Latest Updates
-
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು! -
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ! -
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ? -
ಪಾರ್ಕ್ಗಳಲ್ಲಿ ನಗು-ಯೋಗದ ಅಲೆ: ಒತ್ತಡ ಮರೆಸಿ ದಿನವಿಡೀ ಎನರ್ಜಿಟಿಕ್ ಆಗಿರೋದು ಹೇಗೆ?
Rama Navami 2022 : ಶ್ರೀ ರಾಮ ನವಮಿ ದಿನಾಂಕ, ರಾಮನ ಪೂಜೆಗೆ ಶುಭ ಮುಹೂರ್ತ
ಪ್ರತೀವರ್ಷ ಚೈತ್ರ ಶುಕ್ಲ ನವಮಿ ಅಂದರೆ ಚೈತ್ರ ಮಾಸದ 9ನೇ ದಿನದಂದು ರಾಮ ನವಮಿಯನ್ನು ಆಚರಿಸಲಾಗುವುದು. ಈ ದಿನ ಶ್ರೀ ರಾಮ ಜನಿಸಿದ ದಿನ, ಶ್ರೀ ರಾಮನನ್ನು ಶ್ರೀ ವಿಷ್ಣುವಿನ 7ನೇ ಅವತಾರವಾಗಿದೆ. ಚೈತ್ರ ಮಾಸದ ಹಬ್ಬಗಳ ಮುನ್ನುಡಿಯಾಗಿ ಶ್ರೀ ರಾಮ ನವಮಿಯನ್ನು ಆಚರಿಸಲಾಗುವುದು. ಅದಾದ ಬಳಿಕ ಚೈತ್ರ ನವರಾತ್ರಿ ಅಥವಾ ವಸಂತ ನವರಾತ್ರಿ ಆರಂಭ.
2022ರಲ್ಲಿ ಶ್ರೀ ರಾಮ ನವಮಿ ಯಾವಾಗ ಆಚರಿಸಲಾಗುವುದು, ಪೂಜಾ ಮುಹೂರ್ತ ಯಾವಾಗ, ಪೂಜೆಯ ವಿಧಿ ವಿದಾನಗಳೇನು ಎಂಬೆಲ್ಲಾ ಮಾಹಿತಿ ಈ ಲೇಖನದಲ್ಲಿ ಇದೆ ನೋಡಿ:

ಶ್ರೀ ರಾಮ ನವಮಿ 2022
ಚೈತ್ರ ಮಾಸದ ನವಮಿ ಈ ತಿಂಗಳು ಏಪ್ರಿಲ್ 10ಕ್ಕೆ ಬಂದಿದೆ. ಈ ದಿನದಂದು ಶ್ರೀ ರಾಮನ ಜನ್ಮ ದಿನವನ್ನು ಆಚರಿಸಲಾಗುವುದು.

ಶುಭ ಮುಹೂರ್ತ
ನವಮಿ ತಿಥಿ ಪ್ರಾರಂಭ: ಏಪ್ರಿಲ್ 9ರ ರಾತ್ರಿ 01:23ಕ್ಕೆ
ನವಮಿ ತಿಥಿ ಮುಕ್ತಾಯ: ಏಪ್ರಿಲ್ 11 ಮುಂಜಾನೆ 03:15ಕ್ಕೆ

ರಾಮ ನವಮಿ ಮಹತ್ವ:
ಹಿಂದೂ ಧಾರ್ಮಿಕ ಗ್ರಂಥಗಳ ಪ್ರಕಾರ, ಚೈತ್ರ ಮಾಸದ ಶುಕ್ಲ ಪಕ್ಷದ ಸಮಯದಲ್ಲಿ ಶ್ರೀರಾಮ ನವಮಿ ತಿಥಿಯಲ್ಲಿ ಜನಿಸಿದರೆಂದು ನಂಬಲಾಗಿದೆ. ಅಯೋಧ್ಯೆಯಲ್ಲಿ ರಾಮ ನವಮಿ ಆಚರಣೆಗಳು ಅತ್ಯಂತ ಗಮನಾರ್ಹವಾದುದು ಏಕೆಂದರೆ ಇದು ಭಗವಾನ್ ರಾಮನ ಜನ್ಮಸ್ಥಳವಾಗಿದೆ. ರಾಮ ನವಮಿ ಸಮಯದಲ್ಲಿ ಭಕ್ತರು ದೂರದ ಸ್ಥಳಗಳಿಂದ ಅಯೋಧ್ಯೆಗೆ ಬರುತ್ತಾರೆ. ಶ್ರೀ ರಾಮ ಮಂತ್ರಗಳನ್ನು ಜಪಿಸುವುದರಿಂದ ಎಲ್ಲ ಪಾಪಗಳನ್ನು ಕಳೆದು, ಆರೋಗ್ಯ, ಸಂಪತ್ತು ಮತ್ತು ಸಮೃದ್ಧಿ ಪ್ರಾಪ್ತವಾಗುತ್ತದೆ ಎಂಬ ನಂಬಿಕೆಯಿದೆ.

