Latest Updates
-
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ!
ನಿರ್ಜಲ ಏಕಾದಶಿ 2021: ಶುಭ ಫಲ ದೊರೆಯಲು ಈ ದಿನ ಏನು ಮಾಡಬೇಕು, ಏನು ಮಾಡಬಾರದು?
ಹಿಂದೂ ಧರ್ಮದಲ್ಲಿ ನಿರ್ಜಲ ಏಕಾದಶಿಗೆ ತುಂಬಾನೇ ಮಹತ್ವವಿದೆ. ಉಳಿದ 23 ಏಕಾದಶಿಗಳ ಫಲ ಈ ಒಂದು ಏಕಾದಶಿ ಆಚರಣೆ ಮಾಡಿದರೆ ಸಿಗುವುದು ಎಂಬ ನಂಬಿಕೆ ಇದೆ.
ನಿರ್ಜಲ ಏಕಾದಶಿಯನ್ನು ಜ್ಯೇಷ್ಠ ಮಾಸದ ಶುಕ್ಲ ಪಕ್ಷದ 11ನೇ ದಿನದಂದು ಅಂದ್ರೆ ಜೂನ್ 21ರಂದು ಆಚರಿಸಲಾಗುವುದು. ಈ ಏಕಾದಶಿಯನ್ನು ಯಾರು ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸುತ್ತಾರೋ ಅವರು ಮಾಡಿರುವ ಪಾಪಗಳಿಂದ ಮುಕ್ತಿ ಪಡೆಯುತ್ತಾರೆ ಅಲ್ಲದೆ ಅವರ ಬದುಕಿನಲ್ಲಿ ಸಂತೋಷ, ಸಂಪತ್ತು ತುಂಬಿರುತ್ತದೆ ಎಂದು ಹೇಳಲಾಗುತ್ತದೆ.
ನಿರ್ಜಲ ಏಕಾದಶಿ ಆಚರಿಸಲು ಕೆಲವೊಂದು ನಿಯಮಗಳಿವೆ, ಅವುಗಳನ್ನು ಪಾಲಿಸಿದರಷ್ಟೇ ಇದರ ಫಲ ಸಿಗುವುದು. ಈ ದಿನ ಉತ್ತಮ ಫಲಕ್ಕಾಗಿ ಏನು ಮಾಡಬಾರದು, ಏನು ಮಾಡಬೇಕು ಎಂದು ನೋಡೋಣ ಬನ್ನಿ:

ಶ್ರೀ ವಿಷ್ಣುವಿನ ಆರಾಧನೆಯಲ್ಲಿ ತುಳಸಿ ಇರಲಿ
ಏಕಾದಶಿ ಎಂಬುವುದು ವಿಷ್ಣುವಿಗೆ ಸಮರ್ಪಿತವಾದ ದಿನ. ವಿಷ್ಣುವಿಗೆ ಪ್ರಿಯವಾದವಳು ತುಳಸಿ. ಆದ್ದರಿಂದ ವಿಷ್ಣುವಿನ ಆರಾಧನೆಯಲ್ಲಿ ತುಳಸಿಗೆ ತುಂಬಾನೇ ಪ್ರಾಶಸ್ತ್ಯ ನೀಡಲಾಗಿದೆ. ಈ ದಿನ ವಿಷ್ಣು ಹಾಗೂ ಲಕ್ಷ್ಮೀಯನ್ನು ಆರಾಧಿಸುವಾಗ ತುಳಸಿ ಬಳಸಲು ಮರೆಯದಿರಿ.

