Latest Updates
-
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ
ಓಂ ನಮಃ ಶಿವಾಯ ಎನ್ನುವುದರಿಂದ ಉಂಟಾಗುವ ಫಲಗಳು
ಹಿಂದೂಗಳ ಶ್ರೇಷ್ಠ ದೇವರು ಎಂದರೆ ಶಿವ. ದೇವಾದಿ ದೇವ ಎಂದು ಭಗವಾನ್ ಶಿವನನ್ನು ಕರೆಯಲಾಗುತ್ತದೆ. ಪ್ರಪಂಚದ ಲಯವು ಭಗವಾನ್ ಶಿವನಿಂದಲೇ ಉಂಟಾಗುವುದು. ಶಿವನಿಗೆ ಯಾವುದೇ ಆರಂಭ ಮತ್ತು ಅಂತ್ಯ ಎನ್ನುವುದು ಇಲ್ಲ. ಶಿವನ ರೂಪ ಸರ್ವ ಶ್ರೇಷ್ಠ ಮತ್ತು ಸರ್ವ ಶಕ್ತ ರೂಪ ಎಂದು ಹೇಳಲಾಗುವುದು. ಶಿವನ ಭಕ್ತರಿಗೆ ಸದಾ ಒಳ್ಳೆಯ ವಿಮೋಚನೆ ದೊರೆಯುವುದು. ಪುರಾಣ ಇತಿಹಾಸದಲ್ಲಿ ಶಿವನಿಗೆ ಪವಿತ್ರವಾದ ಸ್ಥಾನವನ್ನು ನೀಡಲಾಗಿದೆ.
ದೇವಾದಿ ದೇವ ಶಿವನ ನಾಮ ಸ್ಮರಣೆಯಿಂದ ಆಧ್ಯಾತ್ಮಿಕವಾಗಿ ಪುಣ್ಯ ಲಭಿಸುವುದು. ಅಂತೆಯೇ ವೈಜ್ಞಾನಿಕವಾಗಿಯೂ ಮಾನಸಿಕ ನೆಮ್ಮದಿ ಹಾಗೂ ಅನೇಕ ಅನುಕೂಲಗಳು ಉಂಟಾಗುವುದು ಎಂದು ಹೇಳಲಾಗುತ್ತದೆ. ಇಂದಿನ ಆಧುನಿಕ ಸಮಾಜದಲ್ಲಿ ಅನೇಕರು ಒತ್ತಡದ ಜೀವನ ಹಾಗೂ ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಇಂತಹವರಿಗೆ ಮಾನಸಿಕ ನೆಮ್ಮದಿಯನ್ನು ಮರಳಿ ತರಲು ಶಿವನಾಮ ಸ್ಮರಣೆ ಹಾಗೂ ಓಂ ನಮಃ ಶಿವಾಯ ಮಂತ್ರವು ಅಧಿಕ ಪ್ರಭಾವವನ್ನು ನೀಡುವುದು....

ಮಾನಸಿಕವಾಗಿ ನೆಮ್ಮದಿ ನೀಡುವುದು
ಜೀವನ ಎನ್ನುವುದು ಹೂವಿನ ಹಾಸಿಗೆಯಲ್ಲ. ಅನೇಕ ಗೊಂದಲಗಳು ಹಾಗೂ ಸಮಸ್ಯೆಗಳು ಕಾಡುತ್ತಲೇ ಇರುತ್ತವೆ. ಇಂತಹ ಸಂದರ್ಭದಲ್ಲಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆಗಳು ಅಧಿಕವಾಗಿರುವುದು. ಮಾನಸಿಕ ಒತ್ತಡ ಹೆಚ್ಚಾದಂತೆ ಮಾನಸಿಕ ನೆಮ್ಮದಿ ಹಾಳಾಗುವುದು. ಅಂತಹ ಸಂದರ್ಭದಲ್ಲಿ ನಮ್ಮ ಮಾಣಸಿಕ ಆರೋಗ್ಯವನ್ನು ಸುಧಾರಿಸಿಕೊಳ್ಳಲು ಅಥವಾ ಆರೈಕೆ ಮಾಡಲು ಇರುವ ಏಕೈಕ ವಿಧಾನವೆಂದರೆ "ಓಂ ನಮಃ ಶೀವಾಯ" ಎನ್ನುವ ಮಂತ್ರದ ಪಠಣೆ ಎನ್ನಲಾಗುತ್ತದೆ.

ಶಿವನಿಗೆ ಬಾಗುವುದು
"ಓಂ ನಮಃ ಶಿವಾಯ" ಎನ್ನುವ ಮಂತ್ರದ ನಿಜವಾದ ಅರ್ಥ ಶಿವನಿಗೆ ಬಾಗುವುದು ಎಂದಾಗುತ್ತದೆ. ಮನುಷ್ಯನಲ್ಲಿ ಆಂತರಿಕವಾಗಿ ಸ್ವಭಿಮಾನ ಮತ್ತು ಅಹಮ್ ಎನ್ನುವುದು ಅಧಿಕವಾಗಿಯೇ ಇರುತ್ತದೆ. ಈ ಮಂತ್ರವನ್ನು ಜಪಿಸುವುದರಿಂದ ಆಂತರಿಕ ಶುದ್ಧತೆಯನ್ನು ಹೊಂದಿ, ಶಿವನಿಗೆ ಶರಣಾಗುವುದು ಎಂದಾಗುತ್ತದೆ.

