Latest Updates
-
ಜೀವನದಲ್ಲಿ ಮಹತ್ವದ ಬದಲಾವಣೆ, ವೈವಾಹಿಕ ಯೋಗ! ಕೊಂಚ ಒತ್ತಡ, ತಾಳ್ಮೆ ಇರಲಿ -
March 06 Horoscope: ಸಾಲ ನೀಡುವಾಗ ಹತ್ತು ಬಾರಿ ಆಲೋಚಿಸಿ! -
ಮೈದಾ, ಮೊಟ್ಟೆ ಎರಡೂ ಬೇಡ! ಈ ಹೊಸ ರುಚಿಯ ಕೇಕ್ ಮಾಡಿ ನೋಡಿ.. ಶುಗರ್ ಇರುವವರು ತಿನ್ನಬಹುದು -
ಉದ್ದು ಬೇಡ 1 ಕಪ್ ರವೆ ಇದ್ರೆ ಥಟ್ ಅಂತ ವಡೆ ಮಾಡಿಕೊಳ್ಳಿ: ಬ್ರೇಕ್ಫಾಸ್ಟ್ಗೆ ಇದು ಬೆಸ್ಟ್ ರೆಸಿಪಿ! -
ಕೊನೆಗೂ ಕಣ್ಣು ಬಿಟ್ಟ ಶುಕ್ರ-ಶನಿ: ಈ ರಾಶಿಯವರ ಜೀವನದಲ್ಲಿ ಭೌತಿಕ ಸುಖ! ಸಂಪತ್ತು ತುಂಬಿ ತುಳುಕಲಿದೆ -
ಬದನೆಕಾಯಿ ಕಹಿ ತೆಗೆಯೋದು ಹೇಗೆ? ಈ ಸಿಂಪಲ್ ಟ್ರಿಕ್ ಬಳಸಿ.. ಬಲು ರುಚಿ! ಕಹಿ ಅನ್ನೋದೇ ಇರಲ್ಲ -
ಮಧ್ಯಪ್ರಾಚ್ಯ ಸಂಘರ್ಷ: ಭಾರತದಲ್ಲಿ ಏರಿಕೆಯಾಗಲಿದೆ ಈ ವಸ್ತುಗಳ ಬೆಲೆ! -
ಇವ್ರು ಬೇಗ ಲವ್ನಲ್ಲಿ ಬೀಳ್ತಾರೆ.. ಮದುವೆ ಅಂದ್ರೆ ಅನ್ಪ್ರೆಡಿಕ್ಟಬಲ್! ನಿಮ್ಮ ಜನ್ಮದಿನಾಂಕ ಇದೇನಾ? -
ಬೇಸಿಗೆಯ ಉರಿ ಬಿಸಿಲಿನಲ್ಲಿ ಫ್ರಿಡ್ಜ್ನಲ್ಲಿಟ್ಟ ಈ ಹಣ್ಣು ಸೇವಿಸಬೇಡಿ! ಎದುರಾಗುತ್ತೆ ಆಪತ್ತು! -
ಸಕ್ಕರೆ ಬೇಡ, ಪಾಕವೂ ಬೇಡ.. ಅಜ್ಜ-ಅಜ್ಜಿಯರ ಕಾಲದ ಹೆಲ್ದಿ ಲಡ್ಡು! ತಿಂದ್ರೆ ತೂಕ ಇಳಿಯುತ್ತೆ, ಶುಗರ್ಗೂ ಬೆಸ್ಟ್
ನಿರ್ಜಲ ಏಕಾದಶಿ 2021: ಶುಭ ಫಲ ದೊರೆಯಲು ಈ ದಿನ ಏನು ಮಾಡಬೇಕು, ಏನು ಮಾಡಬಾರದು?
ಹಿಂದೂ ಧರ್ಮದಲ್ಲಿ ನಿರ್ಜಲ ಏಕಾದಶಿಗೆ ತುಂಬಾನೇ ಮಹತ್ವವಿದೆ. ಉಳಿದ 23 ಏಕಾದಶಿಗಳ ಫಲ ಈ ಒಂದು ಏಕಾದಶಿ ಆಚರಣೆ ಮಾಡಿದರೆ ಸಿಗುವುದು ಎಂಬ ನಂಬಿಕೆ ಇದೆ.
ನಿರ್ಜಲ ಏಕಾದಶಿಯನ್ನು ಜ್ಯೇಷ್ಠ ಮಾಸದ ಶುಕ್ಲ ಪಕ್ಷದ 11ನೇ ದಿನದಂದು ಅಂದ್ರೆ ಜೂನ್ 21ರಂದು ಆಚರಿಸಲಾಗುವುದು. ಈ ಏಕಾದಶಿಯನ್ನು ಯಾರು ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸುತ್ತಾರೋ ಅವರು ಮಾಡಿರುವ ಪಾಪಗಳಿಂದ ಮುಕ್ತಿ ಪಡೆಯುತ್ತಾರೆ ಅಲ್ಲದೆ ಅವರ ಬದುಕಿನಲ್ಲಿ ಸಂತೋಷ, ಸಂಪತ್ತು ತುಂಬಿರುತ್ತದೆ ಎಂದು ಹೇಳಲಾಗುತ್ತದೆ.
ನಿರ್ಜಲ ಏಕಾದಶಿ ಆಚರಿಸಲು ಕೆಲವೊಂದು ನಿಯಮಗಳಿವೆ, ಅವುಗಳನ್ನು ಪಾಲಿಸಿದರಷ್ಟೇ ಇದರ ಫಲ ಸಿಗುವುದು. ಈ ದಿನ ಉತ್ತಮ ಫಲಕ್ಕಾಗಿ ಏನು ಮಾಡಬಾರದು, ಏನು ಮಾಡಬೇಕು ಎಂದು ನೋಡೋಣ ಬನ್ನಿ:

