Latest Updates
-
ಸೆಪ್ಟೆಂಬರ್ 15ರ ಲವ್ ರಾಶಿಫಲ: ನಿಮ್ಮ ಸಂಗಾತಿಯ ಮನ ಗೆಲ್ಲಲು ಈ 2 ನಿಮಿಷದ ಸೂತ್ರ ಬಳಸಿ! -
ಮಳೆಗಾಲದ ಎಚ್ಚರಿಕೆ: ಮುಂಬೈ-ಪುಣೆಯಲ್ಲಿ ಮನೆ ಸೋರಿಕೆ ತಡೆಯಲು 30 ನಿಮಿಷದ ಸಿಂಪಲ್ ಟಿಪ್ಸ್ -
ಅಡುಗೆಮನೆ ಬಜೆಟ್ ಏರಿಕೆ: ₹30 ಕ್ಕಿಂತ ಕಡಿಮೆ ವೆಚ್ಚದಲ್ಲಿ ಆರೋಗ್ಯಕರ ಪ್ರೋಟೀನ್ ಆಹಾರ ಪಡೆಯುವುದು ಹೇಗೆ? -
iOS 27 ಅಪ್ಡೇಟ್ ನಂತರ ಫೋನ್ ಬ್ಯಾಟರಿ ಬೇಗ ಖಾಲಿಯಾಗುತ್ತಿದೆಯೇ? ಗಾಬರಿಯಾಗಬೇಡಿ, ಈ ಟಿಪ್ಸ್ ಫಾಲೋ ಮಾಡಿ! -
ಗಣೇಶ ವಿಸರ್ಜನೆ: ಮೂರ್ತಿ ಹೊರುವಾಗ ಬೆನ್ನು ನೋವು ಕಾಡದಿರಲು ಈ ಸರಳ ಟಿಪ್ಸ್ ಪಾಲಿಸಿ -
ಸಣ್ಣ ಫ್ಲ್ಯಾಟ್ನಲ್ಲಿ ಗಣೇಶೋತ್ಸವ: ಅತಿಥಿಗಳಿಗಾಗಿ ಜಾಗ ಮತ್ತು ಸುರಕ್ಷತೆಗಾಗಿ ಈ 5 ಟಿಪ್ಸ್ ಫಾಲೋ ಮಾಡಿ -
ಗಣೇಶೋತ್ಸವದ ಪ್ರಸಾದ ಬೇಗ ಹಾಳಾಗುತ್ತಿದೆಯೇ? ಮೋದಕ ಮತ್ತು ಸಿಹಿ ತಿಂಡಿಗಳನ್ನು ತಾಜಾವಾಗಿಡಲು ಈ ಟಿಪ್ಸ್ ಪಾಲಿಸಿ! -
ಗಣೇಶೋತ್ಸವ 2026: ಲಾಲ್ಬಾಗ್ಚಾ ರಾಜನ ದರ್ಶನಕ್ಕೆ ಬೆಸ್ಟ್ ಟೈಮ್ ಯಾವುದು? ಮೆಟ್ರೋ ಮತ್ತು ಲೈವ್ ಅಪ್ಡೇಟ್ಸ್ ಇಲ್ಲಿದೆ! -
ಹಬ್ಬದ ಪೂಜೆಯ ವೇಳೆ ಮೊಣಕಾಲು ಮತ್ತು ಬೆನ್ನು ನೋವು ಕಾಡುತ್ತಿದೆಯೇ? ನೋವಿಲ್ಲದೆ ಪೂಜೆ ಮಾಡಲು ಇಲ್ಲಿದೆ 10 ನಿಮಿಷಗಳ ಸಿಂಪಲ್ ಟಿಪ್ಸ್! -
ಗಣೇಶೋತ್ಸವದ ಸೌಂಡ್ ಕಿರಿಕಿರಿ: ನೆರೆಹೊರೆಯವರ ಜೊತೆ ಜಗಳವಿಲ್ಲದೆ ನೆಮ್ಮದಿಯ ನಿದ್ರೆ ಪಡೆಯುವುದು ಹೇಗೆ?
ಹಣದ ಸಮಸ್ಯೆಯಿಂದ ದೂರಾಗಲು ಮಂಗಳವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿ
ಪ್ರತಿಯೊಂದು ದಿನ ಒಂದೊಂದು ದೇವರಿಗೆ ಮೀಸಲಾಗಿದೆ. ಹಾಗೆಯೇ ನಾವು ಆ ದೇವರಿಗೆ ಪ್ರೀತಿಪಾತ್ರವಾದ ರೀತಿ ಪೂಜೆ ಸಲ್ಲಿಸಿದರೆ ನಮ್ಮ ಇಷ್ಟಾರ್ಥಗಳು ನೆರವೇರುತ್ತದೆ. ಅದರಂತೆಯೇ ಮಂಗಳವಾರ ರಾಮನ ಬಂಟ ಆಂಜನೇಯನಿಗೆ ಮೀಸಲಾದ ದಿನ.
ಆಂಜನೇಯನ ಆಶೀರ್ವಾದವನ್ನು ಪಡೆಯಲು ಹಾಗೂ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವವರಿಗೆ ಇದರಿಂದ ಮುಕ್ತಿ ಸಿಗಲು ಹನುಮಂತನನ್ನು ಮಂಗಳವಾರದ ದಿನ ಹೀಗೆ ಪ್ರಾರ್ಥಿಸಬೇಕಂತೆ. ಇದರಿಂದ ಹಣಕ್ಕೆ ಸಂಬಂಧಿಸಿದ ತೊಂದರೆಗಳು ದೂರವಾಗುತ್ತವೆ ಎಂದು ನಂಬಲಾಗಿದೆ.