ಮಂತ್ರದ ಶಕ್ತಿ
"ಓಂ ನಮಃ ಶಿವಾಯ" ಮಂತ್ರವು ಅತ್ಯಂತ ಶ್ರೇಷ್ಠ ಹಾಗೂ ಶಕ್ತಿಯುತವಾದ ಮಂತ್ರ ಎಂದು ಹೇಳಲಾಗುತ್ತದೆ. ಈ ಮಂತ್ರವನ್ನು ನಾವು ಮನಸ್ಸಿನಲ್ಲಿ ನಿರಂತರವಾಗಿ ಹೇಳುತ್ತಿದ್ದರೆ ಯಾವುದೇ ಧಾರ್ಮಿಕ ಆಚರಣೆಯನ್ನು ಮಾಡಬೇಕೆಂದಿಲ್ಲ. ಈ ಮಂತ್ರವನ್ನು ಹೇಳಲು ಯಾರಿಗೂ ನಿರ್ಬಂಧವಿಲ್ಲ. ಯಾರೂ ಬೇಕಾದರೂ ಹೇಳಬಹುದು ಅಥವಾ ಜಪವನ್ನು ಮಾಡಬಹುದು. ಪುಣ್ಯದ ಜೊತೆಗೆ ಒಂದಿಷ್ಟು ಆರೋಗ್ಯವೂ ವೃದ್ಧಿಯಾಗುವುದು.

ಐದು ಗುಣಲಕ್ಷಣದ ಮಹತ್ವ
ಈ ಮಂತ್ರವು ಪ್ರಮುಖವಾಗಿ 5 ಉಚ್ಚಾರಾಂಶಗಳನ್ನು ಒಳಗೊಂಡಿದೆ. "ನಾ, ಮಾ, ಶಿ, ವಾ, ಯಾ" ಎನ್ನುವುದು ಭೂಮಿ, ನೀರು, ಬೆಂಕಿ, ಗಾಳಿ ಮತ್ತು ಸ್ಥಳ ಎಂದಾಗುತ್ತಾದೆ. ಈ ಪಂಚ ಭೂತಗಳಲ್ಲಿಯೂ ಶಿವನು ಇರುತ್ತಾನೆ ಎಂದು ಹೇಳಲಾಗುತ್ತದೆ.

ಜ್ಯೋತಿಷ್ಯದ ಮಹತ್ವ
ಕೆಲವರಿಗೆ ಈ ಮಂತ್ರವನ್ನು ಏಕೆ ಹೇಳಬೇಕು? ಎನ್ನುವ ಗೊಂದಲ ಇರುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಮಂತ್ರವು ಅಧಿಕ ಶಕ್ತಿಯನ್ನು ಒಳಗೊಂಡಿದೆ. ಈ ಮಂತ್ರವನ್ನು ಹೇಳುವುದರಿಂದ ನಕಾರಾತ್ಮಕ ಗ್ರಹಗಳ ಪ್ರಭಾವವನ್ನು ಕಡಿಮೆಗೊಳಿಸುವುದು. ನಕ್ಷತ್ರಗಳ ಫಲದಿಂದ ಅನುಭವಿಸಬೇಕಾದ ಅನೇಕ ಪರಿಣಾಮಗಳನ್ನು ಕಡಿಮೆಗೊಳಿಸಿ ಚೇತರಿಕೆ ಕಂಡುಕೊಳ್ಳಬಹುದು.

ಸೌಂಡ್ ಥೆರಪಿ
ಋಷಿಮುನಿಗಳು ಈ ಮಂತ್ರವನ್ನು ನಿರಂತರವಾಗಿ ಹೇಳುವುದರಿಂದ ಅನೇಕ ದೈಹಿಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಬಹುದು. ಅಲ್ಲದೆ ಆತ್ಮಕ್ಕೆ ಶಾಂತಿ ಲಭಿಸುವುದು. ಹೃದಯ ಹಾಗೂ ಮನಸ್ಸಿನಲ್ಲಿ ಸದಾ ಸಂತೋಷವು ನೆಲೆಸುವುದು. ಜೊತೆಗೆ ಗೊಂದಲವನ್ನು ನಿವಾರಿಸುವಂತಹ ಶಕ್ತಿಯನ್ನು ತುಂಬುವುದು. ದಿನದ ಆರಂಭವನ್ನು ಶಿವನ ಸ್ಮರಣೆಯಿಂದ ಅಥವಾ "ಓಂ ನಮಃ ಶಿವಾಯ" ಎನ್ನುವ ಮಂತ್ರದಿಂದ ಪ್ರಾರಂಭಿಸಿದರೆ ಉತ್ತಮ ಆರೋಗ್ಯ ಹಾಗೂ ಅದೃಷ್ಟದ ಜೀವನವನ್ನು ಕಾಣುವಿರಿ.



Click it and Unblock the Notifications