Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಶನಿ ಜಯಂತಿಯಂದು ತಪ್ಪಿಯೂ ಈ ಕೆಲಸ ಮಾಡದಿರಿ
ಮೇ 22ರಂದು ವೈಶಾಖ ಮಾಸದ ಅಮವಾಸ್ಯೆ, ಈ ದಿನ ಶನಿ ಜಯಂತಿಯನ್ನು ಆಚರಿಸಲಾಗುವುದು. ಈ ದಿನ ಶನೇಶ್ವರ ಜನಿಸಿದ ದಿನವಾಗಿದ್ದು, ಅವನನ್ನು ಆರಾಧನೆ ಮಾಡುವುದರಿಂದ, ಕಷ್ಟಗಳು ದೂರವಾಗಿ ಒಳಿತಾಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.

ಈ ದಿನ ಶನಿ ದೇವನಿಗೆ ಎಳ್ಳೆಣ್ಣೆಯಿಂದ ಅಭಿಷೇಕ ಮಾಡಿ, ನವರತ್ನ ಹಾರಗಳನ್ನು ಅರ್ಪಿಸಿ ಪೂಜಿಸಲಾಗುವುದು. ಎಳ್ಳೆಣ್ಣೆ ಅರ್ಪಿಸಿದರೆ ಶನಿಯ ಕೃಪೆಗೆ ಪಾತ್ರರಾಗುವಿರಿ ಹಾಗೂ ಕಷ್ಟಗಳು ದೂರವಾಗುವುದು, ಅವಮಾನಗಳು ತಪ್ಪುವುದು. ಶನಿ ಜಯಂತಿಯಂದು ಒಳಿತು ಉಂಟಾಗಲು ಕಪ್ಪು ವಸ್ತ್ರ, ಕಪ್ಪು ಧಾನ್ಯಗಳನ್ನು ದಾನ ಮಾಡಬೇಕು ಅಂತಾರೆ. ಅದೇ ಆ ದಿನ ಕೆಲವೊಂದು ಕಾರ್ಯಗಳನ್ನು ಮಾಡಬಾರದು ಎಂದು ಕೂಡ ಹೇಳುತ್ತಾರೆ. ಇಲ್ಲಿ ಶನಿ ಜಯಂತಿಯಂದು ತಪ್ಪಿಯೂ ಮಾಡಬಾರದ ಕೆಲವು ಕಾರ್ಯಗಳ ಬಗ್ಗೆ ಹೇಳಿದ್ದೇವೆ. ಒಂದು ವೇಳೆ ಈ ರೀತಿ ಮಾಡಿದರೆ ಶನಿಯ ಕೋಪಕ್ಕೆ ಗುರಿಯಾಗುತ್ತೀರಿ ಜಾಗ್ರತೆ....

1. ಹಸಿದವರನ್ನು ಖಾಲಿ ಕೈಯಲ್ಲಿ ಕಳುಹಿಸುವುದು
ಬಡವರು , ನಿರ್ಗತಿಕರು ಹಸಿದ ಹೊಟ್ಟೆಯಲ್ಲಿ ಮನೆ ಮುಂದೆ ಬಂದರೆ ಅವರನ್ನು ಖಾಲಿ ಹೊಟ್ಟೆ ಹಾಗೂ ಖಾಲಿ ಕೈಯಲ್ಲಿ ಕಳುಹಿಸಬೇಡಿ. ಹಸಿದ ಹೊಟ್ಟೆ ತುಂಬಿಸಿದರೆ ಶನಿಗೆ ಖುಷಿಯಾಗುತ್ತದೆ, ಆಗ ಆತ ನಿಮ್ಮ ಕಡೆಯಿದ್ದತನ್ನ ದೃಷ್ಟಿಯನ್ನು ಬೇರೆಯೆಡೆಗೆ ತಿರುಗಿಸಿ, ನಿಮಗೆ ಕಷ್ಟ ಬರುವುದನ್ನು ತಪ್ಪಿಸುತ್ತಾನೆ.

