Latest Updates
-
ಬೆಂಗಳೂರಿನಲ್ಲಿ ಇಂದೇ ವಿದ್ಯುತ್ ಕಡಿತ: ನಿಮ್ಮ ಎಲೆಕ್ಟ್ರಾನಿಕ್ ಉಪಕರಣಗಳನ್ನು ಸುರಕ್ಷಿತವಾಗಿಡುವುದು ಹೇಗೆ? -
ಕರ್ಕ ಸಂಕ್ರಾಂತಿ ವಿಶೇಷ: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಜಗನ್ನಾಥ ರಥಯಾತ್ರೆ 2026: ಸಂಚಾರ ಮಾರ್ಗ ಬದಲಾವಣೆ, ಭಕ್ತರಿಗಾಗಿ ಇಲ್ಲಿದೆ ಮಹತ್ವದ ಮಾಹಿತಿ! -
ನೀಟ್ ಪರೀಕ್ಷೆಯ ಆತಂಕವೇ? ಈ 6 ನಿಮಿಷದ ವ್ಯಾಯಾಮ ನಿಮ್ಮ ಒತ್ತಡವನ್ನು ಮರೆಸುತ್ತದೆ! -
ಮಧ್ಯಪ್ರದೇಶ UCC: ಲಿವ್-ಇನ್ ಜೋಡಿಗಳಿಗೆ ಕಡ್ಡಾಯ ನೋಂದಣಿ, ನಿಯಮ ಮೀರಿದರೆ ಕಾದಿದೆ ಸಂಕಷ್ಟ! -
ಹಾಲಿನಲ್ಲಿ ವಿಷಕಾರಿ ಕಲಬೆರಕೆ ಪತ್ತೆ: ನಿಮ್ಮ ಮನೆಯ ಹಾಲಿನ ಸುರಕ್ಷತೆ ಪರೀಕ್ಷಿಸುವುದು ಹೇಗೆ? -
ಬೆಂಗಳೂರಿನಲ್ಲಿ 12 ಗಂಟೆಗಳ ಕಾಲ ನೀರಿನ ಕಡಿತ: ನಾಳೆ ನೀರು ಉಳಿಸಲು ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ
ಹಣದ ಸಮಸ್ಯೆಯಿಂದ ದೂರಾಗಲು ಮಂಗಳವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿ
ಪ್ರತಿಯೊಂದು ದಿನ ಒಂದೊಂದು ದೇವರಿಗೆ ಮೀಸಲಾಗಿದೆ. ಹಾಗೆಯೇ ನಾವು ಆ ದೇವರಿಗೆ ಪ್ರೀತಿಪಾತ್ರವಾದ ರೀತಿ ಪೂಜೆ ಸಲ್ಲಿಸಿದರೆ ನಮ್ಮ ಇಷ್ಟಾರ್ಥಗಳು ನೆರವೇರುತ್ತದೆ. ಅದರಂತೆಯೇ ಮಂಗಳವಾರ ರಾಮನ ಬಂಟ ಆಂಜನೇಯನಿಗೆ ಮೀಸಲಾದ ದಿನ.
ಆಂಜನೇಯನ ಆಶೀರ್ವಾದವನ್ನು ಪಡೆಯಲು ಹಾಗೂ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವವರಿಗೆ ಇದರಿಂದ ಮುಕ್ತಿ ಸಿಗಲು ಹನುಮಂತನನ್ನು ಮಂಗಳವಾರದ ದಿನ ಹೀಗೆ ಪ್ರಾರ್ಥಿಸಬೇಕಂತೆ. ಇದರಿಂದ ಹಣಕ್ಕೆ ಸಂಬಂಧಿಸಿದ ತೊಂದರೆಗಳು ದೂರವಾಗುತ್ತವೆ ಎಂದು ನಂಬಲಾಗಿದೆ.

ಅರಳಿ ಮರದ ಎಲೆ
ಮಂಗಳವಾರ ಸ್ನಾನದ ನಂತರ 11 ಅರಳಿ ಮರದ ಎಲೆಗಳನ್ನು ಕಿತ್ತುಕೊಳ್ಳಿ. ಈ ಎಲೆಗಳನ್ನು ಗಂಗಾಜಲದಿಂದ ಸ್ವಚ್ಛಗೊಳಿಸಿದ ನಂತರ ಕುಂಕುಮ ಅಥವಾ ಶ್ರೀಗಂಧದಿಂದ ಶ್ರೀರಾಮ ಎಂದು ಬರೆಯಿರಿ. ಈ ಎಲೆಗಳ ಮಾಲೆಯನ್ನು ಮಾಡಿ ಹನುಮಂತನಿಗೆ ಅರ್ಪಿಸಿ. ಇದು ಶೀಘ್ರದಲ್ಲೇ ಹಣಕಾಸಿನ ಸಮಸ್ಯೆಯನ್ನು ಪರಿಹರಿಸುತ್ತದೆ ಎಂದು ನಂಬಲಾಗಿದೆ.

ಗ್ರಹ ಶಾಂತಿ
ಮಂಗಳವಾರ ಸಂಜೆ, ಹನುಮಾನ್ ದೇವಸ್ಥಾನದಲ್ಲಿ ಲಡ್ಡುಗಳಲ್ಲಿ ತುಳಸಿ ಎಲೆಗಳನ್ನು ಹಾಕಿ ಅರ್ಪಿಸಿ. ಭಜರಂಗಬಲಿ ಲಡ್ಡುಗಳನ್ನು ತುಂಬಾ ಇಷ್ಟಪಡುತ್ತಾರೆ ಎಂದು ಹೇಳಲಾಗುತ್ತದೆ. ಈ ಪರಿಹಾರವು ಗ್ರಹಗಳ ಶಾಂತಿಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

ವೀಳ್ಯದೆಲೆ
ಯಾವುದೇ ಕೆಲಸವು ದೀರ್ಘಕಾಲದವರೆಗೆ ಆಗದಿದ್ದರೆ ಅಥವಾ ಯಾವುದೇ ನಿರ್ದಿಷ್ಟ ಕೆಲಸಕ್ಕೆ ಹೋಗುವ ಮೊದಲು ಮಂಗಳವಾರದಂದು ಹನುಮಂತನಿಗೆ ವೀಳ್ಯದೆಲೆಯನ್ನು ಅರ್ಪಿಸಿ. ಇದರಿಂದ ಪ್ರತಿ ಕೆಲಸದಲ್ಲೂ ಯಶಸ್ಸು ಸಿಗುತ್ತದೆ ಎನ್ನುತ್ತಾರೆ.

ಮಲ್ಲಿಗೆ ಹೂವಿನ ಎಣ್ಣೆ
ಪ್ರತಿ ಮಂಗಳವಾರ ಮಲ್ಲಿಗೆ ಎಣ್ಣೆಯ ದೀಪವನ್ನು ಬೆಳಗಿಸಿ ಹನುಮಂತನಿಗೆ ಮಲ್ಲಿಗೆ ಎಣ್ಣೆ ಮತ್ತು ಹೂವುಗಳನ್ನು ಅರ್ಪಿಸಿದರೆ ಹನುಮಾನ್ ಸಂತಸಪಡುತ್ತಾನೆ. ಇದರಿಂದ ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸುತ್ತದೆ.



Click it and Unblock the Notifications