ರಾಮನವಮಿ ಪೌರಾಣಿಕ ಇತಿಹಾಸ:
ಪೌರಾಣಿಕ ಕತೆಯ ಪ್ರಕಾರ ಅಯೋಧ್ಯೆಯ ರಾಜನಾದ ದಶರಥನಿಗೆ ಕೌಸಲ್ಯಾ, ಕೈಕೇಯೀ ಹಾಗೂ ಸುಮಿತ್ರೆ ಮೂರು ಜನ ಪತ್ನಿಯರಿದ್ದರು. ಆದರೆ ಯಾರಿಗೂ ಪುತ್ರ ಸಂತಾನವಾಗಿರಲಿಲ್ಲ. ನಂತರ ದಶರಥನು ಋಷಿಮುನಿಗಳ ಸಲಹೆಯಂತೆ ಪುತ್ರಕಾಮೇಷ್ಠಿ ಯಾಗವನ್ನು ಮಾಡಿಸುತ್ತಾನೆ. ಈ ಯಜ್ಞದಿಂದ ಸಂತುಷ್ಟನಾದ ಪ್ರಜಾಪತಿಯು ದಶರಥನಿಗೆ ದಿವ್ಯ ಪಾಯಸವನ್ನು ನೀಡಿ ಪತ್ನಿಗೆ ನೀಡುವಂತೆ ಹೇಳುತ್ತಾನೆ. ಈ ದಿವ್ಯ ಪಾಯಸವನ್ನು ದಶರಥನು ತನ್ನ ಮೂವರು ಪತ್ನಿಯರಿಗೂ ಹಂಚುತ್ತಾನೆ. ಇದರಂತೆ ಚೈತ್ರ ಮಾಸದ ಶುಕ್ಲಪಕ್ಷದ ನವಮಿ ತಿಥಿಯಂದು ಮಧ್ಯಾಹ್ನ ಪುನರ್ವಸು ನಕ್ಷತ್ರದಲ್ಲಿ ಕೌಸಲ್ಯೆಗೆ ರಾಮನೂ, ಪುಷ್ಯನಕ್ಷತ್ರದ ದಶಮಿಯಂದು ಸೂರ್ಯೋದಯಕ್ಕೆ ಮುನ್ನ ಕೈಕೇಯಿಗೆ ಭರತನೂ, ಅದೇ ದಿನ ಆಶ್ಲೇಷಾ ನಕ್ಷತ್ರದಲ್ಲಿ ಮಧ್ಯಾಹ್ನ ಲಕ್ಷ್ಮಣ, ಶತ್ರುಘ್ನರೂ ಜನಿಸುತ್ತಾರೆ. ಹೀಗೆ ರಾಮನು ಜನಿಸಿದ ನವಮಿಯಂದು ರಾಮನವಮಿಯನ್ನಾಗಿ ಆಚರಿಸುತ್ತಾರೆ.

ರಾಮ ನವಮಿ ಆಚರಣೆ
ಈ ದಿನ ಶ್ರೀ ರಾಮನ ಭಕ್ತರು ಪವಿತ್ರ ಸ್ನಾನ ಮಾಡಿ ಶ್ರೀ ರಾಮನ ದೇವಾಲಯಕ್ಕೆ ಅಥವಾ ರಾಮ ಜನ್ಮ ಸ್ಥಳವಾದ ಅಯೋಧ್ಯೆಗೆ ಭೇಟಿ ಕೊಡುತ್ತಾರೆ. ಶ್ರೀರಾಮನ ರಥೋತ್ಸವ ಕೂಡ ಆಚರಿಸಲಾಗುವುದು. ಹಲವು ಕಡೆ ಪಾನಕ ಮಾಡಿ ಜನರಿಗೆ ನೀಡಲಾಗುತ್ತದೆ. ರಾಮ ನಾಮ ಜಪ ಮಾಡಿದರೆ ಸಾಕು ರಾಮ ನಮ್ಮನ್ನು ರಕ್ಷಿಸುತ್ತಾನೆ ಎಂಬ ಅವನ ಭಕ್ತರ ಅಚಲ ನಂಬಿಕೆ. ಕಷ್ಟಗಳನ್ನು ಗೆಲ್ಲುವ ಶಕ್ತಿ ಶ್ರೀರಾಮ ಜಪದಿಂದ ಸಿಗುತ್ತದೆ.



Click it and Unblock the Notifications