ಶ್ರೀ ವಿಷ್ಣುವಿನ ಆರಾಧನೆಯಲ್ಲಿ ತುಳಸಿ ಇರಲಿ
ಏಕಾದಶಿ ಎಂಬುವುದು ವಿಷ್ಣುವಿಗೆ ಸಮರ್ಪಿತವಾದ ದಿನ. ವಿಷ್ಣುವಿಗೆ ಪ್ರಿಯವಾದವಳು ತುಳಸಿ. ಆದ್ದರಿಂದ ವಿಷ್ಣುವಿನ ಆರಾಧನೆಯಲ್ಲಿ ತುಳಸಿಗೆ ತುಂಬಾನೇ ಪ್ರಾಶಸ್ತ್ಯ ನೀಡಲಾಗಿದೆ. ಈ ದಿನ ವಿಷ್ಣು ಹಾಗೂ ಲಕ್ಷ್ಮೀಯನ್ನು ಆರಾಧಿಸುವಾಗ ತುಳಸಿ ಬಳಸಲು ಮರೆಯದಿರಿ.

ಉಪವಾಸ ಇರಬೇಕು
ಯಾರಿಗೆ ಇತರ ಏಕಾದಶಿ ಮಾಡಲು ಸಾಧ್ಯವಿಲ್ಲವೋ ಅವರು ನಿರ್ಜಲ ಏಕಾದಶಿ ಮಾಡಿದರೆ ಸಾಕು, ಅವುಗಳ ಪುಣ್ಯ ಎಲ್ಲಾ ಈ ಒಂದು ಏಕಾದಶಿ ಆಚರನೆಯಿಂದ ಸಿಗುವುದು. ಆದರೆ ಹೆಸರೇ ಸೂಚಿಸುವಂತೆ ಏಕಾದಶಿ ದಿನ ನೀರು ಕೂಡ ಮುಟ್ಟುವಂತಿಲ್ಲ. ಬೆಳಗ್ಗೆ ಎದ್ದು ಸ್ನಾನ ಮಾಡಿ ಮಡಿಯುಟ್ಟು ಉಪವಾಸದ ಸಂಕಲ್ಪ ಕೈಗೊಳ್ಳಬೇಕು. ನಂತರ ಶ್ರೀವಿಷ್ಣುವಿನ ಪೂಜೆ ಮಾಡಬೇಕು.

