ಹಣದ ಸಮಸ್ಯೆಯಿಂದ ದೂರಾಗಲು ಮಂಗಳವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿ

ಪ್ರತಿಯೊಂದು ದಿನ ಒಂದೊಂದು ದೇವರಿಗೆ ಮೀಸಲಾಗಿದೆ. ಹಾಗೆಯೇ ನಾವು ಆ ದೇವರಿಗೆ ಪ್ರೀತಿಪಾತ್ರವಾದ ರೀತಿ ಪೂಜೆ ಸಲ್ಲಿಸಿದರೆ ನಮ್ಮ ಇಷ್ಟಾರ್ಥಗಳು ನೆರವೇರುತ್ತದೆ. ಅದರಂತೆಯೇ ಮಂಗಳವಾರ ರಾಮನ ಬಂಟ ಆಂಜನೇಯನಿಗೆ ಮೀಸಲಾದ ದಿನ.

ಆಂಜನೇಯನ ಆಶೀರ್ವಾದವನ್ನು ಪಡೆಯಲು ಹಾಗೂ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವವರಿಗೆ ಇದರಿಂದ ಮುಕ್ತಿ ಸಿಗಲು ಹನುಮಂತನನ್ನು ಮಂಗಳವಾರದ ದಿನ ಹೀಗೆ ಪ್ರಾರ್ಥಿಸಬೇಕಂತೆ. ಇದರಿಂದ ಹಣಕ್ಕೆ ಸಂಬಂಧಿಸಿದ ತೊಂದರೆಗಳು ದೂರವಾಗುತ್ತವೆ ಎಂದು ನಂಬಲಾಗಿದೆ.

ಅರಳಿ ಮರದ ಎಲೆ

ಅರಳಿ ಮರದ ಎಲೆ

ಮಂಗಳವಾರ ಸ್ನಾನದ ನಂತರ 11 ಅರಳಿ ಮರದ ಎಲೆಗಳನ್ನು ಕಿತ್ತುಕೊಳ್ಳಿ. ಈ ಎಲೆಗಳನ್ನು ಗಂಗಾಜಲದಿಂದ ಸ್ವಚ್ಛಗೊಳಿಸಿದ ನಂತರ ಕುಂಕುಮ ಅಥವಾ ಶ್ರೀಗಂಧದಿಂದ ಶ್ರೀರಾಮ ಎಂದು ಬರೆಯಿರಿ. ಈ ಎಲೆಗಳ ಮಾಲೆಯನ್ನು ಮಾಡಿ ಹನುಮಂತನಿಗೆ ಅರ್ಪಿಸಿ. ಇದು ಶೀಘ್ರದಲ್ಲೇ ಹಣಕಾಸಿನ ಸಮಸ್ಯೆಯನ್ನು ಪರಿಹರಿಸುತ್ತದೆ ಎಂದು ನಂಬಲಾಗಿದೆ.

ಗ್ರಹ ಶಾಂತಿ

ಗ್ರಹ ಶಾಂತಿ

ಮಂಗಳವಾರ ಸಂಜೆ, ಹನುಮಾನ್ ದೇವಸ್ಥಾನದಲ್ಲಿ ಲಡ್ಡುಗಳಲ್ಲಿ ತುಳಸಿ ಎಲೆಗಳನ್ನು ಹಾಕಿ ಅರ್ಪಿಸಿ. ಭಜರಂಗಬಲಿ ಲಡ್ಡುಗಳನ್ನು ತುಂಬಾ ಇಷ್ಟಪಡುತ್ತಾರೆ ಎಂದು ಹೇಳಲಾಗುತ್ತದೆ. ಈ ಪರಿಹಾರವು ಗ್ರಹಗಳ ಶಾಂತಿಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

ವೀಳ್ಯದೆಲೆ

ವೀಳ್ಯದೆಲೆ

ಯಾವುದೇ ಕೆಲಸವು ದೀರ್ಘಕಾಲದವರೆಗೆ ಆಗದಿದ್ದರೆ ಅಥವಾ ಯಾವುದೇ ನಿರ್ದಿಷ್ಟ ಕೆಲಸಕ್ಕೆ ಹೋಗುವ ಮೊದಲು ಮಂಗಳವಾರದಂದು ಹನುಮಂತನಿಗೆ ವೀಳ್ಯದೆಲೆಯನ್ನು ಅರ್ಪಿಸಿ. ಇದರಿಂದ ಪ್ರತಿ ಕೆಲಸದಲ್ಲೂ ಯಶಸ್ಸು ಸಿಗುತ್ತದೆ ಎನ್ನುತ್ತಾರೆ.

ಮಲ್ಲಿಗೆ ಹೂವಿನ ಎಣ್ಣೆ

ಮಲ್ಲಿಗೆ ಹೂವಿನ ಎಣ್ಣೆ

ಪ್ರತಿ ಮಂಗಳವಾರ ಮಲ್ಲಿಗೆ ಎಣ್ಣೆಯ ದೀಪವನ್ನು ಬೆಳಗಿಸಿ ಹನುಮಂತನಿಗೆ ಮಲ್ಲಿಗೆ ಎಣ್ಣೆ ಮತ್ತು ಹೂವುಗಳನ್ನು ಅರ್ಪಿಸಿದರೆ ಹನುಮಾನ್ ಸಂತಸಪಡುತ್ತಾನೆ. ಇದರಿಂದ ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸುತ್ತದೆ.

English summary

Offer Peepal leaves to Lord Hanuman on Tuesday to get rid of financial problems in kannada

Here we are discussing about Offer Peepal leaves to Lord Hanuman on Tuesday to get rid of financial problems in kannada. Read more.
X
Desktop Bottom Promotion