ಉಪವಾಸ ಇರಬೇಕು
ಯಾರಿಗೆ ಇತರ ಏಕಾದಶಿ ಮಾಡಲು ಸಾಧ್ಯವಿಲ್ಲವೋ ಅವರು ನಿರ್ಜಲ ಏಕಾದಶಿ ಮಾಡಿದರೆ ಸಾಕು, ಅವುಗಳ ಪುಣ್ಯ ಎಲ್ಲಾ ಈ ಒಂದು ಏಕಾದಶಿ ಆಚರನೆಯಿಂದ ಸಿಗುವುದು. ಆದರೆ ಹೆಸರೇ ಸೂಚಿಸುವಂತೆ ಏಕಾದಶಿ ದಿನ ನೀರು ಕೂಡ ಮುಟ್ಟುವಂತಿಲ್ಲ. ಬೆಳಗ್ಗೆ ಎದ್ದು ಸ್ನಾನ ಮಾಡಿ ಮಡಿಯುಟ್ಟು ಉಪವಾಸದ ಸಂಕಲ್ಪ ಕೈಗೊಳ್ಳಬೇಕು. ನಂತರ ಶ್ರೀವಿಷ್ಣುವಿನ ಪೂಜೆ ಮಾಡಬೇಕು.

ಭಗವಂತ ವಿಷ್ಣುವಿಗೆ ನೈವೇದ್ಯ ಅರ್ಪಿಸಿ
ಈ ದಿನ ಭಗವಾನ್ ವಿಷ್ಣುವಿಗೆ ನೈವೇದ್ಯ ಅರ್ಪಿಸಿ, ನೈವೇದ್ಯಕ್ಕೆ ಸಾತ್ವಿಕ ಆಹಾರವನ್ನು ಬಳಸಿ. ಸಿಹಿ, ಹಣ್ಣುಗಳನ್ನು ಅರ್ಪಿಸಿ. ಧಾರ್ಮಿಕ ನಂಬಿಕೆಗಳ ಪ್ರಕಾರ ಶ್ರೀ ವಿಷ್ಣುವಿಗೆ ನೈವೇದ್ಯ ಅರ್ಪಿಸುವಾಗ ತುಳಸಿಯನ್ನು ಇಟ್ಟು ಅರ್ಪಿಸಬೇಕು, ಇಲ್ಲದಿದ್ದರೆ ವಿಷ್ಣು ಆ ಆಹಾರಗಳನ್ನು ಸ್ವೀಕರಿಸುವುದಿಲ್ಲ.

ಅನ್ನ ತಿನ್ನಬೇಡಿ
ಉಪವಾಸ ಮಾಡುವವರು ಏನೂ ತಿನ್ನುವಂತಿಲ್ಲ, ಎಲ್ಲರಿಗೆ ಉಪವಾಸ ಮಾಡಲು ಸಾಧ್ಯವಾಗುವುದಿಲ್ಲ ಅಂಥವರು ಏಕಾದಶಿಯಂದು ಅಕ್ಕಿಯ ಯಾವುದೇ ಆಹಾರ ಸೇವಿಸಬಾರದು.

ಮಾಂಸ ಮತ್ತು ಮದ್ಯವನ್ನು ಸೇವಿಸಬೇಡಿ
ಏಕಾದಶಿ ದಿನವನ್ನು ವಿಷ್ಣುವಿನ ಆರಾಧನೆಗೆ ಸಮರ್ಪಿಸಲಾಗಿದೆ. ಈ ದಿನ ಮಾಂಸ ಮತ್ತು ಮದ್ಯ ಸೇವಿಸಬಾರದು. ನಿರ್ಜಲ ಏಕಾದಶಿ ದಿನದಂದು ಸಾತ್ವಿಕ ಆಹಾರವನ್ನು ಮಾತ್ರ ಸೇವಿಸಿ.

ಸ್ತ್ರೀ-ಪುರುಷ ಸೇರಬಾರದು
ಏಕಾದಶಿ ದಿನದಂದು ಮಿಲನ ಕ್ರಿಯೆ ನಡೆಸಬಾರದು. ಧಾರ್ಮಿಕ ನಂಬಿಕೆಗಳ ಪ್ರಕಾರ ಈ ದಿನ ದೇವರ ಕೋರ್ತನೆ ಹಾಡಬೇಕು, ಶ್ರೀ ವಿಷ್ಣುವಿನ ಮಂತ್ರ ಪಠಿಸುತ್ತಾ ದಿನ ಕಳೆಯಬೇಕು. ಮನಸ್ಸಿನಲ್ಲಿ ಯಾವುದೇ ಕೆಡಕು ಬಯಸಬಾರದು.



Click it and Unblock the Notifications