ಭಗವಂತ ವಿಷ್ಣುವಿಗೆ ನೈವೇದ್ಯ ಅರ್ಪಿಸಿ
ಈ ದಿನ ಭಗವಾನ್ ವಿಷ್ಣುವಿಗೆ ನೈವೇದ್ಯ ಅರ್ಪಿಸಿ, ನೈವೇದ್ಯಕ್ಕೆ ಸಾತ್ವಿಕ ಆಹಾರವನ್ನು ಬಳಸಿ. ಸಿಹಿ, ಹಣ್ಣುಗಳನ್ನು ಅರ್ಪಿಸಿ. ಧಾರ್ಮಿಕ ನಂಬಿಕೆಗಳ ಪ್ರಕಾರ ಶ್ರೀ ವಿಷ್ಣುವಿಗೆ ನೈವೇದ್ಯ ಅರ್ಪಿಸುವಾಗ ತುಳಸಿಯನ್ನು ಇಟ್ಟು ಅರ್ಪಿಸಬೇಕು, ಇಲ್ಲದಿದ್ದರೆ ವಿಷ್ಣು ಆ ಆಹಾರಗಳನ್ನು ಸ್ವೀಕರಿಸುವುದಿಲ್ಲ.

ಅನ್ನ ತಿನ್ನಬೇಡಿ
ಉಪವಾಸ ಮಾಡುವವರು ಏನೂ ತಿನ್ನುವಂತಿಲ್ಲ, ಎಲ್ಲರಿಗೆ ಉಪವಾಸ ಮಾಡಲು ಸಾಧ್ಯವಾಗುವುದಿಲ್ಲ ಅಂಥವರು ಏಕಾದಶಿಯಂದು ಅಕ್ಕಿಯ ಯಾವುದೇ ಆಹಾರ ಸೇವಿಸಬಾರದು.

ಮಾಂಸ ಮತ್ತು ಮದ್ಯವನ್ನು ಸೇವಿಸಬೇಡಿ
ಏಕಾದಶಿ ದಿನವನ್ನು ವಿಷ್ಣುವಿನ ಆರಾಧನೆಗೆ ಸಮರ್ಪಿಸಲಾಗಿದೆ. ಈ ದಿನ ಮಾಂಸ ಮತ್ತು ಮದ್ಯ ಸೇವಿಸಬಾರದು. ನಿರ್ಜಲ ಏಕಾದಶಿ ದಿನದಂದು ಸಾತ್ವಿಕ ಆಹಾರವನ್ನು ಮಾತ್ರ ಸೇವಿಸಿ.

ಸ್ತ್ರೀ-ಪುರುಷ ಸೇರಬಾರದು
ಏಕಾದಶಿ ದಿನದಂದು ಮಿಲನ ಕ್ರಿಯೆ ನಡೆಸಬಾರದು. ಧಾರ್ಮಿಕ ನಂಬಿಕೆಗಳ ಪ್ರಕಾರ ಈ ದಿನ ದೇವರ ಕೋರ್ತನೆ ಹಾಡಬೇಕು, ಶ್ರೀ ವಿಷ್ಣುವಿನ ಮಂತ್ರ ಪಠಿಸುತ್ತಾ ದಿನ ಕಳೆಯಬೇಕು. ಮನಸ್ಸಿನಲ್ಲಿ ಯಾವುದೇ ಕೆಡಕು ಬಯಸಬಾರದು.



Click it and Unblock the Notifications











