Latest Updates
-
ಖೇಲೋ ಇಂಡಿಯಾ ಸಂವಾದ ವೀಕ್ಷಿಸುವಾಗ ಜಡತ್ವ ಬೇಡ: 12 ನಿಮಿಷಗಳ ಈ ಸಿಂಪಲ್ ವರ್ಕೌಟ್ ಟ್ರೈ ಮಾಡಿ! -
ಆಗಸ್ಟ್ 27 ಅಥವಾ 28? ರಾಖಿ ಹಬ್ಬದ ಗೊಂದಲಕ್ಕೆ ಇಲ್ಲಿದೆ ಬೆಸ್ಟ್ ಪ್ಲಾನ್! -
ಗುಡುಗು-ಸಿಡಿಲು ಮಳೆ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು 15 ನಿಮಿಷಗಳ ತುರ್ತು ಕ್ರಮಗಳು -
ರಕ್ಷಾಬಂಧನಕ್ಕೆ ಸಿಹಿ ಖರೀದಿಸ್ತಿದ್ದೀರಾ? ಈ ತಪ್ಪು ಮಾಡಿದ್ರೆ ಆರೋಗ್ಯಕ್ಕೆ ಕುತ್ತು, ನಕಲಿ ಸ್ವೀಟ್ಸ್ ಪತ್ತೆ! -
ರಕ್ಷಾಬಂಧನಕ್ಕೆ ಚಿನ್ನ ಖರೀದಿಸುವ ಮುನ್ನ ಎಚ್ಚರ! ಇಂದಿನ ದರ ಮತ್ತು ಲಾಭದಾಯಕ ಟಿಪ್ಸ್ ಇಲ್ಲಿದೆ -
ರಾಷ್ಟ್ರೀಯ ಕ್ರೀಡಾ ದಿನ: 29 ನಿಮಿಷಗಳ ಸರಳ ವರ್ಕೌಟ್ ಮೂಲಕ ಫಿಟ್ ಆಗಿ! -
ಕುಟುಂಬದಲ್ಲಿ ಉಡುಪಿನ ಬಗ್ಗೆ ಟೀಕೆಗಳೇ? ಈ 7 ವಾಕ್ಯಗಳ ಮೂಲಕ ಗೌರವಯುತವಾಗಿ ಉತ್ತರಿಸಿ! -
ಈರುಳ್ಳಿ ಬೆಲೆ ಏರಿಕೆ: ಅಡುಗೆಮನೆಯ ಬಜೆಟ್ ಉಳಿಸಲು ಸರಳ ಟಿಪ್ಸ್ ಮತ್ತು ಪರ್ಯಾಯಗಳು! -
ಪ್ಯಾಕೆಟ್ ಆಹಾರದ ಮೇಲೆ ಕಡ್ಡಾಯ ಎಚ್ಚರಿಕೆ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಅಂತಿಮ ಗಡುವು! -
ಇಂದಿನ ಪೆಟ್ರೋಲ್ ದರ ಸ್ಥಿರ: ಪ್ರಯಾಣದ ವೆಚ್ಚ ಉಳಿಸಲು ಈ 5 ಸಿಂಪಲ್ ಟಿಪ್ಸ್ ಫಾಲೋ ಮಾಡಿ!
ಹಣದ ಸಮಸ್ಯೆಯಿಂದ ದೂರಾಗಲು ಮಂಗಳವಾರ ಆಂಜನೇಯನಿಗೆ ಇವುಗಳನ್ನು ಅರ್ಪಿಸಿ
ಪ್ರತಿಯೊಂದು ದಿನ ಒಂದೊಂದು ದೇವರಿಗೆ ಮೀಸಲಾಗಿದೆ. ಹಾಗೆಯೇ ನಾವು ಆ ದೇವರಿಗೆ ಪ್ರೀತಿಪಾತ್ರವಾದ ರೀತಿ ಪೂಜೆ ಸಲ್ಲಿಸಿದರೆ ನಮ್ಮ ಇಷ್ಟಾರ್ಥಗಳು ನೆರವೇರುತ್ತದೆ. ಅದರಂತೆಯೇ ಮಂಗಳವಾರ ರಾಮನ ಬಂಟ ಆಂಜನೇಯನಿಗೆ ಮೀಸಲಾದ ದಿನ.
ಆಂಜನೇಯನ ಆಶೀರ್ವಾದವನ್ನು ಪಡೆಯಲು ಹಾಗೂ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವವರಿಗೆ ಇದರಿಂದ ಮುಕ್ತಿ ಸಿಗಲು ಹನುಮಂತನನ್ನು ಮಂಗಳವಾರದ ದಿನ ಹೀಗೆ ಪ್ರಾರ್ಥಿಸಬೇಕಂತೆ. ಇದರಿಂದ ಹಣಕ್ಕೆ ಸಂಬಂಧಿಸಿದ ತೊಂದರೆಗಳು ದೂರವಾಗುತ್ತವೆ ಎಂದು ನಂಬಲಾಗಿದೆ.