2. ಉಗುರು ಕತ್ತರಿಸುವುದು, ಕೂದಲು ಕತ್ತರಿಸುವುದು
ಹಿಂದೂ ಧರ್ಮದ ಶಾಸ್ತ್ರದ ಪ್ರಕಾರ ಶನಿ ಜಯಂತಿಯಂದು ಉಗುರು ಕತ್ತರಿಸುವುದು, ಕೂದಲು ಕತ್ತರಿಸುವುದು ಅಮಂಗಳ ಎಂದು ಹೇಳಲಾಗಿದೆ. ಶನಿ ದೇವ ಹುಟ್ಟಿದ ದಿನ ಯಾರು ಇದನ್ನೆಲ್ಲಾ ಮಾಡುತ್ತಾರೋ ಅವರ ಜೊತೆಯೇ ಶನಿ ಇರುತ್ತಾನೆ, ಅಂದರೆ ಅವನಿಗೆ ಆರ್ಥಿಕ ತೊಂದರೆಗಳು ಉಂಟಾಗುವುದು. ಅಲ್ಲದೆ ಸಮಾಜದಲ್ಲಿ ಕೆಲವೊಂದು ಅವಮಾನಗಳನ್ನು ಎದುರಿಸುವ ಪರಿಸ್ಥಿತಿ ಕೂಡ ಬರಬಹುದು.

3. ಶನಿಯ ದೃಷ್ಟಿಗೆ ಬೀಳುವುದು
ಶನಿ ಜಯಂತಿಯಂದು ದರ್ಶನ ಮಾಡುವಾಗ ಆತನ ದೃಷ್ಟಿಗೆ ಬೀಳಬಾರದು ಎಂದು ಹೇಳುತ್ತಾರೆ. ಶನಿಯ ದೃಷ್ಟಿ ವಕ್ರವಾಗಿರುತ್ತದೆ. ಆದ್ದರಿಂದ ಶನಿಯ ಕಣ್ಣುಗಳನ್ನು ನೀವು ನೋಡಬೇಕು, ಇಲ್ಲದಿದ್ದರೆ ಶನಿಯ ಶಾಪ ಸಿಗುವುದು ಎಂದು ಹೇಳಲಾಗುತ್ತದೆ.

4. ಮಹಿಳೆಯರನ್ನು ನಿಂದಿಸಬಾರದು
ಶನಿ ಜಯಂತಿಯಂದು ಮಹಿಳೆಯರನ್ನು ನಿಂದಿಸುವುದು ಮಾಡಬಾರದು. ಮಹಿಳೆಯರ ಮನಸ್ಸಿಗೆ ನೋವಾದರೆ ಶನಿಯ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಮಹಿಳೆಯರನ್ನು ನಿಂದಿಸಿದರೆ ಶನಿ ತನ್ನ ದೃಷ್ಟಿಯನ್ನು ನಿಮ್ಮ ಮೇಲೆ ಬೀರುತ್ತಾನೆ. ಇದರಿಂದ ಸಾಕಷ್ಟು ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ.

5. ಹೊಸ ಬಟ್ಟೆ ಕೊಳ್ಳುವುದು, ಧರಿಸುವುದು ಮಾಡಬಾರದು
ಶನಿಯ ಹುಟ್ಟಿದ ದಿನ ಯಾವುದೇ ಹೊಸ ಬಟ್ಟೆ ಕೊಳ್ಳುವುದು, ಧರಿಸುವುದು ಮಾಡಬಾರದು, ಹೊಸ ಬಟ್ಟೆ ಧರಿಸುವುದರಿಂದ ಕೆಡಕು ಉಂಟಾಗುವುದು. ಈ ದಿನ ಕಪ್ಪು ಬಟ್ಟೆ ಧರಸಿದರೆ ಒಳ್ಳೆಯದು. ಶನಿ ದೇವನ ಮಂತ್ರ ಹೇಳುತ್ತಾ, ಉಪವಾಸವಿದ್ದು ಪೂಜೆ ಮಾಡುವುದರಿಂದ ಬದುಕಿನಲ್ಲಿದ್ದ ಕಷ್ಟಗಳು ದೂರವಾಗುವುದು.



Click it and Unblock the Notifications