ಅರಳಿ ಮರದ ಎಲೆ
ಮಂಗಳವಾರ ಸ್ನಾನದ ನಂತರ 11 ಅರಳಿ ಮರದ ಎಲೆಗಳನ್ನು ಕಿತ್ತುಕೊಳ್ಳಿ. ಈ ಎಲೆಗಳನ್ನು ಗಂಗಾಜಲದಿಂದ ಸ್ವಚ್ಛಗೊಳಿಸಿದ ನಂತರ ಕುಂಕುಮ ಅಥವಾ ಶ್ರೀಗಂಧದಿಂದ ಶ್ರೀರಾಮ ಎಂದು ಬರೆಯಿರಿ. ಈ ಎಲೆಗಳ ಮಾಲೆಯನ್ನು ಮಾಡಿ ಹನುಮಂತನಿಗೆ ಅರ್ಪಿಸಿ. ಇದು ಶೀಘ್ರದಲ್ಲೇ ಹಣಕಾಸಿನ ಸಮಸ್ಯೆಯನ್ನು ಪರಿಹರಿಸುತ್ತದೆ ಎಂದು ನಂಬಲಾಗಿದೆ.

ಗ್ರಹ ಶಾಂತಿ
ಮಂಗಳವಾರ ಸಂಜೆ, ಹನುಮಾನ್ ದೇವಸ್ಥಾನದಲ್ಲಿ ಲಡ್ಡುಗಳಲ್ಲಿ ತುಳಸಿ ಎಲೆಗಳನ್ನು ಹಾಕಿ ಅರ್ಪಿಸಿ. ಭಜರಂಗಬಲಿ ಲಡ್ಡುಗಳನ್ನು ತುಂಬಾ ಇಷ್ಟಪಡುತ್ತಾರೆ ಎಂದು ಹೇಳಲಾಗುತ್ತದೆ. ಈ ಪರಿಹಾರವು ಗ್ರಹಗಳ ಶಾಂತಿಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

ವೀಳ್ಯದೆಲೆ
ಯಾವುದೇ ಕೆಲಸವು ದೀರ್ಘಕಾಲದವರೆಗೆ ಆಗದಿದ್ದರೆ ಅಥವಾ ಯಾವುದೇ ನಿರ್ದಿಷ್ಟ ಕೆಲಸಕ್ಕೆ ಹೋಗುವ ಮೊದಲು ಮಂಗಳವಾರದಂದು ಹನುಮಂತನಿಗೆ ವೀಳ್ಯದೆಲೆಯನ್ನು ಅರ್ಪಿಸಿ. ಇದರಿಂದ ಪ್ರತಿ ಕೆಲಸದಲ್ಲೂ ಯಶಸ್ಸು ಸಿಗುತ್ತದೆ ಎನ್ನುತ್ತಾರೆ.

ಮಲ್ಲಿಗೆ ಹೂವಿನ ಎಣ್ಣೆ
ಪ್ರತಿ ಮಂಗಳವಾರ ಮಲ್ಲಿಗೆ ಎಣ್ಣೆಯ ದೀಪವನ್ನು ಬೆಳಗಿಸಿ ಹನುಮಂತನಿಗೆ ಮಲ್ಲಿಗೆ ಎಣ್ಣೆ ಮತ್ತು ಹೂವುಗಳನ್ನು ಅರ್ಪಿಸಿದರೆ ಹನುಮಾನ್ ಸಂತಸಪಡುತ್ತಾನೆ. ಇದರಿಂದ ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸುತ್ತದೆ.



Click it and Unblock the Notifications
