Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ನಿರ್ಜಲ ಏಕಾದಶಿ 2021: ಶುಭ ಫಲ ದೊರೆಯಲು ಈ ದಿನ ಏನು ಮಾಡಬೇಕು, ಏನು ಮಾಡಬಾರದು?
ಹಿಂದೂ ಧರ್ಮದಲ್ಲಿ ನಿರ್ಜಲ ಏಕಾದಶಿಗೆ ತುಂಬಾನೇ ಮಹತ್ವವಿದೆ. ಉಳಿದ 23 ಏಕಾದಶಿಗಳ ಫಲ ಈ ಒಂದು ಏಕಾದಶಿ ಆಚರಣೆ ಮಾಡಿದರೆ ಸಿಗುವುದು ಎಂಬ ನಂಬಿಕೆ ಇದೆ.
ನಿರ್ಜಲ ಏಕಾದಶಿಯನ್ನು ಜ್ಯೇಷ್ಠ ಮಾಸದ ಶುಕ್ಲ ಪಕ್ಷದ 11ನೇ ದಿನದಂದು ಅಂದ್ರೆ ಜೂನ್ 21ರಂದು ಆಚರಿಸಲಾಗುವುದು. ಈ ಏಕಾದಶಿಯನ್ನು ಯಾರು ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸುತ್ತಾರೋ ಅವರು ಮಾಡಿರುವ ಪಾಪಗಳಿಂದ ಮುಕ್ತಿ ಪಡೆಯುತ್ತಾರೆ ಅಲ್ಲದೆ ಅವರ ಬದುಕಿನಲ್ಲಿ ಸಂತೋಷ, ಸಂಪತ್ತು ತುಂಬಿರುತ್ತದೆ ಎಂದು ಹೇಳಲಾಗುತ್ತದೆ.
ನಿರ್ಜಲ ಏಕಾದಶಿ ಆಚರಿಸಲು ಕೆಲವೊಂದು ನಿಯಮಗಳಿವೆ, ಅವುಗಳನ್ನು ಪಾಲಿಸಿದರಷ್ಟೇ ಇದರ ಫಲ ಸಿಗುವುದು. ಈ ದಿನ ಉತ್ತಮ ಫಲಕ್ಕಾಗಿ ಏನು ಮಾಡಬಾರದು, ಏನು ಮಾಡಬೇಕು ಎಂದು ನೋಡೋಣ ಬನ್ನಿ:

ಶ್ರೀ ವಿಷ್ಣುವಿನ ಆರಾಧನೆಯಲ್ಲಿ ತುಳಸಿ ಇರಲಿ
ಏಕಾದಶಿ ಎಂಬುವುದು ವಿಷ್ಣುವಿಗೆ ಸಮರ್ಪಿತವಾದ ದಿನ. ವಿಷ್ಣುವಿಗೆ ಪ್ರಿಯವಾದವಳು ತುಳಸಿ. ಆದ್ದರಿಂದ ವಿಷ್ಣುವಿನ ಆರಾಧನೆಯಲ್ಲಿ ತುಳಸಿಗೆ ತುಂಬಾನೇ ಪ್ರಾಶಸ್ತ್ಯ ನೀಡಲಾಗಿದೆ. ಈ ದಿನ ವಿಷ್ಣು ಹಾಗೂ ಲಕ್ಷ್ಮೀಯನ್ನು ಆರಾಧಿಸುವಾಗ ತುಳಸಿ ಬಳಸಲು ಮರೆಯದಿರಿ.