ಅರಳಿ ಮರದ ಎಲೆ
ಮಂಗಳವಾರ ಸ್ನಾನದ ನಂತರ 11 ಅರಳಿ ಮರದ ಎಲೆಗಳನ್ನು ಕಿತ್ತುಕೊಳ್ಳಿ. ಈ ಎಲೆಗಳನ್ನು ಗಂಗಾಜಲದಿಂದ ಸ್ವಚ್ಛಗೊಳಿಸಿದ ನಂತರ ಕುಂಕುಮ ಅಥವಾ ಶ್ರೀಗಂಧದಿಂದ ಶ್ರೀರಾಮ ಎಂದು ಬರೆಯಿರಿ. ಈ ಎಲೆಗಳ ಮಾಲೆಯನ್ನು ಮಾಡಿ ಹನುಮಂತನಿಗೆ ಅರ್ಪಿಸಿ. ಇದು ಶೀಘ್ರದಲ್ಲೇ ಹಣಕಾಸಿನ ಸಮಸ್ಯೆಯನ್ನು ಪರಿಹರಿಸುತ್ತದೆ ಎಂದು ನಂಬಲಾಗಿದೆ.

ಗ್ರಹ ಶಾಂತಿ
ಮಂಗಳವಾರ ಸಂಜೆ, ಹನುಮಾನ್ ದೇವಸ್ಥಾನದಲ್ಲಿ ಲಡ್ಡುಗಳಲ್ಲಿ ತುಳಸಿ ಎಲೆಗಳನ್ನು ಹಾಕಿ ಅರ್ಪಿಸಿ. ಭಜರಂಗಬಲಿ ಲಡ್ಡುಗಳನ್ನು ತುಂಬಾ ಇಷ್ಟಪಡುತ್ತಾರೆ ಎಂದು ಹೇಳಲಾಗುತ್ತದೆ. ಈ ಪರಿಹಾರವು ಗ್ರಹಗಳ ಶಾಂತಿಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

ವೀಳ್ಯದೆಲೆ
ಯಾವುದೇ ಕೆಲಸವು ದೀರ್ಘಕಾಲದವರೆಗೆ ಆಗದಿದ್ದರೆ ಅಥವಾ ಯಾವುದೇ ನಿರ್ದಿಷ್ಟ ಕೆಲಸಕ್ಕೆ ಹೋಗುವ ಮೊದಲು ಮಂಗಳವಾರದಂದು ಹನುಮಂತನಿಗೆ ವೀಳ್ಯದೆಲೆಯನ್ನು ಅರ್ಪಿಸಿ. ಇದರಿಂದ ಪ್ರತಿ ಕೆಲಸದಲ್ಲೂ ಯಶಸ್ಸು ಸಿಗುತ್ತದೆ ಎನ್ನುತ್ತಾರೆ.

ಮಲ್ಲಿಗೆ ಹೂವಿನ ಎಣ್ಣೆ
ಪ್ರತಿ ಮಂಗಳವಾರ ಮಲ್ಲಿಗೆ ಎಣ್ಣೆಯ ದೀಪವನ್ನು ಬೆಳಗಿಸಿ ಹನುಮಂತನಿಗೆ ಮಲ್ಲಿಗೆ ಎಣ್ಣೆ ಮತ್ತು ಹೂವುಗಳನ್ನು ಅರ್ಪಿಸಿದರೆ ಹನುಮಾನ್ ಸಂತಸಪಡುತ್ತಾನೆ. ಇದರಿಂದ ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸುತ್ತದೆ.



Click it and Unblock the Notifications