳನ್ನು ಪಾಲಿಸಿದರಷ್ಟೇ ಇದರ ಫಲ ಸಿಗುವುದು. ಈ ದಿನ ಉತ್ತಮ ಫಲಕ್ಕಾಗಿ ಏನು ಮಾಡಬಾರದು, ಏನು ಮಾಡಬೇಕು ಎಂದು ನೋಡೋಣ ಬನ್ನಿ:

ಶ್ರೀ ವಿಷ್ಣುವಿನ ಆರಾಧನೆಯಲ್ಲಿ ತುಳಸಿ ಇರಲಿ
ಏಕಾದಶಿ ಎಂಬುವುದು ವಿಷ್ಣುವಿಗೆ ಸಮರ್ಪಿತವಾದ ದಿನ. ವಿಷ್ಣುವಿಗೆ ಪ್ರಿಯವಾದವಳು ತುಳಸಿ. ಆದ್ದರಿಂದ ವಿಷ್ಣುವಿನ ಆರಾಧನೆಯಲ್ಲಿ ತುಳಸಿಗೆ ತುಂಬಾನೇ ಪ್ರಾಶಸ್ತ್ಯ ನೀಡಲಾಗಿದೆ. ಈ ದಿನ ವಿಷ್ಣು ಹಾಗೂ ಲಕ್ಷ್ಮೀಯನ್ನು ಆರಾಧಿಸುವಾಗ ತುಳಸಿ ಬಳಸಲು ಮರೆಯದಿರಿ.

ಉಪವಾಸ ಇರಬೇಕು
ಯಾರಿಗೆ ಇತರ ಏಕಾದಶಿ ಮಾಡಲು ಸಾಧ್ಯವಿಲ್ಲವೋ ಅವರು ನಿರ್ಜಲ ಏಕಾದಶಿ ಮಾಡಿದರೆ ಸಾಕು, ಅವುಗಳ ಪುಣ್ಯ ಎಲ್ಲಾ ಈ ಒಂದು ಏಕಾದಶಿ ಆಚರನೆಯಿಂದ ಸಿಗುವುದು. ಆದರೆ ಹೆಸರೇ ಸೂಚಿಸುವಂತೆ ಏಕಾದಶಿ ದಿನ ನೀರು ಕೂಡ ಮುಟ್ಟುವಂತಿಲ್ಲ. ಬೆಳಗ್ಗೆ ಎದ್ದು ಸ್ನಾನ ಮಾಡಿ ಮಡಿಯುಟ್ಟು ಉಪವಾಸದ ಸಂಕಲ್ಪ ಕೈಗೊಳ್ಳಬೇಕು. ನಂತರ ಶ್ರೀವಿಷ್ಣುವಿನ ಪೂಜೆ ಮಾಡಬೇಕು.

ಭಗವಂತ ವಿಷ್ಣುವಿಗೆ ನೈವೇದ್ಯ ಅರ್ಪಿಸಿ
ಈ ದಿನ ಭಗವಾನ್ ವಿಷ್ಣುವಿಗೆ ನೈವೇದ್ಯ ಅರ್ಪಿಸಿ, ನೈವೇದ್ಯಕ್ಕೆ ಸಾತ್ವಿಕ ಆಹಾರವನ್ನು ಬಳಸಿ. ಸಿಹಿ, ಹಣ್ಣುಗಳನ್ನು ಅರ್ಪಿಸಿ. ಧಾರ್ಮಿಕ ನಂಬಿಕೆಗಳ ಪ್ರಕಾರ ಶ್ರೀ ವಿಷ್ಣುವಿಗೆ ನೈವೇದ್ಯ ಅರ್ಪಿಸುವಾಗ ತುಳಸಿಯನ್ನು ಇಟ್ಟು ಅರ್ಪಿಸಬೇಕು, ಇಲ್ಲದಿದ್ದರೆ ವಿಷ್ಣು ಆ ಆಹಾರಗಳನ್ನು ಸ್ವೀಕರಿಸುವುದಿಲ್ಲ.

ಅನ್ನ ತಿನ್ನಬೇಡಿ
ಉಪವಾಸ ಮಾಡುವವರು ಏನೂ ತಿನ್ನುವಂತಿಲ್ಲ, ಎಲ್ಲರಿಗೆ ಉಪವಾಸ ಮಾಡಲು ಸಾಧ್ಯವಾಗುವುದಿಲ್ಲ ಅಂಥವರು ಏಕಾದಶಿಯಂದು ಅಕ್ಕಿಯ ಯಾವುದೇ ಆಹಾರ ಸೇವಿಸಬಾರದು.

ಮಾಂಸ ಮತ್ತು ಮದ್ಯವನ್ನು ಸೇವಿಸಬೇಡಿ
ಏಕಾದಶಿ ದಿನವನ್ನು ವಿಷ್ಣುವಿನ ಆರಾಧನೆಗೆ ಸಮರ್ಪಿಸಲಾಗಿದೆ. ಈ ದಿನ ಮಾಂಸ ಮತ್ತು ಮದ್ಯ ಸೇವಿಸಬಾರದು. ನಿರ್ಜಲ ಏಕಾದಶಿ ದಿನದಂದು ಸಾತ್ವಿಕ ಆಹಾರವನ್ನು ಮಾತ್ರ ಸೇವಿಸಿ.

ಸ್ತ್ರೀ-ಪುರುಷ ಸೇರಬಾರದು
ಏಕಾದಶಿ ದಿನದಂದು ಮಿಲನ ಕ್ರಿಯೆ ನಡೆಸಬಾರದು. ಧಾರ್ಮಿಕ ನಂಬಿಕೆಗಳ ಪ್ರಕಾರ ಈ ದಿನ ದೇವರ ಕೋರ್ತನೆ ಹಾಡಬೇಕು, ಶ್ರೀ ವಿಷ್ಣುವಿನ ಮಂತ್ರ ಪಠಿಸುತ್ತಾ ದಿನ ಕಳೆಯಬೇಕು. ಮನಸ್ಸಿನಲ್ಲಿ ಯಾವುದೇ ಕೆಡಕು ಬಯಸಬಾರದು.



Click it and Unblock the Notifications