ಉಪವಾಸ ಇರಬೇಕು
ಯಾರಿಗೆ ಇತರ ಏಕಾದಶಿ ಮಾಡಲು ಸಾಧ್ಯವಿಲ್ಲವೋ ಅವರು ನಿರ್ಜಲ ಏಕಾದಶಿ ಮಾಡಿದರೆ ಸಾಕು, ಅವುಗಳ ಪುಣ್ಯ ಎಲ್ಲಾ ಈ ಒಂದು ಏಕಾದಶಿ ಆಚರನೆಯಿಂದ ಸಿಗುವುದು. ಆದರೆ ಹೆಸರೇ ಸೂಚಿಸುವಂತೆ ಏಕಾದಶಿ ದಿನ ನೀರು ಕೂಡ ಮುಟ್ಟುವಂತಿಲ್ಲ. ಬೆಳಗ್ಗೆ ಎದ್ದು ಸ್ನಾನ ಮಾಡಿ ಮಡಿಯುಟ್ಟು ಉಪವಾಸದ ಸಂಕಲ್ಪ ಕೈಗೊಳ್ಳಬೇಕು. ನಂತರ ಶ್ರೀವಿಷ್ಣುವಿನ ಪೂಜೆ ಮಾಡಬೇಕು.

ಭಗವಂತ ವಿಷ್ಣುವಿಗೆ ನೈವೇದ್ಯ ಅರ್ಪಿಸಿ
ಈ ದಿನ ಭಗವಾನ್ ವಿಷ್ಣುವಿಗೆ ನೈವೇದ್ಯ ಅರ್ಪಿಸಿ, ನೈವೇದ್ಯಕ್ಕೆ ಸಾತ್ವಿಕ ಆಹಾರವನ್ನು ಬಳಸಿ. ಸಿಹಿ, ಹಣ್ಣುಗಳನ್ನು ಅರ್ಪಿಸಿ. ಧಾರ್ಮಿಕ ನಂಬಿಕೆಗಳ ಪ್ರಕಾರ ಶ್ರೀ ವಿಷ್ಣುವಿಗೆ ನೈವೇದ್ಯ ಅರ್ಪಿಸುವಾಗ ತುಳಸಿಯನ್ನು ಇಟ್ಟು ಅರ್ಪಿಸಬೇಕು, ಇಲ್ಲದಿದ್ದರೆ ವಿಷ್ಣು ಆ ಆಹಾರಗಳನ್ನು ಸ್ವೀಕರಿಸುವುದಿಲ್ಲ.

ಅನ್ನ ತಿನ್ನಬೇಡಿ
ಉಪವಾಸ ಮಾಡುವವರು ಏನೂ ತಿನ್ನುವಂತಿಲ್ಲ, ಎಲ್ಲರಿಗೆ ಉಪವಾಸ ಮಾಡಲು ಸಾಧ್ಯವಾಗುವುದಿಲ್ಲ ಅಂಥವರು ಏಕಾದಶಿಯಂದು ಅಕ್ಕಿಯ ಯಾವುದೇ ಆಹಾರ ಸೇವಿಸಬಾರದು.

ಮಾಂಸ ಮತ್ತು ಮದ್ಯವನ್ನು ಸೇವಿಸಬೇಡಿ
ಏಕಾದಶಿ ದಿನವನ್ನು ವಿಷ್ಣುವಿನ ಆರಾಧನೆಗೆ ಸಮರ್ಪಿಸಲಾಗಿದೆ. ಈ ದಿನ ಮಾಂಸ ಮತ್ತು ಮದ್ಯ ಸೇವಿಸಬಾರದು. ನಿರ್ಜಲ ಏಕಾದಶಿ ದಿನದಂದು ಸಾತ್ವಿಕ ಆಹಾರವನ್ನು ಮಾತ್ರ ಸೇವಿಸಿ.

ಸ್ತ್ರೀ-ಪುರುಷ ಸೇರಬಾರದು
ಏಕಾದಶಿ ದಿನದಂದು ಮಿಲನ ಕ್ರಿಯೆ ನಡೆಸಬಾರದು. ಧಾರ್ಮಿಕ ನಂಬಿಕೆಗಳ ಪ್ರಕಾರ ಈ ದಿನ ದೇವರ ಕೋರ್ತನೆ ಹಾಡಬೇಕು, ಶ್ರೀ ವಿಷ್ಣುವಿನ ಮಂತ್ರ ಪಠಿಸುತ್ತಾ ದಿನ ಕಳೆಯಬೇಕು. ಮನಸ್ಸಿನಲ್ಲಿ ಯಾವುದೇ ಕೆಡಕು ಬಯಸಬಾರದು.



Click it and Unblock the Notifications